Daily Horoscope: ಈ ರಾಶಿಯವರಿಗೆ ತಮ್ಮ ಸಂಪತ್ತಿನ ಮೇಲೆ ಹೆಚ್ಚು ಗಮನ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 28: ಸಂಪತ್ತಿನ ಕಡೆ ಅಧಿಕವಾದ ಗಮನ ಇರಲಿದ್ದು ಸಂಬಂಧಗಳು ಸಡಿಲಾಗುವುದು. ನಿಮ್ಮ ಪ್ರತಿಭೆಯನ್ನು ತೋರಿಸುವ ಮನಸ್ಸು ಮಾಡುವಿರಿ. ಭೂಮಿಯ ಮೇಲೆ ಹೂಡಿಕೆ ಮಾಡುವ ನಿಮ್ಮ ಯೋಜನೆಗೆ ಪ್ರೋತ್ಸಾಹವು ಸಿಗಬಹುದು. ಹಾಗಾದರೆ ಸೆಪ್ಟೆಂಬರ್​ 28ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರಿಗೆ ತಮ್ಮ ಸಂಪತ್ತಿನ ಮೇಲೆ ಹೆಚ್ಚು ಗಮನ
ಈ ರಾಶಿಯವರಿಗೆ ತಮ್ಮ ಸಂಪತ್ತಿನ ಮೇಲೆ ಹೆಚ್ಚು ಗಮನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 28, 2024 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಸಿದ್ಧ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 23 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:23 ರಿಂದ 10:53, ಯಮಘಂಡ ಕಾಲ ಮಧ್ಯಾಹ್ನ 01:53ರಿಂದ ಸಂಜೆ 03:23ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:23 ರಿಂದ 07:53 ರ ವರೆಗೆ.

ಸಿಂಹ ರಾಶಿ: ಇಂದು ನಿಮಗೆ ಸಕಲಾಕ್ಕೆ ಸಿಗುವ ಸಹಾಯದಿಂದ ಸಂತೋಷವಾಗವುದು. ಇನ್ನೊಬ್ಬರ ನೋವಿಗೆ ಸ್ಪಂದನೆ ಸರಿಯಾಗಿ ಇರಲಿ. ಸಾಮಾಜಿಕ ಗೌರವವು ನಿಮಗೆ ಸಿಗಲಿದ್ದು ಇದರಿಂದ ಅಹಂಕಾರವೂ ಬರಬಹುದು. ಪರಿಚಿತರ ವಿಚಾರದಲ್ಲಿ ನೀವು ನಕಾರಾತ್ಮಕವಾಗಿ ಮಾತನಾಡುವುದು ಸರಿಯಾಗದು. ಮಕ್ಕಳಿಗೆ ನಿಮ್ಮ ಪ್ರೀತಿಯ ಅವಶ್ಯಕತೆ ಇರಲಿದೆ. ಸಂಪತ್ತಿನ ಕಡೆ ಅಧಿಕವಾದ ಗಮನ ಇರಲಿದ್ದು ಸಂಬಂಧಗಳು ಸಡಿಲಾಗುವುದು. ನಿಮ್ಮ ಪ್ರತಿಭೆಯನ್ನು ತೋರಿಸುವ ಮನಸ್ಸು ಮಾಡುವಿರಿ. ಭೂಮಿಯ ಮೇಲೆ ಹೂಡಿಕೆ ಮಾಡುವ ನಿಮ್ಮ ಯೋಜನೆಗೆ ಪ್ರೋತ್ಸಾಹವು ಸಿಗಬಹುದು. ಉದ್ಯಮದಲ್ಲಿ ನಿಮಗೆ ಆದಾಯವು ಕಡಿಮೆ ಆಗಬಹುದು. ಒಪ್ಪಿಕೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮುಗಿಸಿ. ನಿಮ್ಮವರಿಗಾಗಿ ಕೆಲವನ್ನು ಕಳೆದುಕೊಳ್ಳಬೇಕಾಗುವುದು. ಸಮಸ್ಯೆಯನ್ನು ಸರಳ ಮಾಡಿಕೊಂಡು ಬಗೆಹರಿಸಿಕೊಳ್ಳಿ. ಸಂತಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗುವ ಸಾಧ್ಯತೆ ಇದೆ. ಸಾಹಸ ಪ್ರವೃತ್ತಿ ಒಳ್ಳೆಯದಲ್ಲ.

ಕನ್ಯಾ ರಾಶಿ: ನಿಮ್ಮ ಹಸ್ತಕ್ಷೇಪವು ಇತರರಿಗೆ ಕಷ್ಟವಾದೀತು.‌ ನಿಮ್ಮ ಅತಿಯಾದ ಸಲುಗೆಯು ದ್ವೇಷಕ್ಕೆ ಕಾರಣವೂ ಆಗಬಹುದು. ಆರ್ಥಿಕ ಸಹಾಯವನ್ನು ನಿಮ್ಮ ಸ್ನೇಹಿತರು ನಿಮ್ಮಿಂದ ಬಯಸುವರು. ಒತ್ತಡಗಳನ್ನು ಮರೆತು ಒಂದೆಡೆ ಇರುವುದು ಸುಖವೆನಿಸುವುದು. ಹೆಚ್ಚಿನ‌ ಒತ್ತಡವನ್ನು ಮಾಡಿಕೊಳ್ಳದೇ ಕೆಲಸವನ್ನು ಮುಗಿಸುವಿರಿ. ವಿದೇಶಪ್ರಯಾಣವನ್ನು ಹೆಚ್ಚು ಅನಂದದಿಂದ ಮಾಡುವಿರಿ. ಆತ್ಮಾವಲೋಕನದಿಂದ ನಿಮಗೆ ಬದಲವಾಣೆ ಬೇಕು ಎನಿಸಬಹುದು. ನಿಮ್ಮ ಭಾವನೆಗಳನ್ನು ಆಪ್ತರ ಜೊತೆ ಹಂಚಿಕೊಂಡು ಸಮಾಧಾನ ಪಡುವಿರಿ. ವಿವಾಹದ ಮಾತುಕತೆಗಳು ನಿಮಗೆ ಸಂತೋಷವನ್ನು ಕೊಡುವುದು. ಅನಪೇಕ್ಷಿತ ಸ್ಥಳದಲ್ಲಿ ನೀವು ಇರಲು ಬಯಸುವುದಿಲ್ಲ. ವಾತಸಂಬಂಧಿ ಖಾಯಿಲೆಯು ಹೆಚ್ಚಾಗಬಹುದು. ದಾನ ಮಾಡವ ಮನಸ್ಸಾಗಲಿದೆ. ನಿಮ್ಮ ಬಗ್ಗೆ ಪ್ರಚಾರದ ಗೀಳು ಇರಬಹುದು. ಖ್ಯಾತಿಯನ್ನು ಪಡೆಯುವ ಆಸೆಯಾಗುವುದು. ಹೋಲಿಕೆಯಿಂದ ಕೀಳರಿಮೆ‌ ನಿಮಗೆ ಬರಬಹುದು.

ತುಲಾ ರಾಶಿ: ದುಷ್ಟರ ಜೊತೆಗೂ ಒಂದು ರಾಜಿ ಮಾಡಿಕೊಳ್ಳಿ.‌ ಇಲ್ಲವಾದರೆ ನಿಮಗೆ ನೆಮ್ಮದಿ ಇರದು. ನಿಮ್ಮ ಪ್ರೇಮವು ಇತರರಿಗೆ ಗ್ರಾಸವಾಗಬಹುದು. ವಾಹನ ಖರೀದಿಸಲು ನಿಮಗೆ ಹಣಕಾಸಿನ ಸಹಾಯವು ಸಿಗಲಿದೆ. ತಂದೆಯ ಮಾತು ನಿಮಗೆ ಕಿರಿಕಿರಿ ಎನಿಸಬಹುದು. ದಾಂಪತ್ಯದಲ್ಲಿ ಕಲಹವಿರಲಿದ್ದು ಮುಂದುವರಿಸುವುದು ಬೇಡ. ಹಗುರವಾದುದನ್ನು ಎತ್ತುವುದು ಸುಲಭ. ಭಾರವಾದುದನ್ನು ಇಟ್ಟುಕೊಳ್ಳುವುದು ಸುಲಭ. ಹೆಚ್ಚು ಪ್ರಯತ್ನದಿಂದ ಅಲ್ಪ ಲಾಭವಾಗಲಿದೆ‌. ಕೃಷಿಯಲ್ಲಿ ಇಂದು ನೀವು ಹೆಚ್ಚು ತೊಡಗಿಸಿಕೊಳ್ಳುವಿರಿ. ನೇರವಾದ ಮಾತಿನಿಂದ ಇತರರಿಗೆ ನೋವನ್ನು ಉಂಟುಮಾಡುವಿರಿ. ನಿಮ್ಮ ನಿಜವಾದ ಆಪ್ತರು ನಿಮಗೆ ಗೊತ್ತಾಗುವರು. ತಾಯಿಯ ಜೊತೆ ವಾಗ್ವಾದವನ್ನು ಮಾಡಲಿದ್ದೀರಿ. ಸುಳ್ಳನ್ನು ಹೇಳುವುದು ಗೊತ್ತಾದೀತು. ನಿಮ್ಮನ್ನು ನಿರ್ಲಕ್ಷಿಸುವ ಸಹೋದ್ಯೋಗಿಗಳ ಜೊತೆ ಬೆರೆಯಲು ಪ್ರಯತ್ನಿಸಿ. ವೃತ್ತಿಯಲ್ಲಿ ನಿಮಗೆ ಯಾರಿಂದಲಾದರೂ ಅನನುಕೂಲತೆಯು ಸೃಷ್ಟಿಯಾಗಬಹುದು.

ವೃಶ್ಚಿಕ ರಾಶಿ; ಇಂದು ಖರ್ಚು ಮಾಡುವ ಮೊದಲು ಏನು ಲಾಭವಿದೆ ಎಂಬ ಲೆಕ್ಕಾಚಾರದಲ್ಲಿ ಇರುವಿರಿ. ಇಂದು ಅಪರಿಚಿತ ಕರೆಗಳು ನಿಮ್ಮ ಕೆಲಸಕ್ಕೆ ತೊಂದರೆ ಕೊಡಬಹುದು. ದಾಂಪತ್ಯದಲ್ಲಿ ಪ್ರೀತಿಯು ಅಧಿಕವಾಗಿದ್ದು ಬಹಳ ಸಂತೋಷವನ್ನು ಅನುಭವಿಸುವಿರಿ. ಅಪರಿಚಿತರು ನಿಮ್ಮ ಮನೆಗೆ ಭೇಟಿಯಾಗಲಿದ್ದೀರಿ. ವೃತ್ತಿಯಲ್ಲಿ ನಿಮ್ಮ ಸಹಕಾರವು ಅಧಿಕವಾಗಿದ್ದು ಪ್ರಶಂಸೆಯು ಸಿಗಲಿದೆ. ಕಬ್ಬಿಣದಂತಹ ವಸ್ತುವೂ ಸಮಯ ಸರಿದಾಗ ರೂಪಾಂತರವಾಗುವುದು. ತಾಳ್ಮೆಯು ನಿಮ್ಮನ್ನು ರೂಪಾಂತರ ಮಾಡುವುದು. ಭವಿಷ್ಯದ ಬಗ್ಗೆ ಭಯಗೊಂಡಿದ್ದು ಮಾರ್ಗದರ್ಶನವನ್ನು ಪಡೆಯುವಿರಿ. ನಿಮ್ಮ ಬಗ್ಗೆ ದೂರು ಸಲ್ಲಿಸುವರು. ಯಾರದೋ ಮಾತು ನಿಮಗೆ ಹಿಂಸೆಯನ್ನು ತರಬಹುದು. ಕಳೆದುಹೋದ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲಿದ್ದೀರಿ. ಆಪ್ತರ ಮೇಲೆ‌ ಅಪನಂಬಿಕೆ ಇಟ್ಟು ಎಲ್ಲವೂ ಹಾಳಾಗುವುದು. ನೀವಾಡುವ ಮಾತುಗಳು ನಂಬಿಕೆ ಬರುವಂತಿರಲಿ. ನಿಮ್ಮ ದೃಷ್ಟಿಗೆ ದೋಷಬರಬಹುದು.

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​