Daily Horoscope: ಈ ರಾಶಿಯವರಿಗೆ ಅಭದ್ರತೆ ಕಾಡಬಹುದು, ದೂರದ ಪ್ರಯಾಣ ಮುಂದೂಡಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಅಕ್ಟೋಬರ್​ 19: ತಂದೆಯಿಂದ ನಿಮಗೆ ಶುಭವಾರ್ತೆ ಸಿಗಬಹುದು. ನಿಮ್ಮ ಕೈಲಾಗುವ ಕೆಲಸವನ್ನಷ್ಟೇ ಮಾಡಿ. ನಿಮ್ಮನ್ನು ಮೀರಿದ ಕೆಲಸವನ್ನು ಮಾಡುವುದು ಬೇಡ. ವ್ಯಾಪರ ಸುಗಮವಾಗಿ ಸಾಗುವುದು. ಹಾಗಾದರೆ ಅಕ್ಟೋಬರ್​ 19ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರಿಗೆ ಅಭದ್ರತೆ ಕಾಡಬಹುದು, ದೂರದ ಪ್ರಯಾಣ ಮುಂದೂಡಿ
ಈ ರಾಶಿಯವರಿಗೆ ಅಭದ್ರತೆ ಕಾಡಬಹುದು, ದೂರದ ಪ್ರಯಾಣ ಮುಂದೂಡಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2024 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಸಿದ್ಧಿ​, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 09 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:22 ರಿಂದ 10:50ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:45 ರಿಂದ 03:13ರವರೆಗೆ, ಗುಳಿಕ ಕಾಲ ಸಂಜೆ 06:26 ರಿಂದ 07:54 ರವರೆಗೆ.

ಸಿಂಹ ರಾಶಿ: ಅನಪೇಕ್ಷಿತ ಮಾತನ್ನು ಬಿಡುವುದು ಒಳ್ಳೆಯದು. ಅಧಿಕಾರದ ಹಿಡಿತ ತಪ್ಪುವ ಸಾಧ್ಯತೆ ಇದೆ. ನಿಮ್ಮ ಇಷ್ಟದ‌ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ಸಂಗಾತಿಯ ನಡುವೆ ಅತಿಯಾದ ಕಲಹವು ಆಗಬಹುದು. ಆಸ್ತಿಯ ವಿಚಾರದಲ್ಲಿ ನಿಮಗೆ ಹಿನ್ನಡೆಯಾಗಲಿದೆ. ನ್ಯಾಯಾಲಯದಿಂದ ದಂಡನೆ ಸಿಗುವ ಸಾಧ್ಯತೆ ಇದೆ. ಯಾರದೋ ಮನಸ್ಸಿಗೂ ನೋವಾಗುವಂತೆ ಮಾತನಾಡುವಿರಿ‌. ನಿಮ್ಮ ಆರೋಗ್ಯದ ರಕ್ಷಣೆಯ ಬಗ್ಗೆ ನಿಮಗೇ ನಂಬಿಕೆ ಸಾಲದು. ನಿರ್ಲಕ್ಷ್ಯದಿಂದ ನೀವು ಹಣವನ್ನು ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳೂ ಹಿನ್ನಡೆಯನ್ನು ಸಾಧಿಸುವರು. ವಿದ್ಯಾರ್ಥಿಗಳಿಗೆ ಮಾರ್ಗದರ್ಶನದ ಕೊರತೆಯು ಕಾಣಿಸುವುದು. ಮಕ್ಕಳು ನಿಮ್ಮನ್ನು ಕಂಡು ಹಾಸ್ಯ ಮಾಡಿಯಾರು.‌ ಹೆದರಿದಷ್ಟೂ ನೀವು ಅಶಕ್ತರಾಗುವಿರಿ. ಗೆಲುವಿಗಾಗಿ ಅಧಿಕ ಶ್ರಮದ ಅವಶ್ಯಕತೆ ಇರಲಿದೆ. ಯಾರ ಜೊತೆಯೂ ಅಸಂಬದ್ಧ ಚರ್ಚೆಗೆ ಹೋಗುವುದು ಬೇಡ.

ಕನ್ಯಾ ರಾಶಿ: ಅಧಿಕಸರವಿಲ್ಲದೇ ಉಭಯಸಂಕಟದ ಸ್ಥಿತಿ ಬರಬಹುದು. ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ವ್ಯಾಮೋಹದಿಂದ ಕೆಲವನ್ನು ನೀವು ಬಿಡುವುದು ಕಷ್ಟವಾದೀತು. ನಿಮ್ಮ ವ್ಯವಹಾರದ ಬಗ್ಗೆ ಕಣ್ಣಿಟ್ಟಿರುತ್ತಾರೆ. ನಿಮ್ಮ ಆಪ್ತರೆನಿಸಕೊಂಡವರ ಜೊತೆ ಬೇಕಾದುದಷ್ಟನ್ನೇ ಮಾತನಾಡಿ. ನಿಮ್ಮನ್ನು ಬಳಸಿಕೊಳ್ಳುವವರ ಬಗೆಗೆ ಎಚ್ಚರಿಕೆ ಅಗತ್ಯ. ಏಕಾಗ್ರತೆಯಿಂದ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ತಂದೆಯಿಂದ ನಿಮಗೆ ಶುಭವಾರ್ತೆ ಸಿಗಬಹುದು. ನಿಮ್ಮ ಕೈಲಾಗುವ ಕೆಲಸವನ್ನಷ್ಟೇ ಮಾಡಿ. ನಿಮ್ಮನ್ನು ಮೀರಿದ ಕೆಲಸವನ್ನು ಮಾಡುವುದು ಬೇಡ. ವ್ಯಾಪರ ಸುಗಮವಾಗಿ ಸಾಗುವುದು. ಮನೆಯವರಿಂದ ದೂರವಿದ್ದೇನೆಂಬ ಭಾವವು ಕಾಡಬಹುದು. ದೂರ ವಾಹನದಲ್ಲಿ ಸಂಚಾರ ಮಾಡುವುದು ಹಿತವಾಗದು. ನಿಮ್ಮ ಬಳಿ ಬಂದವರಿಗೆ ಸಾಂತ್ವನದ ಸುಖವು ಬೇಕಾಗಿರಬಹುದು. ಒಳ್ಳೆಯ ಮಾತುಗಳು ಸಕಾರಾತ್ಮಕ ಪರಿಣಾಮವನ್ನು ಉಂಟುಮಾಡುವುದು. ಹಳೆಯ ಗೆಳೆತನವು ಪುನಃ ಸೇರುವುದು.

ತುಲಾ ರಾಶಿ: ಇಂದು ನಿಮ್ಮ ಎಂತಹ ಎಚ್ಚರಿಕೆಯೂ ಹಾದಿ ತಪ್ಪಿಸೀತು. ಬೇಗನೆ ಯಶಸ್ಸು ಸಿಗುವುದೆಂದು ದಾರಿ ಬದಲಿಸಬಾರದು. ಸ್ಥಿರಾಸ್ತಿಯ ವಿಚಾರದಲ್ಲಿ ನಿಮಗೆ ಲಾಭವಾಗುವುದು. ಯಾವುದೇ ಸಂದರ್ಭವು ಬಂದರೂ ಅದನ್ನು ಧೈರ್ಯದಿಂದ ಎದುರಿಸುವಿರಿ. ನಿಮಗೆ ಅಭದ್ರತೆಯು ಕಾಡಬಹುದು. ಸ್ನೇಹಿತರ ಸಹವಾಸದಿಂದ ನಿಮಗೆ ಅಪವಾದಗಳು ಬರಬಹುದು. ಮಕ್ಕಳಿಂದ ಸಂತೋಷವು ಸಿಗಲಿದೆ. ನೀವೇ ಹೆಣೆದ ಬೇಲಿಯಲ್ಲಿ ಸಿಕ್ಕಿಬೀಳುವಿರಿ. ನಿಮ್ಮ ಸಮಯವು ಬೇರೆಯವರ ಕಾರಣಕ್ಕೆ ದುರಪಯೋಗವಾಗಬಹುದು. ತೊಂದರೆಯಾಗುತ್ತದೆ ಎಂದು ಏನನ್ನೂ ಮಾಡದೇ ಇರುವುದು ಬೇಡ. ಹೊಸ ವಸ್ತುವನ್ನು ಖರೀದಿಸುವಾಗ ಪರೀಕ್ಷಿಸಿ. ನಿಮ್ಮ ನಿಲುವು ಸ್ಪಷ್ಟವಾಗಿರಿ. ಅನಗತ್ಯ ಖರ್ಚಿಗೆ ಅವಕಾಶವನ್ನು ಕೊಟ್ಟು ಸಂಕಟಪಡುವಿರಿ. ನಿಮಗಿರುವ ಹೊಣೆಗಾರಿಕೆ ತಪ್ಪಬಹುದು. ನಿಮ್ಮ ಉತ್ಸಾಹವು ಯಾರನ್ನೂ ಏನೂ ಮಾಡೀತು. ಪ್ರಯಾಣದಲ್ಲಿ ಜಾಗರೂಕತೆ ಅವಶ್ಯಕ. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳನ್ನು ನೀವು ಕೇಳಿಬೇಕಾಗಬಹುದು.

ವೃಶ್ಚಿಕ ರಾಶಿ: ಇನ್ನೊಬ್ಬರನ್ನು ಗೆಲ್ಲುವುದಕ್ಕಿಂತ ಖುಷಿಗಾಗಿ ಆಟವಾಡಿ. ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ‌. ಆಲಸ್ಯದಿಂದಾಗಿ ನಿಮಗೆ ಸಿಗುವ ಅವಕಾಶಗಳನ್ನು ಕಳೆದುಕೊಳ್ಳುವಿರಿ. ಅಲಂಕಾರಿಕ ವಸ್ತುಗಳನ್ನು ಹೆಚ್ಚು ಬಳಕೆ ಮಾಡುವಿರಿ. ನಿಮ್ಮ ಮಾತುಗಳು ಅಸ್ಪಷ್ಟವಾಗಿರುವುದು. ನಿಮ್ಮ ಅಸೂಯೆಯೇ ನಿಮಗೆ ಮಾರಕವಾಗುವುದು. ಹಳೆಯ ಸ್ನೇಹಿತರ ಬಗ್ಗೆ ನಿಮಗೆ ಅಸಮಾಧಾನವಿರುವುದು. ಪುಣ್ಯಕ್ಷೇತ್ರಕ್ಕೆ ಕುಟುಂಬದ ಜೊತೆ ಹೋಗುವಿರಿ. ಸಾಹಿತ್ಯಾಸಕ್ತರಿಗೆ ಪ್ರಶಂಸೆಯು ಸಿಗುವುದು. ಎಲ್ಲ ಸಮಯವೂ ಒಂದೇ ರೀತಿಯಲ್ಲಿ ಇರಲಾರದು. ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆಯು ಕಷ್ಟವಾಗುವುದು. ಗೆಳೆತನಕ್ಕೆ ಹೊಸ ವ್ಯಕ್ತಿಗಳು ಸಿಗುವರು.‌ ಅವರವರ ಸಾಮರ್ಥ್ಯವನ್ನು ನೀವು ತಿಳಿದಿಲ್ಲ. ಕೆಲವನ್ನು ನೀವು ಸಣ್ಣವರಿಂದ ಕಲಿಯಬೇಕಾಗುವುದು. ಬಹಳ ದಿನಗಳಿಂದ ಕಾಣಿಸಿಕೊಳ್ಳದ ನೋವು ಕಾಣಿಸಿಕೊಳ್ಳಬಹುದು. ಸಹೋದ್ಯೋಗಿಗಳ ಜೊತೆ ಆಪ್ತವಾಗಿ ಮಾತನಾಡುವಿರಿ.

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ