Daily Horoscope July 16 2024: ಮೇಷರಾಶಿಯವರಿಗೆ ಉದ್ಯಮದಲ್ಲಿ ಹಿನ್ನಡೆ; ವ್ಯಾಪಾರದಲ್ಲಿ ಅಜ್ಞಾನದಿಂದ ನಷ್ಟ; ದಿನ ಭವಿಷ್ಯ ಇಲ್ಲಿದೆ

ಜ್ಯೋತಿಷ್ಯವನ್ನು ಅಥವಾ ನಿತ್ಯ ಭವಿಷ್ಯವನ್ನು (Horoscope) ಕೆಲ ಜನರು ನಂಬುತ್ತಾರೆ. ಮತ್ತೆ ಕೆಲ ಜನರು ನಂಬುವುದಿಲ್ಲ. ಆದಾಗ್ಯೂ ಮತ್ತೆ ಕೆಲ ಜನರು ಹವ್ಯಾಸಕ್ಕಾಗಿ ಅಥವಾ ಇಂದು ಅವರ ಜೀವನದಲ್ಲಿ ಏನು ಘಟಿಸಲಿದೆ ಎಂಬುವುದನ್ನು ತಿಳಿಯಲು ನಿತ್ಯ ತಮ್ಮ ರಾಶಿ ಭವಿಷ್ಯವನ್ನು ನೋಡುತ್ತಾರೆ. ವ್ಯಕ್ತಿಯ ಜನನದ ಸಮಯವನ್ನು ಅವರ ವ್ಯಕ್ತಿತ್ವವನ್ನು, ಸಂಬಂಧಗಳು ಅವರ ಭವಿಷ್ಯದ ಮೇಲೆ ಪ್ರಭಾವ ಬೀರಬಹುದು ಎಂಬ ಪರಿಕಲ್ಪನೆ ಇದೆ. ಇನ್ನು ಜುಲೈ  16ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ,

Daily Horoscope July 16 2024: ಮೇಷರಾಶಿಯವರಿಗೆ ಉದ್ಯಮದಲ್ಲಿ ಹಿನ್ನಡೆ; ವ್ಯಾಪಾರದಲ್ಲಿ ಅಜ್ಞಾನದಿಂದ ನಷ್ಟ; ದಿನ ಭವಿಷ್ಯ ಇಲ್ಲಿದೆ
ನಿತ್ಯ ಭವಿಷ್ಯ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 15, 2024 | 11:07 PM

ಜ್ಯೋತಿಷ್ಯವು ಪ್ರಪಂಚದಾದ್ಯಂತದ ಸಂಸ್ಕೃತಿಗಳಲ್ಲಿ ಶತಮಾನಗಳಿಂದಲೂ ಕಾಣಬಹುದು. ಕೆಲವರು ಜ್ಯೋತಿಷ್ಯವನ್ನು ಆತ್ಮಾವಲೋಕನ ಮತ್ತು ತಿಳುವಳಿಕೆಗೆ ಉಪಯುಕ್ತ ಸಾಧನವೆಂದು ಪರಿಗಣಿಸಿದರೆ, ಮತ್ತೆ ಕೆಲವರು ಎಲ್ಲರಂತೆ ತಮ್ಮ ರಾಶಿ ಭವಿಷ್ಯವನ್ನು ನೋಡುತ್ತಾರೆ. ಮಂಗಳವಾರದ (ಜುಲೈ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ ಎಂದು ಇಲ್ಲಿ ತಿಳಿಯಿರಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸಿದ್ಧ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 15:52 ರಿಂದ 17:28ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:26 ರಿಂದ 11:02ರ ವರೆಗೆ, ಗುಳಿಕ ಕಾಲ 12:39ರಿಂದ 14:15ರ ವರೆಗೆ.

ಮೇಷ ರಾಶಿ :ಇಂದು ಒಂದೇ ಕಾರ್ಯವನ್ನು ಮತ್ತೆ ಮಾಡಬೇಕಾಗುವುದು. ಮಧ್ಯ ಸಣ್ಣ ವಿರಾಮವನ್ನು ನೀವು ಬಯಸುವಿರಿ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಏಕತಾನತೆಯನ್ನು ತಪ್ಪಿಸಲು ಹೊಸತನ್ನು ರೂಪಿಸಿಕೊಳ್ಳಲು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ನಿದ್ರಾಭಂಗವಾಗಿ ಕಾರ್ಯದಲ್ಲಿ ಅನಾಸಕ್ತಿ ಕಾಣಿಸುವುದು. ದೀರ್ಘಾವಧಿಯ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಿರಿ. ಅತಿಯಾದ ಆಸೆಯಿಂದ ನೀವು ವ್ಯಾಪಾರದಲ್ಲಿ ಅಪಾಯವನ್ನು ತಂದುಕೊಳ್ಳುವಿರಿ. ಮಕ್ಕಳು ಸ್ವತಂತ್ರವಾಗಿ ದುಡಿಯಲು ಉಪಯೋಗವಾಗುವಂತೆ ಮಾಡುವಿರಿ. ಎಲ್ಲ ಸಂದರ್ಭದಲ್ಲಿ ಒಂದೇ ರೀತಿಯ ಭಾವನೆ ಬೇಡ. ಸಂಗಾತಿಯ ವಿಚಾರವನ್ನು ಇನ್ನೊಬ್ಬರ ಬಳಿ ಹೇಳಿ ಸಮಾಧಾನ ಪಡುವಿರಿ. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ. ಅವಶ್ಯಕತೆ ಇರುವಷ್ಟನ್ನು ಮಾತ್ರ ಖರೀದಿಸಿ. ಇನ್ನೊಬ್ಬರನ್ನು ನೋಡುವುದು ಬೇಡ.

ವೃಷಭ ರಾಶಿ :ನಿಮ್ಮ ನಿಶ್ಚಿತವಾದ ಯೋಜನೆಯನ್ನು ಬದಲಾಯಿಸುವಿರಿ. ಉದ್ಯಮಿಗಳಿಗೆ ಮಾರುಕಟ್ಟೆ ಸ್ಪರ್ಧೆಯು ಹೆಚ್ಚಿರಬಹುದು. ಉದ್ವಿಗ್ನವು ಉಂಟಾಗ ಸಂದರ್ಭಗಳಲ್ಲಿ, ನಿಮ್ಮ ಕೋಪವನ್ನು ನಿಯಂತ್ರಿಸಿ. ಅವಿವಾಹಿತರು ಸರಿಯಾದ ಸಂಗಾತಿಯನ್ನು ಕಂಡುಕೊಂಡಂತೆ ಕಾಣಿಸಬಹುದು. ಕೃಷಿಯಲ್ಲಿ ಏನಾದರೂ ಮಾಡುವ ಕನಸು ಕಂಡು ಕಾರ್ಯಪ್ರವೃತ್ತರಾಗುವಿರಿ. ದಾಂಪತ್ಯದಲ್ಲಿ ಪರಸ್ಪರ ತಪ್ಪುಗ್ರಹಿಕೆಗಳನ್ನು ಹೊಂದಿರುವ ಸಾಧ್ಯತೆ ಇದೆ. ನವವಿವಾಹಿತರು ಸಂತಸದ ಸುದ್ದಿಯನ್ನು ಕೊಡುವರು. ನೀವು ಕೆಲಸದಲ್ಲಿ ಬದಲಾವಣೆಗಳನ್ನು ಗಮನಿಸಿ. ಇದು ನಿಮಗೆ ಅನುಕೂಲಕರ ಪರಿಣಾಮಗಳನ್ನು ಉಂಟುಮಾಡಬಹುದು. ಪ್ರೀತಿಯ ಸುಖದಿಂದ ವಂಚಿತರಾಗುವಿರಿ. ವಿದೇಶಪ್ರಯಾಣದ ಗುಂಗಿನಿಂದ ಹೊರ ಬನ್ನಿ. ನಿಮ್ಮ ಮೇಲೆ ವಿರೋಧಿಗಳ ಆಕ್ರಮಣವು ಆಗಬಹುದು. ಬೇಡದಿದ್ದರೂ ಸಹಾಯವು ನಿಮ್ಮ ಪಾಲಿಗೆ ಬರುವುದು.

ಮಿಥುನ ರಾಶಿ :ನಿಮ್ಮ ಬಗ್ಗೆ ಅಪರಿಚಿತರು ಪ್ರೀತಿ ತೋರಿಸಿದರೆ ಮುಜುಗರವಾಗುವುದು. ಯಾರನ್ನೇ ಆದರೂ ಅವರನ್ನು ಒಂದು ಹಂತದವರಗೆ ಮಾತ್ರ ಒಳಗೆ ಕರೆಯುವುದು ಸೂಕ್ತ. ನಿಮ್ಮ ಪ್ರಣಯ ಜೀವನವು ಉತ್ತಮವಾಗಿ ಬದಲಾಗಬಹುದು. ನಿಮ್ಮ ಪ್ರಣಯವು ಸಂಗಾತಿಯ ಜೊತೆ ಅಭಿವ್ಯಕ್ತವಾಗುವ ಸಾಧ್ಯತೆ ಇದೆ. ಸುಮ್ಮನೇ ಮಾತನಾಡುವ ಚಪಲವು ಅಧಿಕವಾಗುವುದು. ನಿಮ್ಮ ಸಾಮರ್ಥ್ಯಗಳನ್ನು ಸುಧಾರಿಸಲು ಇದು ಒಂದು ಅವಕಾಶವಾಗಿರುತ್ತದೆ. ಯಾರಾದರೂ ನಿಮಗೆ ಒಳ್ಳೆಯ ಹೊಸ ಮಾರ್ಗದರ್ಶನವನ್ನು ನೀಡಬಹುದು. ನಿಮ್ಮ ಕೌಶಲ್ಯದಿಂದಾಗಿ ನೀವು ಇಂದಿನ ದೊಡ್ಡ ಸಭೆಯನ್ನು ಉತ್ತಮವಾಗಿ ನಿರ್ವಹಿಸಬಹುದು. ವಿದೇಶಿ ಕಂಪೆನಿ ಉದ್ಯೋಗವನ್ನು ಬಯಸುವಿರಿ. ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಸರಿಯಾಗದು. ಹೊಂದಾಣಿಕೆಯ ಕಡೆ ನಿಮ್ಮ ಗಮನವಿರಲಿ. ಪ್ರತ್ಯಕ್ಷವಾಗಿ ಕಾಣುವ ವ್ಯಕ್ತಿಗಳಿಗೆ ನಿಮ್ಮ ಬಗೆಗಿನ ದೃಷ್ಟಿಕೋನವೇ ಬದಲಾಗುವುದು.

ಕಟಕ ರಾಶಿ :ಇಂದು ನಿಮ್ಮ ಪ್ರೇಮವು ಸ್ನೇಹಿತರ ಮೂಲಕ ಸಫಲವಾಗುವುದು. ಕೆಲಸದ ಸ್ಥಳದಲ್ಲಿ ಹಿರಿಯರು ಮಾರ್ಗದರ್ಶನ ಪಡೆಯಿರಿ. ಸಹೋದರರ ಸಹಾಯದಿಂದ ನಿಮ್ಮ ವೃತ್ತಿಪರ ಯಶಸ್ಸಿಗೆ ಕಾರಣವಾಗುವುದು. ಹಠದಿಂದ ಯಾವ ಕಾರ್ಯವನ್ನೂ ಮಾಡಲು ಹೋಗವುದು ಬೇಡ. ತಪ್ಪಾದರೆ ಎಲ್ಲರೂ ಆಡಿಕೊಳ್ಳುವರು. ವ್ಯಾಪಾರದ ಉದ್ದೇಶಗಳಿಗಾಗಿ ವಿದೇಶ ಪ್ರವಾಸವು ಈ ದಿನ ಅನುಕೂಲಕರ. ನಿಮ್ಮ ಸಂಗಾತಿಯ ಜೊತೆ ಭಿನ್ನಾಭಿಪ್ರಾಯ, ಕೋಪ, ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗಬಹುದು. ನಿಮ್ಮ ಪಾಲುದಾರಿಕೆಯಲ್ಲಿ ನಿಮ್ಮ ಗಮನ ಅಗತ್ಯವಾಗಿ ಬೇಕು. ಇಲ್ಲವಾದರೆ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ನಿಮ್ಮ ವೃತ್ತಿ, ಹಣಕಾಸು ಮತ್ತು ಸಂಬಂಧಕ್ಕೆ ಬಂದಾಗ ವಿಷಯಗಳನ್ನು ಹೆಚ್ಚು ಯೋಚಿಸಬೇಡಿ. ಚಿತ್ತವೃತ್ತಿಗಳು ನಿಮ್ಮನ್ನು ಸುಮ್ಮನೆ ಇರಲು ಬಿಡದು. ಇಂದು ತಲ್ಲೀನರಾಗಿ ಎಲ್ಲ ಕಾರ್ಯವನ್ನು ಮಾಡುವಿರಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು.

ಸಿಂಹ ರಾಶಿ :ಇಂದು ನೀವು ನಿಶ್ಚಿಂತೆಯಿಂದ ವೃತ್ತಿಯಲ್ಲಿ ತೊಡಗಿಕೊಳ್ಳುವಿರಿ. ಕುಟುಂಬದಲ್ಲಿ ನಡೆಯಲಿರುವ ವಿವಾಹ ಕಾರ್ಯದ ಓಡಾಟವಿರುವುದು. ಇಂದು ನೀವು ಉತ್ತಮ ಆರ್ಥಿಕ ಪ್ರಗತಿಯನ್ನು ಹೊಂದಿದ್ದು ನೀವು ಹೇಳಿದ ರೀತಿಯಲ್ಲಿಯೇ ಎಲ್ಲವೂ ನಡೆಯುವುದು. ನಿಮ್ಮ ಪ್ರಯತ್ನಗಳು ನಿಮ್ಮ ಆತ್ಮ ವಿಶ್ವಾಸವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ. ಕೃತಜ್ಞತೆಯು ನಿಮ್ಮ ಸ್ವಭಾವವನ್ನು ಹೇಳುತ್ತದೆ. ಸಂಯಮವನ್ನು ಕಾಪಾಡಿಕೊಳ್ಳಿ. ಒತ್ತಡವಿಲ್ಲದೆ, ನಿಮ್ಮ ಜೀವನವನ್ನು ಆನಂದಿಸಲು ಪ್ರಯತ್ನಿಸಿ. ನಿಮ್ಮ ಆರೋಗ್ಯದ ವಿಷಯದಲ್ಲಿ ಅನುಕೂಲಕರವಾಗಿ ಇರಲಿದೆ. ವೇಗವಾಗಿ ಹಣವನ್ನು ಗಳಿಸುವ ವಿಧಾನವನ್ನು ನೀವು ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ. ಔಷಧದ ವ್ಯಾಪಾರದಿಂದ ನಿಮಗೆ ಅಧಿಕ ಲಾಭವಾಗಬಹುದು. ಧೈರ್ಯದಿಂದ ಮುನ್ನಡೆಯುವ ಇಚ್ಛಾಶಕ್ತಿಯನ್ನು ರೂಢಿಸಿಕೊಳ್ಳಿ. ಸಾಮಾಜಿಕವಾಗಿ ಏನನ್ನಾದರೂ ಮಾಡಬೇಕು ಎಂದೆನಿಸಬಹುದು. ಸ್ವಂತ ಉದ್ಯೋಗವನ್ನು ನಡೆಸಲು ಚಿಂತಿಸುವುದು ಉತ್ತಮ.

ಕನ್ಯಾ ರಾಶಿ :ನೀವು ಇಂದು ಆಪ್ತರನ್ನೇ ದ್ವೇಷಿಸುವಿರಿ. ಹಣದ ತೊಂದರೆಗೆ ಅನ್ಯರ ಸಹಾಯವನ್ನು ಕೇಳಬೇಕಾಗುವುದು. ದಿನದ ಆರಂಭದಲ್ಲಿ ಗಮನಾರ್ಹ ಹಣಕಾಸಿನ ಸಮಸ್ಯೆಗಳಿಂದ ನೀವು ತೊಂದರೆಗೊಳಗಾಗಬಹುದು. ಅಪರಿಚಿರ ಒಡನಾಟವು ಹೊಸ ದಿಕ್ಕಿನ ಕಡೆ ಕರೆದೊಯ್ಯುವುದು. ನಿಮ್ಮ ವೃತ್ತಿಜೀವನವು ಉತ್ತಮವಾದ ಆರಂಭವನ್ನು ಪಡೆಯಬಹುದು. ಹೊಸ ಕೆಲಸ, ಕಾರ್ಯಗಳಲ್ಲಿ ಉತ್ಸಾಹವಿರಲಿದೆ. ಇಂದು ಇರುವ ಲವಲವಿಕೆಯು ಮತ್ತು ಶಕ್ತಿಯುತವಾಗಿ ಇರಬಹುದು. ನಿಮ್ಮ ಶೈಕ್ಷಣಿಕ ಪ್ರಗತಿಯು ಹೆಚ್ವಲಿದೆ. ಕಾರ್ಯಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪ್ರಸ್ತುತಿ ಪಡಿಸಿ. ಇದರಿಂದ ಯೋಜನೆ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗುವುದು.‌ ಬೇಕಾದಷ್ಟು ಸಂಪತ್ತಿದ್ದರೂ ಅದನ್ನು ಖರ್ಚು ಮಾಡುವ ಮನಸ್ಸು ಬಾರದು. ಒಮ್ಮೆಲೆ ಕಷ್ಟಗಳು ಬರುವುದರಿಂದ ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ. ಉದ್ವೇಗದಿಂದ ಸಿಟ್ಟುಗೊಂಡು ಅಪ್ರಿಯರಾಗುವಿರಿ. ಸಣ್ಣ ಉದ್ಯೋಗವಾದರೂ ಕ್ರಮಬದ್ಧವಾಗಿರಲಿ.

ತುಲಾ ರಾಶಿ :ಇಂದು ಅವಸರದಲ್ಲಿ ಉದ್ಯೋಗದ ತೀರ್ಮಾನವನ್ನು ನೀವು ತೆಗೆದುಕೊಳ್ಳಬೇಡ. ವ್ಯಾಪಾರದಲ್ಲಿ ಅಜ್ಞಾನದಿಂದ ನಷ್ಟವಾಗುತ್ತದೆ. ಮಕ್ಕಳಿಂದ ನೆಮ್ಮದಿಯು ನಿಮಗೆ ಸಿಗುತ್ತದೆ. ಇಂದು ವ್ಯಾಪಾರಸ್ಥರಿಗೆ ಸ್ವಲ್ಪ ನಷ್ಟವಾಗುವ ಸಾಧ್ಯತೆ ಇದೆ. ನಿಮ್ಮ ಸುಧಾರಿತ ಆರ್ಥಿಕ ಸ್ಥಿತಿಯು ನಿಮಗೆ ಹೆಚ್ಚು ಸುಖವನ್ನು ಉಂಟುಮಾಡುತ್ತದೆ. ನಿಮ್ಮ ಪ್ರೀತಿಯ ಜೀವನಕ್ಕೆ ಸಂಬಂಧಿಸಿದಂತೆ ದಿನದ ಆರಂಭದಲ್ಲಿ ನೀವು ಸ್ವಲ್ಪ ಖಿನ್ನತೆಗೆ ಒಳಗಾಗುವ ಸಾಧ್ಯತೆಗಳು ಇರುತ್ತವೆ. ಇಂದು ನೀವು ಹೆಚ್ಚು ವಿಶ್ರಾಂತಿ ಅನುಭವಿಸಲು ಇಚ್ಛಿಸುವಿರಿ. ಇದು ನಿಮ್ಮನ್ನು ನಕಾರಾತ್ಮಕ ಭಾವನೆಗಳಿಂದ ಹೊರಬರಲು ಸಹಾಯ ಮಾಡುತ್ತದೆ. ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಲೂಬಹುದು. ಉದ್ಯೋಗದ ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗವಾಗುವಂತೆ ನೋಡಿ.

ವೃಶ್ಚಿಕ ರಾಶಿ :ಇಂದು ಸ್ನೇಹಿತರು ನಿಮಗೆ ಬೇಕಾದ ಸಲಹೆಯನ್ನು ಪಡೆಯುವಿರಿ. ಅನಿರೀಕ್ಷಿತವಾಗಿ ಬಂದ ಜವಾಬ್ದಾರಿಗಳು ನೀವು ನಿರ್ವಹಿಸಬೇಕಾಗುವುದು. ಆದಾಯವನ್ನು ಉತ್ತಮ ಮಾಡಿಕೊಳ್ಳುವಿರಿ. ಒತ್ತಡದ ತರುವ ಕೆಲಸದಿಂದ ವಿರಾಮವನ್ನು ಪಡೆಯಬೇಕಾದೀತು. ಇತ್ತೀಚಿನ ಹೂಡಿಕೆಯ ಜೊತೆ ಹಳೆಯ ಹೂಡಿಕೆಯ ಲಾಭವನ್ನು ಪಡೆಯುವಿರಿ. ವಿದೇಶದ ಉದ್ಯೋಗದಲ್ಲಿ ನಿಮಗೆ ಕಷ್ಟ ಬರುವ ಸಾಧ್ಯತೆ ಇಧೆ. ಹೊಸದಾಗಿ ಕೆಲಸಕ್ಕೆ ಸೇರಿದವರು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವನ್ನು ಅನುಭವಿಸಬೇಕಾದೀತು. ದೇಹಾಯಸದಿಂದ ಅನಾರೋಗ್ಯವು ಉಂಟಾಗುವುದು. ನಿಮ್ಮ ಕೆಲಸದ ಹೊರೆ, ಒತ್ತಡವು ನಿಮ್ಮನ್ನು ಬಹಳಷ್ಟು ಹಿಂಸೆ ಮಾಡಬಹುದು. ನಿಮ್ಮ ವೃತ್ತಿಪರ ಜೀವನದಲ್ಲಿ ಅದೃಷ್ಟವು ನಿಮ್ಮ ಪರವಾಗಿರಬಹುದು. ಸೃಜನಾತ್ಮಕವಾಗಿ ಏನನ್ನಾದರೂ ಮಾಡಲು ಹೋಗಿ ಎಡವುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದಾಯ ಸಿಗುವುದು.

ಧನು ರಾಶಿ :ಇಂದು ಸಿಟ್ಟಿನ ಭರದಲ್ಲಿ ನೀವು ವಿವೇಚನೆಯನ್ನು ಕಳೆದುಕೊಳ್ಳುವಿರಿ. ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ನಿಮ್ಮ ಅಜ್ಞಾನದಿಂದ ನಷ್ಟವಾಗದಂತೆ ಎಚ್ಚರ ವಹಿಸಿ. ಹಿಂದಿನ ಕೆಲವು ಹಣಕಾಸಿನ ಸಮಸ್ಯೆಗಳು ಮತ್ತೆ ಕಾಣಿಸಿಕೊಳ್ಳಬಹುದು ಮತ್ತು ನಿಮ್ಮ ಗಮನವನ್ನು ಕೋರಬಹುದು. ನಿಮ್ಮ ಸಾಧನೆಯು ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ನಿಮ್ಮ ಸಾಧನೆಗೆ ಇತರರು ಮೆಚ್ಚುಗೆ ವ್ಯಕ್ತಪಡಿಸುವರು. ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ವಿವೇಕದ ಅಗತ್ಯವಿದೆ. ನಿಮ್ಮ ಮನಃಸ್ಥಿತಿಯನ್ನು ಬದಲಾಯಿಸುವ ಅತ್ಯುತ್ತಮ ತಂತ್ರವೆಂದರೆ ನಿಮ್ಮ ಶಕ್ತಿಯನ್ನು ನೀವು ಗುರುತಿಸಿಕೊಳ್ಳುವುದು. ನಿಮ್ಮ ಜೀವನವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವಿರಿ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಕಳೆದುಕೊಂಡಿದ್ದನ್ನು ಹೇಗಾದರೂ ಮಾಡಿ ಪಡೆದುಕೊಳ್ಳುವಿರಿ. ಸಭ್ಯರಂತೆ ನೀವು ಕಾಣಿಸುವಿರಿ.

ಮಕರ ರಾಶಿ :ವ್ಯವಹಾರದಲ್ಲಿ ಮಧ್ಯವರ್ತಿಗಳಿಂದ ಕೆಲವು ತೊಂದರೆಗಳು ಎದುರಾಗುವುದು. ಕುಟುಂಬದವರ ಅನಾರೋಗ್ಯದ ಕಾಳಜಿ‌ ಮಾಡಬೇಕಾಗುವುದು. ನಿಮ್ಮ ಕೆಲಸ ಮತ್ತು ವೈಯಕ್ತಿಕ ಜೀವನದಲ್ಲಿ ಏರಿಳಿತದ ಜೊತೆ, ಅಸ್ತವ್ಯಸ್ತವಾಗಬಹುದು. ಭವಿಷ್ಯದ ಬಗ್ಗೆ ಈ ದಿನವನ್ನು ಆನಂದಿಸಲು, ನೀವು ಮೊದಲು ಜವಾಬ್ದಾರಿಗಳನ್ನು ಪೂರೈಸುವತ್ತ ಗಮನ ಹರಿಸಬೇಕು. ಜೊತೆಗೆ, ವ್ಯಕ್ತಿಗತ ಸಂಬಂಧಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ತಾಳ್ಮೆಯ ಬಗ್ಗೆ ನಿಮಗೆ ನಿರಂತರ ಉಪದೇಶ ಬೇಕಾಗುವುದು. ಆರ್ಥಿಕವಾಗಿ ಸಂಬಂಧಿಸಿದಂತೆ ನಿರೀಕ್ಷಿತ ಲಾಭ ಮತ್ತು ಉಳಿತಾಯವನ್ನು ಕಾಣಬಹುದು. ಕೆಲವು ಸವಾಲುಗಳು ಉದ್ಭವಿಸಬಹುದು. ನಿಮ್ಮ ವಿವಾಹವು ಕಾನೂನು ವಿವಾದದ ವಿಷಯವಾಗಿದ್ದರೆ, ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಪ್ರಯೋಗ ವಿಭಾಗದಲ್ಲಿ ಕೆಲಸ ಮಾಡುವರು. ನೀವು ಏನು ಎಂದು ನಿಮಗೆ ಗೊತ್ತಿರಲಿ. ಎಲ್ಲವೂ ನಿಮ್ಮಿಂದ ಆದರೂ ಹೇಳಿಕೊಳ್ಳುವಾಗ ಗೌಣವಾಗಿರಲಿದೆ.

ಕುಂಭ ರಾಶಿ :ಹೂಡಿಕೆಯ ಕಾರಣದಿಂದ‌ ನಿಮ್ಮ ಖರ್ಚನ್ನು ಆದಾಯವಾಗಿ ಪರಿವರ್ತಿಸಲು ಮಾಡಿಕೊಳ್ಳುವಿರಿ. ಹಳೆಯ ರೋಗವು‌ ಮರುಕಳಿಸಬಹುದು. ನಿಮ್ಮ ಹಾಗೂ ಸಂಗಾತಿಯ ನಡುವೆ ಉತ್ತಮ ಸಂಬಂಧಗಳು ಇರಲಿದೆ. ನಿಮ್ಮ ಸಂವಹನಕ್ಕೆ ವಿವಿಧ ಮಾರ್ಗಗಳನ್ನು ಹುಡುಕುವಿರಿ. ಒಳ್ಳೆಯ ಸಮಯವನ್ನು ಒಟ್ಟಿಗೆ ಕಳೆಯಿರಿ ಮತ್ತು ಪರಸ್ಪರರ ಭಾವನೆಗಳನ್ನು ಗ್ರಹಿಸಲು ಪ್ರಯತ್ನಿಸಿ. ಶೈಕ್ಷಣಿಕ ಉದ್ದೇಶಗಳನ್ನು ಸಾಧಿಸಲು ವಿದ್ಯಾರ್ಥಿಗಳು ಸಾಕಷ್ಟು ಪ್ರಯತ್ನಿಸುವರು. ನೀವು ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವಿರಿ. ಉದ್ಯಮದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ವ್ಯಾಪಾರದ ವಿಸ್ತರಣೆಯನ್ನು ಮಾಡುವಿರಿ. ನಿಮ್ಮ ಪ್ರಯತ್ನಗಳಿಂದ ಉತ್ತಮ ಫಲಿತಾಂಶವನ್ನು ಕಾರಣವಾಗಬಹುದು. ದುಸ್ಸಾಹಸಕ್ಕೆ ಹೋಗಿ ಕೈ ಸುಟ್ಟುಕೊಳ್ಳುವಿರಿ. ತಾಯಿಯ ಕಡೆಯಿಂದ ನಿಮಗೆ ಆರ್ಥಿಕ ಸಹಾಯವು ಸಿಗಬಹುದು. ಕಳೆದುಕೊಂಡು ವಸ್ತುವಿನ ಮೌಲ್ಯವು ಇಂದು ಗೊತ್ತಾಗುವುದು.

ಮೀನ ರಾಶಿ :ನಿಮಗೆ ವ್ಯವಹಾರವು ಅಂದುಕೊಂಡಷ್ಟು ಸಾಧಿಸಲಾಗದೇ ಇಂದು ಬೇಸರವಾಗಬಹುದು. ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ನೀವು ಸರಿಯಾದ ವಿಧಾನವನ್ನು ಆಯ್ಕೆ ಮಾಡುವಿರಿ. ಉಜ್ವಲ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು, ನೀವು ಉಪಕ್ರಮವನ್ನು ತೆಗೆದುಕೊಳ್ಳಬಹುದು. ದಿನದ ಕೊನೆಯಲ್ಲಿ ಅನುಕೂಲಕರ ವಾತಾವರಣದಿಂದ ನೀವು ಆರ್ಥಿಕವಾಗಿ ಲಾಭ ಪಡೆಯಬಹುದು. ಶಿಕ್ಷಣದಿಂದ ನೀವು ಯಶಸ್ಸು ಗಳಿಸುವಿರಿ. ನಿಮ್ಮ ಸಂಗಾತಿಗೆ ಸ್ವಲ್ಪ ಹೆಚ್ಚಿನ ಗಮನ, ಪ್ರೀತಿ ನೀಡಿದರೆ ನಿಮ್ಮ ಪ್ರೀತಿಯ ಜೀವನವು ಉತ್ತಮವಾಗಿರುವುದು. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ಎಲ್ಲ ಕಾರ್ಯದಲ್ಲಿಯೂ ಶ್ರದ್ಧೆಯು ಕಡಿಮೆಯಾಗುವುದು. ಮಂದಗತಿಯಲ್ಲಿ ಸಾಗುವ ಕೆಲಸಗಳಿಗೆ ವೇಗವನ್ನು ಕೊಡುವಿರಿ. ನಿಮಗೆ ಆತ್ಮತೃಪ್ತಿಯು ಇರುವುದು. ವಾಹನ ಚಲಾಯಿಸುವಾಗ ಎಚ್ಚರ ಇರಲಿ. ನಿಮ್ಮನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವಿರಿ. ಕಾನೂನಾತ್ಮಕ ಹೋರಾಟಕ್ಕೆ ನಿಮಗೆ ಯಾರಿಂದಲಾದರೂ ಬೆಂಬಲವು ಇರುವುದು.

-ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೈಸೂರಿಗೆ ಆಗಮಿಸಿದ ಗಜಪಡೆಯ ಮೊದಲ ಬ್ಯಾಚ್, ಗಮನ ಸೆಳೆಯುತ್ತಿರುವ ಅಭಿಮನ್ಯು
ಮೈಸೂರಿಗೆ ಆಗಮಿಸಿದ ಗಜಪಡೆಯ ಮೊದಲ ಬ್ಯಾಚ್, ಗಮನ ಸೆಳೆಯುತ್ತಿರುವ ಅಭಿಮನ್ಯು
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಕುಮಾರಸ್ವಾಮಿಗೆ ಹೆದರಿಕೆ; ಹಾಗಾಗೇ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ: ಸಿಎಂ
ಕುಮಾರಸ್ವಾಮಿಗೆ ಹೆದರಿಕೆ; ಹಾಗಾಗೇ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ: ಸಿಎಂ