AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 6:15 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 25 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04 ರಿಂದ 07:40ರ ವರೆಗೆ, ಗುಳಿಕ ಕಾಲ 09:17 ರಿಂದ 10:53ರ ವರೆಗೆ.

ಧನು: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಸ್ನೇಹಿತರ ಸಹಾಯದಿಂದ ಹೊಸ ಉದ್ಯಮವನ್ನು ಆರಂಭಿಸುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಉನ್ನತ ಸ್ಥಾನ ಸಿಗಲು ಅವಕಾಶಗಳಿದ್ದರೂ ಕಾಲಕ್ಕಾಗಿ ಕಾಯಬೇಕಾಗಿದೆ. ವ್ಯಕ್ತಿಗತ ದೋಷಗಳನ್ನು ಮರೆತು ಮುನ್ನಡೆಯಿರಿ. ಸಮೂಹವನ್ನು ಮುನ್ನಡೆಸುವ ನಾಯಕರಾಗುವಿರಿ. ನಿಮ್ಮ ಸುಕೃತವು ಕಾಪಾಡಲಿದೆ. ನಿಮ್ಮ ದೃಷ್ಟಿಯನ್ನು ಶುದ್ಧ ಮಾಡಿಕೊಳ್ಳುವುದು ಉತ್ತಮ. ಸಾಮಾಜಿಕ ಚಟುವಟಿಕೆಗಳು ನಿಮಗೆ ಯಶಸ್ಸನ್ನು ತಂದು ಕೊಡುವುದು. ದೀರ್ಘಕಾಲದ ಹೂಡಿಕೆಗೆ ನಿಮ್ಮ ಗಟ್ಟಿಯಾದ ನಿಲುವಿರಲಿ.

ಮಕರ: ಇಂದು ನಿಮ್ಮ ಉತ್ಸಾಹವನ್ನು ಅಧಿಕಗೊಳಿಸುವ ಘಟನೆಗಳು ಇರಬಹುದು. ನಿಮ್ಮ ವಾಹನವನ್ನು ಮಾರಾಡ ಮಾಡಲಿದ್ದೀರಿ. ಹಣವು ಸಿಗದೇ ಅದೆರ ಬಗ್ಗೆ ಮೋಹವು ಕಡಿಮೆಯಾಗುವುದು. ಪ್ರೇಮಿಗಳು ದೂರಾಗುವ ಸಂಭವವಿದೆ. ನಿವೃತ್ತರಿಗೆ ಸಮಯವನ್ನು ಕಳೆಯಲು ಬಹಳ ಕಷ್ಟವಾದೀತು. ನಿಮ್ಮ ಫಲಿತಾಂಶವು ನಿನಗೆ ಖುಷಿಕೊಡುವುದು. ಭಿನ್ನಾಭಿಪ್ರಾಯಗಳು ಸಹಜವಿದ್ದರೂ ಅದನ್ನು ಉಳಿಸಿಕೊಳ್ಳುವುದು ಬೇಡ. ನಿಮ್ಮ ಸಮಯವನ್ನು ಯಾರಾದರೂ ಬಳಸಿಕೊಳ್ಳಬಹುದು. ಹತ್ತಿರದ ವ್ಯಕ್ತಿಗಳಿಗೆ ನಿಮ್ಮ ಮೇಲೆ ಅಗೌರವವೂ ಬರಬಹುದು.

ಕುಂಭ: ಮಾನಸಿಕವಾಗಿ ಆಗುವ ನೋವನ್ನು ಶಮನ ಮಾಡಿಕೊಳ್ಳಲು ದೂರಪ್ರಯಾಣ ಮಾಡಬಹುದು. ನಿಮಗೆ ಪರಿಶ್ರಮದ ಕೆಲಸವು ಸಿಕ್ಕಿ ಅದರಲ್ಲಿ ಹೆಚ್ಚು ಆನಂದ ಪಡುವಿರಿ. ಶ್ರಮ ಹೆಚ್ಚಿದ್ದರೂ ಸಂಪತ್ತೂ ತಕ್ಕಮಟ್ಟಿಗೆ ಬರಬಹುದು. ತಂದೆ ಮಕ್ಕಳ ನಡುವೆ ಭಿನ್ನಾಭಿಪ್ರಾಯಗಳು ಬರುವ ಸಾಧ್ಯತೆ ಇದೆ. ಅದನ್ನು ಕುಳಿತು ಬಗೆ ಹರಿಸಿಕೊಳ್ಳುವುದು ಉತ್ತಮ. ಸುಮ್ಮನೇ ವಾಗ್ವಾದಗಳು ಬೇಡ. ಹೊಂದಣಿಕೆಯಿಂದ‌ ಇತ್ಯರ್ಥ ಮಾಡಿಕೊಳ್ಳಿ. ವಿದ್ಯಾರ್ಥಿಗಳು ಅಭ್ಯಾಸಕ್ಕಾಗಿ ದೂರದ ಊರಿಗೆ ಹೋಗಬೇಕಾಗಬಹುದು. ಮನೆಯಲ್ಲಿ ಅಸಮ್ಮತಿ ಇದ್ದರೂ ನಿಮ್ಮ ಹಠವೇ ಮೇಲಾಗುವುದು.

ಮೀನ: ಆರ್ಥಿಕತೆಗೆ ಸಂಬಂಧಿಸಿದಂತೆ ಮನಸ್ತಾಪಗಳು ಬರಬಹುದು. ಕಾರ್ಯಗಳಲ್ಲಿ ಹಿನ್ನಡೆಯಾಗಲಿದೆ. ಮಾಡಬೇಕು ಎಂದುಕೊಂಡ ಕೆಲಸಗಳು ಆರಂಭವಾಗದೇ ಇರಬಹುದು. ವೈವಾಹಿಕ ಜೀವನಕ್ಕೆ ಕಾಲಿಡಲು ಆತುರ ಬೇಡ. ನಿಮಗೆ ಇಷ್ಟವಾದ ಕೆಲಸವನ್ನು ಇಂದು ಮಾಡುವಿರಿ. ನಿಮಗೆ ಎಲ್ಲ ವಿಚಾರದಲ್ಲಿಯೂ ಹಿಂಜರಿಕೆ ಉಂಟಾಗಲಿದೆ. ದೈವಜ್ಞರ ಸಲಹೆ ಪಡೆದು ಸೂಕ್ತ ಪರಿಹಾರವನ್ನು ಕಂಡುಕೊಳ್ಳಿ. ಮನಸ್ಸಿನಲ್ಲಿ ಏಕಾಗ್ರತೆಯ ಕೊರತೆ ಕಾಣಲಿದೆ. ಸದಾ ಚಿಂತನೆಯನ್ನು ಮಾಡುವುದು ಬಿಟ್ಟು ಮನಸ್ಸನ್ನು ಖಾಲಿ ಮಾಡಿಕೊಳ್ಳಲು ಪ್ರಯತ್ನಿಸಿ.

ಲೋಹಿತಶರ್ಮಾ – 8762924271 (what’s app only)

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್