AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿ ಭವಿಷ್ಯ; ಕೆಲವು ಮಾತುಗಳನ್ನು ಮನಸ್ಸಿಗೆ ಹಚ್ಚಿಕೊಂಡು ಸಂಕಟಪಡುವಿರಿ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 15 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ರಾಶಿ ಭವಿಷ್ಯ; ಕೆಲವು ಮಾತುಗಳನ್ನು ಮನಸ್ಸಿಗೆ ಹಚ್ಚಿಕೊಂಡು ಸಂಕಟಪಡುವಿರಿ
ರಾಶಿ ಭವಿಷ್ಯ
TV9 Web
| Edited By: |

Updated on: May 15, 2024 | 12:30 AM

Share

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 15) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಆಶ್ಲೇಷ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 06 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ 12:29 ರಿಂದ 14:05ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:42 ರಿಂದ 09:18ರ ವರೆಗೆ, ಗುಳಿಕ ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:29ರ ವರೆಗೆ.

ಸಿಂಹ ರಾಶಿ :ಉದ್ಯೋಗಕ್ಕೆ ಹಲವು ಅವಕಾಶಗಳು ತೆರೆದುಕೊಳ್ಳುವುದು. ಸಾಮಾಜಿಕವಾಗಿ ಬೆಳೆಯುವ ಆಸೆ ಚಿಗುರುವುದು. ಭವಿಷ್ಯದ ಬಗ್ಗೆ ಸರಿಯಾದ ದೃಷ್ಟಿಯು ಬೇಕೆನಿಸುವುದು. ಉನ್ನತ ವಿದ್ಯಾಭ್ಯಾಸದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಹೆಚ್ಚು. ತಂದೆಯಿಂದ ಸ್ಥಾನಮಾನಕ್ಕೆ ಬೇಕಾದ ಸಹಕಾರವನ್ನು ಪಡೆಯುವಿರಿ. ಮಿತಭಾಷಿಯಾಗಿ ನೀವು ಎಲ್ಲರಿಂದ‌ ಅಪಹಾಸ್ಯಕ್ಕೆ ಒಳಗಾಗುವಿರಿ. ಶತ್ರುಗಳ ಪಿತೂರಿಯಿಂದ ನಿಮಗೆ ವ್ಯವಹಾರದಲ್ಲಿ ಹಿನ್ನಡೆಯಾದೀತು. ಎಲ್ಲರನ್ನೂ ದೂರುವುದು ನಿಮಗೆ ಇಷ್ಟವಾಗದು. ನಿಮಗೆ ವಹಿಸಿದ ಕೆಲಸವನ್ನು ಅದ್ಭುತವಾಗಿ ಮಾಡಲು ಪ್ರಯತ್ನಿಸುವಿರಿ. ಮನೋರಂಜನೆಗೆ ನಿಮಗೆ ಸಮಯವು ಸಿಗುವುದು. ಇನ್ನೊಬ್ಬರ ಕೆಲಸದ ಹೊರೆಯೂ ನಿಮಗೆ ಬರಲಿದೆ. ನಿಮ್ಮ ಕಾಯುವಿಕೆಯು ಸಾರ್ಥಕವಾಗಬಹುದು. ಮಾತಿನಲ್ಲಿ ಮಾರ್ದವ ಇರಲಿ. ವೈಯಕ್ತಿಕ ಕಾರ್ಯದ ಕಾರಣ ಪ್ರಯಾಣ ಮಾಡುವಿರಿ. ಹೊಸ ವಸ್ತುಗಳ ಬಳಕೆಯನ್ನು ಮಾಡುವಿರಿ.

ಕನ್ಯಾ ರಾಶಿ :ಕೆಲವು ವಿಚಾರಕ್ಕೆ ಹೊಂದಾಣಿಕೆಯ ಕೊರತೆ ಕಂಡು ದಾಂಪತ್ಯದಲ್ಲಿ ಕಲಹವಾಗುವುದು. ಉದ್ಯೋಗದಲ್ಲಿ ಒತ್ತಡ ನಿವಾರಣೆಯನ್ನು ನೀವೇ ಸ್ವತಃ ಮಾಡಿಕೊಳ್ಳಬೇಕಾಗುವುದು. ಅನೇಕ ದಿನಗಳಿಂದ ಅನಾರೋಗ್ಯದ ಕಾರಣ ಬಳಲುತ್ತಿದ್ದು ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇರುವುದು. ಉದ್ಯೋಗದಲ್ಲಿ ಮಕ್ಕಳಿಗೆ ಪ್ರವೇಶವನ್ನು ಕೊಡುವಿರಿ. ನಿಮ್ಮ ಬಗ್ಗೆ ಶತ್ರುಗಳು ಅಪಪ್ರಚಾರ ಮಾಡುವರು. ಬಂಧುಗಳು ನಿಮ್ಮನ್ನು ಬಹಳವಾಗಿ‌ ದೂರುವರು. ಸಂಗಾತಿಯ ಆರೋಗ್ಯವನ್ನು ನೋಡಿಕೊಳ್ಳುವ ಭರದಲ್ಲಿ ಕೆಲವು ಕಾರ್ಯಗಳನ್ನು ಮರೆಯಬಹುದು. ಪಾಲುದಾರಿಕೆಯಲ್ಲಿ ಆದ ಮನಸ್ತಾಪವನ್ನು ಮುಂದುವರಿಸದೇ ಸುಮ್ಮನಿರಿ. ಅಥವಾ ಅನ್ಯ ಮಾರ್ಗವೆಂದರೆ ಕಂಡುಕೊಳ್ಳಿ. ಆಕಸ್ಮಿಕ ಧನಾಗಮನವಾದರೂ ಮತ್ತಾವುದೋ ರೀತಿಯಲ್ಲಿ ಹೋಗುವುದು.. ಬಗ್ಗೆಯೂ ಸುಮ್ಮನೆ ಆಡಿಕೊಳ್ಳುವುದು ಬೇಡ. ಮನೆಯ ಕಾರ್ಯಗಳು ಇಂದು ಅಧಿಕವಾಗಿ ಇರಬಹುದು. ಕೃಷಿಯನ್ನು ಹೊಸ ರೀತಿಯಲ್ಲಿ ಮಾಡುವ ಉತ್ಸಾಹವಿರುವುದು.

ತುಲಾ ರಾಶಿ :ನಿಮ್ಮ ಬೆಳವಣಿಗೆಗೆ ಪೂರಕವಾದ ಸನ್ನಿವೇಶವು ಬರಬಹುದು. ಕುಟುಂಬ ಜವಾಬ್ದಾರಿಯ ನಿರಗವಹಣೆ ಕಷ್ಟವಾಗುವುದು. ಆರ್ಥಿಕ ವ್ಯವಹಾರವನ್ನು ಮತ್ತೊಬ್ಬರ ಸಹಾಯದಿಂದ ಸರಿ ಮಾಡಿಕೊಳ್ಳುವಿರಿ. ಉದ್ಯೋಗದ ಬದಲಾವಣೆಯಿಂದ ಅನಾನುಕೂಲ ಉಂಟಾಗುವುದು. ಮನಸ್ಸಿನಲ್ಲಿರುವ ಸಂಕಟವನ್ನು ಯಾರ ಬಳಿಯಾದರೂ ಹೇಳಿಕೊಳ್ಳಿ. ವಾಹನ ಚಾಲನೆಯಲ್ಲಿ ಅವಸರ ಬೇಡ. ನಿಮಗೆ ಸಂಬಂಧಿಸದ ವಿಚಾರಗಳಲ್ಲಿ ಪ್ರವೇಶವನ್ನು ಪಡೆಯುವುದು ಬೇಡ. ವ್ಯವಹಾರದ ದಾಖಲೆಗಳು ಸರಿಯಾಗಿ ಇಟ್ಟುಕೊಳ್ಳುವಿರಿ. ಉನ್ನತ ವಿದ್ಯಾಭ್ಯಾಸಕ್ಕೆ ಮನೆಯಿಂದ ದೂರವಿರಲು ಯತ್ನಿಸುವಿರಿ. ಕೆಲವು ಮಾತುಗಳನ್ನು ಮನಸ್ಸಿಗೆ ಹಚ್ಚಿಕೊಂಡು ಸಂಕಟಪಡುವಿರಿ. ವಾಹನಕ್ಕಾಗಿ ಸಾಲ ಮಾಡಬೇಕಾಗುವುದು. ದಾಂಪತ್ಯದಲ್ಲಿ ಪರಸ್ಪರರ ಹೊಂದಾಣಿಕೆಯು ಕಾಣಿಸುವುದು. ಮಕ್ಕಳನ್ನು ಪಡೆದುಕೊಳ್ಳುವ ಚಿಂತೆಯು ಕಾಡುವುದು.

ವೃಶ್ಚಿಕ ರಾಶಿ :ನಿಮಗೆ ತಂದೆಯಿಂದ ಬರಬೇಕಾದ ಆಸ್ತಿಯ ಬಗ್ಗೆ ಸಮಾಲೋಚನೆ ಮಾಡುವಿರಿ. ಉದ್ಯೋಗದಲ್ಲಿ ನೀವು ಬಹಳ ಪ್ರಾಮಾಣಿಕವಾಗಿ ಇರುವಿರಿ. ಮಕ್ಕಳು ವಿದ್ಯಾಭ್ಯಾಸದಲ್ಲಿ ಅನಿರೀಕ್ಷಿತ ಬೆಳವಣಿಯಾಗುವುದು ಖುಷಿ ಕೊಡುವುದು. ಎಲೆಕ್ಟ್ರಾನಿಕ್ ವಸ್ತು ವಸ್ತುಗಳ ದುರಸ್ತಿ ಮಾಡಬೇಕಾಗಬಹುದು. ಉದ್ಯೋದ ಸ್ಥಳದಲ್ಲಿ ನಿಮ್ಮನ್ನು ಸ್ಥಾನಭ್ರಷ್ಟರಾಗುವ ಭೀತಿಯು ಇರಲಿದೆ. ವಿದ್ಯಾರ್ಥಿಗಳು ಓದಿನ ಕಡೆ ವಿಶೇಷ ಗಮನವನ್ನು ಕೊಡುವುದು ಕಷ್ಟವಾದೀತು. ಬಂಧುಗಳ ಕುಹಕಕ್ಕೆ ಸಿಲುಕುವಿರಿ. ಆಸ್ತಿಯಲ್ಲಿ ಪಾಲುದಾರಿಕೆಯು ನಿಮಗೆ ಸಮಾಧಾನ ಕೊಡದು. ವಿವಾಹಕ್ಕೆ ಸಂಬಂಧಿಸಿದಂತೆ ಕೆಲವು ನಿರ್ಧಾಗಳನ್ನು ನೀವು ತಪ್ಪಾಗಿ ತೆಗೆದುಕೊಳ್ಳುವಿರಿ. ಭೂಮಿಯ ವ್ಯವಹಾರಕ್ಕೆ ಆಪ್ತರನ್ನು ಜೋಡಿಸಿಕೊಳ್ಳುವಿರಿ. ಇನ್ನೊಬ್ಬರ ಒತ್ತಾಯದ ಕಾರಣಕ್ಕೆ ನೀವು ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ. ಮಕ್ಕಳಿಂದ ಆರ್ಥಿಕ ಸಹಾಯವು ಸಿಗುವುದು.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು