Horoscope: ದಿನಭವಿಷ್ಯ, ಈ ರಾಶಿಯವರು ಕೈಲಾಗದು ಎಂದು ಕೈಕಟ್ಟಿ ಕುಳಿತುಕೊಳ್ಳುವುದು ಬೇಡ, ಪ್ರಯತ್ನವು ಇರಲಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 21) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ, ಈ ರಾಶಿಯವರು ಕೈಲಾಗದು ಎಂದು ಕೈಕಟ್ಟಿ ಕುಳಿತುಕೊಳ್ಳುವುದು ಬೇಡ, ಪ್ರಯತ್ನವು ಇರಲಿ
ಪ್ರಾತಿನಿಧಿಕ ಚಿತ್ರImage Credit source: iStock Photo
Follow us
| Updated By: Rakesh Nayak Manchi

Updated on: Nov 21, 2023 | 12:30 AM

ಇಂದಿನ ರಾಶಿ ಭವಿಷ್ಯ (Horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 21) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ವಿಶಾಖಾ, ಮಾಸ: ಕಾರ್ತಿಕ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ನವಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ವೃದ್ಧಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 37 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:09 ರಿಂದ 04:34ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:28 ರಿಂದ 10:53ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:18 ರಿಂದ 01:44ರ ವರೆಗೆ.

ಸಿಂಹ ರಾಶಿ: ಮಾತಿನಿಂದ ಪರಸ್ಪರ ಕಾದಾಟವಾಗಬಹುದು. ಸಣ್ಣ ಸಣ್ಣ ವಿಚಾರಗಳೂ ದೊಡ್ಡ ಮನಸ್ತಾಪಕ್ಕೆ ಕಾರಣವಾಗಬಹುದು. ನಿಮ್ಮ ಸ್ವಂತಿಕೆಯನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇರಲಿದೆ. ದೂರದ ಬಂಧುಗಳ ಆಗಮನವು ಆಗಲಿದೆ. ನಿಮ್ಮ ಆರ್ಥಿಕ ದೌರ್ಬಲ್ಯವನ್ನು ಆಡುಕೊಳ್ಳಬಹುದು. ನಿಮಗೆ ಗೊತ್ತಿಲ್ಲದೇ ಚರಾಸ್ತಿಯು ಇಲ್ಲವಾಗಬಹುದು. ಸಕಾಲಕ್ಕೆ ಯಾವದೂ ಆಗದೇ ಎಲ್ಲವೂ ಅಸ್ತವ್ಯಸ್ತವಾಗಲಿದೆ. ಇಷ್ಟವಿಲ್ಲದಿದ್ದರೂ ಕೆಲಸವನ್ನು ಮಾಡಬೇಕಾದೀತು. ಉದ್ವಿಗ್ನತೆಗೆ ದಾರಿ ಮಾಡಿಕೊಡದೇ ಸಮಚಿತ್ತದಲ್ಲಿ ಇರುವಂತೆ ನೋಡಿಕೊಳ್ಳಿ. ನಿಮ್ಮ ಇರುವಿಕೆಯನ್ನು ತೋರಿಸುವ ಪ್ರಯತ್ನ ಮಾಡುವಿರಿ. ನೌಕರರ ವಿಷಯದಲ್ಲಿ ಕೋಪಗೊಳ್ಳುವ ಸನ್ನಿವೇಶ ಬರಬಹುದು. ನಿಮ್ಮ ಕೈಲಾಗದು ಎಂದು ಕೈಕಟ್ಟಿ ಕುಳಿತುಕೊಳ್ಳುವುದು ಬೇಡ, ಪ್ರಯತ್ನವು ಇರಲಿ. ನಿಮ್ಮನ್ನು ಯಾರಾದರೂ ಆಕರ್ಷಿಸಿಯಾರು‌.

ಕನ್ಯಾ ರಾಶಿ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಪೂರ್ಣ ಮಾಡಲು ನಾನಾ ತೊಂದರೆಗಳು ಕಾಣಿಸಿಕೊಂಡೀತು. ಶತ್ರುಗಳ ಹುಡುಕಾಟದಲ್ಲಿ ಸಫಲರಾಗುವುದಿಲ್ಲ. ಕೆತ್ತನೆಯ ಕಲಾವಿದರಿಗೆ ಹೆಚ್ಚು ಬೇಡಿಕೆ ಬರಬಹುದು. ಪಕ್ಷಪಾತದಿಂದ ಕಲಹವಾಗುವುದು. ನೌಕರರ ವಿಚಾರದಲ್ಲಿ ನಿಮ್ಮ ವರ್ತನೆಯು ಸರಿಯಾಗಿರಲಿ. ನಿಮ್ಮದೇ ಆದ ಚಿಂತನೆಯಿಂದ ಕಾರ್ಯವನ್ನು ಮಾಡುವಿರಿ. ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ. ಒಂದೇ ರೀತಿಯಲ್ಲಿ ಜೀವನ ಸಾಗುವುದು ನಿಮಗೆ ಇಷ್ಟವಾಗದು. ಯಾವುದಕ್ಕೆ ಎಷ್ಟು ಸಮಯವನ್ನು ಕೊಡಬೇಕು ಎನ್ನುವುದನ್ನು ಪರೀಕ್ಷೆಯ ವಿದ್ಯಾರ್ಥಿಗಳು ನಿರ್ಧರಿಸಿ. ಭೂಮಿಯ ವ್ಯವಹಾರವು ಗೊಂದಲಮಯ ಆಗಬಹುದು. ಸ್ವಂತ ಉದ್ಯೋಗವನ್ನು ಮಾಡಬೇಕು ಎಂಬ ಚಿಂತನೆ ಹುಟ್ಟಿಕೊಳ್ಳಬಹುದು. ಪ್ರೀತಿಯನ್ನು ದೂರಮಾಡಿಕೊಳ್ಳಲಿದ್ದೀರಿ. ನಿಮ್ಮ ಮೇಲೆ ಅಸಂಬದ್ಧ ಮಾತುಗಳು ಕೇಳಿಬರುವುದು.

ತುಲಾ ರಾಶಿ: ಕಾರಣಾಂತರಗಳಿಂದ ಸ್ಥಗಿತವಾದ ಉದ್ಯೋಗವನ್ನು ಪುನಃ ಆರಂಭಿಸುವ ಆಲೋಚನೆ ಇರಲಿದೆ. ನಿಮ್ಮ ಬಗ್ಗೆ ಯಾರಾದರೂ ಅಂದುಕೊಂಡಾರು ಎನ್ನುವ ಹಿಂಜರಿಕೆಯು ಇರಲಿದೆ‌. ಉನ್ನತಮಟ್ಟದ ಅಧ್ಯಯನವು ಮುಗಿಯುತ್ತಿರುವುದು ನಿಮಗೆ ಹೆಮ್ಮೆ ಎನಿಸುವುದು. ಸಂಗಾತಿಯ ಮಾತಿನಿಂದ ಬೇಸರವಾಗಲಿದೆ. ನಿಮಗೆ ಯಾವ ಸಂಬಂಧವೇ ಇಲ್ಲದಿದ್ದರೂ ಅಪವಾದವು ಬರಲಿದೆ. ಸಮಯಪಾಲನೆಯಿಂದ ನಿಮ್ಮ ಕೆಲಸಗಳು ಸರಿಯಾಗುವುದು. ನೀರಿನಿಂದ ಭೀತಿಯು ಉಂಟಾಗುವುದು. ವಾಹನದ ಮೇಲಿನ ಪ್ರೀತಿ ವ್ಯಾಮೋಹವಾದೀತು. ನಿಮ್ಮ ಮಾತುಗಳಲ್ಲಿ ನಂಬಿಕೆ ಇಲ್ಲವಾದೀತು. ವೃತ್ತಿಯನ್ನು ಉತ್ಸಾಹದಿಂದ ಮಾಡುವಿರಿ. ಸಂಗಾತಿಯು ನಿಮಗೆ ಕೆಲವು ಉಪಯುಕ್ತ ಮಾತುಗಳನ್ನು ಹೇಳಬಹುದು. ಕಾರ್ಯದ ಒತ್ತಡವನ್ನು ನಿವಾರಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಿ.

ವೃಶ್ಚಿಕ ರಾಶಿ: ಆರ್ಥಿಕತೆಯ ದೃಷ್ಟಿಯಿಂದ ವಿದೇಶಪ್ರಯಾಣವನ್ನು ಮುಂದೂಡುವಿರಿ. ದಾಂಪತ್ಯದಲ್ಲಿ ಅನ್ಯೋನ್ಯತೆಯನ್ನು ಹಿರಿಯರ ಮೂಲಕ ತಂದುಕೊಳ್ಳಬೇಕಾಗುವುದು. ಮಹಿಳೆಯ ಕಾರಣದಿಂದ ನಿಮಗೆ ಧನನಷ್ಟವು ಆಗಬಹುದು. ಭೂಮಿಯನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನವು ಸಫಲವಾಗುವುದು. ನಿಮಗೆ ಸಪ್ಪೆ ಎನಿಸಿದ ವಿಷಯವನ್ನು ಮುಂದುವರಿಸುವುದಿಲ್ಲ. ನಿಮಗೆ ಬರುವ ಪ್ರಶಂಸೆಯ ಮಾತನ್ನು ಅಲ್ಲಗಳೆಯುವಿರಿ. ಉದ್ಯೋಗದ ಒತ್ತಡದಿಂದ ನಿಮಗೆ ಅನಾರೋಗ್ಯದಿಂದ ಬಳಲುವಿರಿ. ಬರಬೇಕಾದ ಹಣವನ್ನು ಪಡೆದರೂ ಖರ್ಚಿಗೆ ದಾರಿ ತೆರೆದುಕೊಂಡು ಇರುವುದು. ಆದಾಯವನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾದೀತು. ಆಸ್ತಿಯ ಕಲಹವನ್ನು ಮನೆಯಲ್ಲಿಯೇ ಇತ್ಯರ್ಥ ಮಾಡಿಕೊಳ್ಳಿ. ಕಲಾವಿದರಿಗೆ ಅವಕಾಶವು ಬರುವುದು. ವಿದೇಶದ ವ್ಯವಹಾರಕ್ಕೆ ಮತ್ತಷ್ಟು ಬಲ ಬರಬಹುದು. ಗೃಹನಿರ್ಮಾಣದ ರೂಪವನ್ನು ನಿರ್ಧರಿಸಿಕೊಳ್ಳುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್