AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಎಷ್ಟೇ ಆತ್ಮಪ್ರಶಂಸೆ ಮಾಡಿಕೊಂಡರೂ ಪ್ರಯೋಜನವಾಗದು

Horoscope Today July 19: ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಭಾನುವಾರದಂದು ಸಂಕುಚಿತ ಭಾವ, ಅಸ್ತಿತ್ವದ ತೋರ್ಪಡಿಕೆ, ಮನಶ್ಚಂಚಲತೆ, ವಾಹನದಿಂದ ಗಾಯ, ದಾನ ಧರ್ಮದಿಂದ ಪ್ರತಿಷ್ಠೆ, ವಿದ್ಯೆಗೆ ಯೋಗ್ಯ ಸ್ಥಾನ ಇವೆಲ್ಲ ಈ ದಿನದ ವಿಶೇಷ.

ದಿನ ಭವಿಷ್ಯ: ಇಂದು ಈ ರಾಶಿಯವರು ಎಷ್ಟೇ ಆತ್ಮಪ್ರಶಂಸೆ ಮಾಡಿಕೊಂಡರೂ ಪ್ರಯೋಜನವಾಗದು
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on:Jul 19, 2026 | 12:12 AM

Share

ಮೇಷ ರಾಶಿ:

ಉಚಿತವಾದ ಚಿಕಿತ್ಸೆಯಿಂದ ಆರಂಭದಲ್ಲಿಯೇ ಕಾಯಿಲೆಗೆ ಪರಿಹಾರ ಕಂಡುಕೊಳ್ಳಿ. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ವಿರೋಧಿಗಳು ತಡಯಬಹುದು. ಸ್ತ್ರೀ ನಾಯಕತ್ವಕ್ಕೆ ನಿಮ್ಮ ಆಯ್ಕೆ ಮಾಡುವ ಸಾಧ್ಯತೆ ಇದೆ. ಬಂಧುಗಳ ಸಹಕಾರದಿಂದ ನಿಮ್ಮ‌ಋಣ ಬಾಧೆ ಸದ್ಯ ತೀರುವುದು. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ಅಲಕ್ಷ್ಯ ಮಾಡಿದರೆ ಉತ್ತಮ. ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ.

ವೃಷಭ ರಾಶಿ:

ವಾಹನದ ಉದ್ಯಮವನ್ನು ನಡೆಸುತ್ತಿದ್ದರೆ ನಿಮಗೆ ಲಾಭವಾಗುವ ಸಾಧ್ಯತೆ ಹೆಚ್ಚು. ಆಕಸ್ಮಿಕ ಧನಲಾಭವು ನಿಮ್ಮನ್ನು ಖುಷಿಯಾಗಿಡಲಿದೆ. ಸಾಲವನ್ನು ಪಡೆಯಲು ಸ್ನೇಹಿತನ ಸಹಾಯ ಕೇಳುವಿರಿ. ರಾಜಕೀಯವಾಗಿ ಪ್ರೇರಿತವಾದ ಮಾತುಗಳು ನಿಮ್ಮಿಂದ ಬರಬಹುದು. ನಿಮ್ಮಿಂದಾದ ತಪ್ಪನ್ನು ನೀವೇ ಸರಿಮಾಡಿಕೊಳ್ಳಬೇಕು. ಎಲ್ಲದರಲ್ಲಿಯೂ ಉತ್ತಮವಾದುದನ್ನೇ ಆರಿಸಿಕೊಳ್ಳುವಿರಿ. ಆಪ್ತರು ಕಾರಣಾಂತರಗಳಿಂದ ದೂರಾಗಬಹುದು. ಸಕಾರಾತ್ಮಕ ಆಲೋಚನೆಯನ್ನು ನೀವು ಹೆಚ್ಚು ಮಾಡಿ. ಉತ್ತಮ ಕಾರ್ಯಕ್ಕೆ ಯಾರಿಂದಲಾದರೂ ಪ್ರೇರಣೆ ಪಡೆಯಿರಿ.

ಮಿಥುನ ರಾಶಿ:

ಸಂಗಾತಿಯನ್ನು ಸಮೂಹದಲ್ಲಿ ನಿಂದಿಸುವುದು ಸುಮ್ಮನೇ ಕಲಹಕ್ಕೆ ಕಾರಣವಾಗುವುದು. ವ್ಯಕ್ತಿತ್ವದಿಂದ ನೀವು ಸಮಾಜದಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಳ್ಳುತ್ತೀರಿ. ಆರೋಗ್ಯವು ಸುದೃಢವಾಗಿ ಇರಲಿದೆ. ಸಂಬಂಧಗಳನ್ನು ಕೂಡಿಸಿಕೊಳ್ಳುವ ಪ್ರಯತ್ನ ಮಾಡಿ. ಉತ್ಸಾಹದ ರಹಸ್ಯವನ್ನು ಹೇಳುವುದು ಬೇಡ. ತಾಯಿಗಾಗಿ ಹಣವನ್ನು ಖರ್ಚು ಮಾಡಬೇಕಾಗಬಹುದು. ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು. ನಿಮಗೆ ಪರೀಕ್ಷೆಯ ದಿನವಾಗಿರುವುದು. ಆತ್ಮವಿಶ್ವಾಸದ ಕೊರತೆಯನ್ನು ನೀಗಿಸಿಕೊಳ್ಳುವುದು ಮುಖ್ಯ.

ಕರ್ಕಾಟಕ ರಾಶಿ:

ಇಂದು ಯಾರ ಜೊತೆಗೂ ವಿವಾದಕ್ಕೆ ಸಿಲುಕುವುದು ಬೇಡ. ಅನ್ಯರ ತಪ್ಪಿದ್ದರೂ ಅದನ್ನು ಸರಿಮಾಡಿಕೊಳ್ಳುವ ಪ್ರಯತ್ನ ಮಾಡಿ. ದೌರ್ಬಲ್ಯಗಳನ್ನು ಮೆಟ್ಟಿ ನಿಲ್ಲುವ ಪ್ರಯತ್ನವನ್ನು ಮಾಡಬೇಕಾದೀತು. ಹಣವನ್ನು ಸಂಪಾದಿಸಬೇಕು ಎನ್ನುವ ಅತಿಯಾದ ಆಸೆ ನಿಮ್ಮ ಮನಸ್ಸಿನಲ್ಲಿ ಬೇರೂರುವುದು. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಬೇಕು. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ಇರುವ ಸಮಯವನ್ನು ಸದ್ವಿನಿಯೋಗ ಮಾಡಿ.

ಸಿಂಹ ರಾಶಿ:

ಇಂದು ನೀವು ಮನಸ್ಸಿಗೆ ಹಿಡಿಸದ ಸಂಗತಿಗಳ ವಿರುದ್ಧ ಧೈರ್ಯವಾಗಿ ಮಾತನಾಡುವಿರಿ. ಹಲವು ದಿಗಳಿಂದ ಮಾಡಿದ ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಫಲವಿದೆ. ಮಾನಸಿಕ ಸ್ವಾಸ್ಥ್ಯವನ್ನು ಸರಿ ಮಾಡಿಕೊಳ್ಳಲು ಪ್ರಯತ್ನಿಸುವಿರಿ. ಕುಟುಂಬದ ವಾರ್ತೆಗಳು ನಿಮಗೆ ಸಂತೋಷವನ್ನು ತರುವುದು. ಪ್ರೇಮವು ಯಾವುದೇ ಗೊಂದಲವನ್ನು ಸೃಷ್ಟಿಸಬಹುದು. ನಿಂದನೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ. ನಿಮ್ಮ ವಸ್ತುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ. ಪ್ರಯಾಣದಲ್ಲಿ ಜಾಗರೂಕತೆಯಿಂದ ಇರಿ. ಕಷ್ಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ಸಿಗದು.

ಕನ್ಯಾ ರಾಶಿ :

ಸಮಯ ಸಿಕ್ಕಾಗ ನೀವು ಸೃಜನಾತ್ಮಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಿರಿ. ಇಂದು ಸಮಯವನ್ನು ವ್ಯರ್ಥ ಮಾಡಬೇಡಿ. ಇಂದು ಸಂಬಂಧಗಳಿಗೆ ಬೆಲೆ ಕೊಡದೇ ಹಣದ ಹಿಂದೆ ಹೋಗಿ ಅದು ಹಾಳುಮಾಡಿಕೊಳ್ಳುವಿರಿ. ಕೆಲವು ಸೂಕ್ಷ್ಮತೆಗಳನ್ನು ಅರ್ಥಮಾಡಿಕೊಳ್ಳಬೇಕಿದೆ. ಭೂಮಿಯ ಖರೀದಿಗೆ ಉತ್ತಮ ಕಾಲ. ಯಾವ ಕಾರ್ಯಕ್ಕೂ ಸಹಾಯ ಸಿಗದೇ ಕಷ್ಟವಾದೀತು. ಸ್ತ್ರೀಯರಿಗೆ ಸಹಾಯ ಮಾಡಲು ಹೋಗಿ ಹಾಸ್ಯಕ್ಕೆ ಒಳಗಾಗುವಿರಿ. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು.

ತುಲಾ ರಾಶಿ:

ಒಂದೆ ಕಾಡೆ ಸಾಲ ಮುಚ್ಚಲು ಮತ್ತೊಂದು ಕಡೆ ಸಾಲವನ್ನು ಮಾಡಬೇಕಾಗಬಹುದು. ಸಮಯದಲ್ಲಿ ಅಹಿತಕರ ಸುದ್ದಿಗಳ ಸೂಚನೆಗಳೂ ಇವೆ. ಇಂದು ಮನಸ್ಸಿನಲ್ಲಿ ಭಯ ಮತ್ತು ಖಿನ್ನತೆಯಂತಹ ವಿಷಯಗಳಿಗೆ ಕಾರಣವಾಗಬಹುದು. ಸಹೋದರನ ಜೊತೆ ಆಪ್ತ ಮಾತುಕತೆ ನಡೆಯಲಿದೆ. ಸ್ನೇಹಿತರ ಸಹಾಯ ಪಡೆಯಲು ಧನವನ್ನು ವ್ಯಯಿಸಬೇಕಾಗುವುದು. ಅಪರಿಚಿತ ಕರೆಗಳಿಗೆ ಸೊಪ್ಪು ಹಾಕಬೇಡಿ. ಯಾವುದನ್ನೇ ಆದರೂ ಸ್ವಾಭಿಮಾನವನ್ನು ಬಿಟ್ಟು ಇರಲಾಗದು.

ವೃಶ್ಚಿಕ ರಾಶಿ:

ಕೆಲವು ವೈಫಲ್ಯಗಳಿಂದ ನೀವು ಪಾಠವನ್ನು ಕಲಿಯುವ ಅನಿವಾರ್ಯತೆ ಸೃಷ್ಟಿ. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲಿದ್ದೀರಿ. ನಿಮ್ಮವರ ಮಾತುಗಳಿಂದ ಗಾಬರಿಯಾಗಲಿದ್ದೀರಿ. ಊಹಿಸದೇ ಇರುವ ಮಾತುಗಳನ್ನು ಕೇಳಬೇಕಾದೀತು. ವಿದ್ಯಾರ್ಥಿಗಳು ಅಧ್ಯಯನಕ್ಕೆಂದು ಮನೆಯಿಂದ ದೂರ ಇರುವರು. ಪಾಲುದಾರಿಕೆ ವಿಷಯವು ಪ್ರಸ್ತಾಪವಾದಾಗ ಪ್ರಯೋಜನವನ್ನು ತಿಳಿದುಕೊಳ್ಳಿ. ಆಸ್ತಿಯ ಹಂಚಿಕೆಯು ನಿಮಗೆ ಸಮಾಧಾನ ತರದು. ಸಣ್ಣ ಕೆಲಸವಾದರೂ ಶ್ರದ್ಧೆಯಿಂದ ಮಾಡುವಿರಿ. ನಿಮ್ಮ ಹೆಚ್ಚಿನವರ ಭೇಟಿಯಾಗುವುದು.

ಧನು ರಾಶಿ:

ದೇಹ ಮತ್ತು ಮನಸ್ಸೂ ಸಮಾಧಾನದಿಂದ ಇರುವುದು. ಕೆಲವು ದುಃಖದ ಸುದ್ದಿಗಳು ಮನಸ್ಸನ್ನು ಹತಾಶೆಗೊಳಿಸಬಹುದು. ಆರಂಭದ ಉತ್ಸಾಹವು ಅಂತ್ಯದ ವರೆಗೆ ಇರಲಾರದು. ಆಹಾರವು ನಿಮ್ಮನ್ನು ಉತ್ಸಾಹದಿಂದ ಇಡುವುದು. ಇತರರಿಗೆ ಧನಸಹಾಯ ಮಾಡಿ ಕಳೆದುಕೊಳ್ಳುವಿರಿ. ಒತ್ತಡಗಳು ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದೆ. ನಿಮ್ಮ ತಿಳುವಳಿಕೆಯ ಬಗ್ಗೆ ಅಹಂಕಾರ ಬೇಡ. ಪ್ರಶಂಸೆಯಿಂದ ಅಹಂಕಾರವು ಬರುವುದು. ‌ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ.

ಮಕರ ರಾಶಿ:

ಮೋಜಿಗಾಗಿ ಹೂಡಿಕೆ ಮಾಡಿ ಹಣವನ್ನು ಕಳೆದುಕೊಳ್ಳುವ ಉದ್ಯಮಿಗಳಿಗೆ ಕಳೆದ ಆರಂಭದ ದಿನಗಳನ್ನು ನೆನೆದು ಸಂತೋಷವಾಗಲಿದೆ. ಬಹಳಷ್ಟು ಖರ್ಚಿದ್ದು ಹಣದ ಹೊಂದಾಣಿಕೆ ಕಷ್ಟವಾದೀತು. ನಿಮ್ಮ ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀವು ಬಯಸುವಿರಿ. ನಿಮ್ಮ ಕೋಪವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಅನವಶ್ಯಕವಾಗಿ ಆಡುವ ಮಾತುಗಳು ನಿಮ್ಮ ಮೇಲಿನ ಗೌರವವನ್ನು ಕಡಿಮೆ ಮಾಡಿಸೀತು. ತಾರತಮ್ಯ ಭಾವವನ್ನು ಬಿಡಬೇಕಾಗುವುದು.

ಕುಂಭ ರಾಶಿ:

ಬಂಧುಗಳ ಜೊತೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳುವ ಪ್ರಯತ್ನ ಮಾಡುವಿರಿ. ಹೊಸತನವನ್ನು ತಂದುಕೊಳ್ಳುವಲ್ಲಿ ನೀವು ಸದಾ ಪ್ರಯತ್ನಶೀಲರು. ಆದರೆ ಆಲಸ್ಯವನ್ನು ಬಿಡಬೇಕಾದೀತು. ಪ್ರೀತಿಗೋಸ್ಕರ ಹಣವನ್ನು ಖರ್ಚುಮಾಡುವಿರಿ. ಸುಮ್ಮನೇ ಕುಳಿತರೂ ನಿಮ್ಮನ್ನು ಕೆರಳಿಸಬಹುದು. ಅಪರಿಪೂರ್ಣ ಕೆಲಸದ ಯಾದಿಯನ್ನು ತಯಾರಿಸಿ ಮುಂದುವರಿಯಿರಿ. ಇಂದು ಹಸಿವು ಹೆಚ್ಚಾಗಿ ಸಂಕಟಪಡುವಿರಿ. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ

ಮೀನ ರಾಶಿ :

ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಉತ್ಸಾಹವು ನಿಮ್ಮಲ್ಲಿ ಇರುವುದು. ಅಪ್ರಯೋಜಕ ಕೆಲಸಗಳನ್ನು ಮಾಡಲು ನೀವು ಹಿಂದೇಟು ಹಾಕಬಹುದು. ಸ್ನೇಹಿತರ ಸಜವಾಸದಿಂದ‌ನಿಮಗೆ ಅಪವಾದ ಬರಬಹುದು. ಪ್ರಯಾಣ ಮಾಡಬೇಕಾಗಿದ್ದರೂ ಭಯವು ನಿಮ್ಮನ್ನು ಕಾಡಬಹುದು. ಅನಾರೋಗ್ಯದಿಂದಾಗಿ ಸಮಸ್ಯೆಯನ್ನು ಎದುರಿಸಬೇಕಾಗುವುದು. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಪುನರ್ವಸು, ವಾರ : ಭಾನು, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಸಿದ್ಧ, ಕರಣ : ಭದ್ರ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:13 – 18:49, ಯಮಗಂಡ ಕಾಲ 12:26 – 14:02, ಗುಳಿಕ ಕಾಲ 15:37 – 17:33

– ಲೋಹಿತ್ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:11 am, Sun, 19 July 26

Follow Us