AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರು ದಾಂಪತ್ಯದಲ್ಲಿ ಹೆಚ್ಚು ಖುಷಿ ಅನುಭವಿಸಲಿದ್ದಾರೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ 8) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nitya Bhavishya: ಇಂದಿನ ರಾಶಿ ಭವಿಷ್ಯ, ಈ ರಾಶಿಯವರು ದಾಂಪತ್ಯದಲ್ಲಿ ಹೆಚ್ಚು ಖುಷಿ ಅನುಭವಿಸಲಿದ್ದಾರೆ
ಇಂದಿನ ರಾಶಿ ಭವಿಷ್ಯ
Rakesh Nayak Manchi
Rakesh Nayak Manchi|

Updated on: May 08, 2023 | 6:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ​ 8) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖಮ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಶಿವ, ಕರಣ : ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಬೆಳಗ್ಗೆ 49 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:44 ರಿಂದ 09:19ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:54 ರಿಂದ ಮಧ್ಯಾಹ್ನ 12:29ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:39ರ ವರೆಗೆ.

ಧನುಸ್ಸು: ಎಲ್ಲದಕ್ಕೂ ಸಿಟ್ಟುಗೊಳ್ಳುವ ಅಗತ್ಯವಿಲ್ಲ. ಕೆಲವೊಂದನ್ನು ಹಾಗಯೇ ಬಿಡುವುದು ಒಳ್ಳೆಯದು. ನಿಮ್ಮ ಆರೋಗ್ಯವೂ ಚೆನ್ನಾಗಿರಲಿದೆ. ಹಣವನ್ನು ಹೊಂದಿಸಲು ಹೆಚ್ಚು ಕಷ್ಟವಾದೀತು. ಧಾರ್ಮಿಕವಾಗಿ ಶ್ರದ್ಧೆ ಉಳ್ಳವರಾದರೂ ಅದನ್ನು ತೋರಿಸಿಕೊಳ್ಳುವುದಿಲ್ಲ. ಹಾಗಾಗಿ ನಿಮ್ಮನ್ನು ನಾಸ್ತಿಕರು ಎಂದುಕೊಂಡಾರು. ವಿವಾದಕ್ಕೆ ಆದಷ್ಟು ಆಸ್ಪದ ಕೊಡದಿದ್ದರೇ ಉತ್ತಮ. ಕೆಲಸದಿಂದ ನೀವು ನಿರೀಕ್ಷಿಸಿರುವುದು ಸಾಕಾರಗೊಳ್ಳಬಹುದು. ವೇತನದ ಹೆಚ್ಚಳಕ್ಕೆ ನಿಮ್ಮ ವಿನಂತಿಯು ಪುರಸ್ಕಾರ್ಯವಾಗವಬಹುದು. ಸಾಲವನ್ನು ತೀರಿಸುವ ಭರದಲ್ಲಿ ಖರ್ಚಿಗೂ ಹಣವನ್ನು ಇಟ್ಟುಕೊಳ್ಳುವುದನ್ನು ಮರೆಯಬಹುದು.

ಮಕರ: ನಿಮ್ಮ ತೊಂದರೆಗಳೇ ಸಾವಿರವಿದ್ದರೂ ಇನ್ನೊಬ್ಬರಿಗೆ ಸಹಾಯವನ್ನು ಮಾಡುವಿರಿ. ವಿದ್ಯಾರ್ಥಿಗಳು ಅಧಿಕ ಅಧ್ಯಯನವನ್ನು ಮಾಡಬೇಕಿದೆ. ತಂದೆಯವರಿಗೆ ಎದುರು ಮಾತನಾಡುವ ಸ್ವಭಾವವನ್ನು ಬಿಡುವುದು ಒಳ್ಳೆಯದು. ನಿಮ್ಮ ಅಂತರಂಗದಲ್ಲಿ ನಿಮ್ಮ ಕೆಲಸಕ್ಕೆ ಪಶ್ಚಾತ್ತಾಪಭಾವವು ಮೂಡಬಹುದು. ಯಾರ ಸಹಾಯವನ್ನೂ ಒಡೆಯದೇ ಸ್ವತಂತ್ರವಾಗಿ ಇಂದಿನ ಕೆಲಸವನ್ನು ಮಾಡಿ ಮುಗಿಸುವಿರಿ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗಬಹುದು. ದಾಂಪತ್ಯದಲ್ಲಿ ಮುನಿಸು ಕಡಿಮೆಯಾದರೂ ಮಾತನಾಡಲು ಇಬ್ಬರೂ ತಯಾರಿರದೇ ಮೌನವೇ ಮುಂದುವರಿಯಲಿದೆ.

ಕುಂಭ: ನಿಮ್ಮ ನೆಚ್ಚಿನವರ ಭೇಟಿಯಾಗಬಹುದು. ಅವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಅವಕಾಶಗಳಿದ್ದರೂ ಬಳಸಿಕೊಳ್ಳುವ ಮನಸ್ಸು ಇರದು. ಆರ್ಥಿಕ ಸಮಸ್ಯೆಗೆ ನಿಮ್ಮ ಆಪ್ತರು ಸಹಾಯ ಮಾಡುವರು. ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ. ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯಬಹುದು. ವಿದ್ಯಾರ್ಥಿಗಳು ಉತ್ತಮವಾದ ಲಕ್ಷ್ಯವನ್ನು ಇಟ್ಟುಕೊಂಡಿದ್ದರೂ ನಿಮಗೆ ತಲುಪಲು ಕಷ್ಟವಾದೀತು. ಕೃಷಿಯೇ ಒಳ್ಳೆಯದು ಎಂಬ ಅಭಿಪ್ರಾಯಕ್ಕೆ ಬರಬಹುದು. ರುದ್ರಾಭಿಷೇಕವನ್ನು ಶಿವನಿಗೆ ಮಾಡಿಸಿ.

ಮೀನ: ಕೆಲಸದ ಸ್ಥಳದಲ್ಲಿ ಭಿನ್ನಾಭಿಪ್ರಾಯ ಇರಲಿದೆ. ಸ್ನೇಹಿತರ ಮಾತು ನಿಮಗೆ ಸಿಟ್ಟನ್ನು ತರಿಸಬಹುದು. ಆತ್ಮೀಯರ ಸಲಹೆಯನ್ನು ಸ್ವೀಕರಿಸುವಿರಿ. ಕಳೆದುಹೋದ ಸಮಯವನ್ನು ಮತ್ತೆ ನೆನಪಿಸಿಕೊಳ್ಳಲು ಹೋಗುವುದಿಲ್ಲ. ನಿಮ್ಮ ಹೆಸರು ಬರಬೇಕೆಂದು ಬಹಳ ಶ್ರಮವಹಿಸುವಿರಿ. ಆದರೆ ಅದೆಲ್ಲವೂ ವ್ಯರ್ಥವಾಗಬಹುದು. ಇರುವುದನ್ನು ಹಾಗೆಯೇ ಹೇಳಿದ್ದರಿಂದ ನೀವು ನಿಷ್ಠುರರಾಗುವಿರಿ. ದಾಂಪತ್ಯದಲ್ಲಿ ಹೆಚ್ಚು ಖುಷಿಯನ್ನು ಅನುಭವಿಸಲಿದ್ದೀರಿ. ಹಣಕಾಸಿನ ತೊಂದರೆಗಳು ಹೆಚ್ಚು ಕಾಣಿಸಿಕೊಳ್ಳಬಹುದು. ಜಲೋದ್ಯಮದಲ್ಲಿ ತೊಡಗಿದವರಿಗೆ ಅಲ್ಪ ಲಾಭ ಆಗಲಿದೆ.

-ಲೋಹಿತಶರ್ಮಾ ಇಡುವಾಣಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!