AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರ‌ಮೇಲೆ ಹೇರುವರು…

Horoscope Today July 17: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯ ಶುಕ್ರವಾರದಂದು ವಿಶ್ರಾಂತಿ ಹೆಚ್ಚು ಮನ, ಮಕ್ಕಳಿಗೆ ಸಮಯಾಭಾವ, ಸ್ಪರ್ಧೆಯಲ್ಲಿ ಸೋಲು, ಸಮನ್ವಯದ ಕೊರತೆ, ಆತ್ಮಸ್ಥೈರ್ಯಕ್ಕೆ ಜಯ, ಧೈರ್ಯದಿಂದ ಮುನ್ನಡೆ ಇವು ಇಂದಿನ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರ‌ಮೇಲೆ ಹೇರುವರು...
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on:Jul 17, 2026 | 1:00 AM

Share

ಮೇಷ ರಾಶಿ:

ವ್ಯಾಪಾರ ಲಾಭದಲ್ಲಿ ಏರುಪೇರು ಕಂಡುಬರಬಹುದು. ಆತ್ಮಸ್ಥೆರ್ಯ ಕಾಪಾಡಿಕೊಳ್ಳಿ. ಕೆಲಸದ ಒತ್ತಡ ಜಾಸ್ತಿಯಾಗಬಹುದು. ಕುಟುಂಬದಲ್ಲಿ ಹಿರಿಯರ ಮಾತಿಗೆ ಕಿವಿಗೊಡಿ. ಹಣದ ನಿರ್ವಹಣೆ ಸಾವಧಾನದಿಂದ ಮಾಡಿ. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ.

ವೃಷಭ ರಾಶಿ:

ನಿಮ್ಮ ಕೆಲಸದ ಬಗ್ಗೆ ಹೆಚ್ಚು ತಿಳಿದಿರುವುದು ಒಳ್ಳೆಯದು. ನಿಮ್ಮ ಪರೀಕ್ಷೆಗಳೂ ಆಗಬಹುದು. ಆಪ್ತರೇ ನಿಮ್ಮನ್ನು ಎಲ್ಲರೆದುರು ಟೀಕಿಸಿಯಾರು. ಯಾರನ್ನೂ ಹೆಚ್ಚು ಅವಲಂಬಿಸಿ ಯೋಜನೆಗಳನ್ನು ಘೋಷಿಸಿ. ಯಾರನ್ನೋ ಮೆಚ್ಚಿಸಲು ಕೆಲಸವನ್ನು ಮಾಡಬೇಕಾಗುವುದು. ನಿಮ್ಮ ಮೂಗಿನ ನೇರಕ್ಕೆ ಎಲ್ಲವನ್ನೂ ನೀವು ಕಾಣುವುದು ಸಮಂಜಸವಲ್ಲ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ.

ಮಿಥುನ ರಾಶಿ:

ಸರ್ಕಾರಿ ಕೆಲಸಗಳಿಗೆ ದಿನವನ್ನು ಹೊಂದಿಕೆ ಮಾಡಿಕೊಳ್ಳುವಿರಿ. ಸಂಬಂಧಿಕರಿಂದ ಬೆಂಬಲ ಸಿಗುತ್ತದೆ. ಸಾಮಾಜಿಕವಾಗಿ ಒಳ್ಳೆಯ ಹೆಸರು ಪಡೆಯುವಿರಿ. ಆಯ್ಕೆ‌ ಮಾಡಿಕೊಳ್ಳುವಾಗ ಎಡವುವಿರಿ. ನಿಮ್ಮ ಯೋಗ್ಯತೆಯ ಪರೀಕ್ಷೆಗೆ ಆಗಬಹುದು. ಎಚ್ಚರವಾಗಿರಿ. ಇಂದು ಮಾತಿನಿಂದ ನೀವು ನಷ್ಟವನ್ನು ಕಷ್ಟವನ್ನೂ ಅನುಭವಿಸಬೇಕಾಗಬಹುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ನೀವೇ ಮಾಡುವ ಕಾರ್ಯವನ್ನು ಖುದ್ದಾಗಿ ನಿರ್ವಹಿಸಿ.

ಕರ್ಕಾಟಕ ರಾಶಿ:

ನಿಮ್ಮ ಶ್ರದ್ಧೆ ಮತ್ತು ಪರಿಶ್ರಮ ಫಲ ನೀಡುತ್ತದೆ. ಹಿರಿಯರ ಜತೆಗಿನ ಮಾತುಕತೆಗಳಿಂದ ಉತ್ತಮ ಮಾರ್ಗ. ಹಣದ ಲೆಕ್ಕಪತ್ರಗಳನ್ನು ಸರಿಯಾಗಿ ಇಡಿ. ಸ್ನೇಹಿತರ ಬೆಂಬಲ ಇರುತ್ತದೆ. ಕುಟುಂಬದಲ್ಲಿ ಬೆಂಬಲ ಮತ್ತು ನೆಮ್ಮದಿ ಸಿಗುತ್ತದೆ. ಹೊಸದಾಗಿ ವಿದ್ಯಾಭ್ಯಾಸವನ್ನು ಮಾಡಿ ಮುಗಿಸಿದವರಿಗೆ ಕೆಲಸವು ಸಿಗುವುದು ಕಷ್ಟವಾದೀತು. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆಯನ್ನು ಬಲದಿಂದ ತಂದುಕೊಳ್ಳಬೇಕು. ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು.

ಸಿಂಹ ರಾಶಿ:

ಉದ್ಯೋಗದ ಭವಿಷ್ಯವು ತೀವ್ರವಾಗಿ ಕಾಡುವುದು. ಇಂದು ಸಂಗಾತಿಯೊಂದಿಗಿನ ಅನುಭವಗಳು ಆನಂದದಾಯಕ. ಮಕ್ಕಳಿಂದ ಖುಷಿ ಇರುತ್ತದೆ. ಹಣಕಾಸಿನ ವಿಚಾರದಲ್ಲಿ ಲಾಭ ಇರುತ್ತದೆ. ವಿದೇಶದಿಂದ ಒಳ್ಳೆಯ ಸುದ್ದಿ ಬರಬಹುದು. ಆರೋಗ್ಯದಲ್ಲಿ ಶಕ್ತಿಯುಳ್ಳ ಸ್ಥಿತಿ. ಮಾತನ್ನು ಸ್ಪಷ್ಟವಾಗಿ ಆಡಿ. ಒತ್ತಡವು ಹೆಚ್ಚಿದ್ದೀತು. ಕುಳಿತಲ್ಲೇ ಕುಳಿತರೇ ಆಗದು. ಬಂಧುಗಳ ವಿಚಾರದಲ್ಲಿ ನಿಮಗೆ ನಂಬಿಕೆ ಕಡಿಮೆಯಾಗುವುದು. ನಿಮಗೆ ಸಿಕ್ಕ ಅನಾದರದಿಂದ ಬೇಸರವಾಗಬಹುದು.

ಕನ್ಯಾ ರಾಶಿ:

ಮನಸ್ಸು ಇಂದು ಅಸ್ಥಿರವಾದರೆ ಧ್ಯಾನದಿಂದ ಶಾಂತಿ ನೆಮ್ಮದಿಯ ಕಡೆಗೆ ಕರೆತನ್ನಿ. ಕೆಲಸದಲ್ಲಿ ವಿಳಂಬ ಉಂಟಾಗಬಹುದು. ನಿರೀಕ್ಷಿಸಿದ ಹಣ ವಿಳಂಬವಾಗಬಹುದು. ಸ್ನೇಹಿತರಿಂದ ಸಹಾಯ ಸಿಗುತ್ತದೆ. ಕಳೆದುಕೊಂಡಿದ್ದನ್ನು ಪಡೆದುಕೊಳ್ಳಲು ಯತ್ನಿಸಬಹುದು. ಎಂದೋ ಮಾಡಿದ ಹೂಡಿಕೆಯಿಂದ ಸಹಾಯವಾಗಲಿದೆ. ನಿಮ್ಮ ಸಂಬಂಧವನ್ನು ಒಂದು ಹೆಜ್ಜೆ ಮುಂದೆ ಇಡಲು ಯೋಚಿಸುತ್ತೀರಿ. ಎಲ್ಲದಕ್ಕೂ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತ ಯಾವ ಕಾರ್ಯವನ್ನೂ ಸಫಲ ಮಾಡಲಾಗದು.

ತುಲಾ ರಾಶಿ:

ವೃತ್ತಿಪರ ಜೀವನದಲ್ಲಿ ಆತ್ಮವಿಮರ್ಶೆಗೆ ಅವಕಾಶ ಇಟ್ಟುಕೊಳ್ಳಿ. ಯಾವುದೇ ಸಮಸ್ಯೆಗೆ ಸಂಗಾತಿಯೊಂದಿಗೆ ಚರ್ಚೆ ಮಾಡುವುದು ಉತ್ತಮ. ಹಣದ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ಆರೋಗ್ಯದಲ್ಲಿ ಸ್ವಲ್ಪ ಬಳಲಿಕೆ ಸಾಧ್ಯ. ಹಿಂದೆ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವು ಸಿಗಲಿದೆ. ನೂತನ ಸ್ಥಳವನ್ನು ಖರೀದಿಸಲಿದ್ದೀರಿ. ನಿಮ್ಮದಾದ ಸ್ವಂತ ಬಳಗವನ್ನು ತಯಾರು ಮಾಡಿಕೊಳ್ಳುವಿರಿ. ಇಂದು ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು.

ವೃಶ್ಚಿಕ ರಾಶಿ:

ಆತ್ಮವಿಶ್ವಾಸ ಎಲ್ಲ ಕೆಲಸಕ್ಕೆ ನೆರವಾಗಲಿದೆ. ಹೊಸ ಯೋಜನೆಯ ಹುಡುಕಾಟದಲ್ಲಿ ಇರುವಿರಿ. ಸರ್ಕಾರಿ ಕೆಲಸಗಳಿಗೆ ಹೊಂದಿಕೆಯಾಗುವ ದಿನ. ಹಣಕಾಸಿನ ಸ್ಥಿತಿ ಚಿಗುರುತ್ತಾ ಹೋಗುತ್ತದೆ. ಸಂಬಂಧಿಕರಿಂದ ಬೆಂಬಲ ಸಿಗುತ್ತದೆ. ಸಾಮಾಜಿಕವಾಗಿ ಒಳ್ಳೆಯ ಹೆಸರು ಪಡೆಯುವಿರಿ. ಪ್ರಯಾಣವನ್ನು ಅನಿವಾರ್ಯವಾದರೆ ಮಾಡಿ. ಆಲಸ್ಯಕ್ಕೆ ನೀವೆರ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಿ. ಕೆಲಸಗಳನ್ನು ಅದು ಕೆಡಿಸೀತು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ನಾಟಕೀಯತೆಯಿಂದ ನೀವು ಹೊರಬಂದರೆ ಒಳ್ಳೆಯದು.

ಧನು ರಾಶಿ:

ಸಹೋದ್ಯೋಗಿಗಳ ಜೊತೆ ಸಮನ್ವಯ ಅಗತ್ಯವಾಗಿ ಬೇಕು. ವ್ಯಾಪಾರ ಲಾಭದಲ್ಲಿ ಏರುಪೇರು ಕಂಡುಬರಬಹುದು. ಆತ್ಮಸ್ಥೆರ್ಯ ಕಾಪಾಡಿಕೊಳ್ಳಿ. ಕೆಲಸದ ಒತ್ತಡ ಜಾಸ್ತಿಯಾಗಬಹುದು. ಕುಟುಂಬದಲ್ಲಿ ಹಿರಿಯರ ಮಾತಿಗೆ ಕಿವಿಗೊಡಿ. ಹಣದ ನಿರ್ವಹಣೆ ಸಾವಧಾನದಿಂದ ಮಾಡಿ. ನೀವು ಸರಿಯಾಗಿ ಇದ್ದರೂ ಬೇರೆಯವರಿಗೆ ಸರಿ ಇಲ್ಲದಂತೆ ಕಾಣಿಸುವುದು. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ.

ಮಕರ ರಾಶಿ:

ಎಲ್ಲದಕ್ಕೂ ನಿಮ್ಮನ್ನೆ ಹೊಣೆಗಾರರನ್ನಾಗಿ ಮಾಡುವರು. ಮಿತ್ರರಿಂದ ಹೊಸ ಯೋಜನೆ ಬಗ್ಗೆ ಮಾಹಿತಿ ಸಿಗಬಹುದು. ಹಳೆಯ ಸಾಲ ತೀರಿಸಲು ಅವಕಾಶ ಇರುತ್ತದೆ. ವ್ಯಾಪಾರಿಗಳಿಗೆ ಒಳ್ಳೆಯ ಸಮಯ, ಲಾಭ ಇದೆ. ಮನಸ್ಸಿನಲ್ಲಿ ಸಂತೋಷ ಇರುತ್ತದೆ. ಕುಟುಂಬದಲ್ಲಿ ಮಕ್ಕಳಿಂದ ಖುಷಿ ಇರುತ್ತದೆ. ನೂತನ ವಸ್ತುಗಳನ್ನು ಖರೀದಿಸುವಿರಿ. ಸಂಗಾತಿಯ ನೋವಿನಲ್ಲಿ ಭಾಗಿಯಾಗಲಾಗದು. ನಿಮ್ಮ ಆಯ್ಕೆಯು ನಿರೀಕ್ಷೆಗಳನ್ನು ಮೀರಿ ನಿಮಗೆ ಆದಾಯ ತರಬಹುದು. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ‌ ಕೊರತೆ ಆಗುವ ಸಾಧ್ಯತೆ ಇದೆ.

ಕುಂಭ ರಾಶಿ:

ಮನೆ ಖರೀದಿ ವಿಚಾರವು ಕುಟುಂಬದಲ್ಲಿ ಚರ್ಚೆಗೆ ಬರುವುದು. ಆರೋಗ್ಯದಲ್ಲಿ ತಲೆನೋವಿನ ಮುನ್ಸೂಚನೆ ಕಾಣಿಸುವುದು. ಬಂಧುಗಳೊಂದಿಗೆ ಗಂಭೀರ ಮಾತುಕತೆ ನಡೆಯಬಹುದು. ಆದಾಯದ ಜೊತೆಗೆ ಖರ್ಚು ಏರಿಕೆಯಾಗುವ ಸಾಧ್ಯತೆ. ಸ್ನೇಹಿತರ ಜೊತೆಗಿನ ಅನುಬಂಧವು ಸ್ವಲ್ಪ ಹದಗೆಡಬಹುದು. ಜಬಾಬ್ದಾರಿಯಲ್ಲಿ ಸ್ವಲ್ಪ ಹಿನ್ನಡೆಯಾದೀತು. ಎಲ್ಲ ಸಂದರ್ಭವನ್ನೂ ಒಂದೇ ರೀತಿಯಲ್ಲಿ ನೋಡಲಾಗದು. ಸಂಗಾತಿಯ ಜೊತೆ ಕುಳಿತು ದುಃಖದಿಂದ ಸಮಾಧಾನ ಮಾಡುವಿರಿ.

ಮೀನ ರಾಶಿ:

ಅಲ್ಪ ಪ್ರಯತ್ನದಿಂದ ಇಂದು ಕೆಲಸವನ್ನು ಸಾಧಿಸಿಕೊಳ್ಳಬಹುದು. ನಿಮ್ಮನ್ನು ನೀವು ಸರಿಯಾಗಿ ಅರ್ಥಮಾಡಿಕೊಂಡರೂ ಇನ್ನೊಬ್ಬರು ಅದನ್ನು ಬೇರೇ ರೀತಿಯಲ್ಲಿ ಅರ್ಥೈಸುವರು. ಗೆಳೆಯರು ನಿಮ್ಮಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುಬರು. ಕುಟುಂಬದಲ್ಲಿ ಶಾಂತಿ ಸಂಚಾರವಾಗಲಿದೆ. ಹಣದ ಲೆಕ್ಕಪತ್ರಗಳಲ್ಲಿ ಜಾಗರೂಕರಾಗಿರಿ. ಇದು ಅನಿವಾರ್ಯವಾದುದು ಆಗಿದೆ. ನೂತನ ವಸ್ತುಗಳನ್ನು ಖರೀದಿಸಿದರೂ ಅದನ್ನು ಉಪಯೋಗಿಸಲು ಆಗದೇ, ಇಂದು ಅದನ್ನು ಬಳಸುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಮಘಾ, ಯೋಗ : ಪರಿಘ, ಕರಣ : ಕೌಲವ, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:50 – 12:26, ಯಮಗಂಡ ಕಾಲ 16:37 – 17:13, ಗುಳಿಕ ಕಾಲ 07:39 – 09:14

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:59 am, Fri, 17 July 26

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?