AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ | ತುಲಾ ರಾಶಿಯವರಿಗೆ ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ದ್ವಾದಶಿ, ಶುಕ್ರವಾರ, ಮಾರ್ಚ್ 26, 2021. ಮಖೆ ನಕ್ಷತ್ರ ದಿನ ಭವಿಷ್ಯ.

Horoscope ದಿನ ಭವಿಷ್ಯ | ತುಲಾ ರಾಶಿಯವರಿಗೆ ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Mar 26, 2021 | 6:36 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ, ದ್ವಾದಶಿ, ಶುಕ್ರವಾರ, ಮಾರ್ಚ್ 26, 2021. ಮಖೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10: 49 ಇಂದ ಮಧ್ಯಾಹ್ನ 12 : 20 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.15. ಸೂರ್ಯಾಸ್ತ: ಸಂಜೆ 6.27.

ತಾ.26-03-2021 ರ ಶುಕ್ರವಾರದ ರಾಶಿಭವಿಷ್ಯ ಮೇಷ: ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು. ಶುಭ ಸಂಖ್ಯೆ:6

ವೃಷಭ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು. ಶುಭ ಸಂಖ್ಯೆ: 1

ಮಿಥುನ:ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 3

ಕರ್ಕ: ವ್ಯವಹಾರಿಕ ಸಂಪರ್ಕಗಳು ಹೆಚ್ಚುವವು ಅದರಂತೆ ಧನದ ಮೂಲಗಳೂ ಹೆಚ್ಚುವವು. ಸಾಲ ಮರುಪಾವತಿಯಾಗುವದು. ಮನೆಯಲ್ಲಿ ನೆಮ್ಮದಿ ಇರುವದು. ಅವಿವಾಹಿತರಿಗೆ ಕಂಕಣಬಲ ಕೂಡಿಬರುವದು. ಶುಭ ಸಂಖ್ಯೆ: 4

ಸಿಂಹ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 9

ಕನ್ಯಾ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವದು. ಅಡೆತಡೆಗಳ ನಿವಾರಣೆ ಯಾಗುವದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವದು. ಶುಭ ಸಂಖ್ಯೆ: 5

ತುಲಾ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು. ಶುಭ ಸಂಖ್ಯೆ: 2

ವೃಶ್ಚಿಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 1

ಧನು: ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ. ಶುಭ ಸಂಖ್ಯೆ: 8

ಮಕರ: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 3

ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 7

ಮೀನ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಧ್ಯತೆ ಇದೆ. ಶುಭ ಸಂಖ್ಯೆ: 2

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್