Horoscope: ದಿನಭವಿಷ್ಯ, ಇಂದು ಈ ರಾಶಿಯವರ ರಹಸ್ಯ ಪ್ರೇಮವು ಬಯಲಾದೀತು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಇಂದು ಈ ರಾಶಿಯವರ ರಹಸ್ಯ ಪ್ರೇಮವು ಬಯಲಾದೀತು
ಪ್ರಾತಿನಿಧಿಕ ಚಿತ್ರ
Follow us
| Edited By: Rakesh Nayak Manchi

Updated on: Sep 25, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 25 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ: ಉತ್ತರಾಷಾಢ, ಯೋಗ: ಅತಿಗಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 25 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:53 ರಿಂದ 09:24ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:54 ರಿಂದ ಮಧ್ಯಾಹ್ನ 12:24ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:55 ರಿಂದ 03:25ರ ವರೆಗೆ.

ಸಿಂಹ ರಾಶಿ: ಮನಸ್ಸಿನ ಕಿರಿಕಿರಿಯನ್ನು ಕಡಿಮೆ ಮಾಡಿಕೊಳ್ಳಲು ಅಗತ್ಯ ವಿಧಾನವನ್ನು ರೂಪಿಸಿಕೊಳ್ಳುವಿರಿ. ದೇಹಕ್ಕೆ ಯೋಗ್ಯವಲ್ಲದ ಆಹಾರದ ಸ್ವೀಕಾರದಿಂದ ನಿಮಗೆ ತೊಂದರೆಯಾದೀತು. ವಿಶ್ವಾಸವನ್ನು ಗಳಿಸುವ ಪ್ರಯತ್ನವು ಸಾಧ್ಯವಾಗಬಹುದು. ನಿಮ್ಮ ಅಸಹಜ ವರ್ತನೆಯಿಂದ ಸಂಗಾತಿಗೆ ಸಿಟ್ಟು ಬರಬಹುದು. ನಿಮ್ಮ ಪ್ರೀತಿಯನ್ನು ಹಂಚಿಕೊಳ್ಳಲು ಕಾಯುತ್ತಿರುವಿರಿ. ನಿಮ್ಮ ನಕಾರಾತ್ಮಕ ವರ್ತನೆಯ ಬಗ್ಗೆ ಯಾರಾದರೂ ಹೇಳಿಯಾರು. ಮನೋರಂಜನೆ ಕಾರ್ಯದಲ್ಲಿ ನೀವು ಮಗ್ನರಾಗಿರುವಿರಿ. ಕೆಲವು ವಿಚಾರಗಳನ್ನು ನಿರ್ಲಕ್ಷ್ಯಿಸಿ ಅವಕಾಶದಿಂದ ವಂಚಿತರಾಗುವಿರಿ. ಇಂದು ನಿಮ್ಮ ರಹಸ್ಯ ಪ್ರೇಮವು ಬಯಲಾದೀತು. ಮನೆ ಕೆಲಸದಿಂದ ಕಛೇರಿಗೆ ಕರೆಯು ಬರಬಹುದು.

ಕನ್ಯಾ ರಾಶಿ: ಅಸೂಯೆಯಿಂದ ಏನನ್ನೋ ಸಾಧಿಸಲು ಹೋಗುವಿರಿ. ಅತಿಯಾದ ಆತ್ಮವಿಶ್ವಾಸವೇ ನಿಮ್ಮನ್ನು ಕೆಳಗಿಳಿಸಬಹುದು. ಸಾಮನ್ಯ ವಿಷಯವನ್ನು ಅಸಾಮಾನ್ಯವೆನ್ನುವಂತೆ ಮಾಡುವಿರಿ. ನಿಮ್ಮ ದೌರ್ಬಲ್ಯಗಳು ನಿಮ್ಮ ಯಶಸ್ಸನ್ನು ಕಟ್ಟಿಹಾಕುವುವು. ಇನ್ನೊಬ್ಬರ ಚಿಂತನೆಯನ್ನು ಗೌರವಿಸಿ ಅವರ ಪಾಲಿಗೆ ದೊಡ್ಡವರಾಗಿ. ನಿಮಗೆ ಗೊತ್ತಿರುವ ಕಾರ್ಯಕುಶಲತೆಯನ್ನು ಮೆಚ್ಚುಬರು. ನೋವನ್ನು ಕೊಟ್ಟು ಅನಂತರ ಪಶ್ಚಾತ್ತಾಪಪಡಬೇಕಾದೀತು. ಸಂಗಾತಿಗೆ ನಿಮ್ಮಿಂದ ಅಪರೂಪದ ಉಡುಗೊರೆಯು ಸಿಗಲಿದೆ.‌ ಬಿಟ್ಟ ಅಭ್ಯಾಸವನ್ನು ಪುನಃ ಬೆಳೆಸಿಕೊಳ್ಳುವಿರಿ. ನಿಮ್ಮ‌ ಸರಳತೆಯು ನಿಮಗೆ ಅಲ್ಪ ಯಶಸ್ಸನ್ನು ಕೊಡುವುದು.

ತುಲಾ ರಾಶಿ: ಕಲ್ಪನಾಲೋಕದಿಂದ ಕೆಳಗಿಳಿದು ವಾಸ್ತವದಲ್ಲಿ ಇರುವುದು ಮುಖ್ಯವಾದೀತು. ಇದ್ದಕ್ಕಿದ್ದಂತೆ ಇನ್ನೊಬ್ಬರ ಹಂಗಿನಲ್ಲಿ ಬದುಕಿದಂತೆ ಭಾಸವಾಗುವುದು. ನೆರೆಯರ ಜೊತೆ ನಿಮ್ಮ ಭಾವನೆಗಳನ್ನು ಹೇಳಿಕೊಳ್ಳುವಿರಿ. ಬರಬೇಕಾದ ಹಣವು ಸಕಾಲಕ್ಕೆ ಸಿಗದೇ ವ್ಯವಹಾರದಲ್ಲಿ ಅಡೆತಡೆಯಾಗಬಹುದು. ನೀವು ಅಂದುಕೊಂಡಂತೆ ನಿಮ್ಮ ಬದುಕು ಸಾಗುತ್ತಿದೆಯೇ ಎಂದು ಅವಲೋಕಿಸಿ. ಹಿರಿಯರಿಂದ ನಿಮ್ಮ ಕೆಲಸಕ್ಕೆ ಕೆಲವು ನಿಂದನೆಯ ಮಾತುಗಳು ಕೇಳಿಸಬಹುದು. ಬಾಲಿಶ ಮಾತುಗಳನ್ನು ಕಡಿಮೆ ಮಾಡಿಕೊಳ್ಳಿ.‌ ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ವೃದ್ಧಿಯಾಗುವುದು. ‌ದಿನದ ಕಾರ್ಯವನ್ನು ಬದಲಾಯಿಸಿಕೊಳ್ಳುವಿರಿ.

ವೃಶ್ಚಿಕ ರಾಶಿ: ಇನ್ನೊಬ್ಬರ ವಿಚಾರಗಳಿಗೆ ಮೂಗುತೂರಿಸಲಿದ್ದೀರಿ. ನಿಮ್ಮದೊಂದೇ ಶ್ರೇಷ್ಠ ಎಂಬ ಭಾವನೆಯು ಬರುವುದು. ಯಾರನ್ನೋ ಉತ್ತೇಜಿಸಿ ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ಮನಸ್ಸು ಚಂಚಲವಾದ್ದರಿಂದ ಕ್ಷಣಕ್ಕೊಂದು ಆಲೋಚನೆ ಬರಬಹುದು. ನೂತನ ವಸ್ತುವಿನ ಖರೀದಿಯಿಂದ ಮೋಸ ಹೋಗುವಿರಿ. ಅನಗತ್ಯ ವಸ್ತುಗಳನ್ನು ಖರೀದಿಸಿ ಧನವ್ಯಯವಾಗುವುದು. ಮಕ್ಕಳಿಗೆ ಬೇಕಾದುದನ್ನು ಕೊಡಿಸಬೇಕಾದೀತು. ಮನೆಯ ಬಗ್ಗೆಯೇ ಆಲೋಚನೆ ಇರುವ ಕಾರಣ ಕಛೇರಿಯಲ್ಲಿ ಕೆಲಸದ ಮನಃಸ್ಥಿತಿ ಇರದು. ಇಂದು ಉದ್ಯಮದ ಹೊಸ ಯೋಜನೆಗಳನ್ನು ಪ್ರಸ್ತಾಪಿಸುವಿರಿ. ನೌಕರರಿಗೆ ಖುಷಿ ಆಗಿವಂತೆ ವರ್ತಿಸುವಿರಿ. ವಿವಾಹವಾಗಲು ನಿಮಗೆ ಮನಸ್ಸು ಬಾರದು.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ