AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಇಂದಿನ ರಾಶಿ ಭವಿಷ್ಯ, ಸಂಗಾತಿಯಿಂದ ಈ ರಾಶಿಯವರು ಅತಿ ಹೆಚ್ಚು ಅನುರಾಗ ಪಡಯಲಿದ್ದಾರೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 14) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nitya Bhavishya: ಇಂದಿನ ರಾಶಿ ಭವಿಷ್ಯ, ಸಂಗಾತಿಯಿಂದ ಈ ರಾಶಿಯವರು ಅತಿ ಹೆಚ್ಚು ಅನುರಾಗ ಪಡಯಲಿದ್ದಾರೆ
ಇಂದಿನ ರಾಶಿ ಭವಿಷ್ಯImage Credit source: freepik
Rakesh Nayak Manchi
|

Updated on: May 14, 2023 | 6:29 AM

Share

ಶುಭೋದಯ ಓದುಗರೇ, ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ​ 14) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಕೃತ್ತಿಕಾ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ದಶಮೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಐಂದ್ರ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಸಂಜೆ 05:16 ರಿಂದ 06:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:29 ರಿಂದ 02:04ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ,

ಧನುಸ್ಸು: ನೀವು ಇಂದು ದಿನದ ಚಟುವಟಿಕೆಗಳನ್ನು ಬದಲಾಯಿಸುವ ಮನಸ್ಸು ಮಾಡುವಿರಿ. ವೃತ್ತಿಜೀವನವು ನಿಮ್ಮನ್ನು ಕೈಬೀಸಿ ಕರೆದರೂ ನಿಮ್ಮಲ್ಲಿ ನಿರಾಸಕ್ತಿ ಇರುವುದು. ಧಾರ್ಮಿಕಕ್ಷೇತ್ರಗಳಿಗೆ ಒಬ್ಬೊಂಟಿಯಾಗಿ ಹೋಗಲಿದ್ದೀರಿ. ಹೆಚ್ಚು ಶ್ರಮ, ಅಲ್ಪ‌ ಫಲವನ್ನು ನೀವು ಪಡೆಯಲಿದ್ದೀರಿ. ನಿಮ್ಮ ನಿರ್ಧಾರಗಳನ್ನು ನೀವೇ ಮುರಿಯುವುದು ಹಾಸ್ಯಾಸ್ಪದವಾದೀತು. ರಾಜಕಾರಣಿಗಳು ಅತ್ಯಂತ ಸಂತೋಷದಿಂದ ಇರುವ ದಿನವಾಗಿದೆ. ಕಳೆದುಕೊಂಡಿದ್ದನ್ನು ಪಡೆದುಕೊಳ್ಳುವ ಪ್ರಯತ್ನದಲ್ಲಿ ಇರುವಿರಿ. ಎಲ್ಲವನ್ನೂ ನಿರ್ಲಕ್ಷ್ಯ ಮಾಡುವುದು ಬೇಡ.

ಮಕರ: ಇಂದು ನೀವು ಕುಟುಂಬದ ಗೌರವವನ್ನು ಮತ್ತಷ್ಟು ಎತ್ತರಕ್ಕೆ ಏರಿಸುವಿರಿ. ನಿಮ್ಮ ಸಾಧನೆಗೆ ಗೌರವ ಸಿಗಲಿದೆ. ವೃತ್ತಿಯನ್ನು ಬಹಳ ಗಂಭೀರವಾಗಿ ಪರಿಗಣಿಸುವಿರಿ. ಹೋರಾಡದ ಫಲವಾಗಿ ನೀವಿಂದು ನಿಮ್ಮ ಕನಸನ್ನು ನನಸಾಗಿಸಿಕೊಳ್ಳುವಿರಿ. ಸ್ಥಾನಮಾನದ ವಿಚಾರದಲ್ಲಿ ಗೊಂದಲವಾಗಬಹುದು. ನಿಮ್ಮ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬೇಕಾದೀತು. ಸಣ್ಣ ಆದಾಯವನ್ನೂ ಕಡೆಗಣಿಸುವುದು ಬೇಡ. ಉಳಿತಾಯದ ಕಡೆಗೆ ಗಮನವಿರಲಿ. ಆಪ್ತರ ಜೊತೆ ಖುಷಿಯನ್ನು ಹಂಚಿಕೊಳ್ಳುವಿರಿ. ಅತಿಯಾದ ಮಾತನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು.

ಕುಂಭ: ಇಂದು ನಿಮ್ಮ ವ್ಯಕ್ತಿತ್ವದ ಸ್ಪಷ್ಟ ಚಿತ್ರಣವನ್ನು ನಿಮ್ಮವರಿಗೆ ತೋರಿಸುವಿರಿ. ನಿಮ್ಮ ಕೆಲಸ ಕಾರ್ಯಗಳು ಹಿಂದಿನ ದಿನಗಳಿಗಿಂತ ವೇಗವನ್ನು ಪಡುದುಕೊಳ್ಳುವುದು. ಪಾಕಕ್ಷೇತ್ರದಲ್ಲಿದ್ದರೆ ನಿಮಗೆ ಹಚರಚು ಲಾಭವಾಗಲಿದೆ. ಪ್ರತಿಷ್ಠಿಯೂ ಸಿಗಲಿದೆ. ಸಂಗಾತಿಯಿಂದ ನೀವು ಸಾಕಷ್ಟು ಅತಿ ಹೆಚ್ಚು ಅನುರಾಗವನ್ನು ಪಡಯುವಿರಿ. ನಿಮ್ಮವರ ಸಂತೋಷದಲ್ಲಿ ನೀವು ಭಾಗಿಯಾಗುವಿರಿ. ವಿದೇಶ ಪ್ರಯಾಣವನ್ನು ಮಾಡುವವರು ಹೆಚ್ಚು ಸಿದ್ಧತೆಯಲ್ಲಿ ತೊಡಗುವರು. ದಿನಾಂತ್ಯವು ಬಹಳ ಆನಂದದಲ್ಲಿ ಮುಕ್ತಾಯವಾಗುವುದು.

ಮೀನ: ನೀವು ಇಂದು ಆಲಂಕಾರಿಕ ವಸ್ತುಗಳನ್ನು ಹೆಚ್ಚು ಖರೀದಿಸುವಿರಿ. ಆಯ್ಕೆಗಳ ವಿಚಾರದಲ್ಲಿ ಗೊಂದಲದಲ್ಲಿ ಇರಬೇಕಾಗಬಹುದು. ಶತ್ರುಗಳ ಪರಾಜಯವನ್ನು ಕಂಡು ಸಂತಸಪಡುವಿರಿ. ಕೆಲಸದಲ್ಲಿ ನೀವು ಬಹಳ ಸಂಕೀರ್ಣತೆಯನ್ನು ತಂದುಕೊಳ್ಳುವಿರಿ. ಇಂದಿನ ನಿಮ್ಮ ಕೆಲಸಗಳು ಬಹಳ ಹಿಂದೆ ಉಳಿಯುವುದು. ಗುರಿಯ ಸಾಧನೆಗೆ ಮಾರ್ಗವು ಸರಿಯಾಗಿರಲಿ. ಹೊಸ ಸ್ನೇಹಿತರ ಜೊತೆ ಹೆಚ್ಚು ಕಾಲ ಕಳೆಯುವಿರಿ. ಹಳೆಯ ಸ್ನೇಹಿತರು ದೂರಾದಾರು. ಇಂದು ಹೆಚ್ಚು ಹುಡುಗಾಟದ ಮಾನಸಿಕತೆ ಇರಲಿದೆ.

-ಲೋಹಿತಶರ್ಮಾ ಇಡುವಾಣಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ