AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಗುರುವಾರದ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಗುರುವಾರ, ಜುಲೈ 22, 2021 ಭವಿಷ್ಯ.

Horoscope Today - ದಿನ ಭವಿಷ್ಯ;  ಗುರುವಾರದ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?
ದಿನ ಭವಿಷ್ಯ; ಗುರುವಾರದ ಭವಿಷ್ಯದಲ್ಲಿ ಯಾರ್ಯಾರಿಗೆ ಒಳಿತು?
TV9 Web
| Edited By: |

Updated on: Jul 22, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ತ್ರಯೋದಶಿ ತಿಥಿ, ಗುರುವಾರ, ಜುಲೈ 22, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1:59ರಿಂದ ಇಂದು ಸಂಜೆ 3:36 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.52. ಸೂರ್ಯಾಸ್ತ: ಸಂಜೆ 6.52.

ತಾ.21-07-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ.ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 6

ವೃಷಭ: ಆತ್ಮೀಯರೊಂದಿಗೆ ಮನಸ್ತಾಪ ವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 1

ಮಿಥುನ: ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ. ಶುಭ ಸಂಖ್ಯೆ: 9

ಕರ್ಕ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭ ಸಂಖ್ಯೆ: 4

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಸಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 8

ಕನ್ಯಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ತುಲಾ: ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು. ಶುಭ ಸಂಖ್ಯೆ: 2

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭ ಸಂಖ್ಯೆ: 1

ಧನು: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 7

ಮಕರ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 6

ಕುಂಭ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು. ಶುಭ ಸಂಖ್ಯೆ: 5

ಮೀನ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!