AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 13, 2023 | 12:30 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ ಶುಕ್ರ:, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಬ್ರಹ್ಮ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 13 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:50 ರಿಂದ 12:19ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:16 ರಿಂದ 04:45ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:22ರ ವರೆಗೆ.

ಸಿಂಹ ರಾಶಿ : ನಿಮ್ಮ ತಪ್ಪಿನ ನಿರ್ಧಾರದಿಂದ ಪಶ್ಚಾತ್ತಾಪ ಪಡಬೇಕಾಗುವುದು. ಬಹಳ ದಿನಗಳ‌ ಅನಂತರ ನ್ಯಾಯಾಲಯದಿಂದ ಸಿಕ್ಕ ಜಯವು ಸಂತಸವನ್ನು ಉಂಟುಮಾಡುವುದು. ಇನ್ನೊಬ್ಬರನ್ನು ಪ್ರಶಂಸಿಸುವ ಮನೋಭಾವ ನಿಮ್ಮಲ್ಲಿ ಇರದು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ. ಇಂದು ತುರ್ತಾಗಿ ಬೇಕಾಗಿರುವ ಹಣವನ್ನು ಹೊಂದಿಸಲು ನಿಮಗೆ ಕಷ್ಟವಾಗುವುದು. ಕೃಷಿಗೆ ಸಂಬಂಧಿಸಿದಂತೆ ಹೊಸ ಕಲ್ಪನೆಯನ್ನು ಇಟ್ಟುಕೊಳ್ಳುವಿರಿ. ಕಛೇರಿಯ ಕಾರ್ಯದಿಂದ ಆಯಾಸವಾಗಬಹುದು. ಬಹಳ ವರ್ಷಗಳಿಂದ ಒಂದೇ ಉದ್ಯೋಗದಲ್ಲಿ ಇದ್ದವರಿಗೆ ಸಂತೋಷದ ಸುದ್ದಿ ಸಿಗಲಿದೆ. ನಿಮ್ಮಿಂದ ಕಾರ್ಯವಾಗಲು ಯಾರಾದರೂ ನಿಮ್ಮನ್ನು ಹೊಗಳಬಹುದು. ಸಣ್ಣ ವಿಚಾರವನ್ನು ದೊಡ್ಡದಾಗಿ ಮಾಡುಕೊಳ್ಳುವುದು ಬೇಡ.

ಕನ್ಯಾ ರಾಶಿ : ಅನಿರೀಕ್ಷಿತ ಪ್ರಯಾಣ ಹೋಗುವ ಸಾಧ್ಯತೆ ಇದೆ. ನಿಮ್ಮದಾದ ಕೆಲವು ಅಸಂಬದ್ಧ ವ್ಯವಸ್ಥೆಯನ್ನು ನೀವು ಸರಿ ಮಾಡಿಕೊಳ್ಳಬೇಕಾಗುವುದು. ಹೊಸ ವಸ್ತುವಿನ ಖರೀದಿಯಲ್ಲಿ ನಿಮಗೆ ಮೋಸ ಆಗುವ ಸಾಧ್ಯತೆ ಇದೆ. ಪ್ರೀತಿಪಾತ್ರರ ಜೊತೆ ಇಂದು ಸಲುಗೆಯಿಂದ ಇರುವಿರಿ. ಮನಸ್ಸಿಗೆ ಇಷ್ಟವಾಗದ ಕಾರ್ಯವನ್ನು ನೀವು ಮಾಡಬೇಕಾದೀತು. ಕುಟುಂಬದ ಜೊತೆ ಧಾರ್ಮಿಕ ಸ್ಥಳಗಳಿಗೆ ಹೋಗುವಿರಿ. ಮನಸ್ಸಿನಿಂದ ನೀವು ಕೆಲವು ವಿಚಾರವನ್ನು ತೆಗೆದುಹಾಕುವುದು ಉತ್ತಮ. ಅಪನಂಬಿಕೆಯಿಂದ ನಿಮಗೆ ತೊಂದರೆ ಆಗಬಹುದು. ವಸತಿ ಸ್ಥಾನವನ್ನು ಬದಲಿಸಬೇಕಾದೀತು. ಯಾರನ್ನೋ ನೋಡಿ ಹೊಟ್ಟಿ ಉರಿ ಮಾಡಿಕೊಳ್ಳುವುದು ಬೇಡ. ಸಮಯೋಚಿತ ಕಾರ್ಯದಿಂದ ಲಾಭ ಸಿಗಲಿದೆ. ಅರ್ಥಿಕತೆಗೆ ಸಂಬಂಧಿಸಿದಂತೆ ಯಾರಾದರೂ ಆಡಿಕೊಂಡಾರು.

ತುಲಾ ರಾಶಿ : ಉಗುರಿನಲ್ಲಿ ಆಗುವ ಕಾರ್ಯಕ್ಕೆ ಕೊಡಲಿ ಏಟು ತರುವುದು ಉಚಿತವಲ್ಲ‌. ವಿಷಯ, ಸಮಯ ಎಲ್ಲವನ್ನೂ ನೋಡಿ ವ್ಯವಹರಿಸಿ. ದುಡುಕಿ ಯಾವುದನ್ನೂ ಮಾಡುವುದು ಬೇಡ. ನಿಮಗಮ ಸ್ಥಿರಾಸ್ತಿಯ ಮಾರಾಟದಲ್ಲಿ ಏಕಮುಖವಾದ ಅಭಿಪ್ರಾಯ ಬೇಡ. ನಿಮ್ಮ ಕೆಲವು ಆಸೆಗಳನ್ನು ಪೂರೈಸಿಕೊಳ್ಳುವಿರಿ. ಸಮಾಜವು ನಿಮ್ಮ ಸಾಧನೆಯನ್ನು ಗುರುತಿಸೀತು. ನಿಮ್ಮ ಬಗ್ಗೆ ಬಂದ‌ ಆರೋಪವನ್ನು ಜಾಣ್ಮೆಯಿಂದ ಪರಿಹಿರಿಸಿಕೊಳ್ಳುವಿರಿ.‌ ನಿಮ್ಮ ಉದ್ಯಮಕ್ಕೆ ಹೆಚ್ಚಿನ ಸಮಯವನ್ನು ಕೊಡುವುದು ಅಗತ್ಯ. ಪ್ರಭಾವೀ ಜನರ‌ ನಡುವೆ ಅಂತರವನ್ನು ಕಾಯ್ದುಕೊಳ್ಳಿ.‌ ನಿಮ್ಮ ಬಗ್ಗೆಯೇ ನೀವು ಅತಿಯಾಗಿ ಹೇಳಿಕೊಳ್ಳುವುದು ಸರಿ ಕಾಣದು.

ವೃಶ್ಚಿಕ ರಾಶಿ : ಸುಮ್ಮನೇ ವಾದ ಮಾಡುವ ಚಪಲವನ್ನು ಬಿಟ್ಟು ಸಹಜವಾಗಿ ಎಲ್ಲರ ಜೊತೆ ಮಾತನಾಡಿ. ದೈಹಕ‌ ಕಾರ್ಯದಲ್ಲಿ ತೊಡಗಿದವರಿಗೆ ಹೆಚ್ಚು ಆದಾಯವು ಇರುವುದು. ಕಾರ್ಯಕ್ಕಾಗಿ ಹೆಚ್ಚು ಓಡಾಡಬೇಕಾಗುವುದು. ಧಾರ್ಮಿಕ ಸೇವೆಯಲ್ಲಿ ನೀವು ಭಾಗಿಗಳಾಗುವಿರಿ. ನಿದ್ರಾಹೀನತೆಯಿಂದ ಕಿರಿಕಿರಿ ಉಂಟಾಗುವುದು. ಮಕ್ಕಳ ವರ್ತನೆಯು ಹಿಡಸದೇ ಇರುವುದು. ಆದರೂ ಏನನ್ನೂ ಹೇಳದೇ ಇರುವಿರಿ. ಹಿತಶತ್ರುಗಳನ್ನು ಸರಿಯಾಗಿ ಗಮನಿಸುತ್ತಿರಿ. ಕಾರ್ಯದ ಬಗ್ಗೆ ಅತಿಯಾದ ಆಲೋಚನೆಯಿಂದ ತಲೆನೋವು ಬರಬಹುದು. ಪ್ರೀತಿಗಾಗಿ ಇಂದು ಹೆಚ್ಚು ಸಮಯವನ್ನು ಕೊಡುವಿರಿ. ಹೊಸ ಆದಾಯದ ದಾರಿ ಸಿಕ್ಕಿ ಅಲ್ಪ ನೆಮ್ಮದಿ ಕಾಣುವಿರಿ. ರಾಜಕಾರಣಿಗಳು ಸಮಾಜದಿಂದ ಗೌರವವನ್ನು ಪಡೆಯುವರು. ದುರಾಸೆಯನ್ನು ಆದಷ್ಟು ನಿಮ್ಮ ಹಿಡಿತದಲ್ಲಿ ಇರಿಸಿಕೊಳ್ಳಿ.

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು