Daily Horoscope: ನಿಮ್ಮ ಮನಸ್ಸಿನ ನಿಯಂತ್ರಣವು ನಿಮ್ಮ ಕೈಯಲ್ಲಿರಲಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 6: ಮಕ್ಕಳ ಮೇಲಿನ‌ ಮೋಹಕ್ಕೆ ಅವರ ತಪ್ಪನ್ನು ತಿದ್ದಲಾರಿರಿ. ಸ್ನೇಹಿತರಿಂದ ಇಂದು ಮನೆ ತುಂಬಲಿದೆ. ಮನೆಯ ಹಿರಿಯರ ವಿರುದ್ಧ ಮಾತನಾಡುವಿರಿ. ನಿಮ್ಮ ಮಾತುಗಳನ್ನು ಸ್ಪಷ್ಟವಾಗಿ ತಿಳಿಸಿ. ಗೋಡೆಯ ಮೇಲಿನ ದೀಪದಂತೆ ಆಗುವುದು ಬೇಡ. ಹಾಗಾದರೆ ಸೆಪ್ಟೆಂಬರ್​ 6ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ನಿಮ್ಮ ಮನಸ್ಸಿನ ನಿಯಂತ್ರಣವು ನಿಮ್ಮ ಕೈಯಲ್ಲಿರಲಿ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 06, 2024 | 12:20 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಶುಕ್ಲ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:39 ಗಂಟೆ, ರಾಹು ಕಾಲ ಬೆಳಿಗ್ಗೆ 10:59 ರಿಂದ ಸಂಜೆ 12:31, ಯಮಘಂಡ ಕಾಲ ಮಧ್ಯಾಹ್ನ 03:35 ರಿಂದ 05:07ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:54 ರಿಂದ 09:26ರ ವರೆಗೆ.

ಸಿಂಹ ರಾಶಿ : ತಂದೆಯ ಮನಸ್ಸನ್ನು ಅರಿತು ಅವರ ಜೊತೆ ವ್ಯವಹರಿಸಿ. ಇಂದು ನಿಮ್ಮ ಹಿತಶತ್ರುಗಳಿಂದ ತೊಂದರೆ‌ ಕೊಡಬಹುದು. ಅಂದುಕೊಂಡ ಸಮಯಕ್ಕೆ ಕೆಲಸಗಳು ಆಗದು ಎಂದು ಬೇಸರವಾಗಲಿದೆ. ಅದೃಷ್ಟಕ್ಕಾಗಿ ಕಾಯದೇ ಕಾರ್ಯದಲ್ಲಿ ಪ್ರವೃತ್ತರಾಗಿ. ತಾನಾಗಿಯೇ ಎಲ್ಲವೂ ಸೇರಿಕೊಳ್ಳುವುದು. ಅನೇಕ ದಿನಗಳಿಂದ ಉದ್ಯೋಗ ನಿರ್ವಹಣೆಯು ಬೇಸರ ತರಿಸಿದ್ದು ಹೊರ ಕಡೆ ಸುತ್ತಾಡುವ, ವಿರಾಮ ಪಡೆಯುವ ಮನಸ್ಸಾಗಲಿದೆ. ಇಂದು ನಿಮ್ಮ ಕೆಲಸವು ಅಡೆತಡೆಗಳಿಲ್ಲದೆ ಮುಂದೆ ಸಾಗುತ್ತದೆ. ಇಂದು ಮನೆಯಲ್ಲಿ ನೀವು ಸಂಭ್ರಮವನ್ನು ಆಚರಿಸುವಿರಿ. ಕಾಲಕ್ಕೆ ಬೇಕಾದ ಮಾರ್ಗದರ್ಶನದ ಅಗತ್ಯವಿರಲಿದೆ. ಆಗಿಹೋದುದಕ್ಕೆ ಕಾರಣವನ್ನು ಹುಡುಕುತ್ತ ಕುಳಿತುಕೊಳ್ಳಬೇಡಿ. ಮುಂದಿನದ್ದರ ಬಗ್ಗೆ ಆಲೋಚನೆ ಇರಲಿ. ಹೂಡಿಕೆಯನ್ನು ಬಹಳ ಮುತುವರ್ಜಿಯಿಂದ ಮಾಡಬೇಕಾದೀತು. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡುವಿರಿ. ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ. ಇಷ್ಟವಾಗುವುದನ್ನು ಬೇರೆಯವರಿಗೆ ಹಂಚುವಿರಿ.

ಕನ್ಯಾ ರಾಶಿ : ಮಕ್ಕಳ ಮೇಲಿನ‌ ಮೋಹಕ್ಕೆ ಅವರ ತಪ್ಪನ್ನು ತಿದ್ದಲಾರಿರಿ. ಸ್ನೇಹಿತರಿಂದ ಇಂದು ಮನೆ ತುಂಬಲಿದೆ. ಮನೆಯ ಹಿರಿಯರ ವಿರುದ್ಧ ಮಾತನಾಡುವಿರಿ. ನಿಮ್ಮ ಮಾತುಗಳನ್ನು ಸ್ಪಷ್ಟವಾಗಿ ತಿಳಿಸಿ. ಗೋಡೆಯ ಮೇಲಿನ ದೀಪದಂತೆ ಆಗುವುದು ಬೇಡ. ತಪ್ಪುಗಳನ್ನು ತಿದ್ದಿಕೊಳ್ಳಲು ಅವಕಾಶ ಕೊಡುವುದು ಉತ್ತಮ. ಸಂಗಾತಿಗೆ ನಿಮ್ಮ ಕಡೆಯಿಂದ ಅಚ್ಚರಿಯ ಉಡುಗೊರೆ ಸಿಗಬಹುದು. ನಿಮ್ಮ ಮನಸ್ಸಿನ ನಿಯಂತ್ರಣವು ನಿಮ್ಮ ಕೈಯಲ್ಲಿರಲಿ.‌ ತಂತ್ರಜ್ಞರು ವಿದೇಶ ಪ್ರವಾಸವನ್ನು ಮಾಡಿ ಬರಲಿರುವರು. ನಿಮ್ಮವರನ್ನು ಬೀಳ್ಕೊಡಲು ನಿಮಗೆ ಕಷ್ಟವಾದೀತು. ನಿಮ್ಮ ಸ್ವಭಾವವನ್ನು ಸ್ವಲ್ಪ ಬದಲಾವಣೆ ಮಾಡಿಕೊಳ್ಳುವುದು ಉತ್ತಮ. ಉದ್ಯಮವನ್ನು ನಡೆಸುವುದು ಕಷ್ಟವೆನಿಸಬಹುದು. ಖಾಸಗಿತನದ ಸಂಸ್ಥೆಯ ಮಾಲಿಕರಾಗುವ ಆಹ್ವಾನ ಬರಲಿದೆ. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಲೆಕ್ಕಾಚಾರದಲ್ಲಿ ನಿರ್ದಿಷ್ಟತೆ ಇದ್ದರೂ ನಡತೆಯಲ್ಲಿ ಅದು ಸಿಗದು.

ತುಲಾ ರಾಶಿ : ಸರ್ಕಾರದ ಕೆಲಸಲದಲ್ಲಿ ಗೊತ್ತಿಲಗಲ್ಲದೇ ತಪ್ಪುಗಳು ಆಗಬಹುದು. ಇಂದು ನಿಮ್ಮೊಳಗೆ ಅತಿಯಾದ ಗೊಂದಲ ಇರುವುದು ಇತರರಿಗೂ ಗೊತ್ತಾಗುವುದು. ಕಾರ್ಯದ ನಿಮಿತ್ತ ವ್ಯರ್ಥ ಓಡಾಟವನ್ನು ಮಾಡುವಿರಿ. ಮನಸ್ಸಿಗೆ ಅನುಕೂಲಕರವಾದ ವಾತಾವರಣವು ಸಿಗದೇ ಇರಬಹುದು. ಸರಿಯಾದ ಸಮಯಕ್ಕೆ ಬುದ್ಧಿ ಸೂಚಿಸದೇ ಇದ್ದೀತು. ದುರ್ವ್ಯಸನವನ್ನು ರೂಢಿಸಿಕೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸವನ್ನು ಪ್ರಯತ್ನಪೂರ್ವಕವಾಗಿ ಬೆಳೆಸಿಕೊಳ್ಳಬೇಕಾಗುವುದು. ಕುಟಂಬದವರು ಸೇರಿಕೊಂಡು ಎಲ್ಲರ ಶ್ರೇಯಸ್ಸಿಗೆ ಧಾರ್ಮಿಕ ಕಾರ್ಯಗಳನ್ನು ಮಾಡುವರು. ಕೆಲವು ಕಾಲ ಒಂಟಿಯಾಗಿ ಇರಬೇಕು ಎನಿಸಬಹುದು. ಹೊಸ ವ್ಯವಹಾರವನ್ನು ಆರಂಭಿಸಿರುವವರಿಗೆ ಗೊಂದಲವಾಗಲಿದೆ. ದೊಡ್ಡವರ ವಿಚಾರದಲ್ಲಿ ನೀವು ಇಂದು ತಗ್ಗಿ ಬಗ್ಗಿ ನಡೆಯಬೇಕಾದೀತು. ಸ್ನೇಹಿತರ ಮಾತುಗಳು ನಿಮ್ಮ ದಾರಿ ತಪ್ಪಿಸಬಹುದು. ಕೋಪವನ್ನು ಕಡಿಮೆ ಮಾಡಿಕೊಂಡು ಕಾರ್ಯದಲ್ಲಿ ತೊಡಗಿಕೊಳ್ಳಿ. ಏಕಾಗ್ರತೆಯ ಕೊರತೆಯನ್ನು ಸರಿ ಮಾಡಿಕೊಳ್ಳಿ. ಯೋಜನೆಗೆ ಸರಿಯಾದ ಚೌಕಟ್ಟು ಬೇಕು.

ವೃಶ್ಚಿಕ ರಾಶಿ : ಐಷಾರಾಮಿಯಾಗಿ ಬದುಕಲು ನಿಮ್ಮ ಹಣವನ್ನೇ ಖರ್ಚುಮಾಡಿ. ನೀವು ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಇಂದು ನಿಮ್ಮ ಪ್ರತಿಭೆಯ ಪ್ರದರ್ಶನವಾಗಲಿದೆ‌. ಸಣ್ಣ ಪುಟ್ಟ ತೊಂದರೆಗಳಿಗೆ ನೀವು ಇಂದು ಹಿಂದೆ ಹೆಜ್ಜೆ ಇಡುವ ಅವಶ್ಯಕತೆ ಇಲ್ಲ. ಇಲ್ಲ ಸಲ್ಲದ‌ ನೆಪಗಳು ಸುಲಭವಾಗಿ ಸಿಗಬಹುದು. ಸಂಗಾತಿಯ ನಡುವಣ ಕಲಹವನ್ನು ನೀವು ಸರಿ ಮಾಡಿಕೊಳ್ಳಿ. ಸುಳ್ಳಾಡಿ ಆತ್ಮವಂಚನೆಯನ್ನು ಮಾಡಿಕೊಳ್ಳಬೇಡಿ. ನಿಮ್ಮ ವಿರುದ್ಧ ಮಾತನಾಡಿಲ್ಲವೆಂದರೆ ನಿಮ್ಮ ಕ್ರಮ ಸರಿ ಇದೆ ಎಂದಲ್ಲ. ಬೇಕಾದಷ್ಟು ಮಾತ್ರ ಮಾತನಾಡಿ ಉಳಿದದ್ದನ್ನು ಕಾರ್ಯಕ್ಕೆ ಸೀಮಿತಗೊಳಿಸಿ. ನೀರಿನಿಂದ ನೀವು ಭಯಪಡುವಿರಿ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು ಮನೆಯಲ್ಲಿ ಮದ್ದನ್ನು ಮಾಡಿಕೊಂಡು ಆರಾಮಾಗಿರಿ. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು.