AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅವರಿಗೆ ಅನಿಸುವುದು…

Horoscope Today June 24: ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಬುಧವಾರದಂದು ತಾಂತ್ರಿಕತೆಯಲ್ಲಿ ಹಿನ್ನಡೆ, ರಪ್ತಿಗೆ ಅಡೆತಡೆ, ದುರಸ್ತಿಗೆ ಅತಿ ಪ್ರಯತ್ನ, ಅನ್ಯರಿಂದ ಪ್ರಸಿದ್ಧಿ, ಹಣಕಾಸಿನಿಂದ ಶಾಶ್ವತ ಮನಸ್ತಾಪ ಇವೆಲ್ಲ ಇಂದಿನ ಭವಿಷ್ಯ.

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಅದು ಅಲ್ಪವೆನ್ನುವಂತೆ ಅವರಿಗೆ ಅನಿಸುವುದು...
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jun 24, 2026 | 12:44 AM

Share

ಮೇಷ ರಾಶಿ:

ನೀವೇ ಆಯ್ಕೆ‌ ಮಾಡಿಕೊಂಡ ಉದ್ಯೋಗದ ಸ್ಥಳದಿಂದ ನಿಮಗೆ ತೊಂದರೆಯಾಗಿ ಕೆಲಸವನ್ನು ಬಿಡಲಿದಗದೀರಿ. ಸಂಬಂಧಗಳಲ್ಲಿ ಭಾವನಾತ್ಮಕತೆ ಹೆಚ್ಚಿರುತ್ತದೆ. ಬಹಳ‌ದಿನಗಳ ಅನಂತೆ ನಿಶ್ಚಿಂತೆಯಿಂದ ನಿದ್ರಿಸುವಿರಿ. ಮನೆಯವರ ಅಭಿಪ್ರಾಯಕ್ಕೆ ಮೌಲ್ಯ ನೀಡಿ. ದಿನದ ಕೊನೆಯಲ್ಲಿ ಅಚ್ಚರಿಯ ಲಾಭದ ಸೂಚನೆ ಇರುವುದು. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ. ಸಮಾಧಾನಚಿತ್ತರಾಗಿ ಮಾತನಾಡಿ.

ವೃಷಭ ರಾಶಿ:

ಓದಿನಲ್ಲಿ ಆಸಕ್ತಿ ಕಡಿಮೆ‌ ಇರುವುದು ಸ್ಪಷ್ಟವಾಗಿ ಕಾಣುವುದು. ಕೆಲವರು ನಿಮ್ಮ ವಿಚಾರಗಳನ್ನು ತಿರಸ್ಕರಿಸಬಹುದು. ಆಸೆಗಳನ್ನು ಹರಿಬಿಡುವುದು ನಿಮ್ಮ ಯೋಗ್ಯತೆಯನ್ನು ತಿಳಿಸುವುದು. ಹಣಕಾಸಿನಲ್ಲಿ ಸಣ್ಣ ಮೊತ್ತದ ಲಾಭ. ಮನೆಯಲ್ಲಿ ಸಂತೋಷದ ವಾತಾವರಣ. ಕೆಲಸದಲ್ಲಿ ಹೊಸ ಆಯ್ಕೆಗಳತ್ತ ಗಮನ ಹರಿಸಿ. ಹೇಳಬೇಕಾದ‌ ವಿಷಯದಲ್ಲಿ ಮುಚ್ಚು ಮರೆ ಇಲ್ಲದೇ ಸರಿಯಾಗಿ ಹೇಳಿ.‌ ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ.

ಮಿಥುನ ರಾಶಿ:

ಎಲ್ಲವನ್ನೂ ಮಾತಿನಿಂದಲೇ ಬಗೆಹರಿಸಲಾಗದು. ನಿಶ್ಚಿತ ಆದಾಯವು ನಂಬಿ ಸಾಲವನ್ನು ಪಡೆಯುವಿರಿ.‌ ಗಮನದಿಂದ ಕಾರ್ಯ ಮಾಡಿದರೆ ಯಶಸ್ಸು ಖಚಿತ. ಹಣಕಾಸಿನಲ್ಲಿ ಉತ್ತಮ ಸುಧಾರಣೆ. ಹಳೆಯ ಸಮಸ್ಯೆಗಳಿಗೆ ಪರಿಹಾರ. ಉದ್ಯೋಗದಲ್ಲಿ ಬೆಳವಣಿಗೆ ಸಾಧ್ಯ. ಸಂಬಂಧಗಳಲ್ಲಿ ನಂಬಿಕೆ ಬಲವಾಗಲಿ. ಹೊಸ ಯೋಜನೆಗಳೂ ಅವರಿಗೆ ಸಿಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು.

ಕರ್ಕಾಟಕ ರಾಶಿ:

ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಇಂದು ಪತಿಯ ವರ್ತನೆಯು ಬದಲಾದಂತೆ ತೋರುವುದು. ಹಣಕಾಸಿನ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರಿಯಾದ ಸಮಯ. ಸಂಬಂಧಗಳಲ್ಲಿ ಗಂಭೀರವಾಗಿ ವರ್ತಿಸಿ. ನಿಮ್ಮ ಶ್ರಮವನ್ನು ಗುರುತಿಸಲಾಗುತ್ತದೆ. ಪ್ರವಾಸ ಯೋಜನೆ ಮುಂದೂಡುವ ಸಾಧ್ಯತೆ. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ.

ಸಿಂಹ ರಾಶಿ:

ತುಂಬಾ ದಿನಗಳಿಂದ ಕಾಡುವ ಸಮಸ್ಯೆಗೆ ಇಂದು ಪರಿಹಾರ ದೊರಕಲಿದೆ. ಇದರಿಂದ ಅಪವಾದಗಳು ಬರಬಹುದು.‌ ಒಪ್ಪಂದದ ಕುರಿತು ಯೋಚನೆ ಬೇಡ. ಹಣಕಾಸಿನಲ್ಲಿ ಸ್ಪಷ್ಟತೆ ಇರಲಿ. ಆರೋಗ್ಯದಲ್ಲಿ ಸಾಧಾರಣ ಸ್ಥಿತಿ. ಸಹೋದ್ಯೋಗಿಯ ಜೊತಡ ಸ್ಪರ್ಧೆ ಎದುರಾಗಬಹುದು. ನಿಮ್ಮ ಶ್ರದ್ಧೆ ಹಾಗೂ ಸಮರ್ಥನೆಯಿಂದ ಜಯ ಸಿಗುವುದು ಖಚಿತ. ನಿಮ್ಮ ನಡೆ ಅನುಮಾನವನ್ನು ತರಿಸಬಹುದು. ಸಂತಾನದ ವಿಚಾರದಲ್ಲಿ ಅಶಾಂತಿ ಮೂಡಬಹುದು.

ಕನ್ಯಾ ರಾಶಿ:

ಧಾರ್ಮಿಕ ಕಾರ್ಯಗಳನ್ನು ಮಾಡುವವರಿಗೆ ಇಂದು ಹೆಚ್ಚಿನ ಲಾಭವನ್ನು ನಿರೀಕ್ಷಿತ ಲಾಭವನ್ನು ಕಾಣಬಹುದಾಗಿದೆ. ಹಳೆಯ ಸಾಲ ತೀರಿಸಬಹುದಾದ ಅವಕಾಶ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳು. ಮನಸ್ಸಿನಲ್ಲಿ ದೃಢತೆ ಇಟ್ಟುಕೊಳ್ಳಿ. ಸ್ನೇಹಿತರಿಂದ ಬೆಂಬಲ ನಿರೀಕ್ಷಿಸಬಹುದು. ವಿದೇಶದಿಂದ ಹಣದ ವ್ಯವಹಾರವನ್ನು ಇಟ್ಟುಕೊಂಡರೆ ಕಷ್ಟವಾದೀತು. ಕುಟುಂಬದಿಂದ‌ ನಿಮಗೆ ಬೇಕಾದ ಸಹಕಾರ ಸಿಗಲಿದೆ. ಮಕ್ಕಳು ನಿಮ್ಮನ್ನು ಪ್ರೀತಿಸುವರು.

ತುಲಾ ರಾಶಿ:

ಮಾನಸಿಕ ತೊಂದರೆಯನ್ನು ಅನುಭವಿಸುವಿರಿ. ಅವಕಾಶಗಳು ನಿಮ್ಮ ಕೈತಪ್ಪುವ ಸಾಧ್ಯತೆ ಇದೆ. ಇಷ್ಟು ದಿನ ಹಿಡಿದಿಟ್ಟುಕೊಂಡ ಕೋಪವು ಸ್ಫೋಟವಾಗಿ ಮನೆಯು ರಣಾಂಗಣದಂತೆ ಕಾಣಬಹುದು. ಬದಲಾವಣೆಯೊಂದಿಗೆ ಹೊಂದಾಣಿಕೆ ಸಾಧಿಸುವ ಕೌಶಲ ಅಗತ್ಯ. ನೀವು ಬದಲಾಗಬೇಕು ಎಂದುಕೊಂಡರೂ ಸ್ನೇಹಿತರ ಬಳಗ ನಿಮ್ಮನ್ನು ಸುಮ್ಮನೆ ಬಿಡದು.‌ ತಂದೆ-ತಾಯಿಗಳು ಮಕ್ಕಳ‌ ಮೇಲೆ ಕಣ್ಣಿಡುವುದು ಒಳ್ಳೆಯದು. ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ.

ವೃಶ್ಚಿಕ ರಾಶಿ:

ಬಂಗಾರದ ವ್ಯಾಪರಿಗಳಿಗೆ ಲಾಭವಾಗಲಿದೆ. ಮಾನಸಿಕ ನೆಮ್ಮದಿಯನ್ನು ಪಡೆದುಕೊಳ್ಳಲಿದ್ದೀರಿ. ಕುಟುಂಬದಿಂದ ಅಶುಭವಾದ ಸುದ್ದಿಯು ನಿಮಗೆ ತಿಳಿಯಲಿದೆ‌. ವೃತ್ತಿಯಲ್ಲಿ ನಿರ್ಣಾಯಕ ದಿನವಾಗಬಹುದು. ಹಣಕಾಸಿನಲ್ಲಿ ಸ್ಥಿರತೆ ಕಾಣಬಹುದು. ವ್ಯವಹಾರದಲ್ಲಿ ಹೊಸ ಅವಕಾಶ ಸಾಧ್ಯತೆ. ಬಂಧುಬಳಗದಲ್ಲಿ ಒಳ್ಳೆಯ ಸುದ್ದಿ ನಿರೀಕ್ಷೆ. ದೇಹದಂಡನೆಗೆ ಸರಿಯಾದ ಮಾರ್ಗವನ್ನು ಅನುಸರಿಸಿ. ನಿಮ್ಮ‌ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆ ಸಂಭವ.

ಧನು ರಾಶಿ:

ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು. ನಿಮ್ಮ ಬಗ್ಗೆ ಅಪಪ್ರಚಾರಗಳು ಕೇಳಿ ಬರಬಹುದು. ವ್ಯಕ್ತಿಗತ ಸಮಸ್ಯೆಗಳು ಮನಸ್ಸಿಗೆ ಭಾರವಾಗಬಹುದು. ಆತ್ಮಸ್ಥೆರ್ಯದಿಂದ ನಿರ್ಧಾರ ತೆಗೆದುಕೊಳ್ಳಿ. ಆರೋಗ್ಯದಲ್ಲಿ ಇವಿಶ್ರಾಂತಿ ಅಗತ್ಯ. ಸಂಜೆಯ ವೇಳೆಗೆ ಶಾಂತ ಮನಸ್ಥಿತಿ ಮೂಡಬಹುದು. ವಂಚಿಸುವ ಯೋಚನೆ ಮಾಡಿದ್ದರೆ ಅದನ್ನು ಮರೆತುಬಿಡಿ. ಎಲ್ಲದಕ್ಕೂ ಯಾರನ್ನಾದರೂ ಕಾರಣವಾಗಿಸುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ.

ಮಕರ ರಾಶಿ:

ನಿಮ್ಮ ವಿದ್ಯುದುಪಕರಣದಿಂದ ನಿಮಗೆ ನಷ್ಟವಾಗಲಿದೆ. ನಿಮ್ಮ ಶತ್ರುಗಳನ್ನು ನೀವು ಸಂಪೂರ್ಣವಾಗಿ ಸೋಲಿಸಿದ್ದೇನೆ ಎಂಬ ಭಾವನೆ ಇರಬಹುದು. ನಿಮ್ಮೊಳಗಿನ ಹೊಸ ಸಾಮರ್ಥ್ಯವನ್ನು ಬೆಳಕಿಗೆ ತರುತ್ತದೆ. ಕೆಲಸದಲ್ಲಿ ಹೊಸ ಅವಕಾಶಗಳು ಬರುವ ನಿರೀಕ್ಷೆಯಿದೆ. ಆರೋಗ್ಯದಲ್ಲಿ ಸುಧಾರಣೆಯ ಲಕ್ಷಣ. ನಿಮ್ಮ ಇಂದಿನ ಸಮಯವನ್ನು ನೀವು ಸದುಪಯೋಗ ಮಾಡಿಕೊಳ್ಳಿ. ನಿಮ್ಮ ಖಾಸಗಿ ತನಕ್ಕೆ ತೊಂದರೆಯಾಗಲಿದೆ.

ಕುಂಭ ರಾಶಿ:

ಆಪ್ತರ ಜೊತೆ ಉದ್ಯೋಗಕ್ಕೆ ಸಂಬಂಧಿಸಿದ ಸಮಾಲೋಚನೆಯನ್ನು ನಡೆಸುವಿರಿ. ನಿಮ್ಮ ಶತ್ರುಗಳು ನಿಮ್ಮನ್ನು ಸೋಲಿಸಲು ತಯಾರಾಗಿರುವರು. ನಿಮ್ಮ ಬಳಿ ಇರುವ ಕೆಲವು ವಸ್ತುಗಳನ್ನು ಇನ್ನೊಬ್ಬರಿಗೆ ನೀಡುವಿರಿ. ಮನೆಯ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮುನ್ನ ಯೋಚಿಸಿ. ಹಣಕಾಸಿನಲ್ಲಿ ಮಧ್ಯಮ ಸ್ಥಿತಿ ನಿರೀಕ್ಷಿಸಬಹುದು. ನಿಮ್ಮ ಅಂದಾಜು ಮೀರಬಹುದು. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಮಾರಾಟದ ವಿಷಯದಲ್ಲಿ ಹಿನ್ನಡೆಯಾಗಲಿದೆ.

ಮೀನ ರಾಶಿ:

ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ಅನೇಕ ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ. ಇಂದು ವಿದ್ಯಾರ್ಥಿಗಳು ದೂರದ ಊರಿಗೆ ಹೆಚ್ಚಿನ ಹಣಕಾಸಿನಲ್ಲಿ ಸತತ ನಿರೀಕ್ಷೆಗಳಿದ್ದರೂ ಚಿಕ್ಕ ನಷ್ಟವೊಂದು ಸಂಭವಿಸಬಹುದು. ಆರೋಗ್ಯದಲ್ಲಿ ಸಣ್ಣ ಸಮಸ್ಯೆ ಕಾಣಿಸಬಹುದು. ವೃತ್ತಿಜೀವನದಲ್ಲಿ ಮುಂದುವರಿಯಲು ನೂತನ ಅವಕಾಶಗಳು ನಿಮಗೆ ಸಿಗಲಿವೆ. ಜೀವನದ ಹಾದಿಯಲ್ಲಿ ಹೆಚ್ಚು ಏರಿಳಿತಗಳು ಇರದೇ ಆರಾಮಾಗಿ ಹೋಗುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಆರ್ದ್ರಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ಸಿದ್ಧಿ, ಕರಣ : ತೈತಿಲ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 47 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:22 – 13:58, ಯಮಗಂಡ ಕಾಲ 07:33 – 09:09, ಗುಳಿಕ ಕಾಲ 10:46 – 12:22

-ಲೋಹಿತ್ ಹೆಬ್ಬಾರ್ – 8762924271 (what’s app only)

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು