AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಇಂದು ಸಹನೆ ಮೀರಿ ನೀವು ವರ್ತಿಸುವಿರಿ-ಎಚ್ಚರ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 15) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರು ಇಂದು ಸಹನೆ ಮೀರಿ ನೀವು ವರ್ತಿಸುವಿರಿ-ಎಚ್ಚರ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Nov 15, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಜ್ಯೇಷ್ಠಾ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 34 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಮಧ್ಯಾಹ್ನ 12:17 ರಿಂದ 01:43ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:00 ರಿಂದ 09:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:51 ರಿಂದ 12:17ರ ವರೆಗೆ.

ಸಿಂಹ ರಾಶಿ : ಐಶ್ವರ್ಯವನ್ನು ಮಿತಿಯಲ್ಲಿ ಇರಿಸಿಕೊಳ್ಳಿ. ಆಗಮನದಿಂದ ಹಿಗ್ಗಿ ಇರುವದನ್ನು ಕಳೆದುಕಳ್ಳಬಹುದು. ಭೂಮಿಯ ಮಾರಾಟದಿಂದ ನಿಮ್ಮ ಜೀವನಕ್ಕೆ ಬೇಕಾದ ಸಂಪತ್ತು ಸಿಗಲಿದೆ. ಸಹನೆಯನ್ನು ಮೀರಿ ನೀವು ಇಂದು ವರ್ತಿಸುವಿರಿ. ಅಪರಿಚಿತರ ಜೊತೆ ಮಾತನಾಡಲು ನೀವು ಹಿಂಜರಿಯಬಹುದು. ಸ್ಮರಣಶಕ್ತಿಯ ದೋಷವು ಸ್ವಲ್ಪವೇ ಬರಲಿದೆ. ಅವಕಾಶಗಳು ತಪ್ಪಿಹೋಗಿ, ನಿಮ್ಮನ್ನೇ ನೀವು ಬೂದುಕೊಳ್ಳುವಿರಿ. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ. ವೈಯಕ್ತಿಕ ಕಾರ್ಯದ ಕಾರಣ ಪ್ರಯಾಣ ಮಾಡುವಿರಿ. ಗಾತ್ರ ಇಲ್ಲ ಕಾರ್ಯವನ್ನು ಮಾಡಲು ಉತ್ಸಾಹ ಇರಲಿದೆ. ಸಹೋದ್ಯೋಗಿಗಳು ಅಹಂಕಾರವನ್ನು ತೋರಿಸುವರು. ನಿಮ್ಮ ನಿಲುವಲ್ಲಿ ನೀವಿರುವಿರಿ. ಕೆಲಸವು ಸರಳವಾದರೂ ಅದನ್ನು ಆರಂಭಿಸಲು ಸರಿಯಾದ ಮಾರ್ಗವು ಸಿಗದು.

ಕನ್ಯಾ ರಾಶಿ : ಗಣ್ಯರ ಒಡನಾಟವು ಸಿಗುವ ಸಾಧ್ಯತೆ ಇದೆ. ಮನಸ್ಸಿನ ಒತ್ತಡವನ್ನು ನೀವು ನಿಯಂತ್ರಣಕ್ಕೆ ತಂದುಕೊಳ್ಳುವುದು ಅನಿವಾರ್ಯ.ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ಅಧಿಕ ಸಾಲವು ನಿಮ್ಮ‌ ಮಾನಸಿಕ‌ಸ್ಥಿತಿಯನ್ನೇ ಬದಲಿಸೀತು. ಸಹೋದರರು ಮರೆತ ವಿಚಾರವನ್ನು ಮತ್ತೆ ನೆನಪಿಸಿಕೊಳ್ಳುವರು. ಬಂಧುಗಳು ನಿಮ್ಮನ್ನು ಬಹಳವಾಗಿ‌ ದೂರುವರು. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ನೂತನ ವಾಹನದ ಖರೀದಿಗೆ ಪರ ಊರಿಗೆ ಹೋಗುವಿರಿ. ಅನಾಯಾಸದಿಂದ ಸಂಪಾದನೆಯ ಮಾರ್ಗವನ್ನು ನೀವು ಕಂಡುಕೊಳ್ಳುವಿರಿ. ಆಡಿಕೊಳ್ಳುವವರ ಮುಂದೆ ಮುಗ್ಗರಿಸಿ ಬೀಳಬಹುದು.‌ ನಿಮ್ಮ ಚಿಂತನೆಯನ್ನು ವಿಸ್ತರಿಸಿಕೊಳ್ಳುವುದು ಉತ್ತಮ. ದುರ್ಬಲರಿಗೆ ಮಾನಸಿಕ ಧೈರ್ಯವನ್ನು ತುಂಬುವಿರಿ.

ತುಲಾ ರಾಶಿ : ಆಪ್ತರ ಮಾತುಗಳು ನಿಮಗೆ ಸಹ್ಯವಾಗದೇ ಕೂಗಾಡುವಿರಿ. ಸಂಗಾತಿಗಾಗಿ ಹಣವನ್ನು ಖರ್ಚುಮಾಡಬೇಕಾದೀತು. ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ಸರ್ಕಾರದ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳಲಿದ್ದೀರಿ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು. ದಾಂಪತ್ಯದಲ್ಲಿ ಪರಸ್ಪರರ ಹೊಂದಾಣಿಕೆಯು ಕಾಣಿಸುವುದು. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು. ಪ್ರೇಮದಲ್ಲಿ ಸಿಕ್ಕಿಕೊಂಡು ಕಷ್ಟಪಡುವಿರಿ. ನಿಮ್ಮ ತೀರ್ಮಾನವನ್ನು ಒಪ್ಪುವುದು ಕಷ್ಟವಾದೀತು. ಮಕ್ಕಳ ವಿಚಾರವಾಗಿ ನಿಮಗೆ ದೂರಬರಬಹುದು. ಮನಸ್ಸು ಬಿಚ್ಚಿ‌ ಮಾತನಾಡಲು ನಿಮಗೆ ಆಗದು. ಎಲ್ಲವನ್ನೂ ಒಳಗೇ ಅಡಗಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ : ಬಹು ದಿನದ ನಿರೀಕ್ಷೆಗಳು ಇಂದು ಸಾಕಾರವಾಗವುದು. ನಿಮ್ಮ ಇಷ್ಟಗಳು ಸುಲಭ ಲಭ್ಯವಾಗಿರಲಿ. ನ್ಯಾಯಾಲಯದ ಹೋರಾಟವು ಅಪಯಶಸ್ಸನ್ನು ಕೊಡಬಹುದು. ಆಸ್ತಿಯಲ್ಲಿ ಸಮ ಪಾಲು ಸಿಗದೇ ನಿಮಗೆ ವಾದಕ್ಕಿಳಿಯುವಿರಿ. ಪಾಲುದಾರಿಕೆಯಲ್ಲಿ ನಿಮಗೆ ಸಣ್ಣ ಸಮಸ್ಯೆಗಳು ಹುಟ್ಟಿಕೊಳ್ಳಬಹುದು. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು. ಮಕ್ಕಳ ವಿವಾಹದ ಬಗ್ಗೆ ಬಂಧುಗಳ ಜೊತೆ ಗಂಭೀರವಾಗಿ ಚರ್ಚಿಸುವಿರಿ. ಮನಸ್ಸಿಗೆ ಹಿಡಿಸಿದ ಕೆಲಸವನ್ನು ಮಾತ್ರ ಬೇಗ ಮಾಡಿ ಮುಗಿಸುವಿರಿ. ಸಂಗಾತಿಯ ಕಡೆಯಿಂದ ನಿಮಗೆ ಶುಭಸಮಾಚಾರವು ಗೊತ್ತಾಗುವುದು. ಇಂದಿನ ನಿಮ್ಮ ಪ್ರಯಾಣವು ನಿಮಗೆ ಹಿತಕರವಾದ ಅನುಭವವನ್ನು ನೀಡಬಹುದು. ತಪ್ಪು ಮಾಡಿದರೂ ಸಿಕ್ಕಿಕೊಳ್ಳದೇ ಇರುವಿರಿ.

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​