AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಇಂದು ಈ ರಾಶಿಯವರು ಹೆಚ್ಚಿನ ಜನರ ಜೊತೆ ಒಡನಾಟ ಮಾಡಬೇಕಾಗಿಬರಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 15) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಇಂದು  ಈ ರಾಶಿಯವರು ಹೆಚ್ಚಿನ ಜನರ ಜೊತೆ ಒಡನಾಟ ಮಾಡಬೇಕಾಗಿಬರಬಹುದು
ಇಂದಿನ ರಾಶಿಭವಿಷ್ಯ (Photo Credit: iStock)
TV9 Web
| Updated By: Rakesh Nayak Manchi|

Updated on: Aug 15, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ರಿಂದ 19 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 53 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:45 ರಿಂದ 05:20 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 11:02ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:37 ರಿಂದ 02:11ರ ವರೆಗೆ.

ಸಿಂಹ ರಾಶಿ: ಮಕ್ಕಳ ವಿಚಾರದಲ್ಲಿ ನೀವು ಅನಾದರ ತೋರುವುದು ಸರಿಯಲ್ಲ. ಅವರ ಸ್ವಭಾವವು ಮುಂದುವರಿಯಬಹುದು. ನಿಮ್ಮ ಬಗ್ಗೆ ನಿಮಗೇ ಹಿಂಜರಿಕೆಯ ಭಾವನೆ ಉಂಟಾಗಬಹುದು. ಮೇಲಿನ ವರ್ಗದವರು ನಿಮ್ಮನ್ನು ಓಡಾಡಿಸಬಹುದು. ನೇರ ಮಾತು ಎಲ್ಲ ಸಂದರ್ಭಗಳಲ್ಲಿಯೂ ಪ್ರಯೋಜನಕ್ಕೆ ಬರದು, ಪ್ರಶಂಸೆಯೂ ಸಿಗದು. ತೊಂದರೆ ಬರುವಂತಹ ಕೆಲಸಗಳು ನಿಮ್ಮ ಪಾಲಿಗೆ ಬಂದರೆ ಅದರಿಂದ ದೂರ ಸರಿಯುವುದು ಉತ್ತಮ. ಇನ್ನೊಬ್ಬರ ಬುದ್ಧಿಮಾತನ್ನು ಒಂದನ್ನೇ ನಂಬಿ ನೀವು ಕಾರ್ಯಪ್ರವೃತ್ತರಾದರೆ ಅಪಮಾನವನ್ನು ಎದುರಿಸಬೇಕಾದೀತು. ಇಂದು ನೀವು ಅಂದುಕೊಂಡಷ್ಟು ಸುಲಭದಲ್ಲಿ ಯಾವುದೂ ಧಕ್ಕದು.

ಕನ್ಯಾ ರಾಶಿ: ಕಾರ್ಯದಲ್ಲಿ ಉಂಟಾದ ಅಡೆತಡೆಗಳನ್ನು ಸರಿ ಮಾಡಿಯೇ ನಿಮಗೆ ಇಂದಿನ ಶ್ರಮವೆಲ್ಲ ವ್ಯರ್ಥವಾಗುವುದು. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ಕೊಡುವಿರಿ. ಇಂದು ಹೆಚ್ಚಿನ ಜನರ ಜೊತೆ ಒಡನಾಟ ಮಾಡಬೇಕಾಗಿಬರಬಹುದು. ಆಸ್ತಿಯ ಕಲಹವನ್ನು ಸರಿ ಮಾಡಿಕೊಳ್ಳಲು ಹಣವನ್ನು ಖರ್ಚು ಮಾಡಬೇಕಾಗಿಬರಬಹುದು. ನಿಮ್ಮ ಮಾತನ್ನು ಕೇಳದೇ ಇರುವುದು ನಿಮಗೆ ಸಿಟ್ಟನ್ನು ತರಿಸಬಹುದು. ಮನಸ್ಸಿನಲ್ಲಿಯೇ ಕುದಿಯುವಿರಿ. ಇಂದು ನಿಮಗೆ ಇಷ್ಟವಿಲ್ಲದವರ ಜೊತೆ ಒಡನಾಡಬೇಕಾಗಿಬರಬಹುದು. ಬಹಳ ಕಷ್ಟಪಟ್ಟು ನಿಮ್ಮ ಈ ಜವಾಬ್ದಾರಿಯನ್ನು ಮುಗಿಸಿಕೊಳ್ಳುವಿರಿ. ಗುರುಚರಿತ್ರೆಯನ್ನು ನೀವು ಪಠಿಸಿ.

ತುಲಾ ರಾಶಿ: ಹೇಳಬೇಕಾದುದನ್ನು ನೇರವಾಗಿ, ಸ್ಪಷ್ಟವಾಗಿ ಹೇಳಿ. ಸುಮ್ನೇ ಸುತ್ತಿ ಬಳಸಿ ಮಾತನಾಡಿ ಎದುರಿನವರ ಮತ್ತು ನಿಮ್ಮ ಸಮಯವನ್ನು ವ್ಯರ್ಥಮಾಡಿಕೊಳ್ಳುವುದು ಬೇಡ. ವ್ಯಾಪರದಿಂದ ಆದ ಲಾಭವು ನಿಮಗೆ ಇನ್ನಷ್ಟು ಉತ್ತೇಜನವನ್ನು ಕೊಡುವುದು. ವಿವಾಹದ ಮಾತುಕತೆಯಲ್ಲಿ ಭಾಗವಹಿಸುವಿರಿ. ಅಪರಿಚಿತ ಕರೆಗಳಿಂದ ನಿಮಗೆ ಅತಿಯಾದ ಮಾನಸಿಕ ಹಿಂಸೆಯಾಗುವುದು. ಹಣದ ವಿಚಾರಕ್ಕೆ ದಾಂಪತ್ಯದಲ್ಲಿ ಜಗಳವಾಗುವುದು. ಇಂದು ಕೆಲವು ಸಂದರ್ಭಗಳನ್ನು ನಡುವೆ ಭಾಯಿಸಲು ನೀವು ಕಲಿಯಬೇಕಾಗಬಹುದು. ನಿಮ್ಮ ಮೇಲೆ ಯಾವುದೋ ಶಕ್ತಿಯ ಪ್ರಭಾವವಿದೆ ಎಂದು ಅನ್ನಿಸಬಹುದು. ದೈವಜ್ಞರನ್ನು ಭೇಟಿಯಾಗಿ ಸಲಹೆಯನ್ನು ಪಡೆಯಿರಿ.

ವೃಶ್ಚಿಕ ರಾಶಿ: ಸಹೋದ್ಯೋಗಿಗಳ ಕಿರಿಕಿರಿಯಿಂದ ನಿಮ್ಮ‌ ಸ್ಥಾನವನ್ನು ಬಿಟ್ಟಕೊಡಬೇಕಾಗಿ ಬರಬಹುದು. ನಿಮ್ಮ ಸ್ವಾಭಿಮಾನಕ್ಕೆ ತೊಂದರೆ ಆಗಬಹುದು. ಹಳೆಯ ಘಟನೆಗಳೆಲ್ಲವೂ ನಿಮ್ಮ ಸ್ಮರಣೆಗೆ ಬಂದು ಹೋಗಬಹುದು. ಆಕಸ್ಮಿಕವಾಗಿ ಏನ್ನಾದರೂ ಶುಭ ಸಮಾಚಾರವು ಬರಬಹುದು ಎಂಬ ನಿರೀಕ್ಷೆಯು ಹುಸಿಯಾಗುವುದು. ತಂದೆಯಿಂದ ಅಥವಾ ತಂದೆಯ ಸಮಾನರಿಂದ ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಭಾವವು ನಡೆಯುವುದು. ಶ್ರಮಕ್ಕೆ ತಕ್ಕ ಫಲವು ಸಿಗದೇ ಇರುವುದು ನಿಮ್ಮನ್ನು ಕಾಡಬಹುದು. ಗುರುವಿನ ದರ್ಶನವು ನಿಮ್ಮ ನಕಾರಾತ್ಮಕ ಆಲೋಚನೆಯನ್ನು ದೂರ ಮಾಡುವುದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ