Horoscope: ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಜೂ.30 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 30, 2024 | 12:37 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ (ಜೂನ್ 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಶೋಭನ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 05:28 ರಿಂದ 07:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:13ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ ಸಂಜೆ 05:28ರ ವರೆಗೆ.

ಸಿಂಹ ರಾಶಿ: ಇಂದು ನಿಮ್ಮ ಮನೆಗೆ ಅನಿರೀಕ್ಷಿತವಾಗಿ ಅತಿಥಿಗಳ ಆಗಮನವಾಗಲಿದೆ. ನಿಮ್ಮ ವಿವಾಹದ ಪ್ರಸ್ತಾಪವು ನಿಮಗೆ ಖುಷಿ ಕೊಡುವುದು. ಇಂದು ಏಕಾಗ್ರತೆಯ ಕೊರತೆ ಕಾಣಿಸಲಿದೆ. ವಿವಾಹಕ್ಕೆ ಸಂಬಂಧಿಸಿದಂತೆ ಬೇಸರವಾಗಿ ಮನೆಯಲ್ಲಿ ಕಲಹವು ಆಗಬಹುದು. ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಬಹುದು. ನಿಮಗೆ ಸಂಬಂಧಿಸಿದ ವಿಚಾರಗಳಿಗೆ ಮಾತ್ರ ನಿಮ್ಮ ವ್ಯವಹಾರಗಳಿರಲಿ. ಹತಾಶೆಯ ಮನೋಭಾವ ಬೇಡ. ಇಲ್ಲವಾದರೆ ಅಪಮಾನಕ್ಕೆ ಒಳಗಾಗಬೇಕಾದೀತು. ಬೇಸರದ ಮನಸ್ಸನ್ನು ಮನೆಯವರಿಗೆ ತೋರಿಸಬೇಡಿ. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಯೋಗ್ಯವಾದ ಮಾತುಗಳಿಂದ ಕಾರ್ಯಗಳಲ್ಲಿ ಯಶಸ್ಸು ಲಭಿಸಲಿದೆ. ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಮಿತ್ರರಿಂದ ಆಪತ್ಕಾಲದಲ್ಲಿ ಸಹಕಾರ ಸಿಗಲಿದೆ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು. ಮಾತಿಗೆ ಮರುಳಾಗಿ ನಿಮ್ಮ ಜವಾಬ್ದಾರಿಯನ್ನು ಮರೆಯುವಿರಿ.

ಕನ್ಯಾ ರಾಶಿ: ನಿಮ್ಮ ಮೇಲೆ ಕಳ್ಳತನದ ಮಾತುಗಳು ಕೇಳಿಬರಬಹುದು. ನಿಮ್ಮ ಮೇಲಧಿಕಾರಿಗಳನ್ನು ನಿಮ್ಮ ಕಡೆಗೆ ಇರುವಂತೆ ನೋಡಿಕೊಳ್ಳುವಿರಿ. ಯಾವುದಕ್ಕೂ ಪ್ರಯಾಣದಲ್ಲಿ ಜಾಗರೂಕರಾಗಿ. ನಡೆದಾಡುವಾಗಲೂ ಸುತ್ತ ನೋಡಿಕೊಂಡು ಹೆಜ್ಜೆ ಇಡಿ. ಪ್ರಭಾವೀ ವ್ಯಕ್ತಿಗಳು ನಿಮ್ಮ ಜೊತೆ ಸಲಹೆಗೆ ಬರಬಹುದು. ನಿರಪರಾಧಿಯಾಗಲು ಸಮಯವನ್ನೂ ತೆಗದೆಕೊಳ್ಳಬೇಕಾದೀತು. ಉನ್ನತ ಹುದ್ದೆಗೆ ಹೋಗುವ ಅವಕಾಶವಿರಬಹುದು. ತಾಳ್ಮೆಯಿಂದ ಕಾರ್ಯದಲ್ಲಿ ತೊಡಗಿದರೆ ಕೆಲಸವು ಮುಕ್ತಾಯವಾದಂತೆ. ಇಂದು ನಿಮಗೆ ಜನರಿಂದ ಪ್ರಶಂಸೆ ಸಿಗಬಹುದು. ವಸ್ತ್ರಗಳ ಖರೀದಿಯಲ್ಲಿ ನೀವು ಮಗ್ನರಾಗುವಿರಿ. ನಿಮ್ಮ ಸ್ಥಾನವನ್ನು ಕಳೆದುಕೊಳ್ಳುವುದು ಬೇಡ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡಿ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು. ಯಾರನ್ನೋ ಹೊಗಳಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ.

ತುಲಾ ರಾಶಿ: ನೀವು ಪಾಲುದಾರಿಕೆಯನ್ನು ಬಿಡುವ ಬಗ್ಗೆ ಯೋಚಿಸುವಿರಿ. ನಿಮ್ಮೊಳಗೆ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಹೊಸ ಕೆಲಸದಲ್ಲಿ ಗೊಂದಲಗಳು ಇರಬಹುದು. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಕಾರ್ಯಗಳನ್ನು ಹಿಂಜರಿಕೆ ಇಲ್ಲದೇ ಮಾಡುವಿರಿ. ಪ್ರದರ್ಶನ. ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಪಡೆಯಿರಿ. ದೂರದ ಮಿತ್ರರು ನಿಮಗೆ ಅಗತ್ಯವಿರುವ ಸಹಕಾರವನ್ನು ನೀಡುವರು. ಶ್ರಮದ ಕೆಲಸವು ಆಯಾಸವನ್ನು ತರಲಿದೆ‌. ಸಾಧ್ಯವಾದಷ್ಟು ಶಿಸ್ತನ್ನು ಬೆಳೆಸಿಕೊಳ್ಳಿ. ನಿಮಗೆ ಇಷ್ಟವಿಲ್ಲದ ಕೆಲಸವನ್ನು ಮಾಡಬೇಕಾಗಿ ಬರಬಹುದು. ತಪ್ಪಿಸಿಕೊಳ್ಳಲೂ ಕಷ್ಟವಾದೀತು. ಹೆಚ್ಚಿನ ಆದಾಯವು ಅನಿವಾರ್ಯವಾಗಿದ್ದು, ಆದಾಯದ ಮೂಲವನ್ನು ಹುಡುಕುವಿರಿ. ನಿಮ್ಮ ಸ್ವಭಾವವು ಇತರರಿಗೂ ಗೊತ್ತಾದೀತು. ನಿಮ್ಮ ಗೌರವಕ್ಕೆ ತೊಂದರೆಯಾಗುವುದು. ಉದ್ವೇಗದಲ್ಲಿ ಇರುವಂತೆ ಕಾಣಿಸುವುದು. ಆಂತರಿಕ ಕಲಹವು ಬಹಿರಂಗವಾಗಬಹುದು.

ವೃಶ್ಚಿಕ ರಾಶಿ: ಇಂದು ನಿಮ್ಮ ಪರಿಶ್ರಮದ ಬಗ್ಗೆ ಹೆಚ್ಚು ವಿಶ್ವಾಸವಿರಲಿದೆ. ಸ್ವಾವಲಂಬಿಯಾಗಲು ಎಲ್ಲ ರೀತಿಯಿಂದ ಪ್ರಯತ್ನಿಸುವಿರಿ. ಮನೆಯಿಂದ ದೂರವಿರುವವರಿಗೆ ಮನೆಯ ನೆನಪಾಗಲಿದೆ. ನಿಮ್ಮ ಉದ್ದೇಶಗಳನ್ನು ಬಿಟ್ಟುಕೊಡಬೇಡಿ. ಅದಕ್ಕೆ ಅಡ್ಡಗಾಲು ಹಾಕಿಯಾರು. ನೀವು ಏನನ್ನಾದರೂ ಪಡೆಯಲು ಪ್ರಯತ್ನಿಸಲೇ ಬೇಕು. ನಿಂತ ನೀರಾದರೆ ಕ್ರಿಮಿಗಳು ಏಳಬಹುದು. ನಿಮ್ಮ ಮೇಲಧಿಕಾರಿಗಳು ನಿಮಗೆ ಏನನ್ನೋ ಹೇಳಲಿದ್ದಾರೆ ಎಂದು ಅನ್ನಿಸಬಹುದು. ಮಕ್ಕಳ ಜೊತೆ ಕಾಲವನ್ನು ಕಳೆದು ಸಂತೋಷಪಡುವಿರಿ. ಸಮಯವನ್ನು ವ್ಯರ್ಥಮಾಡದೇ ಸದುಪಯೋಗದ ಬಗ್ಗೆ ಗಮನಹರಿಸಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಶಿಸ್ತಿನ ಹಾಗೂ ವೇಗದ ಕೆಲಸವನ್ನು ಕಂಡು ಪ್ರಶಂಸಿಸುವರು. ಅಗ್ಗದ ಬೆಲೆಗೆ ವಸ್ತುವನ್ನು ಕೊಂಡು ಹಾಳು ಮಾಡಿಕೊಳ್ಳುವಿರಿ. ಸಂಶೋಧನೆಗೆ ಬೇಕಾದ ಸಿದ್ಧತೆಯನ್ನು ಮಾಡಿಕೊಳ್ಳುವಿರಿ.

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ