Daily Horoscope: ಈ ರಾಶಿಯವರ ಕೋಪವನ್ನು ಕಡಿಮೆ‌ ಮಾಡಿಕೊಂಡರೂ ಇನ್ನಷ್ಟು ತಾಳ್ಮೆ ಅವಶ್ಯಕ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಆಗಸ್ಟ್​ 29: ಇಂದು ಮಾಡುವ ಕಾರ್ಯವು ನಿಮ್ಮ ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡುವುದು. ಕೊಟ್ಟ ಮಾತಿಗೆ ಸರಿಯಾಗಿ ನಡೆದುಕೊಳ್ಳಬೇಕಾಗುವುದು. ಸಿಗದೇ ಇರುವುದರ ಬಗ್ಗೆ ನಿಮಗೆ ಮೋಹ‌ ಬೇಡ. ಹಾಗಾದರೆ ಆಗಸ್ಟ್​ 29ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರ ಕೋಪವನ್ನು ಕಡಿಮೆ‌ ಮಾಡಿಕೊಂಡರೂ ಇನ್ನಷ್ಟು ತಾಳ್ಮೆ ಅವಶ್ಯಕ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 29, 2024 | 12:20 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪುರ್ವಸು, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:45 ಗಂಟೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:39, ಯಮಘಂಡ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:27 ರಿಂದ 11:00ರ ವರೆಗೆ.

ಸಿಂಹ ರಾಶಿ : ಬದಲಾದ ನಿಮ್ಮ ವ್ಯಕ್ತಿತ್ವವೇ ನಿಮಗೆ ಅಚ್ಚರಿ ಮೂಡಿಸಬಹುದು. ನಿಮಗೆ ಕೇಳಿದ ಬಂದು ಮಾತುಗಳು ಅಪಮಾನಕರವಾಗಿದ್ದು ಏನನ್ನಾದರೂ ಮಾಡಬೇಕು ಎಂಬ ಹಂಬಲ‌ವು ಅತಿಯಾಗುವುದು. ಹಿರಿಯರ ಹಿತಕ್ಕಾಗಿ ನೀವು ನಿಮ್ಮ ಕಾರ್ಯಗಳನ್ನು ಬದಲಿಸಬೇಕಾಗುವುದು. ಮಕ್ಕಳ ವಿಚಾರದಿಂದ‌ ನಿಮಗೆ ದೂರುಗಳು ಬರಬಹುದು. ನಿಮ್ಮ ಉದ್ಯೋಗದ ನಿಮಗೆ ಅಸಮಾಧಾನ ಇರಲಿದೆ. ಎಲ್ಲರ ಜೊತೆ ಬೆರೆಯಲು ಇಚ್ಛಿಸಿದರೂ ನಿಮ್ಮನ್ನು ಯಾರೂ ಸೇರಿಸಿಕೊಳ್ಳರು. ವ್ಯಾಪಾರದ ಚಿಂತೆಯಲ್ಲಿ ನಿಮ್ಮನ್ನು ನೀವು ಮರೆಯುವಿರಿ. ನಿಮ್ಮ‌ ಮಾನಸಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದು ಕೆಲವರಿಗೆ ಕಷ್ಟವಾದೀತು. ಅತಿಯಾದ ನಂಬಿಕೆಯಿದ ನಿಮ್ಮ ಇಂದಿನ‌ ಕೆಲಸವು ಬೇರೆ ರೂಪ ಪಡೆದುಕೊಳ್ಳುವುದು. ಅತಿಯಾದ ಆಸೆಯಿಂದ ಮೋಸ ಹೋಗಬೇಕಾಗಬಹುದು. ಎಚ್ಚರಿಕೆ ಇಂದ ವ್ಯವಹರಿಸಿ. ಪ್ರೇಮವು ನಿಮಗೆ ಬಂಧನವಾಗಿ ಕಾಣಿಸುವುದು.

ಕನ್ಯಾ ರಾಶಿ : ಇಂದು ಮಾಡುವ ಕಾರ್ಯವು ನಿಮ್ಮ ಕುಟುಂಬಕ್ಕೆ ಯೋಗ್ಯವಾದ ಹೆಸರನ್ನು ತಂದುಕೊಡುವುದು. ಕೊಟ್ಟ ಮಾತಿಗೆ ಸರಿಯಾಗಿ ನಡೆದುಕೊಳ್ಳಬೇಕಾಗುವುದು. ಸಿಗದೇ ಇರುವುದರ ಬಗ್ಗೆ ನಿಮಗೆ ಮೋಹ‌ ಬೇಡ. ಇನ್ನೂ ಉತ್ತಮವಾದುದು ಸಿಗುತ್ತದೆ ಎಂಬ ಭರವಸೆಯನ್ನು ಇಟ್ಟುಕೊಳ್ಳಿ.‌ ಅತಿಥಿಗಳಿಗೆ ಸತ್ಕಾರವನ್ನು ನೀವು ಮಾಡುವಿರಿ. ಮನಸ್ಸು ಶಾಂತವಾಗುವುದು. ಕೋಪವನ್ನು ಕಡಿಮೆ‌ ಮಾಡಿಕೊಂಡರೂ ಇನ್ನಷ್ಟು ತಾಳ್ಮೆ ಅವಶ್ಯಕ. ನಿಮ್ಮ‌ಮನಸ್ಸಿಗೆ ಬಾರದೇ ನೀವು ಏನನ್ನೂ ಕೊಡಲು ಹೋಗಬೇಡಿ. ಇಂದು ಕೊಡುವ ಅಶ್ರದ್ಧೆಯ ದಾನವೂ ನಿಷ್ಪ್ರಯೋಜನವಾಗುವುದು. ನಿಮ್ಮಿಂದ ಆಗದ್ದು ಯಾರಿಂದಲೂ ಆಗದು ಎಂಬ ತೀರ್ಮಾನ‌ಬೇಡ. ದಿನವನ್ನು ಬೇರೆ ರೀತಿಯಲ್ಲಿ ಕಳೆಯಲು ಬಯಸುವಿರಿ. ನಿಮ್ಮ ಬೆಳವಣಿಗೆತಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. ವೈದ್ಯವೃತ್ತಿಯಲ್ಲಿ ಒತ್ತಡವಿರುವುದು. ನೀವು ಕಷ್ಟವನ್ನೂ ಸಂತೋಷದಿಂದ ಕಳೆಯುವಿರಿ. ನಿಮ್ಮ ಹೊಸ ವಸ್ತುಗಳನ್ನು ಬಳಸಲು ಮನಸ್ಸು ಹಿಂಜರಿಯುವುದು.

ತುಲಾ ರಾಶಿ : ಇಂದು ನಿಮಗೆ ಒಳ್ಳೆಯತನಕ್ಕೆ ಯಾವ ಫಲವಿಲ್ಲ ಎಂಬ ಬೇಸರವಾಗಬಹುದು. ಇಷ್ಟವಿಲ್ಲದಿದ್ದರೂ ಕೆಲವನ್ನು ನೀವು ಮಾಡಬೇಕಾಗಿಬರಬಹುದು. ಎಲ್ಲ ನಿರರ್ಥಕ ಎನ್ನುವ ಭಾವನೆಯು ನಿಮ್ಮಲ್ಲಿ ಬರಬಹುದು. ನೀವು ದುಃಖದ ಅನಂತರ ಸುಖವಿದೆ ಎಂಬ ಕಾರಣಕ್ಕೆ ಎಲ್ಲ ನೋವನ್ನೂ ಸಹಿಸಿಕೊಳ್ಳುವಿರಿ. ನಿಮ್ಮ ಅಸಾಮರ್ಥ್ಯವನ್ನು ಒಪ್ಪಿಕೊಳ್ಳಲಾರಿರಿ. ಸಂಸಾರದಲ್ಲಿ ಸಾರವಿಲ್ಲ ಎನ್ನಿಸಬಹುದು. ಭೂಮಿಯ ವ್ಯವಹಾರವು ಅಲ್ಪ‌ಮಟ್ಟಿಗೆ ಲಾಭ ಮಾಡುವುದು. ಕಾನೂನಿನ ಮಾರ್ಗದಲ್ಲಿ ನಿಮ್ಮ ಎಲ್ಲ‌ ಕೆಲಸಗಳೂ ಇರಲಿ. ಎಷ್ಟು ಹೇಳಿದರೂ ಅರ್ಥವಾಗದ ವಿಷಯವು ಒಂದು‌ ಘಟನೆಯ ಮೂಲಕ ಅರ್ಥವಾದೀತು. ಹೂಡಿಕೆಯಿಂದ ಮೋಸಹೋಗುವ ಸಾಧ್ಯತೆ ಇದೆ. ಹಣಕಾಸಿನ ವಿಚಾರಕ್ಕೆ ಸಂಗಾತಿಯ ಜೊತೆ ಮಾತಾಗಬಹುದು. ಇಂದು ಮನೋರಂಜನೆಯಿಂದ ನಿಮಗೆ ಸಮಾಧಾನ ಸಿಗಲಿದೆ. ಕೆಲವು ವಿಚಾರಗಳಿಗೆ ಸುಮ್ಮನೇ ಪ್ರತಿಕ್ರಿಯೆ ನೀಡಬೇಕಿಲ್ಲ. ನಿಮ್ಮ‌ ನಿರ್ಧಾರಗಳೇ ನಿಮಗೆ ಅಸಮಾಧಾನ ಕೊಡಬಹುದು.

ವೃಶ್ಚಿಕ ರಾಶಿ : ಭವ್ಯ ಗೃಹದ ಕನಸನ್ನು ಯಾರ ಬಳಿಯಾದರೂ ಹೇಳಿಕೊಳ್ಳುವಿರಿ. ಮಕ್ಕಳ ಮೇಲೆ‌ ಅಕ್ಕರೆ ಬಂದೀತು. ವಿರೋಧಿಗಳ ನಡೆಯೇ ನೀವು ನಿಮ್ಮ ನಡೆಯನ್ನು ಬಿಡಲು ಒಪ್ಪುವುದಿಲ್ಲ. ಕಾರ್ಯಗಳನ್ನು ಹಂಚಿಕೆ ಮಾಡಿ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು. ನಿಮ್ಮ ಎಲ್ಲ ಕೆಲಸಗಳೂ ಸಮಯಕ್ಕೆ ಸರಿಯಾಗಿ ಮುಗಿಸಿಕೊಳ್ಳುವುದು ಕಷ್ಟವಾಗುವುದು. ಸಹೋದರಿಯ ಮಾತನಲ್ಲಿ ನಿಮಗೆ ಕುಹಕವಿರುವುದು ಗೊತ್ತಾಗಿ ಜಗಳವಾಡುವಿರಿ. ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸಲು ಇಚ್ಛಿಸುವಿರಿ. ನಿಮ್ಮ ಕೆಲಸದಲ್ಲಿ ಮತ್ತಷ್ಟು ಒತ್ತಡ ಇರಲಿದೆ. ಸಮಾಜಮುಖೀ ಕೆಲಸಗಳನ್ನು ನೀವು ನಿಲ್ಲಿಸುವಿರಿ. ಎಲ್ಲವೂ ನಿಮ್ಮಿಂದಲೇ ಆಗಿದೆ ಎಂಬ ಭಾವವಿರುವುದು. ನೀವು ಕಳೆದ ದಿನಗಳನ್ನು ಅವಲೋಕನ‌ ಮಾಡಿ ಸಂತಸಗೊಳ್ಳುವಿರಿ. ಆಲಸ್ಯದಿಂದ‌ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಯಾರದೋ ಮಾತನ್ನು ನೀವು ನಿಮ್ಮದಾಗಿಸಿಕೊಳ್ಳುವಿರಿ. ಪ್ರವಾಸ ಹೋಗುವ ಮನಸ್ಸಾದೀತು. ಅಧಿಕಾರಿಗಳು ನಿಮ್ಮ ಉದ್ಯಮವನ್ನು ಪರಿಶೀಲಿಸಬಹುದು.

ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!