AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ಅದೃಷ್ಟವನ್ನು ನೀವು ಹುಡುಕಿಕೊಂಡು ಹೋಗಬೇಡಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಆಗಸ್ಟ್​ 31: ನಿಮ್ಮ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ನಿಮ್ಮ ವಾಹನವನ್ನು ಯಾರದೋ ಕಾರ್ಯಕ್ಕೆ ಕೊಡಬೇಕಾಗುವುದು. ನಿಮಗೆ ಹೆಚ್ಚಿನ ಆದಾಯದ ಅವಶ್ಯಕತೆ ಇರಲಿದೆ. ಅದಕ್ಕಾಗಿ ನೀವು ಏನನ್ನಾದರೂ ಆದಾಯದ ಮೂಲವನ್ನು ಪಡೆದುಕೊಳ್ಳಬೇಕಾಗುವುದು. ಹಾಗಾದರೆ ಆಗಸ್ಟ್​ 31ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರು ಅದೃಷ್ಟವನ್ನು ನೀವು ಹುಡುಕಿಕೊಂಡು ಹೋಗಬೇಡಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 31, 2024 | 12:15 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಆಗಸ್ಟ್​ 31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಪುಷ್ಯಾ, ಯೋಗ: ವರಿಯಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:43 ಗಂಟೆ, ರಾಹು ಕಾಲ ಬೆಳಿಗ್ಗೆ 09:27 ರಿಂದ 10:59, ಯಮಘಂಡ ಕಾಲ ಮಧ್ಯಾಹ್ನ 02:06 ರಿಂದ 03:38ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ.

ಸಿಂಹ ರಾಶಿ: ಇನ್ನೊಬ್ಬರಿಗಾಗಿ ನೀವು ನಿಮ್ಮ ತುರ್ತಿನ ಕಾರ್ಯವನ್ನು ಬಿಡಬೇಕಾದೀತು. ಇಂದು ಮನೆಯ ನಿರ್ಮಾಣದ ಕಾರ್ಯಕ್ಕೆ ನಿಮ್ಮವರಿಂದ ತೊಂದರೆ ಬರಬಹುದು. ಧಾರ್ಮಿಕ ಕಾರ್ಯಕ್ರಮಗಳನ್ನು ಇಂದು ಅನಿವಾರ್ಯವಾಗಿ ಮಾಡುವಿರಿ. ನಿಮ್ಮ ಯೋಜನೆಯನ್ನು ಯಾರ ಬಳಿಯೂ ಹೇಳಿಕೊಳ್ಳುವುದು ಬೇಡ. ರಮ್ಯವಾದ ಸ್ಥಳಗಳನ್ನು ನೋಡುವ ಬಯಕೆ ಇರುವುದು. ಸಂಕೋಚದ ಸ್ವಭಾವವು ನಿಮ್ಮ ಅನೇಕ ಸಮಸ್ಯೆಗಳನ್ನು ಹಾಗೆಯೇ ಉಳಿಸುತ್ತದೆ. ಸಂಬಂಧಗಳನ್ನು ನೀವು ಇಂದು ಬಿಡಲು ಪ್ರಯತ್ನಿಸುವಿರಿ. ವಾಹನ ಸಂಚಾರಕ್ಕೆ ನಿಮಗೆ ತೊಂದರೆಯಾಗಬಹುದು. ಸ್ತ್ರೀಯರ ಉದ್ಯಮಕ್ಕೆ ತೊಂದರೆಯಾಗುವುದು. ಶುಭ ಸುದ್ದಿಯು ನಿಮಗೆ ಸ್ವಲ್ಪ ಸಂತೋಷವನ್ನು ತರಬಹುದು. ಮಕ್ಕಳ‌ ಜೊತೆ ಇರುವಿರಿ. ಒಂದಿಷ್ಟು ಬದಲಾವಣೆಗಳು ಆಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಮ್ಮಲ್ಲಿ ವಿದ್ಯೆ ಇರುವ ಕಾರಣ ಯಾವ ಸಂದರ್ಭಕ್ಕೂ ಹೆದರುವುದಿಲ್ಲ.

ಕನ್ಯಾ ರಾಶಿ: ಯಾರೋ ಮಾಡಿದ ಸಾಲವನ್ನು ನೀವು ತೀರಿಸಬೇಕಾಗಬಹುದು. ಇಂದು ನಿಮಗೆ ಗೊಂದಲಗಳಿಂದ ವೃತ್ತಿಯನ್ನು ನಿರ್ಧರಿಸಲು ಕಷ್ಟವಾದೀತು. ಹೊಸ ಕೆಲಸಗಳನ್ನು ಹುಡುಕಲು ಪ್ರಯತ್ನಿಸಿ‌. ಸಂಗಾತಿಯ ವಿಚಾರವಾಗಿ ನೀವು ಹೆಚ್ಚು ಚಿಂತಯಲ್ಲಿ ಇರುವಿರಿ. ಇಂದು ಹೆಚ್ಚಿನ ಸಮಯವನ್ನು ನೀವು ಖರೀದಿಗೆಂದು ತೆಗೆದಿಡುವಿರಿ. ನಿಮಗೆ ಅಂಟಿದ ಅಪವಾದವು ನಿರಾಧಾರ ಎಂದು ಸಾಬೀತಾಗಬಹುದು. ಸಹೋದರರ‌ ಮೇಲಿನ ಬೇಸರವನ್ನು ಹೊರಹಾಕುವಿರಿ. ಸಮಯಸ್ಫೂರ್ತಿಯಿಂದ ತೊಂದರೆಯ ಸನ್ನಿವೇಶವನ್ನು ದಾಟುವಿರಿ. ಸುಮ್ಮನೇ ಅನುಮಾನದಿಂದ ಸ್ನೇಹವನ್ನು ಹಾಳುಮಾಡಿಕೊಳ್ಳಬಹುದು. ಸಿಗಬೇಕಾದ ಸಮಯಕ್ಕೆ ಗೌರವವು ಸಿಗಲಿದೆ. ದುಡುಕಿ ನಿರ್ಧಾರವನ್ನು ತೆಗೆದುಕೊಳ್ಳುವುದು ಬೇಡ. ನೇರವಾದ ಮಾತುಗಳು ನಿಮಗೆ ಒಪ್ಪಿಗೆ ಆಗದೇಹೋಗಬಹುದು. ವಿದ್ಯಾರ್ಥಿಗಳು ವಿಶೇಷ ತರಬೇತಿಯನ್ನು ಪಡೆಯಬೇಕಾಗಬಹುದು.

ತುಲಾ ರಾಶಿ: ಬಂಧುಗಳು ಹಳೆಯ ದ್ವೇಷವನ್ನು ತೀರಿಸಿಕೊಳ್ಳುವ ಸಾಧ್ಯತೆ ಇದೆ. ಇಂದು ಮಕ್ಕಳ ವಿಚಾರದಲ್ಲಿ ವಾಗ್ವಾದವು ದಾಂಪತ್ಯದಲ್ಲಿ ನಡೆದು ಇಬ್ಬರೂ ವೈಮನಸ್ಸಿನಿಂದ ಇರಬೇಕಾದೀತು. ಆಗಿಹೋದ ವಿಷಯವನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳುವಿರಿ. ಪ್ರಯಾಣವು ಇಂದು ಕಷ್ಟಕರವಾಗಬಹುದು. ವೃತ್ತಿಯ ಅನ್ವೇಷಣೆ ಬಹಳ ವೇಗದಿಂದ ಸಾಗುವುದು. ಹೆಚ್ಚು ಪರಿಶ್ರಮದಿಂದ ಕೆಲಸವನ್ನು ಮಾಡುವಿರಿ. ಯಾರ ಸಹಕಾರವನ್ನೂ ಬಯಸದೇ ನಿಮ್ಮ ಜವಾಬ್ದಾರಿಯಲ್ಲಿ ನೀವು ಇರುವಿರಿ. ಸಮಯವನ್ನು ವ್ಯರ್ಥ ಮಾಡಿ ಸಂಕಟಪಡುವಿರಿ. ದಾನ‌ ಮಾಡುವ ಮನಸ್ಸು ನಿಮಗೆ ಇರದು. ಅವಕಾಶವನ್ನು ಬಿಟ್ಟಕೊಂಡು ದುಃಖಿಸುವಿರಿ. ವೃತ್ತಿಗಾಗಿ ಅಪರಿಚಿತರು ಹಣವನ್ನು ಕೇಳಬಹುದು. ಮಕ್ಕಳಿಂದ ಅಲ್ಪ ಸಂತೋಷವು ಸಿಗಬಹುದು. ಮಿತ್ರರಿಂದ ಧನದ ವಿಚಾರದಲ್ಲಿ ಮೋಸವಾಗಬಹುದು. ಏಕಾಂಗಿಯಾಗಿ ಸುತ್ತುವುದು ಇಷ್ಟವಾಗುವುದು. ‌

ವೃಶ್ಚಿಕ ರಾಶಿ: ಇಂದು ನೀವು ಯಾರಿಗೂ ನೋವಾಗದಂತೆ ವರ್ತಿಸುವ ಯೋಚನೆ‌ ಮಾಡುವಿರಿ. ನಿಮ್ಮ ಎಲ್ಲ ಆಸೆಗಳೂ ಪೂರ್ಣಗೊಳ್ಳದು. ಜೀವನದಲ್ಲಿ ಉತ್ತಮವಾದ ಗುರಿಯನ್ನು ಇಟ್ಟುಕೊಳ್ಳಲು ಯಾರಾದರೂ ಸಹಾಯ ಮಾಡುವರು. ಅದೃಷ್ಟವನ್ನು ನೀವು ಹುಡುಕಿಕೊಂಡು ಹೋಗಬೇಡಿ. ನಿಮ್ಮ ಮಾತನ್ನು ಉಳಿಸಿಕೊಳ್ಳಲು ಕಷ್ಟವಾದೀತು. ನಿಮ್ಮ ವಾಹನವನ್ನು ಯಾರದೋ ಕಾರ್ಯಕ್ಕೆ ಕೊಡಬೇಕಾಗುವುದು. ನಿಮಗೆ ಹೆಚ್ಚಿನ ಆದಾಯದ ಅವಶ್ಯಕತೆ ಇರಲಿದೆ. ಅದಕ್ಕಾಗಿ ನೀವು ಏನನ್ನಾದರೂ ಆದಾಯದ ಮೂಲವನ್ನು ಪಡೆದುಕೊಳ್ಳಬೇಕಾಗುವುದು. ಹೊಸತನ್ನು ಯೋಚಿಸಿ ಅದನ್ನು ಕ್ರಿಯಾರೂಪಕ್ಕೆ ತೆಗೆದುಕೊಂಡು ಬನ್ನಿ. ಅಧಿಕೃತವಲ್ಲದ ಕಾರ್ಯಕ್ಕೆ ನಿಮ್ಮ ಸಹಾಯವು ಸಿಗದು. ದಿನದ ಬಹಳ ಹೊತ್ತನ್ನು ಏಕಾಂತಸಲ್ಲಿ ಇರಬೇಕೆಂದು ನೀವಿಂದು ಬಯಸಬಹುದು. ಹೊಸ ವಸ್ತುಗಳನ್ನು ನೀವು ಯಾರದೋ ಮೂಲಕ ಪಡೆದುಕೊಳ್ಳುವಿರಿ. ಗೌರವವನ್ನು ಕೇಳಿಪಡೆಯಬೇಕಾಗುವುದು. ಧಾರ್ಮಿಕ‌ ಕಾರ್ಯದಲ್ಲಿ ಅಶ್ರದ್ಧೆಯನ್ನು ತೋರಿಸುವುದು ಬೇಡ.

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ