AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಇಂದಿನ ರಾಶಿ ಭವಿಷ್ಯ, ಹಣಕಾಸಿನ ವಿಚಾರದಲ್ಲಿ ಈ ರಾಶಿಯವರಿಗೆ ಬಂಧುಗಳ ಜೊತೆ ಕಲಹವಾಗಬಹುದು

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಇಂದಿನ ರಾಶಿ ಭವಿಷ್ಯ, ಹಣಕಾಸಿನ ವಿಚಾರದಲ್ಲಿ ಈ ರಾಶಿಯವರಿಗೆ ಬಂಧುಗಳ ಜೊತೆ ಕಲಹವಾಗಬಹುದು
ಇಂದಿನ ರಾಶಿ ಭವಿಷ್ಯImage Credit source: freepik
Rakesh Nayak Manchi
|

Updated on: May 22, 2023 | 6:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 22) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮೃಗಾಶಿರಾ, ಯೋಗ: ಸುಕರ್ಮಾ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 53 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:41 ರಿಂದ 09:17ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:29ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:05 ರಿಂದ 03:41ರ ವರೆಗೆ.

ಧನುಸ್ಸು: ಆರೋಗ್ಯವನ್ನು ಕಾಪಾಡಿಕೊಳ್ಳಲು ಬಹಳ ಪ್ರಯತ್ನಿಸಿದರೂ ಸುಧಾರಣೆ ಕಷ್ಡವಾದೀತು‌. ರಾಜಕೀಯ ವ್ಯಕ್ತಿಗಳಿಗೆ ಹೆಚ್ಚು ಪ್ರಶಂಸೆ ಸಿಗುವುದು. ವಾಹನದಿಂದ ನಿಮಗೆ ತೊಂದರೆಗಳು ಆಗಬಹುದು‌. ಸ್ತ್ರೀಯರಿಗೆ ಹೆಚ್ಚು ಅನುಕೂಲಕರವಾಗಲಿದೆ‌. ಸಮಾರಂಭಗಳಲ್ಲಿ ಆಪ್ತರ ಭೇಟಿಯಾಗಲಿದೆ. ಕೊಡಬೇಕಾದವರಿಗೆ ಹಣವನ್ನು ಕೊಡುವಿರಿ. ನಿಮ್ಮ ಸ್ನೇಹಿತರ ಬಗ್ಗೆ ದೂರ ಕೊಡುವರು. ಹೊಸ ಆದಾಯವನ್ನು ಹುಡುಕಿಕೊಳ್ಳುವಿರಿ. ಎಲ್ಲ ವಿಷಯವನ್ನು ಆಮೂಲಾಗ್ರವಾಗಿ ತಿಳಿದು ಮಾತನಾಡಿ. ನಿಮ್ಮವರನ್ನು ನೀವು ದೂರಮಾಡಿಕೊಳ್ಳಲಿದ್ದೀರಿ. ಒತ್ತಾಯದಿಂದ ಇರಿಕೊಂಡರೂ ಪ್ರಯೋಜನವಾಗದು.

ಮಕರ: ಅಧಿಕಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ನಡುವೆ ಭಿನ್ನಾಭಿಪ್ರಾಯಗಳು ಬರಬಹುದು. ಯಾರನ್ನೋ ಬೊಟ್ಟು ಮಾಡಿ ತೋರಿಸುವ ಬದಲು ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದು ಉತ್ತಮ. ಅಹಂಕಾರವನ್ನು ತೋರಿಸಿದರೆ ನಿಮ್ಮನ್ನು ತಾತ್ಸಾರ ಮಾಡಬಹುದು. ನಿಮ್ಮ ವಿದ್ಯಾಭ್ಯಾಸವು ಅರ್ಧಕ್ಕೆ ನಿಲ್ಲಬಹುದು. ನಿಮ್ಮ ಸ್ವಭಾವಗಳನ್ನು ಬದಲಿಸಲು ಸಲಹೆಗಳು ಬರಬಹುದು. ಯಾರದರೂ ನಿಮ್ಮ ಬಳಿ ಹಣದ ಸಹಾಯವನ್ನು ಮಾಡಲು ಕೇಳಬಹುದು. ಯೋಚಿಸಿ ಸಹಾಯ ಮಾಡಿ. ಪುನಃ ವಾರದೆಯೂ ಇರಬಹುದು. ನಿಮ್ಮ ಬಗ್ಗೆ ಅತಿಯಾದ ನಂಬಿಕೆಯನ್ನು ಇಟ್ಟುಕೊಳ್ಳುವುದು ಒಳ್ಳೆಯದಲ್ಲ.

ಕುಂಭ: ನೂತನ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ. ನಿಮ್ಮವರಿಗೆ ಅನಿರೀಕ್ಷಿತವಾಗಿ ಅಮೂಲ್ಯವಾದ ಉಡುಗೊರೆಯೊಂದನ್ನು ಕೊಡುವಿರಿ. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆಯನ್ನು ಪಡೆಯುವಿರಿ. ನಿಮ್ಮ ಮಾತುಗಳು ಇತರರಿಗೆ ಬೇಸರವನ್ನು ತರಿಸಬಹುದು. ದೇವತಾರಾಧನೆಯನ್ನು ಮಾಡಲು ಹೆಚ್ಚು ಇಷ್ಟ ಪಡುವಿರಿ. ಮನಸ್ಸು ಚಂಚಲವಾಗಿದ್ದು ಏಕಾಗ್ರವಾಗಿಸಲು ಕಷ್ಟಪಡಬೇಕಾದೀತು. ಕುಟುಂಬದ ಕಲಹವನ್ನು ಶಾಂತಗೊಳಿಸಲು ಪ್ರಯತ್ನಿಸುವಿರಿ. ಸಂಗಾತಿಯ ಜೊತೆ ಹೊಂದಾಣಿಕೆಯನ್ನು ಮಾಡಿಕೊಳ್ಳಲು ನಿಮಗೆ ಕಷ್ಟವಾದೀತು.

ಮೀನ: ನಿಮಗೆ ಇಂದು ಕುಟುಂಬಕ್ಕಿಂತಲೂ ಕಾರ್ಯವೇ ಮುಖ್ಯವಾಗಲಿದೆ. ಉದ್ಯೋಗದಲ್ಲಿ ನಿಷ್ಠೆ ಇರಲಿದೆ‌. ವಿರೋಧಿಗಳ ಬಗ್ಗೆ ಎಚ್ಚರಿಕೆ ಅಗತ್ಯ. ನಿಮ್ಮ ಬಗ್ಗೆ ಸಲ್ಲದ ವಾರ್ತೆಗಳನ್ನು ಹಬ್ಬಿಸಿಯಾರು. ಪ್ರಯತ್ನಕ್ಕೆ ಇಂದೇ ಫಲವು ಸಿಗುತ್ತದೆ ಎಂಬುದು ಬೇಡ. ನ್ಯಾಯಾಲಯದಲ್ಲಿ ದೂರುಗಳು ಇರಬಹುದು. ಹಣಕಾಸಿನ ವಿಚಾರದಲ್ಲಿ ಬಂಧುಗಳ ಜೊತೆ ಕಲಹವನ್ನು ಮಾಡಿಕೊಳ್ಳಬಹುದು. ಸಂಸಾರಕ್ಕೆ ಸಂಬಂಧಿಸಿದಂತೆ ಕಿವಿಮಾತುಗಳನ್ನು ಹಿರಿಯರು ಹೇಳಿಯಾರು. ಕೇಳಿ ಬಂದವರಿಗೆ ನಿಮ್ಮ ಕೈಯಲ್ಲಾಗುವ ಸಹಾಯವನ್ನು ಮಾಡುವಿರಿ.

-ಲೋಹಿತಶರ್ಮಾ ಇಡವಾಣಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ