Horoscope Today June 17, 2024: ಮನೆ ಕಟ್ಟಲು ಸಾಲ ಮಾಡುವಿರಿ, ಮಾರಾಟದಲ್ಲಿ ಚುರುಕುತನ ಅವಶ್ಯಕ

2024 ಜೂನ್ 17 ದಿನ ಭವಿಷ್ಯ: ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ರಾಶಿ ಭವಿಷ್ಯ ಹೇಗಿರಲಿದೆ? ಶುಭಕಾಲ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ ಕಾದಿದೆ ಎಂಬಿತ್ಯಾದಿ ಮಾಹಿತಿಯನ್ನು ನಿತ್ಯ ಭವಿಷ್ಯದಿಂದ ತಿಳಿಯಿರಿ.

Horoscope Today June 17, 2024: ಮನೆ ಕಟ್ಟಲು ಸಾಲ ಮಾಡುವಿರಿ, ಮಾರಾಟದಲ್ಲಿ ಚುರುಕುತನ ಅವಶ್ಯಕ
ಮನೆ ಕಟ್ಟಲು ಸಾಲ ಮಾಡುವಿರಿ, ಮಾರಾಟದಲ್ಲಿ ಚುರುಕುತನ ಅವಶ್ಯಕ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 16, 2024 | 6:29 PM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಸೋಮವಾರ (ಜೂನ್ 17) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠಾ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದಶಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ವರಿಯಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:42 ರಿಂದ 09:20ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:57 ರಿಂದ ಮಧ್ಯಾಹ್ನ 12:34ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:11 ರಿಂದ 03:48ರ ವರೆಗೆ.

ಮೇಷ ರಾಶಿ: ಇಂದು ನಿಮ್ಮಿಂದ ಪ್ರೀತಿಯನ್ನು ಬಯಸುವವರಿಗೆ ಅದನ್ನು ಕೊಡಿ. ಸಂತೋಷದಿಂದ ಇರುತ್ತಾರೆ. ಬೆಚ್ಚಗಿನ ವಾತಾವರಣವು ನಿಮಗೆ ಇಂದು ಹಿತವಾಗಲಿದೆ. ಅನಿರೀಕ್ಷಿತ ವ್ಯಕ್ತಿಗಳ ಭೇಟಿಯಿಂದ ಸಂತಸ. ವೈದ್ಯವೃತ್ತಿಯನ್ನು ನಡೆಸುತ್ತಿರುವವರು ಆರ್ಥಿಕವಾಗಿ ಬಲಗೊಳ್ಳುವರು. ವಿದೇಶದಲ್ಲಿರುವ ಕುಟುಂಬಸ್ಥರು ಆರ್ಥಿಕವಾದ ಸಹಕಾರವನ್ನು ನೀಡುವರು. ಪಾದಗಳಲ್ಲಿ ನೋವು ಕಾಣಿಸಬಹುದು. ಮೊಬೈಲ್ ಮುಂತಾದ ಉಪಕರಣಕ್ಕೆ ಒಗ್ಗಿ ಕಣ್ಣು ಹಾಳಾಗುವುದು. ಸರಿಯಾದ ಕೆಲಸವನ್ನು ಸರಿ ಇಲ್ಲ‌ ಎಂದು ಹೇಳಿ ನಿಮ್ಮನ್ನು ಕುಗ್ಗಿಸಬಹುದು. ಇದಾವುದಕ್ಕೂ ಬಗ್ಗುವ ಅವಶ್ಯಕತೆ ಇಲ್ಲ. ನಿಮ್ಮ ಮಾರ್ಗದಲ್ಲಿ ನೀವಿರಿ. ಬರಹಗಾರರಿಗೆ ತಮ್ಮ ಬರಹವನ್ನು ವಿರೋಧಿಸುವವರ ಮಧ್ಯದಲ್ಲಿ ವೇದಿಕೆಯನ್ನು ಹಂಚಿಕೊಳ್ಳುವ ಸಂದರ್ಭವಿದೆ. ಕೋರ್ಟ್ ವ್ಯವಹಾರಗಳಲ್ಲಿ ನಿಮಗೆ ಶುಭಸಮಾಚಾರವಿರುತ್ತದೆ. ನಿಮ್ಮೆದುದು ಅಸಭ್ಯವಾಗಿ ಯಾರಾದರೂ ವರ್ತಿಸಿದರೆ ಅದಕ್ಕೆ ಪ್ರತಿಕ್ರಿಯೆ ಕೊಡುವುದು ಬೇಡ.

ವೃಷಭ ರಾಶಿ: ನಿಮ್ಮ ಆಲೋಚನಗಳನ್ನು ಮನೆಯವರ ಮೇಲೆ ಹೇರುವುದು ಬೇಡ. ಬಂಧುಗಳು‌ ನಿಮ್ಮ ವ್ಯಕ್ತಿತ್ವದ ಬಗ್ಗೆ ಮಾತನಾಡುವರು. ಸಂಪತ್ತಿನ ಅನಿರೀಕ್ಷಿತವಾಗಿ ಖರ್ಚಾಗಲಿದೆ. ತಿಳಿವಳಿಕಯಿಂದ‌ ಕೂಡಿದ ನಿಮ್ಮ ಜೀವನ ಸುಗಮವಾಗಲಿದೆ. ಅಪರಿಚಿತರು ನಿಮ್ಮ ಸಖ್ಯವನ್ನು ಬಯಸಿ ಬರಬಹುದು. ವಿಚಾರ ಸಂಕೀರ್ಣದಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ತಿಳಿವಳಿಕೆ ಇಲ್ಲದವರಂತೆ ವರ್ತಿಸುವುದು ಬೇಡ. ನೂತನ ವಸ್ತ್ರವನ್ನು ಖರೀದಿ ಮಾಡಲಿದ್ದೀರಿ. ಕೌಟುಂಬಿಕವಾದ ಕೆಲವು ಜವಾಬ್ದಾರಿಗಳನ್ನು ಮಕ್ಕಳಿಗೆ ಕೊಟ್ಟು ಆರಾಮಾಗಿ ಇರುವಿರಿ. ಸಣ್ಣ ವ್ಯಾಪಾರಿಗಳಿಗೆ ಹೆಚ್ಚು ವ್ಯವಹಾರ ಆಗುವ ಸಾಧ್ಯತೆಗಳಿವೆ. ಧನದ ಆದಾಯವು ನಿರೀಕ್ಷೆಯನ್ನು ಪೂರ್ಣವಾಗಿ ತಲುಪದು. ಪಾಪ ಪುಣ್ಯದ ಲೆಕ್ಕಾಚಾರವನ್ನು ಮಾಡುವಿರಿ. ಸಿದ್ಧ ಉಡುಪು ತಯಾರಕರಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇರಲಿಸೆ. ಸಂಗಾತಿ ಮತ್ತು ಮಕ್ಕಳನ್ನು ಅವರಷ್ಟಕ್ಕೆ ಬಿಟ್ಟು ನೀವು ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ.

ಮಿಥುನ ರಾಶಿ: ಇಂದು ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಸ್ವ ಆಸಕ್ತಿಯಿಂದ ತೊಡಗಿಕೊಳ್ಳುವರು. ಆಯಾಸವಿದ್ದರೂ ಇನ್ನೊಬ್ಬರ ಒತ್ತಾಯಕ್ಕೆ ಅವರೊಂದಿಗೆ ವಾತುವಿಹಾರಕ್ಕೆಂದು ಹೋಗುವಿರಿ. ತಂತ್ರಜ್ಞರಿಗೆ ಹೊಸ ಹೊಸ ಅವಕಾಶಗಳು ದೊರೆಯುವ ಸಾಧ್ಯತೆ ಇದೆ. ದಂತ ವೈದ್ಯರಿಗೆ ಹೆಚ್ಚು ಅನುಕೂಲವಿರುತ್ತದೆ. ಬಂಧುಗಳ ಸಹಕಾರ ನಿಮಗೆ ಹೆಚ್ಚಾಗಿ ದೊರೆಯುತ್ತದೆ. ನಿಮಗೆ ಇಂದು ಯಾವುದೇ ವಿಚಾರ ಅತಿ ಎಂದು ಕಂಡರೆ ಅದನ್ನು ಬಿಡಿ.‌ ಬದಲಾಯಿಸಿ ಮತ್ತೊಂದರ ಕಡೆ ಗಮನಹರಿಸಿ. ಕ್ರೀಡಾಪಟುಗಳಿಗೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಸೌಲಭ್ಯ ದೊರೆಯುತ್ತದೆ. ಪ್ರೀತಿ ಪ್ರೇಮದ ಸೆಳೆತಕ್ಕೆ ಸಿಲುಕುವ ಸಾಧ್ಯತೆ ಇದೆ. ಸರ್ಕಾರಿ ವ್ಯವಹಾರಗಳಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಇರುತ್ತದೆ. ತಂದೆಯಿಂದ ನಿಮ್ಮ ವ್ಯವಹಾರಗಳಿಗೆ ಸಹಕಾರ, ಸಹಾಯ ದೊರೆಯುತ್ತದೆ. ವೃತ್ತಿಯಲ್ಲಿ ಯಾವುದೇ ರೀತಿ ವ್ಯತ್ಯಾಸವಿಲ್ಲ. ಪ್ರಯಾಣವು ಅನಿವಾರ್ಯವಾದರೂ ಅದರಿಂದ ಶುಭ ಸುದ್ದಿಯು ನಿಮಗೆ ಇರುವುದು.

ಕರ್ಕ ರಾಶಿ: ನೀವು ವಿದ್ಯಾಭ್ಯಾಸಕ್ಕಾಗಿ ಉತ್ತಮ‌ವಾದ ವಿದ್ಯಾಕೇಂದ್ರವನ್ನು ಹುಡುಕುವಿರಿ. ಸಮಾಜಿಕ ಕಾರ್ಯದ ಬಗ್ಗೆ ಆಸಕ್ತಿ ಬರುವುದು. ವಿದ್ಯುತ್ ಉಪಕರಣಗಳಿಂದ ಹಣವು ಖರ್ಚಾಗಬಹುದು. ಸಂಶೋಧಕರಿಗೆ ಸಂಶೋಧನೆಯಲ್ಲಿ ಉತ್ತಮ ಫಲಿತಾಂಶ ದೊರೆಯುವ ಸಾಧ್ಯತೆಗಳಿವೆ. ಉದ್ಯೋಗದ ನಿಮಿತ್ತ ದೂರದ ಸ್ಥಳಕ್ಕೆ ಹೋಗಿ ಬರುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಇಂದು ನಾನಾ ಸಮಸ್ಯೆಗಳು ಎದುರಾದರೂ ಅದನ್ನು ಧೈರ್ಯದಿಂದ ಎದುರಿಸಿ ಗೆಲ್ಲುವಿರಿ. ಶ್ರಮಕ್ಕೆ ಯೋಗ್ಯ ಫಲಿತಾಂಶ ಸಿಗದೇ ಇರಬಹುದು. ನಿಮ್ಮ ಚಾಣಾಕ್ಷದ ನಿರ್ಧಾರಗಳು ನಿಮ್ಮನ್ನು ಗುಂಪಿನಲ್ಲಿ ತೂಕದ ವ್ಯಕ್ತಿಯನ್ನಾಗಿಸುತ್ತದೆ. ಉದ್ಯೋಗದಲ್ಲಿ ತಾಂತ್ರಿಕ ಪರಿಣತರಿಗೆ ಹೆಚ್ಚಿನ ಸ್ಥಾನ ದೊರೆತು ಸಂತಸವಾಗುತ್ತದೆ. ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು. ಇನ್ನೊಬ್ಬರ ಬಗ್ಗೆ ಸದಾ ಅಸಮಾಧಾನವಿರಲಿದೆ. ಕೋಪಗೊಂಡ ಸಂಗಾತಿಯನ್ನು ನೀವು ಸಮಾಧಾನ ಮಾಡಬೇಕಾದೀತು.

ಸಿಂಹ ರಾಶಿ: ನೀವು ಅಧಿಕಾರವನ್ನು ಅನ್ಯ ಕಾರಣಕ್ಕೆ ಬಳಸಿಕೊಂಡು ಸಿಕ್ಕಿಬೀಳುವಿರಿ. ಪ್ರಭಾವಿಗಳ ಸಹಾಯವನ್ನು ಉದ್ಯೋಗಕ್ಕೆ ಬಳಸಿಕೊಳ್ಳುವಿರಿ. ಮನೆ ನಿರ್ಮಾಣ ಮಾಡುತ್ತಿದ್ದವರಿಗೆ ಇದ್ದ ಅಡೆತಡೆಗಳು ಸ್ವಲ್ಪಮಟ್ಟಿಗೆ ದೂರವಾಗಲಿದೆ. ಸಾಹಿತ್ಯದಲ್ಲಿ ಆಸಕ್ತರಿಗೆ ಹೆಚ್ಚಿನ ಕೆಲಸ ದೊರೆಯುತ್ತದೆ. ಬಂಧುಗಳ ಗಲಾಟೆಗಳಲ್ಲಿ ಮಧ್ಯಸ್ಥಿಕೆ ವಹಿಸುವುದು ನಿಮಗೆ ದುಬಾರಿಯಾಗಬಹುದು. ಪೋಷಕರಿಂದ ಮಕ್ಕಳ ಆಸೆಗೆ ಪ್ರೋತ್ಸಾಹ ದೊರೆಯುತ್ತದೆ. ಮೂಳೆ ತೊಂದರೆ ಇರುವವರು ಚಿಕಿತ್ಸೆ ಪಡೆಯುವುದು ಒಳ್ಳೆಯದು. ಕೃಷಿ ಭೂಮಿ ವಿಸ್ತರಣೆಯನ್ನು ಮಾಡುವ ಕಾರ್ಯಕ್ಕೆ ಈಗ ಮುಂದಾಗುವಿರಿ. ಹಳೆಯ ಮಿತ್ರನ ಭೇಟಿಯಾಗಿದ್ದು ಅವರ ಹೆಚ್ಚು ಸಮಯವನ್ನು ಕಳೆಯುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿದೆ. ನಿಮ್ಮ ಮೇಲೆ‌ ನಂಬಿಕೆಯು ಕಡಿಮೆಯಾದೀತು. ಹೂಡಿಕೆಯ ವಿಚಾರದ ಬಗ್ಗೆ ಚರ್ಚೆ ನಡೆಸುವಿರಿ. ಕಛೇರಿಯಲ್ಲಿ ಒತ್ತಡದ ಕಾರ್ಯವನ್ನು ಮುಗಿಸಿದರೂ ನಿಮ್ಮಲ್ಲಿ ಉತ್ಸಾಹವು ಅಧಿಕವಾಗಿರುವುದು.

ಕನ್ಯಾ ರಾಶಿ: ಮಿತಿ ಮೀರಿದ ಕಾರ್ಯಗಳಿಂದ ದೇಹ ಮನಸ್ಸಿಗೆ ಹೆಚ್ಚು ಆಯಾಸ. ದಾಯಾದಿ ಕಲಹವು ಇಂದು ನ್ಯಾಯಾಲಯಕ್ಕೆ ಹೋಗಲಿದೆ‌. ಸಂಗಾತಿಯ ಜೊತೆ ಅನೌಪಚಾರಿಕ ಹರಟೆಯಿಂದ ಕಾಲವನ್ನು ಕಳೆಯುವಿರಿ. ಆರ್ಥಿಕಸಮಸ್ಯೆಯನ್ನು ಸಮಸ್ಯೆಯಾಗಿ ಇಟ್ಟುಕೊಳ್ಳದೇ ಅದರ ಮುಂದಿನ ಹಂತಕ್ಕೆ ಹೋಗಬೇಕಾಗಿದೆ. ಆದಾಯದ ಮೂಲದಲ್ಲಿ ವ್ಯತ್ಯಾಸವಾಗಲಿದೆ. ಹೊರಬರಲು ಸರಿಯಾದ ಅವಕಾಶವಿದೆ. ಇಂದಿನ ಯೋಜಿತ ಕೆಲಸಗಳು ಪೂರ್ಣಗೊಳ್ಳುತ್ತವೆ. ಗುಂಪಿನಲ್ಲಿದ್ದಾಗ ನೀವೇನು ಹೇಳುತ್ತೀರೆಂದು ಎಚ್ಚರ ವಹಿಸಿ. ಹಠಾತ್ ಟೀಕೆಗಳಿಗೆ ನೀವು ತೀವ್ರವಾಗಿ ಉದ್ವೇಗಕ್ಕೆ ಸಿಲುಕುವಿರಿ. ನಿಮ್ಮ ಶಕ್ತಿ ಮತ್ತು ಉತ್ಸಾಹವನ್ನು ಮರಳಿ ತರುವ ಒಂದು ಆನಂದಮಯ ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಬಂಧುಗಳ ನಡುವೆ ವಾಗ್ವಾದವು ನಡೆದು ವೈಮನಸ್ಯ ಉಂಟಾಗಬಹುದು. ಕಾರ್ಯದ ಒತ್ತಡದಿಂದ ಸಂಗಾತಿಯು ನಿಮ್ಮ ಜೊತೆ ಸರಿಯಾಗಿ ಮಾತನಾಡದೇ ಇರಬಹುದು. ಬೇಸರಿಸದೇ ನೀವೇ ಮಾತನಾಡಿಸಿ.

ತುಲಾ ರಾಶಿ: ಇಂದು ಬೇಕೆಂದೇ ಹಿತತ್ರುಗಳು ನಿಮ್ಮ ಸಂಪತ್ತನ್ನು ಕೇಳುವರು. ಹೂಡಿಕೆಗೆ ಬೇಕಾದ ಆಲೋಚನೆಗಳನ್ನು ಮಾಡಬಹುದು. ಮನೆಯನ್ನು ಕಟ್ಟಲು ಸಾಲವನ್ನು ಮಾಡಬೇಕಾಗುವುದು. ಮನೆಯ ಕೆಲಸಕ್ಕೆ ಸಹಾಯ ಮಾಡಲಿದ್ದೀರಿ. ನಿಮ್ಮ ಭಾವನೆಗಳಿಗೆ ಘಾಸಿಯಾಗುವ ಸಮಾಚಾರವು ಇಂದು ಬರಲಿದೆ. ಮಾತುಗಳನ್ನು ಹೆಚ್ಚು ಎಚ್ಚರದಿಂದ ಆಡಿ. ಇಲ್ಲದಿದ್ದರೆ ಮುಜುಗರಕ್ಕೆ ಒಳಗಾಗುವ ಸಂದರ್ಭವಿದೆ. ಹಣದ ಒಳಹರಿವು ಮಂದಗತಿಯಲ್ಲಿ ಇರಬಹುದು. ಮಾರಾಟದಲ್ಲಿ ಚುರುಕುತನ ಅವಶ್ಯಕ. ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಚಿತ್ತ ಚಾಂಚಲ್ಯ ನಿಮ್ಮನ್ನು ಒಂದು ಕಡೆಗೆ ಇರಲು ಬಿಡದು. ವೃತ್ತಿಯಲ್ಲಿ ಹೆಚ್ಚು ತಿರುಗಾಟವಿರಲಿದೆ. ಸಂಗಾತಿಯ ಸಿಡುಕಿನ ನುಡಿಗಳು ನಿಮಗೆ ನೋವು ತರುತ್ತದೆ. ಆಕಸ್ಮಿಕವಾಗಿ ಸಿಕ್ಕ ಉದ್ಯೋಗವನ್ನು ಸರಿಯಾಗಿ ಬಳಸಿಕೊಳ್ಳಿ. ಆರೋಗ್ಯದ ಏರಿಳಿತವನ್ನು ಯಾರ ಬಳಿಯಾದರೂ ಹೇಳಿ.

ವೃಶ್ಚಿಕ ರಾಶಿ: ಇಂದು ನೀವು ಸನ್ನಿವೇಶವೂ ಕೈ ಮೀರದಂತೆ ನೋಡಿಕೊಳ್ಳಿ. ಕಲಾವಿದರಿಗೆ ಗಲಿಬಿಲಿಯ ಸನ್ನಿವೇಶವು ಬರಲಿದೆ. ಅನಾರೋಗ್ಯ ವಿಚಾರವಾಗಿ ಸ್ನೇಹಿತರ ಜೊತೆ ಮಾತನಾಡಿ. ದೈನಂದಿನ ಸಂಪಾದನೆಯನ್ನು ಮಾಡುವವರಿಗೆ ಕಷ್ಟವಾಗುವುದು. ನ್ಯಾಯವಾದಿಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಆದಾಯವೂ ಹೆಚ್ಚಬಹುದು. ವಿದ್ಯಾರ್ಥಿಗಳು ಅಂತ್ಯಕಾಲದಲ್ಲಿ ಅಧ್ಯಯನ‌ ಮಾಡಿದರೆ ಯಾವ ಪ್ರಯೋಜನವಿಲ್ಲ. ಇಂದು ಸೇವಿಸುವ ಆಹಾರದಿಂದ ಅನಾರೋಗ್ಯ ಉಂಟಾಗಬಹುದು. ವ್ಯವಹಾರವನ್ನು ವ್ಯವಹಾರವಾಗಿಯೇ ಮಾಡಿ. ಆಗ ನಿಮ್ಮ ಮಾತಿಗೆ ಹೆಚ್ಚು ಬೆಲೆ ಬಂದೀತು. ಹೂಡಿಕೆಯು ದ್ವಿಗುಣವಾಗಬಹುದು. ಅದನ್ನು ಪಡೆದುಕೊಳ್ಳಲು ಕಷ್ಟವಾದೀತು. ನೌಕರರು ನಿಮ್ಮ‌ಆಪ್ತರಾಗಿ ನಿಮ್ಮ ಕೆಲಸದಲ್ಲಿ ಭಾಗಿಯಾಗುವರು. ನಿಮ್ಮ ಸಂಪತ್ತನ್ನು ಸದುಪಯೋಗ ಮಾಡಿಕೊಳ್ಳುವ ದಾರಿಯನ್ನು ಕಂಡುಕೊಳ್ಳಿ.

ಧನು ರಾಶಿ: ಉಡುಗೊರೆಯಾಗಿ ಸಿಕ್ಕಿದ ಹೊಸ ವಸ್ತುಗಳ ಮೇಲೆ ಪ್ರೀತಿ ಹೆಚ್ಚು. ಬಹಳ ಜತನದಿಂದ ನೋಡಿಕೊಳ್ಳುವಿರಿ. ವಿವಾಹವು ವಿಳಂಬವೆಂದು ಅನ್ನಿಸಬಹುದು. ಚಿಂತೆಗೆ ಅವಕಾಶ ಕೊಡದೇ ಗುರಿಯ ಕಡೆ ಗಮನವಿರಲಿ. ಪೂರ್ವಾಗ್ರಹದಿಂದ ತಂದೆಯ ಜೊತೆ ಜಗಳವನ್ನು ಮಾಡುವಿರಿ. ಮನಸ್ಸು ಬಿಚ್ಚಿ ಮಾತನಾಡಿ ನಿಮ್ಮ ಇಂಗಿತವನ್ನು ಪ್ರಕಾಶಪಡಿಸುವಿರಿ‌. ಉದ್ಯಮಿಗಳು ಹಳೆಯ ವಸ್ತುವಿಗೆ ಹೊಸ ರೂಪಕೊಟ್ಟು ಮಾರಾಟವನ್ನು ಮಾಡುವರು. ಕೆಲಸಗಾರರ‌ ಜೊತೆ ಅತಿ ಕೋಪ ಬೇಡ. ಹುಸಿ ಮುನಿಸಲ್ಲೇ ಕಾರ್ಯವನ್ನು ಮಾಡಿಸಿ. ಹಿತವಚನದಿಂದ ಕೆಲಸವನ್ನು ಮಾಡಿಕೊಳ್ಳಿ. ಇಂದಿನ ಆರ್ಥಿಕಲಾಭವು ನಿಮ್ಮ ನಿರೀಕ್ಷೆಯ ಮಟ್ಟವನ್ನು ತಲುಪಬಹುದು. ವಸ್ತ್ರಾಭರಣಗಳನ್ನು ಮಿತವಾಗಿ ಖರೀದಿಸಿ. ವಯಸ್ಕರಿಗೆ ವಿವಾಹ ಸಂಬಂಧವು ಒದಗಿ ಬರಬಹುದು. ಆಸ್ತಿಯನ್ನು ಸ್ವಂತಕ್ಕೆ ಮಾಡಿಕೊಳ್ಳುವ ಉಪಾಯವು ಹೊಳೆಯಬಹುದು. ಪ್ರೇಮ ವಿವಾಹವು ನಿಮಗೆ ಖುಷಿಕೊಡದು.

ಮಕರ ರಾಶಿ: ಇಂದು ಕಾನೂನಾತ್ಮಕ ವಿಚಾರದಲ್ಲಿ ಹೆಚ್ಚು ಆಸಕ್ತಿ ತೋರುವಿರಿ. ನಿಮ್ಮ ಸಕಾರಾತ್ಮಕತೆಯು ಹೆಚ್ಚು ಬಲವುಳ್ಳದ್ದಾಗಿದೆ. ಆಗಾಗ ಕಾಣಿಸಿಕೊಳ್ಳುವ ನೋವುಗಳು ನಿಮ್ಮನ್ನು ಪೀಡಿಸಿ ಮಾನಸಿಕವಾಗಿ ಕುಗ್ಗುಸುವುದು. ಆಪ್ತರ ಜೊತೆ ಒಂದಿಷ್ಟು ಹರಟೆ ಹೊಡೆಯಿರಿ. ಅಪರಿಚಿತ ವ್ಯಕ್ತಿಯಿಂದ ನಿಮಗೆ ಸಹಾಯ ದೊರೆಯಲಿದೆ. ವ್ಯಾಪಾರಿಗಳಿಗೆ ತೃಪ್ತಿಕರವಾದ ಆದಾಯ ಸಿಗುವ ಸಂದರ್ಭವಿದೆ. ತಾಯಿಯ ಆಶೀರ್ವಾದವನ್ನು ಪಡೆದು ಶುಭಕಾರ್ಯಕ್ಕೆ ಮನೆಯಿಂದ ಹೊರಡಿ. ರಾಜಕೀಯ ವ್ಯಕ್ತಿಗಳಿಗೆ ಅವರ ವಿರೋಧಿಗಳಿಂದಲೇ ತೊಂದರೆಯಾಗುವ ಸಾಧ್ಯತೆ ಇದೆ. ನಿಮ್ಮ ಅಧಿಕ ಕೋಪದಿಂದ ಸುಂದರ ಕ್ಷಣಗಳು ನಷ್ಟವಾಗಬಹುದು. ಮಕ್ಕಳ ಏಳಿಗೆಯು ಮಂದಗತಿಯಲ್ಲಿ ಇರಲಿದೆ. ನಿಮ್ಮ ಅಳತೆಯನ್ನು ಮೀರದೇ ಚೌಕಟ್ಟಿನಲ್ಲಿರಿ. ಪುಣ್ಯಕ್ಷೇತ್ರಗಳ ದರ್ಶನದ ಬಗ್ಗೆ ನೀವು ಹೆಚ್ಚು ಉತ್ಸುಕರಾಗಿರುವಿರಿ. ಹಣಕಾಸಿನ ವಿಚಾರದಲ್ಲಿ ಇನ್ನೊಬ್ಬರನ್ನು ಅನುಸರಿಸುವ ಅವಶ್ಯಕತೆ ಇಲ್ಲ.

ಕುಂಭ ರಾಶಿ: ನಿಮ್ಮ ಪಾಲುದಾರಿಕೆಯಲ್ಲಿ ಹೊಂದಾಣಿಕೆ ಕಷ್ಟವಾದೀತು. ಹೇಗಾದರೂ ಮಾಡಿ ಸರಿ‌ಮಾಡಿಕೊಳ್ಳಿ. ಮನೆಯಿಂದ ದೂರದಲ್ಲಿ ವಾಸಿಸುವ ನೀವು ಇಂದು ಪೋಷಕರಿಗೆ ಖುಷಿಯಾಗುವುದು. ಆಸ್ತಿಗೆ ಸಂಬಂಧಿಸಿದಂತೆ ದಾಯಾದಿಗಳ ಕಲಹವು ಅನೂಹ್ಯಸ್ಥಿತಿಗೆ ಹೋಗಬಹುದು. ನಿಮಗಾಗದವರನ್ನು ನಿಂದಿಸಿ ಅವರಿಂದ ಅಪಮಾನಕ್ಕೆ ಒಳಗಾಗುವಿರಿ. ಆರ್ಥಿಕವಾಗಿ ಸ್ಥಿರತೆ ಇದ್ಷರೂ ಚರ್ಚನ್ನು ನಿಭಾಯಿಸುವ ಚಾಣಾಕ್ಷತನ ಬೇಕಿದೆ. ನಿಮ್ಮ ವ್ಯಕ್ತಿತ್ವಕ್ಕೆ ಸರಿಸಾಟಿಯಾದ ವ್ಯಕ್ತಿಯ ಗೆಳೆತನವಾಗಲಿದೆ. ಅಹಂಕಾರ ಪಡದೇ ಅವಶ್ಯಕತೆ ಇರುವಲ್ಲಿ ವಿನೀತತೆ ಇರಲಿ. ಅನ್ಯರ ತಪ್ಪಿನಿಂದ ಅಪಘಾತವು ಸಂಭವಿಸಬಹುದು. ನಿಮ್ಮ ಮನಸ್ಸಿಗೆ ಇಷ್ಟವಾಗದ ಘಟನೆಯು ದಿನವಿಡೀ ನಿಮ್ಮನ್ನು ಕಾಡುವುದು. ಏನನ್ನಾದರೂ ಮಾಡಬೇಕು ಎಂಬ ಮಹತ್ತರವಾದ ಯೋಜನೆಯನ್ನು ಮುಂದೂಡುವಿರಿ.

ಮೀನ ರಾಶಿ: ಇಂದು ಒತ್ತಡದ ನಡುವೆಯೂ ನಿಮ್ಮ ಕಾರ್ಯಗಳನ್ನು ಸರಳೀಕರಿಸಿಕೊಂಡು ಮಾಡುವ ವಿಧಾನವನ್ನು ಮೆಚ್ಚುವರು. ಹಣವನ್ನು ಉಳಿಸಲು ಯತ್ನದಲ್ಲಿ ಸೋಲಾಗುವುದು. ಮಹಿಳೆಯರಿಂದ ತೊಂದರೆ ಎನಿಸಬಹುದು. ಅವರ ಜೊತೆ ಮಾತನಾಡುವಾಗ ಎಚ್ಚರ. ಅನಂತರ ದುಃಖಗೊಂಡರೆ ಪ್ರಯೋಜನ ಇಲ್ಲ. ಇಂದು ಅಂದುಕೊಂಡ ಕಾರ್ಯಗಳು ಮುಗಿಯುವ ಹಂತವನ್ನು ತಲುಪಿದ್ದು ಪೂರ್ಣತೃಪ್ತಿ ಇರಲಾರದು. ನೀವೇ ವಿವಿಧ ಮೂಲಗಲಕಿಂದ ಮಾಹಿತಿಯನ್ನು ಒಡೆದು ಸರಿಮಾಡಿಕೊಳ್ಳಿ. ಪತಿ, ಪತ್ನಿಯರು ಅನ್ಯೋನ್ಯತೆಗೆ ದೃಷ್ಟಿ ಬೀಳಬಹುದು. ಮುಖದಲ್ಲಿ ಮಂದಹಾಸವಿರಲಿ. ಬಂಧುಗಳಿಂದ ನಿರ್ಲಕ್ಷ್ಯಕ್ಕೆ ಒಳಗಾದಂತೆ ಅನ್ನಿಸಬಹುದು. ದುರಭ್ಯಾಸದಿಂದ ದೂರವಿರಬೇಕು ಎನ್ನಿಸಬಹುದು. ಮನಸ್ಸು ಅಮೂರ್ತವಾದ ಅನಂದದಲ್ಲಿ ಇರಲಿದೆ. ಉನ್ನತವಾದ ಸ್ಥಾನಕ್ಕೆ ಏರಲು ನಿಮ್ಮೆದುರು ಅವಕಾಶವು ತೆರೆದುಕೊಳ್ಳುವುದು.

ಲೋಹಿತ ಹೆಬ್ಬಾರ್ – 8762924271 (what’s app only)

ತಾಜಾ ಸುದ್ದಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ