AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಇಂದಿನ ರಾಶಿಭವಿಷ್ಯ, ಯಾರೋ ಮಾಡಿದ ತಪ್ಪಿಗೆ ನಿಮಗೆ ತೊಂದರೆಯಾಗಲಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 2) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಇಂದಿನ ರಾಶಿಭವಿಷ್ಯ, ಯಾರೋ ಮಾಡಿದ ತಪ್ಪಿಗೆ ನಿಮಗೆ ತೊಂದರೆಯಾಗಲಿದೆ
ರಾಶಿ ಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Aug 02, 2023 | 12:30 AM

Share

ಇಂದಿನ ನಿಮ್ಮ ರಾಶಿ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 2) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ಪ್ರೀತಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 16 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 02:14ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:52 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ.

ಸಿಂಹ ರಾಶಿ: ಖರ್ಚಿನ ಮೇಲೆ‌‌ ನಿಯಂತ್ರಣ ಸಾಧಿಸಬೇಕೆಂದು ಹೊರಟರೂ ಅದು ಮತ್ತೆಲ್ಲೋ ಒಂದು ಕಡೆ ಹರಿದು ಹೋಗುವುದು. ವೈವಾಹಿಕ ಜೀವನದ ಸುಖವನ್ನು ಅನುಭವಿಸುವಿರಿ. ದಾಂಪತ್ಯದಲ್ಲಿ ಸಣ್ಣ ಕಲಹವಾದರೂ ಅನಂತರ ಒಂದಾಗುವಿರಿ. ಮಕ್ಕಳನ್ನು ಪಡೆಯುವ ಬಯಕೆ ಅತಿಯಾಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವು ಕಾಣಿಸಿದ್ದು ವೈದ್ಯರ ಸಲಹೆಯನ್ನು ಪಡೆಯಿರಿ. ನೂತನ ವಸ್ತುಗಳ ಖರೀದಿಯನ್ನು ನೀವು ಮಾಡಲಿದ್ದೀರಿ. ವಂಚಿತರಾಗುವ ಸಾಧ್ಯತೆ ಇದೆ.‌ ನಿಮ್ಮನ್ನು ಗುರುತಿಸಬೇಕು ಎನ್ನುವ ಹಂಬಲ ಇರಲಿದೆ. ನಿಮ್ಮ ಗುಣಗಳನ್ನು ದುರುಪಯೋಗ ಮಾಡಿಕೊಳ್ಳುವರು. ಪ್ರೀತಿಯಿಂದ‌ ಗೆಲ್ಲುವ ನಿರ್ಧಾರವು ಒಳ್ಳೆಯದು.

ಕನ್ಯಾ ರಾಶಿ: ಸಾಮಾಜಿಕ ಜೀವನದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನಿಮ್ಮ ಮಮಕಾರದಿಂದ ನಿಮಗೆ ತೊಂದರೆಯಾಗಲಿದೆ. ಹಣದ ಸಂಪಾದನೆಗೆ ಅನೇಕ ಮಾರ್ಗಗಳು ಇದ್ದರೂ ನಿಮಗೆ ಅದಾವುದೂ ಇಷ್ಟವಾಗದು. ಪಾಲುದಾರಿಕೆಯಲ್ಲಿ ಉದ್ಯೋಗವನ್ನು ಪ್ರಾರಂಭಿಸಿ.‌ ಇಂದು ನಿಮ್ಮ ಒಬ್ಬರ ಶ್ರಮವು ವ್ಯರ್ಥವಾಗಬಹುದು. ಸ್ನೇಹ ಬಳಗವು ದೊಡ್ಡದಾಗಬಹುದು. ನಿರ್ಮಾಣದ ಕೆಲಸವು ಬಹಳ ನಿಧಾನವಾಗಬಹುದು. ಇದರಿಂದ ನಿಮ್ಮಲ್ಲಿ ಆತಂಕ ಹೆಚ್ಚಬಹುದು. ಯಾರೋ ಮಾಡಿದ ತಪ್ಪಿಗೆ ನಿಮಗೆ ತೊಂದರೆಯಾಗಲಿದೆ. ಅನಿರೀಕ್ಷಿತ ಗೆಲುವು ನಿಮಗೆ ಖುಷಿಕೊಟ್ಟೀತು. ಅಧಿಕಾರಿಗಳು ನಿಮ್ಮ ಬಗ್ಗೆ ತಪ್ಪಾದ ಭಾವನೆಗಳನ್ನು ಇಟ್ಟುಕೊಳ್ಳುವರು.

ತುಲಾ ರಾಶಿ: ಯಾರದೋ ಮಾತಿನ ಮೇರೆಗೆ ಇಂದು ಕುಟುಂಬದಲ್ಲಿ ಕಲಹವಾಗಬಹುದು. ಯಾರನ್ನೂ ನಿಮ್ಮ ಮೂಗಿನ ನೇರಕ್ಕೆ ಅಳೆಯಬಾರದು. ಇಂದು ನಿಮಗೆ ಕಛೇರಿಯ ಕೆಲಸಗಳು ಅತಿಯಾಗಿದೆ ಎಂದು ಅನ್ನಿಸಬಹುದು. ಸಂಗಾತಿಗೆ ನಿಮ್ಮ ವರ್ತನೆಯಲ್ಲಿ ಬದಲಾವಣೆ ಕಾಣಿಸುವುದು. ನಿಮ್ಮ ಸಮಯವನ್ನು ಸದುಪಯೋಗ ಮಾಡಿಕೊಳ್ಳುವ ದಾರಿಯನ್ನು ಕಂಡುಕೊಳ್ಳಿ. ನಿಮ್ಮ ಸಾಮರ್ಥ್ಯದಿಂದ ಉನ್ನತ ಹುದ್ದೆಯನ್ನು ನೀವು ಅಲಂಕರಿಸುವಿರಿ. ಚಂಚಲವಾದ ಮನಸ್ಸು ನಿಮಗೆ ಅನೇಕ ಒಳ್ಳೆಯ ಆಯ್ಕೆಯನ್ನು ತಪ್ಪಿಸುವುದು.

ವೃಶ್ಚಿಕ ರಾಶಿ: ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಆಸಕ್ತಿ ಇದ್ದರೂ ಅದನ್ನು ಅರ್ಥಮಾಡಿಕೊಳ್ಳಲು ಕಷ್ಟವಾದೀತು. ಯಾರನ್ನೋ ಸಂಶಯಿಸುತ್ತ ಇರುವುದು ಬೇಡ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಹೇಳಬೇಕಾದಲ್ಲಿಗೆ ಹೇಳಿ.‌ ಇಂದು ವ್ಯವಹಾರವು ಅಧಿಕ ಲಾಭವನ್ನು ತಂದುಕೊಡದು. ಶಿಸ್ತನ್ನು ರೂಢಿಸಿಕೊಳ್ಳುವುದು ಕಷ್ಟವಾದೀತು. ಧಾರ್ಮಿಕ ವಿಚಾರದಲ್ಲಿ ನೀವು ನಂಬಿಕೆಯನ್ನು ಕಳೆದುಕೊಳ್ಳುವುದು ಸರಿಯಲ್ಲ. ಕಾರಣಾಂತರಗಳಿಂದ ನೀವು ಹೋಗುವ ಪ್ರಯಾಣವು ಸ್ಥಗಿತಗೊಳ್ಳಬಹುದು.‌ ಆಡಳಿತಾತ್ಮಕ ವಿಚಾರದಲ್ಲಿ ನಿಮಗೆ ಹಿನ್ನಡೆ ಆಗಬಹುದು. ದೂರ ಪ್ರಯಾಣವು ನಿಮಗೆ ಇಷ್ಟವಾದೀತು.

Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ