ದಿನಭವಿಷ್ಯ: ಇಂದು ಈ ರಾಶಿಯವರು ಪ್ರಾಯೋಗಿಕ ವಿಚಾರದಲ್ಲಿ ಮುಗ್ಗರಿಸುವರು…

Horoscope Today 12 August: ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ಚತುರ್ದಶೀ ತಿಥಿಯ ಬುಧವಾರದಂದು ಬಲವಂತದ ಕಾರ್ಯ, ಸೋಮಾರಿತನ, ವ್ಯವಹಾರದ ಕಾರಣಕ್ಕೆ ಓಡಾಟ, ಆಹಾರ ದಾನ, ವಿನಾಕಾರಣ ಸಂತೋಷ, ಒರಟು ಮಾತಿನಿಂದ ಧನ ನಷ್ಟ ಇವೆಲ್ಲ ಈ ದಿನದ ಭವಿಷ್ಯ.

ದಿನಭವಿಷ್ಯ: ಇಂದು ಈ ರಾಶಿಯವರು ಪ್ರಾಯೋಗಿಕ ವಿಚಾರದಲ್ಲಿ ಮುಗ್ಗರಿಸುವರು...
ದಿನಭವಿಷ್ಯ
Edited By:

Updated on: Aug 12, 2026 | 12:50 AM

ಮೇಷ ರಾಶಿ:

ನಿಮ್ಮ ಮನೆಯವರು ಊಹಿಸಿದ್ದಕ್ಕಿಂತ ಹೆಚ್ಚನ್ನು ನೀವು ಸಾಧಿಸುವಿರಿ. ನೀವು ಲೆಕ್ಕಾಚಾರದ ವ್ಯಕ್ತಿಯಾದರೂ ರಿಸ್ಕ್ ತೆಗೆದುಕೊಳ್ಳಲು ತಯಾರಾಗುವಿರಿ. ಅಧ್ಯಯನಕ್ಕೆ ಹೆಚ್ಚು ಮಹತ್ತ್ವಕೊಡುವಿರಿ. ಚಂಚಲವಾದ ಮನಸ್ಸಿನಿಂದ ನೀವು ಗುರಿಯನ್ನು ಸಾಧಿಸಲು ಕಷ್ಟಪಡುವಿರಿ. ನಿಮ್ಮಂತಹ ಮಾನಸಿಕವಾಗಿ ಬಲವುಳ್ಳವರು ಹೃದಯಶೂನ್ಯ ಆಗಬಾರದು. ಸಹೋದ್ಯೋಗಿಗಳ ವರ್ತನೆಯು ಇಷ್ಟವಾಗದೇ ಸಿಟ್ಟಾಗುವಿರಿ. ಆಕಸ್ಮಿಕ ದ್ರವ್ಯ ಲಾಭದಿಂದ ಖುಷಿ ಪಡುವಿರಿ.

ವೃಷಭ ರಾಶಿ:

ನಿಮ್ಮ ಸೃಜನಶೀಲ ಪ್ರತಿಕ್ರಿಯೆಯು ಇಷ್ಟವಾಗುವುದು. ನಿಮ್ಮ ಪ್ರೀತಿಪಾತ್ರರು ಸುತ್ತುವರಿದಿದ್ದು, ನಿಮ್ಮ ದಿನವೂ ಉತ್ಸಾಹದಿಂದ ಮುಗಿಯುತ್ತದೆ. ಕಾರ್ಯದ ಒತ್ತಡವಿರುವ ಕಾರಣ ಮನೆಗೆ ವಿಳಂಬವಾಗಿ ಬರುವಿರಿ. ಮನಸ್ಸನಲ್ಲಿ ಯಾವುದನ್ನೂ ಇಟ್ಟುಕೊಳ್ಳದೇ ಹಳೆಯ ಮನಸ್ತಾಪಗಳನ್ನು ಬಿಟ್ಟು ಸಂಬಂಧವನ್ನು ಮಧುರವಾಗಿಸಿ. ಎಲ್ಲ ಸಮಸ್ಯೆಯೂ ನಿಮ್ಮದೇ ಎಂಬಂತೆ ಇರುವಿರಿ. ಪುಣ್ಯಕ್ಷೇತ್ರದ ದರ್ಶನವನ್ನು ಮಾಡಿ. ಮಿತವಾದ ಮಾತು ನಿಮಗೆ ಆಗದು.

ಮಿಥುನ ರಾಶಿ:

ನಿಮ್ಮ ಈ ದಿನ ಚೆನ್ನಾಗಿ ಪ್ರಾರಂಭವಾಗಿರಲಿದ್ದು, ನಿಮ್ಮ ಸಾಮರ್ಥ್ಯಗಳಿಂದ ಪ್ರತಿಯೊಬ್ಬರನ್ನೂ ಅಚ್ಚರಿಗೊಳಿಸುವಿರಿ. ಉತ್ಪಾದನೆ ಹೆಚ್ಚಿಸಲು ನಿಮ್ಮ ಕೆಲಸದ ವಿಧಾನವನ್ನು ಬದಲಾಯಿಸುವುದು ಸೂಕ್ತ. ಹೆಚ್ಚಾದ ವಿಶ್ವಾಸದಿಂದ ಮತ್ತು ಅನುಕೂಲಕರ ಫಲಿತಾಂಶಗಳಿಂದ ಭರವಸೆ ಹೆಚ್ಚಾಗುವುದು. ಪ್ರಮುಖ ಉದ್ದೇಶಕ್ಕಾಗಿ ಕೈಗೊಂಡ ಪ್ರಯಾಣದಲ್ಲಿ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ. ಕೆಟ್ಟ ಮತ್ತು ಎದುರು ಹೊಗಳುವ ಸ್ವಭಾವದ ಜನರ ಸಹವಾಸದಿಂದ ನಿಮಗೆ ತೊಂದರೆ ಆಗಲಿದೆ.

ಕರ್ಕಾಟಕ ರಾಶಿ:

ಕೆಲವು ನಿಮಗೆ ಅನ್ವಯವಾಗುವಂತಹವು ನಡೆಯಲಿದೆ. ಪ್ರಶ್ನೆ ಮತ್ತು ತರ್ಕ ಎಂದು ನೀವು ಆಲೋಚಿಸುತ್ತೀರಿ ಮತ್ತು ಎಲ್ಲ ಅಂಶಗಳನ್ನು ಪರಿಗಣಿಸಿಯೇ ಸೂಕ್ತ ಆಯ್ಕೆ ಮಾಡಿ. ಅಂತಿಮ ತೀರ್ಮಾನ ನಿಮ್ಮದೇ ಆಗಿರಲಿ. ಹಳೆಯ ಘಟನೆಗಳ ನೆನಪಿನಿಂದ ಮನಸ್ಸು ಭಾರವಾಗಬಹುದು. ಆಕಸ್ಮಿಕವಾದ ಕೆಲವು ಸಂತೋಷಕರ ಸುದ್ದಿಗಳಿಂದ ಮನಸ್ಸು ಅರಳುವುದು. ಸಮಾರಂಭಗಳಲ್ಲಿ ಬಂಧುಗಳು ನಿಮ್ಮನ್ನು ಭೇಟಿಯಾಗುವರು.

ಸಿಂಹ ರಾಶಿ:

ಕೆಲಸದ ವಿಷಯದಲ್ಲಿ ಸದಾ ಸನ್ನದ್ಧರಾಗಿರುವಿರಿ. ನೀವು ಯಾರದ್ದಾದರೂ ಸಹಯೋಗದಲ್ಲಿ ಕೆಲಸ ಮಾಡಲು ಬಯಸಿದರೆ, ನೀವು ತಾಳ್ಮೆ ತಂದುಕೊಳ್ಳಬೇಕು. ಅನ್ಯರಿಂದ ಸಣ್ಣ ತಪ್ಪು ಭಾವನೆಯೂ ನಿಮ್ಮ ಮೇಲೆ ಆಗಬಾರದು. ನಿಮ್ಮ ಪ್ರಯತ್ನಗಳಿಗೆ ಮಾನ್ಯತೆ ದೊರೆಯಲು ಕಾಯಬೇಕು. ನೀವು ಚಾತುರ್ಯದಿಂದ ಸಂಬಂಧದ ಪ್ರಯೋಜನವನ್ನು ಪಡೆದುಕೊಳ್ಳುವಿರಿ. ಪ್ರಭಾವಿ ವ್ಯಕ್ತಿತ್ವವು ನಿಮಗೆ ಅನುಸರಣೀಯ ಆಗಬಹುದು.

ಕನ್ಯಾ ರಾಶಿ:

ನೀವು ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಅವಕಾಶವನ್ನು ಕಂಡುಕೊಳ್ಳುವಿರಿ. ನೀವು ಹಣಕಾಸಿನ ವಿಷಯದಲ್ಲಿ ಸ್ವಾವಲಂಬಿಯಾಗಿ ಗುರಿಯನ್ನು ಸಾಧಿಸುವಿರಿ. ಹುಡುಕಾಡಕ್ಕೆ ಒಂದು ಅಂತ್ಯವನ್ನು ತಂದುಕೊಳ್ಳುವುದು ಉತ್ತಮ. ಯೋಜಿತ ಕೆಲಸಗಳು ಫಲಪ್ರದವಾಗಲಿವೆ. ನೈತಿಕ ಮತ್ತು ಅನೈತಿಕತೆಯ ಬಗ್ಗೆ ಯೋಚಿಸುವ ಮನಸ್ಸು ಭೌತಿಕ ಪರಿಸರದೊಂದಿಗೆ ಹೆಜ್ಜೆ ಹಾಕಲು ಸಾಧ್ಯವಾಗುವುದಿಲ್ಲ. ಯಾವ ವಿವರಗಳನ್ನೂ ಕೊಡಬೇಡಿ. ಅದನ್ನು ಹೊಂದಿಸುವುದು ಕಷ್ಟವಾದೀತು.

ತುಲಾ ರಾಶಿ:

ಇಂದು ಹಣಕಾಸಿನ ವಿಷಯಗಳಿಗೆ ಸಂಬಂಧಿಸಿದಂತೆ ನಿಮ್ಮ ವ್ಯಾಪಾರ ಸಾಮರ್ಥ್ಯಗಳನ್ನು ಕೂಡಾ ಪರೀಕ್ಷಿಸಲಾಗುತ್ತದೆ. ಪರಿಹಾರವಾಗದ ಸಮಸ್ಯೆಗಳನ್ನು ಯಶಸ್ವಿಯಾಗಿ ಪರಿಹರಿಸಲು ನೀವು ಆವಿಷ್ಕಾರಕ ವಿಧಾನಗಳನ್ನು ಆಲೋಚಿಸುವ ಸಾಧ್ಯತೆ ಇದೆ. ಅಗತ್ಯವಿರುವ ಮಾತುಗಳನ್ನಾಡಿ ಸುಮ್ಮನಾಗುವಿರಿ. ಇಂದು ಆಧ್ಯಾತ್ಮಿಕ ಭಾವನೆಗಳು ನಿಮ್ಮ ಮನಸ್ಸಿನ ಮೇಲೆ ಗಾಢವಾದ ಪರಿಣಾಮವನ್ನು ಬೀರಬಹುದು. ಸುಮ್ಮನೇ ಕುಳಿತು ಸಮಯವನ್ನು ವ್ಯರ್ಥಮಾಡಬೇಡಿ.

ವೃಶ್ಚಿಕ ರಾಶಿ:

ನಿಮ್ಮ ಗುರಿಗಳಿಗೆ ನೀವು ಬದ್ಧರಾಗಿರುವ ಮತ್ತು ನಿಮ್ಮ ಸಹೋದ್ಯೋಗಿಗಳಿಗೆ ಅವರ ಕರ್ತವ್ಯಗಳಲ್ಲಿ ಕೊರತೆಯಾಗಲು ಅವಕಾಶ ನೀಡಬೇಡಿ. ಪ್ರಯಾಣದಲ್ಲಿ ವ್ಯತ್ಯಾಸ ಹಾಗೂ ಹೋಗಬೇಕಾದ ಸ್ಥಳಕ್ಕೆ ವಿಳಂಬವಾಗಿ ಹೋಗುವಿರಿ. ನಿಮ್ಮ ಮೇಲಧಿಕಾರಿಗಳ ನಿಮಗೆ ನೆರವು ಸಿಗುತ್ತದೆ. ನಿಮ್ಮ ಕಡಿಮೆಯಾಗುವ ಭಯವು ಕಾಡಬಹುದು. ಕೆಲಸದ ನಿಮಿತ್ತ ಬೇರೆ ಊರಿಗೆ ತೆರಳುವಿರಿ. ತಂದೆಯ ಮಾತು ನಿಮಗೆ ಸರಿ ಕಾಣಿಸದೇ ಇರುವುದು.

ಧನು ರಾಶಿ:

ಇಂದು ನಿಮ್ಮ ಸೃಜನಶೀಲ ವ್ಯಕ್ತಿತ್ವವು ಗೊತ್ತಾಗಲಿದೆ. ವಿವಾಹದ ಚಿಂತೆಯು ನಿಮ್ಮನ್ನು ಕಾಡಬಹುದು. ಆಪ್ತರನ್ನು ನೀವು ಕಳೆದುಕೊಳ್ಳುವಿರಿ. ಆಸ್ತಿಯನ್ನು ಭಾಗ ಮಾಡಿಕೊಳ್ಳಲು ನೀವು ಇಂದು ಮುಂದಾಗುವಿರಿ. ಆರ್ಥಿಕತೆ ಉತ್ತಮವಾಗಿ ಉದ್ವೇಗದಲ್ಲಿ ಸಿಕ್ಕಿಬೀಳುವಿರಿ. ಮನೆಯರ ಸಣ್ಣ ಮಾತಿಗೆ ಬೇಸರಿಸಬೇಡಿ. ಧಾರ್ಮಿಕ ಕಾರ್ಯಗಳನ್ನು ಮಾಡಲು ಒಲವು ಬರಲಿದೆ. ಕುಟುಂಬದವರು ನಿಮ್ಮನ್ನು ಬಹಳ ಪ್ರೀತಿಸುವರು.

ಮಕರ ರಾಶಿ:

ನಿಮ್ಮ ಕೋಪ ಅನಗತ್ಯ ಚರ್ಚೆಗಳಿಗೆ ದಾರಿ ಮಾಡಿಕೊಟ್ಟು ಇತರರಿಗೆ ನೋವುಂಟು ಮಾಡುವುದರಿಂದ ನಿಮ್ಮ ಭಾವನೆಗಳನ್ನು ನಿಯಂತ್ರಿಸಿ. ನೀವು ಇಡೀ ದಿನ ನಿಮ್ಮನ್ನು ನಿಯಂತ್ರಣದಲ್ಲಿ ಇರಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತೀರಿ. ಖಾಸಗಿ ಉದ್ಯೋಗಿಗಳನ್ನು ಕೈ ಬಿಡಲು ಸಂಸ್ಥೆ ನಿರ್ಧರಿಸಬಹುದು. ಕಳೆದ ದಿನಗಳನ್ನು ನೀವು ಮೆಲುಕು ಹಾಕಿ ಸಂತೋಷಗೊಳ್ಳುವಿರಿ.

ಕುಂಭ ರಾಶಿ:

ನಿಮ್ಮ ಸ್ವಾಮ್ಯತೆಯ ಸ್ವಭಾವ ಮತ್ತು ಕೋಪ ಅನಗತ್ಯ ಜಗಳಗಳಿಗೆ ಕಾರಣವಾಗಬಹುದು. ನಿಮ್ಮ ಮಾತಿನ ದಾಟಿ ಎದುರಿನವರಿಗೆ ಹಿಂಸೆ ಕೊಡುವಂತೆ ಇರುವುದು. ಕೆಲಸದ ಸ್ಥಳದಲ್ಲಿ ನಿಷ್ಠೆಯಿಂದ ಕೆಲಸ ಮಾಡುವಿರಿ. ಕುಟುಂಬದ ಜವಾಬ್ದಾರಿಗಳನ್ನು ಸಮಯಕ್ಕೆ ಪೂರೈಸಲು ಗಮನ ಕೊಡಿ. ಬೇಸರಿಸದೇ ಬಂದುದನ್ನು ಬಂದಂತೆ ಎದುರಿಸವುದು ನಿಮಗೆ ಸ್ವಭಾವಸಿದ್ಧ. ಕಾರ್ಯಕ್ಷೇತ್ರದಲ್ಲಿ, ನೀವು ಬಯಸಿದ ಕೆಲಸವನ್ನು ಮಾಡುವಿರಿ.

ಮೀನ ರಾಶಿ:

ಮನಸ್ಸಿಗೆ ವಿಶ್ರಾಂತಿಗೆ ತೆಗೆದುಕೊಳ್ಳಿ. ಏಕೆಂದರೆ ನೀವು ಏನೇ ಮಾಡಿದರೂ ತೊಂದರೆಯನ್ನು ತಪ್ಪಿಸಲಾಗದು. ಇಂದಿನ ಕಠಿಣತೆಯು ನಾಳೆಗೆ ಸುಲಭದ ದಾರಿಯನ್ನು ಮಾಡಿಕೊಡಲಿದೆ. ಸರ್ಕಾರಿ ನೌಕರರಿಗೆ ಅನೇಕ ಕಡೆಗಳಿಂದ‌ ಒತ್ತಡ ಬರಲಿದೆ. ಕೆಲವು ಕೆಲಸಕ್ಕೆ ಕಠಿಣಶ್ರಮದ ಅವಶ್ಯಕತೆ ಇರುತ್ತದೆ. ಸ್ನೇಹಿತರ ಮಾತಿನಿಂದ ವಿದೇಶಕ್ಕೆ ಹೋಗುವ ಆಸೆ ಅತಿಯಾಗುವುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಸಕಾರಾತ್ಮಕ ನಿಲುವು ಇರಲಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ವ್ಯತಿಪಾತ್ , ಕರಣ : ಬಾಲವ, ಸೂರ್ಯೋದಯ – 06 – 08 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:25 – 13:59, ಯಮಗಂಡ ಕಾಲ 07:42 – 09:16, ಗುಳಿಕ ಕಾಲ 10:50 – 12:25

-ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us