AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಸಂಕಷ್ಟದ ನಿವಾರಣೆಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ, ಈ ರಾಶಿಯವರು ಸಂಕಷ್ಟದ ನಿವಾರಣೆಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಿ
ರಾಶಿಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Aug 20, 2023 | 12:30 AM

Share

ಇಂದಿನ ರಾಶಿ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಚತುರ್ಥಿ, ನಿತ್ಯನಕ್ಷತ್ರ: ಹಸ್ತಾ, ಯೋಗ: ಸಾಧ್ಯ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 05:15 ರಿಂದ 06:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:10ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:43 ರಿಂದ 05:17ರ ವರೆಗೆ.

ಸಿಂಹ ರಾಶಿ: ಹಳೆಯ ರೋಗವು ಮತ್ತೆ ಕಾಣಿಸಿಕೊಳ್ಳಬಹುದು. ಮನೆಯವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಹಿರಿಯಿಂದ ಆಶೀರ್ವಾದವನ್ನು ಪಡೆಯುವಿರಿ. ವೈಯಕ್ತಿಕ ಕೆಲಸವನ್ನು ಮಾಡಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಹಣವು ನಿಮಗೆ ಬಾರದೇ ಹೋಗಬಹುದು. ನಿಮ್ಮ ಹೆಸರಿನಿಂದ ಯಾರನ್ನಾದರೂ ವಂಚಿಸಿಬಹುದು. ಸಹೋದರನ ಸಹಾಯವನ್ನು ನೀವು ಕೇಳುವಿರಿ. ವಾಹನ ಖರೀದಿಸುವ ಸ್ಥಿತಿಯು ಬರಲಿದ್ದು ಸಾಲ ಮಾಡಬೇಕಾಗಬಹುದು. ಏಕಾಂತವು ನಿಮಗೆ ಬಲವನ್ನು ಕೊಡಬಹುದು. ಶಿವನ ಆರಾಧನೆಯನ್ನು ಹೆಚ್ಚು ಮಾಡಿ.

ಕನ್ಯಾ ರಾಶಿ: ಸಂಕಷ್ಟದ ನಿವಾರಣೆಗೆ ದೇವರಲ್ಲಿ ಪ್ರಾರ್ಥನೆಯನ್ನು ಮಾಡಿ. ವಿಶ್ವಾಸವನ್ನು ಗಳಿಸುವ ವಿಚಾರದಲ್ಲಿ ಸೋಲುವಿರಿ. ಮನೆಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡುವಿರಿ. ಮನೆಯಲ್ಲಿ ಅತಿಥಿಗಳು ಇರುವರು. ದೂರದಲ್ಲಿರುವ ಪ್ರೀತಿಪಾತ್ರರನ್ನು ಭೇಟಿ ಮಾಡುವಿರಿ. ವಿದ್ಯಾರ್ಥಿಗಳು ಪರೀಕ್ಷೆಯ ಭಯದಲ್ಲಿರುವರು. ವಿವಾಹದ ಸಂಭ್ರಮದಲ್ಲಿ ಭಾಗಿಯಾಗುವಿರಿ. ಆತ್ಮೀಯರ ಒಡನಾಟದಿಂದ ಸಂತೋಷವು ನೆಮ್ಮದಿಯು ಹೆಚ್ಚುವುದು. ಸಂಸಾರವು ಸುಖ ಎಂದು ಅನ್ನಿಸಬಹುದು. ಪ್ರಯಾಣದಲ್ಲಿ ಅಪರಿಚಿತರ ಸಖ್ಯವಾಗುವುದು. ನಿಮ್ಮ ಪೂರ್ಣ ಪರಿಚಯನ್ನು ಮಾಡಿಕೊಡುವುದು ಬೇಡ.

ತುಲಾ ರಾಶಿ: ಬೇರೆ ಕಡೆಯಿಂದ ಬರುವ ಅತಿಯಾದ ಒತ್ತಡದಿಂದ ಮನಸ್ಸು ಹಾಳಾಗುವುದು. ಸ್ತ್ರೀಯರ ಸಹಾಯಕ್ಕೆ ನೀವು ಹೋಗುವಿರಿ. ನೀರಿನಿಂದ ಭೀತಿಯು ಇದ್ದರೆ ನೀರಿನ‌ ಪ್ರದೇಶದ ಕಡೆ ಹೋಗುವುದು ಬೇಡ. ಯಾರದೋ ಮೂಲಕ ನಿಮ್ಮ ಕೆಲಸವನ್ನು ಮಾಡಿಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನಿಮಗೆ ತೃಪ್ತಿ ಇರದು. ಹೊರಗಿನ ಆಹಾರವು ನಿಮ್ಮ ಆರೋಗ್ಯವನ್ನು ಕೆಡಿಸೀತು. ಕಲಾವಿದರಿಗೆ ಅವಕಾಶಗಳು ಸಿಗಬಹುದು. ಪ್ರಯಾಣದಿಂದ ಆಯಾಸವಾಗಬಹುದು. ಕುಟುಂಬದ ಜವಾಬ್ದಾರಿಯು ಬರಬಹುದು. ಆಸ್ತಿಯ ವಿಚಾರದಲ್ಲಿ ಕಲಹವಾಗುವುದು.

ವೃಶ್ಚಿಕ ರಾಶಿ: ಇಂದು ನೀವು ಬಹಳ ಜಾಣ್ಮೆಯಿಂದ ವ್ಯವಹಾರವನ್ನು ಮಾಡುವಿರಿ. ಭೂಮಿಯ ಖರೀದಿಯನ್ನು ನೀವು ಮಾಡವ ಯೋಚನೆ ಇರಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ನಿಮಗೆ ಸಮಾಧಾನವನ್ನು ಕೊಡುವುದು. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡುವಿರಿ. ತಾಳ್ಮೆಯನ್ನು ಕಳೆದುಕೊಳ್ಳಲು ನಿಮ್ಮ ಬಗ್ಗೆ ಇರುವ ಪೂರ್ವಾಗ್ರಹವು ಬದಲಾದೀತು. ಬಲದಿಂದ‌ ಆಗದ ಕಾರ್ಯವನ್ನು ಯುಕ್ತಿಯಿಂದ ಮಾಡುವುದು ಸೂಕ್ತ. ಇಷ್ಟದೇವರ ದರ್ಶನವನ್ನು ಮಾಡುವಿರಿ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಆಸಕ್ತಿಯನ್ನು ಕಳೆದುಕೊಳ್ಳುವರು. ಮಾತುಗಳನ್ನು ಕಡಿಮೆ ಮಾಡಿದಷ್ಟು ಒಳ್ಳೆಯದೇ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್