AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 28) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಧನು, ಮಕರ, ಕುಂಭ, ಮೀನ ರಾಶಿಯವರ ಇಂದಿನ ಭವಿಷ್ಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 28, 2023 | 12:45 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 28 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ನವಮೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಶೂಲ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 55 ನಿಮಿಷಕ್ಕೆ, ರಾಹು ಕಾಲ 05:17 ರಿಂದ 6:58ರ ವರೆಗೆ, ಯಮಘಂಡ ಕಾಲ 12:30 ರಿಂದ 02:06ರ ವರೆಗೆ, ಗುಳಿಕ ಕಾಲ 03:43 ರಿಂದ 05:19ರ ವರೆಗೆ.

ಧನಸ್ಸು: ಹೊಸ ಉದ್ಯೋಗವನ್ನು ಹುಡುಕುವ ಭರದಲ್ಲಿ ಮೋಸಕ್ಕೆ ಸಿಲುಕಿಕೊಳ್ಳಬಹುದು. ಅತಿಯಾದ ಆಸೆಯಿಂದ ನಿಮ್ಮ ಸಂಪತ್ತನ್ನು ಕಳೆದುಕೊಳ್ಳಬಹುದು. ಕುಟುಂಬವು ನಿಮ್ಮನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಇರುವುದು ನಿಮಗೆ ಬೇಸರ ತರಿಸುವುದು. ಆಸ್ತಿಯಲ್ಲಿ ಪಾಲನ್ನು ಪಡೆಯಲು ಸ್ನೇಹಿತರು ಕುಮ್ಮಕ್ಕು ಕೊಟ್ಟಾರು. ಇಂದಿನ‌ ಸಮಾರಂಭದಲ್ಲಿ ಪರಿಚಿತರ ಭೇಟಿಯು ಸಮಾಧಾನವನ್ನು ನೀಡುವುದು. ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಸ್ವಲ್ಪ ಉತ್ಸಾಹವನ್ನು ತೋರಿಸುವರು. ಅದು ಹಾಗೆಯೇ ಇರುವಂತೆ ಪೋಷಕರು ನೋಡಿಕೊಳ್ಳಬೇಕು.

ಮಕರ: ಉದ್ಯಮಿಗಳಾಗಿರುವ ನಿಮಗೆ ಉದ್ಯಮದಲ್ಲಿ ಉಂಟಾದ ಸಣ್ಣ ಬದಲಾವಣೆಯಿಂದ ಕೆಲವು ಕೆಲಸಗಾರರು ಬಿಟ್ಟು ಹೋಗಬಹುದು.‌ ಇಷ್ಟು ದಿನದ ಮಿತ್ರತ್ವವು ನಿಮಗೆ ಸಾಕೆನಿಸಬಹುದು. ವರ್ತನೆಗಳು ನಿಮಗೆ ಮಾನಸಿಕ ಅಸಮತೋಲನವನ್ನು ಉಂಟುಮಾಡೀತು. ನಿಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಲು ಗೊಂದಲ ಬೇಡ. ಒಪ್ಪಿಕೊಂಡ ಮಾತ್ರಕ್ಕೆ ಸೋಲು ಎಂದುಕೊಳ್ಳುವುದು ಬೇಡ. ದಾಂಪತ್ಯದಲ್ಲಿ ಅಹಂಕಾರದಿಂದ ಸಂಬಂಧಗಳ‌ ನಡುವೆ ಬಿರುಕುಬರಬಹುದು. ಹಣಕಾಸಿನ‌ ವಿಚಾರವನ್ನು ಸಹೋದರರ ಜೊತೆ ಕುಳಿತು‌ ಮಾತನಾಡಿ.

ಕುಂಭ: ಕುಟುಂಬದ ಸದಸ್ಯರ ಜೊತೆ ಕುಳಿತು ಅನೌಪಚಾರಿಕ ಮಾತುಗಳನ್ನು ಆಡಿ ಸಂಬಂಧವನ್ನು ಹೊಸತು ಮಾಡುವಿರಿ. ಹಣದ ಬಗ್ಗೆ ಬಹಳ ಚಿಂತಾಕ್ರಾಂತರಾಗಿದ್ದು ಅದನ್ನು ಸ್ನೇಹಿತರು ಮನಗಂಡು ಸಹಾಯ ಮಾಡುವರು. ನಿಮ್ಮ ತಂದೆಯ ಮಾತು ನಿಮಗೆ ಅಸಹ್ಯವಾದರೂ ಅದನ್ನು ತಮಾಷೆಯಾಗಿ ತೆಗೆದುಕೊಂಡು ಸುಮ್ಮನಾಗುವಿರಿ. ಆತುರದ ನಿರ್ಧಾರವನ್ನು ತೆಗೆದುಕೊಳ್ಳುವುದು ಬೇಡ. ಅನಂತರ ಪಶ್ಚಾತ್ತಾಪ ಪಡಬೇಕಾದೀತು. ಸಂಗಾತಿಯ ಜೊತೆಗಿನ ವ್ಯವಹಾರವು ನಿಮಗೆ ಎಂದಿಗಿಂತ ಹಿತ ಎನಿಸಬಹುದು.

ಮೀನ: ಇಂದು ನಿಮ್ಮ ಕೆಲಸದ ಮೇಲೆ ಪೂರ್ಣವಾಗಿ ಗಮನಹರಿಸಿ. ಅನ್ಯರ ಚಿಂತೆ ನಿಮಗೆ ಬೇಡ. ಬಾಕಿ ಇರುವ ಕೆಲಸದ ಬಗ್ಗೆ ಹೆಚ್ಚು ಗಮನವಿರಲಿ. ದಿನವನ್ನು ಮುಂದೆ ಹಾಕುವುದು ಬೇಡ. ಇಂದು ನಿಮ್ಮ ಕಡೆಯಿಂದ ದೊಡ್ಡ ತಪ್ಪು ಆಗದಂತೆ ನೋಡಿಕೊಳ್ಳಿ. ನಿಮ್ಮ ಸಂಗಾತಿಯನ್ನು ಹೊಸ ರೀತಿಯಲ್ಲಿ ಪ್ರೀತಿಸಲು ಇಷ್ಟಪಡುವಿರಿ. ಹಣವು ನಿಮಗೆ ಸರಿಯಾದ ಸಮಯಕ್ಕೆ ಸಿಗದೇ ಗಲಿಬಿಲಿಗೊಳ್ಳುವಿರಿ. ಗಂಭೀರವಾದ ಚಿಂತನೆಗೆ ಮನಸ್ಸು ತೊಡಗಿಕೊಳ್ಳದೇ ಬೇರೆ ವಿಚಾರದ ಬಗ್ಗೆಯೇ ಹೆಚ್ಚು ಆಲೋಚಿಸೀತು.

-ಲೋಹಿತಶರ್ಮಾ – 8762924271 (what’s app only)

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!