AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಏಕಪಕ್ಷೀಯ ನಿರ್ಧಾರದಿಂದ ಅಪಜಯ…

Horoscope Today August 03: ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ಪಂಚಮೀ ತಿಥಿಯ ಸೋಮವಾರದಂದು ಸಂಶೋಧನೆ, ದೈವ ಸಹಾಯ, ಅಪೂರ್ಣ ಆಸೆ, ಸಹೋದರನಿಗೆ ಸಾಲ, ದುರಸ್ತಿಗೆ ಹಣ ಖರ್ಚು, ವ್ಯಾಪಾರದ ನಿರ್ಲಕ್ಷ್ಯ, ನಿರಾಸಕ್ತಿಯಿಂದ ವಿಶ್ರಾಂತಿ, ಹಣಕಾಸಿನ ಅಲಕ್ಷ್ಯ ಇವೆಲ್ಲ ಇಂದಿನ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಏಕಪಕ್ಷೀಯ ನಿರ್ಧಾರದಿಂದ ಅಪಜಯ...
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on:Aug 03, 2026 | 12:46 AM

Share

ಮೇಷ ರಾಶಿ:

ಇಂದು ಅನುಭವಿಗಳ ಜೊತೆ ನಿಮ್ಮ ಅನನುಭವದ ಸನ್ನಿವೇಶವನ್ನು ಹಂಚಿಕೊಳ್ಳುವಿರಿ. ಅದು ಬಾಲಿಶ ಎನಿಸುವುದು. ಸ್ಪರ್ಧೆಯಲ್ಲಿ ವಾಗ್ವಾದ ಮಾಡಿ ನಿಮ್ಮ ವ್ಯಕ್ತಿತ್ವನ್ನು ತೋರಿಸುವಿರಿ. ಕುಟುಂಬದ ಕಲಹದಲ್ಲಿ ನೀವು ಮೌನವಹಿಸುವಿರಿ. ನೀವು ಪಾಲುದಾರಿಕೆಯಲ್ಲಿ ಯಾರನ್ನೋ ಜೊತೆ ಮಾಡಿಕೊಂಡು ಹೋಗಬಹುದು. ವಾಹನದ ಸಂಚಾರದಲ್ಲಿ ಉದ್ವೇಗವನ್ನು ತಂದುಕೊಳ್ಳುವುದು ಬೇಡ. ಸಂಗಾತಿಯಿಂದ ಆಗುವ ಸಣ್ಣ ತಪ್ಪನ್ನು ಕ್ಷಮಿಸುವುದು ಯೋಗ್ಯವೇ.

ವೃಷಭ ರಾಶಿ:

ಇತರರ ಸಲಹೆಯನ್ನು ಮಾತ್ರ ಅವಲಂಬಿಸಿದ್ದರೆ ಸಂಭಾವ್ಯ ಆರ್ಥಿಕ ನಷ್ಟಗಳ ಬಗ್ಗೆ ಜಾಗರೂಕರಾಗಿರಿ. ಗೊತ್ತಿಲ್ಲದೇ ನಿಮಗೆ ದೈವವೊಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಸಹಾಯ ಮಾಡುವುದು. ಸ್ಪರ್ಧಾತ್ಮಕ ವಿಚಾರದಲ್ಲಿ ನೀವು ಅಸಕ್ತಿ ತೋರಿಸಲಾರಿರಿ. ಸ್ನೇಹಿತರು ನಿಮಗೆ ತಪ್ಪು ದಾರಿಯನ್ನು ತೋರಿಸಬಹುದು. ಅಮೂಲ್ಯ ವಸ್ತುವನ್ನು ಖರೀದಿಸುವುದಕ್ಕಿಂತ ಅದನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ನಿಮ್ಮ ಅಸಹಜ ಸ್ವಭಾವವನ್ನು ಸರಿಮಾಡಿಕೊಳ್ಳುವುದು ಮುಖ್ಯ.

ಮಿಥುನ ರಾಶಿ:

ಮನೆಯ ಹಿರಿಯರಿಂದ ಸಮಾಧಾನದ ಮಾತುಗಳು ಸಿಗಲಿವೆ. ನೀವು ಇಂದು ಸಂಸ್ಥೆಯ ಮುಖ್ಯಸ್ಥಾನವನ್ನು ಅಲಂಕರಿಸಬಹುದು. ಸಾಮಾಜಿಕ ಸೇವಾ ಕಾರ್ಯದಲ್ಲಿ ಆಸಕ್ತಿ. ವೃತ್ತಿಯಲ್ಲಿ ಗೊಂದಲ ಒತ್ತಡಗಳನ್ನು ನೀವು ನಿಭಾಯಿಸಬೇಕಾಗುವುದು. ಮನಸ್ಸಿನಲ್ಲಿ ಸಾವಧಾನತೆ ಇರುವುದು ಬಹಳ ಮುಖ್ಯ. ಕಾನೂನಾತ್ಮಕ ವಿಚಾರಕ್ಕೆ ನಿಮ್ಮ ಒತ್ತು ಹೆಚ್ಚಿರುವುದು. ನಿಮಗೆ ಸಿಕ್ಕ ಮೆಚ್ಚುಗೆಯನ್ನು ನೀವು ಸಂಕೋಚದಿಂದ ಸ್ವೀಕರಿಸುವಿರಿ. ಉನ್ನತ ವಿದ್ಯಾಭ್ಯಾಸದಲ್ಲಿ ಹಿನ್ನಡೆಯಿಂದ ಬೇಸರವಾಗಲಿದೆ.

ಕರ್ಕಾಟಕ ರಾಶಿ:

ಇಂದು ನಿಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗಿ ಬರಬಹುದು. ಕುಟುಂಬ ಸದಸ್ಯರ ಬಗ್ಗೆ ನಿಮಗಿದ್ದ ನಿರೀಕ್ಷೆಗಳು ಹುಸಿಯಾಗಬಹುದು. ಬಗ್ಗೆ ನಿಮಗೆ ಕೀಳು ಯೋಚನೆಗಳು ಬರಬಹುದು.‌ ಸಂಗಾತಿಯ ನೀರಸತೆಯಿಂದ ಕೋಪ ಬರಬಹುದು. ಅಪರಿಚಿತರ ಜೊತೆಗಿನ ಗುದ್ದಾಟ ಕಷ್ಟವಾದೀತು. ಬೇಕಾದುದನ್ನು ನೀವು ಪಡೆದುಕೊಳ್ಳಲು ಪ್ರಯತ್ನಿಸುವಿರಿ. ಹೊಸ ವೃತ್ತಿಯಲ್ಲಿ ಪೂರ್ಣ ತೊಡಗಿಕೊಳ್ಳುವುದು ನಿಮಗೆ ಇಷ್ಟವಾಗುವುದು. ಹಲವಾರು ಅಭಿಪ್ರಾಯಗಳು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಬರುವುದು.

ಸಿಂಹ ರಾಶಿ:

ಇಂದು ಸಾಮಾಜಿಕ ಕೂಟಗಳಲ್ಲಿ ಭಾಗವಹಿಸಲು ಅವಕಾಶ ಸಿಗುವುದು. ನಿಮ್ಮ ಬಹಳ ದಿನದ ಆಸೆಯು ಪೂರ್ಣಗೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಜೊತೆ ಮಾತನಾಡಲು ಯಾರಾದರೂ ಹಿಂಜರಿಯುವರು. ವಿಮರ್ಶಕರಿಗೆ ಅನೇಕ ಕಡೆಗಳಿಂದ ಆಹ್ವಾನ. ಅನವಶ್ಯಕ ಖರ್ಚಿಗೆ ನೀವು ಕಡಿವಾಣ ಹಾಕಲಿದ್ದೀರಿ. ಸ್ವಂತ ವಾಹನದ ದುರಸ್ತಿಗೆ ಖರ್ಚಾಗಬಹುದು. ಇಂದು ಸ್ಥೈರ್ಯವನ್ನು ಕಳೆದುಕೊಳ್ಳುವಿರಿ. ನಿಷ್ಠೆಯನ್ನು ಉಳಿಸಿಕೊಳ್ಳುವುದು ಕಷ್ಟವಾದೀತು.

ಕನ್ಯಾ ರಾಶಿ:

ನಿಮ್ಮ ಯೋಜನೆಗಳು ಎಲ್ಲವೂ ಬದಲಾಗುವುದು. ಇಂದು ನಿಮ್ಮ ಕೋಪವನ್ನು ಮನೆಯವರು ನೋಡುವರು. ನಿಮ್ಮ ವರ್ತನೆಯು ಬಹಳ ಬೇಸರ ತರಿಸಬಹುದು. ಲಲಿತಕಲೆಯ ಬಗ್ಗೆ ಕಲಿಕೆಯ ಆಸಕ್ತಿ ಬರುವುದು‌ ಸಂಗಾತಿಯ ಜೊತೆ ಕಲಹವನ್ನು ಮಾಡಿಕೊಳ್ಳುವಿರಿ. ನಿಮ್ಮ ಭಾವನೆಗಳನ್ನು ಸರಿಯಾದ ಸ್ಥಳದಲ್ಲಿ ಸರಿಯಾದ ವ್ಯಕ್ತಿಯ ಬಳಿ ಹೊರಹಾಕಿ. ಲೆಕ್ಕ ಪರಿಶೋಧಕರು ಒತ್ತಡದಲ್ಲಿ ಇರುವರು. ಸಂಗಾತಿಯ ಬೇಡಿಕೆಯನ್ನು ನೀವು ಪೂರೈಸಬೇಕಾದೀತು.

ತುಲಾ ರಾಶಿ:

ದೇವಸಾನ್ನಿಧ್ಯದ ವೃಕ್ಷದಿಂದ ಬೀಳುವ ಸಾಧ್ಯತೆ ಇದೆ. ಮಕ್ಕಳಿಗಾಗಿ ನೀವು ಪರಿವರ್ತನೆಯಾಗುವಿರಿ. ಲೆಕ್ಕಾಚಾರ ವಿಚಾರಗಳು ನಿಮ್ಮ ತಲೆಗೆ ಹೋಗದು. ವಿದ್ಯಾರ್ಥಿಗಳು ಹೆಚ್ಚಿನ ಶ್ರಮದಿಂದ ಅಭ್ಯಾಸ ಮಾಡಬೇಕಾದೀತು. ನಿಮಗೆ ಬರುವ ಸಮಸ್ಯೆಗಳು ನಗಣ್ಯವಾಗಿದ್ದರೂ ಅದನ್ನು ದೊಡ್ಡ ಮಾಡುವಿರಿ. ಕೆಲವನ್ನು ನೀವು ಬಿಟ್ಟುಕೊಡುವುದೇ ಸೂಕ್ತ. ನಿಮ್ಮದಲ್ಲ ಎಂಬ ನಿರ್ಧಾರವನ್ನು ಮಾಡಿ ಸುಮ್ಮನಿರಿ. ಸ್ನೇಹಿತರ ಸಹವಾಸದಿಂದ ದುರಭ್ಯಾಸವು ರೂಢಿಯಾಗಬಹುದು.

ವೃಶ್ಚಿಕ ರಾಶಿ:

ಇಂದು ನಿಮಗೆ ಅತ್ಯಾಕರ್ಷಕ ಅವಕಾಶಗಳು ಅನಿರೀಕ್ಷಿತವಾಗಿ ಸಿಗಲಿದೆ. ನಿಮ್ಮ ಸಂಗಾತಿಯಿಂದ ನಿಮಗೆ ಸಂತೋಷವು ಬೇಕೆನಿಸುವುದು. ಆರ್ಥಿಕತೆಯನ್ನು ಖರ್ಚಿನ ಮೂಲಕ ಬಂಧುಗಳಿಗೆ ತಿಳಿಸುವಿರಿ. ದುಡುಕಿನ ಕಾರ್ಯಗಳಿಂದ ಸಂಕಟವಾದೀತು. ಮಾತಿನ ನಿಯಂತ್ರಣ ತಪ್ಪಿ‌ ಇನ್ನೊಬ್ಬರಿಂದ ಅಪಮಾನವನ್ನು ಎದುರಿಸಿಬೇಕಾದೀತು. ವೃತ್ತಿಯಲ್ಲಿ ಒಂದೇ ಕೆಲಸವನ್ನು ಇಬ್ಬರು ಮಾಡಲು ಹೋಗಿ ವೈಮನಸ್ಯ ಉಂಟಾಗುವುದು. ಮತ್ತೆ ಮತ್ತೆ ಬರುವ ಅನಾರೋಗ್ಯಕ್ಕೆ ಮದ್ದಿನ ಅವಶ್ಯಕತೆ ಇದೆ.

ಧನು ರಾಶಿ:

ಉತ್ಸಾಹವು ಇಂದು ನಿರುತ್ಸಾಹದಲ್ಲಿ ಕೊನೆಯಾಗಲಿದೆ. ಇಂದು ನಿಮ್ಮ ವೃತ್ತಿ ಕ್ಷೇತ್ರದಲ್ಲಿ ಮಾತ್ರವಲ್ಲದೆ, ವೈಯಕ್ತಿಕವಾಗಿಯೂ ಒತ್ತಡ ಹೆಚ್ಚಿರುವುದು. ನಿಮ್ಮ ಪೋಷಕರ ಆರೋಗ್ಯಕ್ಕೆ ಸಂಬಂಧಿಸಿದಂತೆ ವೆಚ್ಚಗಳು ಹೆಚ್ಚಾಗಬಹುದು. ನಿಮ್ಮ ಮಧ್ಯಸ್ತಿಕೆಯಲ್ಲಿ ಮುಖ್ಯ ವಿಚಾರಗಳು ತೀರ್ಮಾನವಾಗುವುದು. ಇಂದು ನೀವು ಬಹಳ ದಿನಗಳಿಂದ ವಾಸವಾಗಿದ್ದ ಮನೆಯನ್ನು ಬದಲಾಯಿಸುವ ಯೋಚನೆ ಮಾಡುವಿರಿ. ಸಂಗಾತಿಯ ಆಗಮನವನ್ನು ನಿರೀಕ್ಷಿಸುವಿರಿ. ಬಂಧುಗಳ ಆಸ್ತಿಯ ನಿಮಗೆ ಸಿಗಬಹುದು.

ಮಕರ ರಾಶಿ:

ನಿಮಗೆ ಬೇಕಾದ ಹಣವನ್ನು ಹೊಂದಿಸಲು ಸೂಕ್ತ ವ್ಯಕ್ತಿಗಳ ಅನ್ವೇಷಣೆ ಮಾಡವಿರಿ. ಕೆಲಸ ಮೇಲೆ ನಿಮ್ಮ ಗಮನ ಕೇಂದ್ರೀಕರಿಸುವುದನ್ನು ಖಚಿತಪಡಿಸಿಕೊಳ್ಳಿ. ಅಕಾರಣವಾಗಿ ನೀವು ಉತ್ಸಾಹವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಾಲ ಕೊಟ್ಟವರ ಬಗ್ಗೆ ಕೃತಜ್ಞತೆ ಇರಲಿ. ಉನ್ನತ ಅಧಿಕಾರಿಗಳ ಸಹಾಯವನ್ನು ನೀವು ಅನಿವಾರ್ಯವಾಗಿ ಕೇಳಬೇಕಾದೀತು. ಧಾರ್ಮಿಕ‌ವಾದ ನಂಬಿಕೆಯನ್ನು ನೀವು ಬಿಡುವುದಿಲ್ಲ. ಸಹೋದರರ ಬಗೆಗಿನ ನಿಮ್ಮ ನಿಲುವು ಸರಿ ಇರದು.

ಕುಂಭ ರಾಶಿ:

ನಿಮ್ಮ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಬರುವುದು ಸಹಜವೇ. ಆದರೆ ಅದನ್ನು ಎದುರಿಸಬೇಕೋ ಶಾಂತಗೊಳಿಸಬೇಕೋ ಎನ್ನುವುದು ನಿಮಗೆ ಸೇರಿದ್ದು. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಹೆಚ್ಚಾಗುವುದು. ಬದುಕಿನ ಬಂಡಿಯು ನಿಧಾನವಾಗಿ ಸಾಗುವಂತೆ ಕಾಣುತ್ತದೆ. ಯಾರೂ ತಪ್ಪನ್ನು ಒಪ್ಪಿಕೊಳ್ಳದೇ ಇನ್ನೊಬ್ಬರ ಕಡೆ ಕೈ ತೋರಿಸುವಿರಿ. ಸಂತೋಷದ ಕೊನೆಯಲ್ಲಿ ದುಃಖವಿರಲಿದೆ. ಇಬ್ಬರ ನಡುವಿನ ಶೀತಲ ಸಮರವು ತಿಳಿಯಾಗಬಹುದು. ವ್ಯಾಪಾರದ ನಿರ್ಲಕ್ಷ್ಯದಿಂದ ಅಲ್ಪ ನಷ್ಟವಾಗುವುದು.

ಮೀನ ರಾಶಿ:

ಇಂದು ಸಣ್ಣ ರೋಗ ಉಲ್ಬಣಿಸುವ ಸಾಧ್ಯತೆ ಇದೆ. ನಿಮ್ಮ ಬಹಳ ದಿನಗಳ ಚಿಂತೆಗೆ ಇಂದು ಮುಕ್ತಿ ಸಿಗುವುದು. ನೀವು ಜನರ ಆಸೆಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದು, ವ್ಯವಹಾರದಲ್ಲಿ ಅದನ್ನು ಪ್ರಯೋಗಿಸುವಿರಿ. ನಿಮಗೆ ಬೇಕಾದವರು ಇಂದು ನಿಮ್ಮಿಂದ ದೂರವಾಗಬಹುದು.‌ ವಿದ್ಯಾಭ್ಯಾಸದಲ್ಲಿ ಪ್ರಯತ್ನ ಸಾಲದಾಗುವುದು. ಆರ್ಥಿಕ ವಿವಾದವು ದ್ವೇಷವಾಗಿ ಪರಿವರ್ತನೆ ಆಗಬಹುದು. ನಿದ್ರೆಯ ಕಷ್ಟವನ್ನು ನೀವು ಅನುಭವಿಸುವಿರಿ.‌

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುಷ್ಯಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ರೇವತೀ, ಯೋಗ : ಶೂಲಿ, ಕರಣ : ಗರಜ, ಸೂರ್ಯೋದಯ – 06 – 06 am, ಸೂರ್ಯಾಸ್ತ – 06 – 44 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:41 – 09:16, ಯಮಗಂಡ ಕಾಲ 10:51 – 12:26, ಗುಳಿಕ ಕಾಲ 14:01 – 15:35

-ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 am, Mon, 3 August 26

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ