AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಮೇಲಧಿಕಾರಿಗಳಿಂದ ನಿಮಗೆ ಕಿರಿಕಿರಿ ಆಗುವ ಸಾಧ್ಯತೆ ಇದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಮೇಲಧಿಕಾರಿಗಳಿಂದ ನಿಮಗೆ ಕಿರಿಕಿರಿ ಆಗುವ ಸಾಧ್ಯತೆ ಇದೆ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 18, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಮೂಲಾ, ಯೋಗ: ಆಯುಷ್ಮಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 10 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:18 ರಿಂದ 01:46ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:53 ರಿಂದ 09:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:18ರ ವರೆಗೆ.

ಸಿಂಹ ರಾಶಿ : ಕಛೇರಿಯ ಕಿರಿಕಿರಿಯಿಂದ‌ ಮನೆಯಲ್ಲಿಯೂ ನಿಮಗೆ ನೆಮ್ಮದಿ ಸಿಗದು. ಖುಷಿಯ ವಾತಾವರಣವಿದ್ದರೂ ನಿಮಗೆ ನಿಮ್ಮದೇ ಚಿಂತೆ ಕಾಡಬಹುದು. ಹಳೆಯ ಸ್ನೇಹಿತರನ್ನು ಭೇಟಿಯಾಗಿ ಸ್ವಲ್ಪ ಹೊಸ ವಾತಾವರಣವನ್ನು ಕಾಣುವಿರಿ. ಜವಾಬ್ದಾರಿಯ ಕಾರಣಕ್ಕೆ ನಿಮ್ಮ ವರ್ತನೆಯಲ್ಲಿ ಭಿನ್ನತೆ ಕಾಣುವುದು. ನಿಮಗೆ ಬರಬೇಕಾದ ಹಣವನ್ನು ಬೇರೆಯವರ ಮೂಲಕ ತೀರಿಸಿಕೊಳ್ಳುವಿರಿ. ನಿಮ್ಮ ನೌಕರರ ಬಗ್ಗೆ ನಿಮಗೆ ಸಮಾಧಾನ ಇರಲಿದೆ. ಕಾರ್ಯಗಳಿಗೆ ನಿಗದಿತ ಸಮಯವನ್ನು ಇಟ್ಟುಕೊಳ್ಳುವುದು ಮುಖ್ಯ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆಯನ್ನು ಕೊಡಲಿದ್ದೀರಿ. ಪ್ರಸಿದ್ಧ ದೇವಾಲಯಕ್ಕೆ ಹೋಗಿ ಸ್ವಲ್ಪ ಸಮಯ ಕಳೆದುಬರುವಿರಿ. ದುರ್ಗಾ‌ ಮಾತೆಯನ್ನು ಪೂಜಿಸಿ.

ಕನ್ಯಾ ರಾಶಿ : ಸ್ತ್ರೀಯರಿಗೆ ತಾಳ್ಮೆಯ ಪರೀಕ್ಷೆ ಆಗಬಹುದು. ಮನೆಯ ಕೆಲಸದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ಸಹೋದರಿಯರ ನಡುವೆ ಕಲಹವಾಗಬಹುದು. ಅಮೂಲ್ಯವಾದ ವಸ್ತುಗಳನ್ನು ನಷ್ಟ ಮಾಡಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದ್ದು ವೈದ್ಯರನ್ನು ಭೇಟಿಯಾಗುವುದು ಸೂಕ್ತ. ಮನೆಯಲ್ಲಿ ನಿಮ್ಮ ಮಾತಿಗೆ ಯಾವ ಉತ್ತರವೂ ಕೊಡದೇ ಇರುವುದು ನಿಮಗೆ ನೋವಾಗುವುದು. ದುರಭ್ಯಾಸವನ್ನು ಹಿಡಿಸಿಕೊಳ್ಳುವ ಸಂದರ್ಭವು ಬರಬಹುದು. ಆಸ್ತಿಯ ವಿಚಾರದಲ್ಲಿ ಜಗಳವು ತಾರಕಕ್ಕೆ ಹೋಗಬಹುದು. ನಿಮಗೆ ಗೊತ್ತಿಲ್ಲದ ಕಾರ್ಯವನ್ನು ಕಛೇರಿಯಲ್ಲಿ ನಿಭಾಯಿಸಬೇಕಾಗುವುದು. ಮನೋರಂಜನೆಯ ಕೊರತೆಯು ಅಧಿಕವಾಗಿ ಕಾಡುವುದು. ವಿರಾಮವನ್ನು ತೆಗದುಕೊಳ್ಳುವ ಮನಸ್ಸಾದೀತು.

ತುಲಾ ರಾಶಿ : ದಾಂಪತ್ಯದಲ್ಲಿ ಶಾಂತಿಯು ಬೇಕಾದರೆ ಸುಮ್ಮನಿರುವುದು ಉತ್ತಮ. ಕೋಪವನ್ನು ದೀರ್ಘಕಾಲ ಮುಂದುವರಿಸುವುದು ಬೇಡ. ಕಛೇರಿಯಲ್ಲಿ ಕೆಲಸವು ತುರ್ತು ಸಭೆಗಳ ಕಾರಣ ಹಿಂದುಳಿಯುವುದು. ಸ್ವಾಭಿಮಾನ ಬಂಧುಗಳ ಎದುರು ಕಾಣಿಸಿಕೊಳ್ಳಬಹುದು. ಎಲ್ಲ ವಿಚಾರದಲ್ಲಿ ಹಿನ್ನಡೆ ಇರಲಿದೆ. ಸ್ವಂತ ಉದ್ಯಮವನ್ನು ಮಾಡುತ್ತಿದ್ದರೆ ನಿರೀಕ್ಷಿತ ಲಾಭವನ್ನು ತಲುಪುವುದು ಕಷ್ಟವಾದೀತು. ಸ್ತ್ರೀಯರ ಜೊತೆ ಇಂದು ನಿಮ್ಮ ವ್ಯವಹಾರವು ಬೇಡ. ಮೇಲಧಿಕಾರಿಗಳಿಂದ ನಿಮಗೆ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸರ್ಕಾರದ ಕಾರ್ಯದಲ್ಲಿ ಹಿನ್ನಡೆ ಅಧಿಕವಾಗಿ ಕಾಣಿಸುವುದು. ಪ್ರಭಾವೀ ವ್ಯಕ್ತಿಗಳನ್ನು ನೀವು ಬಳಸಿಕೊಳ್ಳುವಿರಿ. ದಿನಚರಿಯನ್ನು ಬದಲಾಯಿಸಿಕೊಳ್ಳುವುದು ಸೂಕ್ತ.

ವೃಶ್ಚಿಕ ರಾಶಿ : ದಿನ ಪೂರ್ತಿ ಬೆವರು ಹರಿಸಿ ಮಾಡಿದ ಕೆಲಸಕ್ಕೆ ದಿನದ ಕೊನೆಗೆ ಶುಭ ಫಲವು ಸಿಗುವುದು. ಹೊಸ ಉದ್ಯೋಗವನ್ನು ಹುಡುಕುವವರಿಗೆ ಹೆಚ್ಚು ಗೊಂದಲವಾಗಬಹುದು. ಇಂದು ಒಂದು ಮಿತಿಯಲ್ಲಿ ನಿಮ್ಮ ಮಾತಿರಲಿ. ತಾಯಿಯ ವಿಚಾರದಲ್ಲಿ ಕೋಪಗೊಳ್ಳುವಿರಿ. ಸಹೋದರರ ಸಹಕಾರವು ನಿಮಗೆ ಬಲವನ್ನು ಕೊಡಬಹುದು. ನಿಮ್ಮ ಸ್ವಭಾವವನ್ನು ಬಿಟ್ಟು ಎಲ್ಲರ ಜೊತೆ ಹೊಂದಾಣಿಕೆಯಿಂದ ಇರುವಿರಿ. ಯಾರ ಸಹಾಯವನ್ನೂ ಪಡೆಯದೆ ಕಾರ್ಯವು ನಿಧಾನವಾಗುವುದು. ಉದ್ಯೋಗಕ್ಕಾಗಿ ಖಾಸಗಿ ಸಂಸ್ಥೆಯನ್ನು ಅಲೆಯಬೇಕಾಗುವುದು. ನಿಮ್ಮ ಇಂದಿನ ವರ್ತನೆಯು ಅಸಹಜದಂತೆ ತೋರುವುದು. ಸಕಾರಾತ್ಮಕ ಚಿಂತನೆಯನ್ನು ರೂಢಿಸಿಕೊಳ್ಳುವುದು ಉತ್ತಮ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ