AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವಾಗಬಹುದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವಾಗಬಹುದು
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Nov 17, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಧೃತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05-59 ಗಂಟೆ, ರಾಹು ಕಾಲ ಬೆಳಗ್ಗೆ 10:52 ರಿಂದ 12:17ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:34ರ ವರೆಗೆ, ಗುಳಿಕ ಕಾಲ ಬೆಳಗ್ಗೆ 08:01 ರಿಂದ 09:26ರ ವರೆಗೆ.

ಸಿಂಹ ರಾಶಿ : ಇಂದು ನಿಮ್ಮ ಪ್ರೀತಿಪಾತ್ರರ ಜೊತೆ ತುಂಬಾ ಸಂತೋಷದಿಂದ ಇರುವಿರಿ. ಆರ್ಥಿಕತೆಯಿಂದ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ. ನಿಮಗೆ ಸಿಕ್ಕ ಅನಾದರದಿಂದ ಬೇಸರಗೊಳ್ಳುವಿರಿ. ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವಾಗಬಹುದು. ಧನಾತ್ಮಕ ಚಿಂತನೆಯಿಂದ ಕಳೆದುಕೊಂಡ ಉತ್ಸಾಹವು ಮತ್ತೆ ಬರುವುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ.

ಕನ್ಯಾ ರಾಶಿ : ಹೂಡಿಕೆಯು ಆರ್ಥಿಕ ಚಿಂತನೆಯನ್ನು ದೂರ ಮಾಡುವುದು. ಇಂದಿನ ನಿರಾಸೆಯು ಮನಸ್ಸಿಗೆ ನೋವನ್ನು ಕೊಡುವುದು. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ. ಹಠವನ್ನು ಬಿಟ್ಟರೆ ಸಂತೋಷದ ಸಂಗತಿಗಳು ನಿಮ್ಮ ಹುಡುಕಿಕೊಂಡು ಬರಬಹುದು. ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ನಡೆದಾಡುವಾಗ ಜಾಗರೂಕತೆ ಬೇಕು.

ತುಲಾ ರಾಶಿ : ದೂರದ ಊರಿನಲ್ಲಿ ಉದ್ಯೋಗಕ್ಕೆ ಹೋಗಬೇಕಾಗಬಹುದು. ಇಂದಿನ ನಿಮ್ಮ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವೇ ಸೃಷ್ಟಿಸುವಿರಿ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ‌ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು. ಇಂದಿನ ಕಾರ್ಯವು ಪೂರ್ಣವಾಗುವ ತನಕ ನಿಮಗೆ ಮಾನಸಿಕ ವಿಶ್ರಾಂತಿಯು ಇರದು. ನಿಮ್ಮ ಮಾತು ವಿವಾದವನ್ನು ಹುಟ್ಟುಹಾಕಬಹುದು. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭ ಗಳಿಸುವಿರಿ. ಸಂಗಾತಿಯ ಬಯಕೆಯನ್ನು ಪೂರ್ಣವಾಗಿಸುವಿರಿ.

ವೃಶ್ಚಿಕ ರಾಶಿ : ವಿದ್ಯಾಭ್ಯಾಸದ ಖರ್ಚನ್ನು ನೀವು ಸರಿದೂಗಿಸಿಕೊಳ್ಳುವಿರಿ. ನಡವಳಿಕೆಯು ಹದ ಮೀರದಿರಲಿ. ಪ್ರೇಮಿಗಳು ಇಂದು ಸ್ವತಂತ್ರವಾಗಿ ಇರಲು ಆಸೆಪಡುವರು. ವಿವಾಹಿತರ ಜೀವನವು ಆನಂದದಿಂದ ಇರುವುದು. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು. ಯುಕ್ತಿಯಿಂದ ಕೆಲಸವನ್ನು ಸಾಧಿಸಿದ ಎಲ್ಲವೂ ಕ್ಷೇಮ. ನಿಮ್ಮ ನಡವಳಿಕೆಯು ಕೆಲವರಿಗೆ ಇಷ್ಟವಾಗದೇ ಇರಬಹುದು.

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ