AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇನ್ನೊಬ್ಬರ ಮಾತನ್ನು ನಂಬುವ ಮುಂಚೆ ಯೋಚಿಸಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 8) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇನ್ನೊಬ್ಬರ ಮಾತನ್ನು ನಂಬುವ ಮುಂಚೆ ಯೋಚಿಸಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 08, 2023 | 12:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 8 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ : ರೋಹಿಣೀ, ಮಾಸ : ಜ್ಯೇಷ್ಠ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಚತುರ್ಥೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ : ಬ್ರಹ್ಮ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:08 ರಿಂದ 03:45ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04 ರಿಂದ 07:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:18 ರಿಂದ ಮಧ್ಯಾಹ್ನ 10:55ರ ವರೆಗೆ.

ಧನುಸ್ಸು: ನೀವು ಬದಲಿಸಿಕೊಂಡ ಜೀವನಶೈಲಿಯ ಬಗ್ಗೆ ಕೆಲಸವರು ಆಡಿಕೊಳ್ಳಬಹುದು. ದಾಂಪತ್ಯದಲ್ಲಿ ವಿರಸದ ಮನೋಭಾವವು ಮುಂದುವರಿಯಬಹುದು. ಚಾಡಿಯಿಂದ ಯಾರನ್ನಾದರೂ ಹಾಳು ಮಾಡುವ ಕೆಲಸವು ನಿಮ್ಮಿಂದ ಆದೀತು. ಇಂದು ನೀವು ಶುಭ ವಾರ್ತೆಯನ್ನು ನಿರೀಕ್ಷಿಸಬಹುದು. ಇಂದು ನಿಮ್ಮ ಮನಸ್ಸು ಬಹಳ ಸಂತೋಷದಿಂದ ಇರಲಿದೆ. ಸಹೋದರಿಯು ನಿಮಗೆ ಧನಸಹಾಯವನ್ನು ಮಾಡುವರು. ಆರೋಗ್ಯದ ಸಮಸ್ಯೆಗಳನ್ನು ಸರಿಯಾದ ವೈದ್ಯರ ಮೂಲಕ ಸರಿಮಾಡಿಕೊಳ್ಳುವುದು ಉತ್ತಮ. ಆದರೆ ದುಂದು ವೆಚ್ಚಗಳನ್ನು ಮಾಡಿಕೊಳ್ಳುವುದು ಬೇಡ. ನಿಮ್ಮ ವರ್ತನೆಯು ಬಹಳ ಅಚ್ಚರಿ ಎನಿಸೀತು.

ಮಕರ: ಇನ್ನೊಬ್ಬರ ಮಾತನ್ನು ಪೂರ್ಣವಾಗಿ ನಂಬಿ ನಿಮ್ಮವರನ್ನು ಕಳೆದುಕೊಳ್ಳಲಿದ್ದೀರಿ. ನಿಮಗೆ ಇಂದು ಮಕ್ಕಳ ಕಡೆಯಿಂದ ಸಮಸ್ಯೆಗಳು ಬರುವ ಸಾಧ್ಯತೆ ಇದೆ. ಬೇಸರದಿಂದ ದುಶ್ಚಟಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಸ್ವಾವಲಂಬನೆಯ ಕಡೆಯೇ ನಿಮ್ಮ ಆಲೋಚನೆಗಳು ಇರಲಿವೆ. ನಿಮ್ಮ ಗಮನಸೆಳೆದು ವಂಚಿಸುವ ಕೆಲಸವು ನಡೆಯಬಹುದು. ಜಾಗರೂಕತೆಯಿಂದ ಇರಿ. ಸಣ್ಣ ಆದಾಯವನ್ನು ನೀವು ಇಂದು ಪಡೆಯಬಹುದು. ಪ್ರವಾಸ ಮಾಡುವ ಮನಸ್ಸಾಗಲಿದೆ. ಲಾಭವಿದೆ ಎಂದು ಗೊತ್ತಿಲ್ಲದ ಕೆಲಸಕ್ಕೆ ಕೈ ಹಾಕಿ ಸುಟ್ಟುಕೊಳ್ಳುವಿರಿ. ಸಾವಧಾನತೆ ನಿಮಗೆ ವರದಾನವಾಗಿದೆ. ಉಪಕರಣವನ್ನು ನೀವು ಸದುಪಯೋಗ ಮಾಡಿಕೊಳ್ಳುವಿರಿ. ಮೃತ್ಯುಂಜಯನ ಸ್ತೋತ್ರವನ್ನು ಮಾಡಿ.

ಕುಂಭ: ಸಂತೋಷ ಪಡಲು ನೀವು ನಿಮ್ಮದೇ ಮಾರ್ಗವನ್ನು ಕಂಡುಕೊಳ್ಳುವಿರಿ. ನೋವನ್ನು ಸ್ವಲ್ಪ ಕಾಲ ಮರೆಯುವಿರಿ. ಅನವಶ್ಯಕ ವಿಚಾರಕ್ಕೆ ನೀವು ಸಮಯವನ್ನು ಕೊಡುವಿರಿ. ತಂದೆಯಿಂದ ಬೈಗುಳ ಪಡೆಯಬಹುದು. ಹೆಚ್ಚು ಆಯಾಸವಾಗುವ ಕೆಲಸವನ್ನು ನೀವು ಮಾಡುವಿರಿ. ಹಿರಿಯರ ಆಸೆಗಳನ್ನು ಪೂರ್ಣ ಮಾಡುವ ಮನಸ್ಸು ಬರಬಹುದು. ತುಂಬ ದಿನದ ಆಸ್ತಿಯ ವಿವಾದವು ಇಂದು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಆರ್ಥಿಕ ಪರಿಸ್ಥಿತಿಯು ಮಧ್ಯಗತಿಯಲ್ಲಿ ಇರಲಿದೆ. ನಿಮ್ಮನ್ನು ಕಂಡು ಅವಮಾನಿಸುವವರಿಗೆ ತಕ್ಕ ಉತ್ತರವನ್ನು ಕೊಡುವಿರಿ. ಹನುಮಂತನ ಸ್ಮರಣೆಯನ್ನು ಮಾಡಿ. ಕಷ್ಟವನ್ನು ಹಿಮ್ಮೆಟ್ಟಬಹುದು.

ಮೀನ: ನಿಮ್ಮ ಮಾತುಗಳೇ ನಿಮಗೆ ತಿರುಗುಬಾಣವಾಗಿ ಬರಬಹುದು. ನೀವು ಇಂದು ವಾಹನಕ್ಕೆ ಸಂಬಂಧಿಸಿದಂತೆ ಹಣವನ್ನು ವ್ಯಯಿಸಬೇಕಾಗಬಹುದು. ಧಾರ್ಮಿಕ ಆಚರಣೆಗಳಲ್ಲಿ ನಂಬಿಕೆ ಕಡಿಮೆ ಆಗಬಹುದು. ನಿಮ್ಮ ಬಗ್ಗೆ ಬಂಧುಗಳು ಆಡಿಕೊಳ್ಳಬಹುದು. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಸರಿಯಾದ ದೃಷ್ಟಿಯನ್ನು ಇಟ್ಟುಕೊಳ್ಳುವರಿದ್ದಾರೆ. ನಿಮಗೆ ಇಂದು ಬಹಳ ಕಾರ್ಯದ ಒತ್ತಡ ಇದ್ದರೂ ನೀವು ನಿಮ್ಮವರಿಗೆ ಸಮಯವನ್ನು ಕೊಡುವಿರಿ. ಸಂಗಾತಿಯ ಸಂಪೂರ್ಣ ಬೆಂಬಲವು ನಿಮಗೆ ಇರಲಿದೆ. ತಾಯಿಯ ಕಡೆಯ ಬಂಧುಗಳು ನಿಮ್ಮನ್ನು ಭೇಟಿಯಾಗುವರು. ಶಿವಕವಚವನ್ನು ಪಠಿಸಿ.

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು