Horoscope: ದಿನಭವಿಷ್ಯ: ಇಂದು ನಿಮ್ಮ ಬಗ್ಗೆ ಅಪಪ್ರಚಾರಗಳು ಕೇಳಿ ಬರಬಹುದು-ಎಚ್ಚರ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 24 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

Horoscope: ದಿನಭವಿಷ್ಯ: ಇಂದು ನಿಮ್ಮ ಬಗ್ಗೆ ಅಪಪ್ರಚಾರಗಳು ಕೇಳಿ ಬರಬಹುದು-ಎಚ್ಚರ
ರಾಶಿ ಭವಿಷ್ಯ
Updated By: ಕಿರಣ್ ಹನುಮಂತ್​ ಮಾದಾರ್

Updated on: Apr 24, 2024 | 12:43 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಏಪ್ರಿಲ್​​​​​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ವಿಶಾಖಾ, ಯೋಗ: ಸಿದ್ಧಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:31 ರಿಂದ 02:05ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:49 ರಿಂದ 09:23 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:57 ರಿಂದ  12:21ರ ವರೆಗೆ.

ಧನು ರಾಶಿ : ನಿಮ್ಮ ದಾಂಪತ್ಯದಲ್ಲಿ ಉಂಟಾದ ವಿರಸವು ನ್ಯಾಯಾಲಯದ ಮೆಟ್ಟಿಲೇರಲೂಬಹುದು. ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು. ನಿಮ್ಮ ಬಗ್ಗೆ ಅಪಪ್ರಚಾರಗಳು ಕೇಳಿ ಬರಬಹುದು. ಸ್ನೇಹಿತರೊಂದಿಗೆ ಇಂದು ಕಾಲವನ್ನು ಕಳೆಯುವಿರಿ. ದೂರದ ಪ್ರಯಾಣದಿಂದ ನಿಮಗೆ ಸುಖವಿಲ್ಲ. ಆರ್ಥಿಕಸ್ಥಿತಿಯ ಸುಧಾರಣಯಾಗಲಿದೆ. ಸಂಗಾತಿಯ ಯೋಚನೆಗಳಿಗೆ ಪ್ರತಿಸ್ಪಂದನೆಯು ಸಿಗಲಿದೆ. ಹಳೆಯ ನೋವುಗಳು ಕಾಡಬಹುದು. ಮಕ್ಕಳ ವಿದ್ಯಾಭ್ಯಾಸದ ಖರ್ಚನ್ನು ನೋಡಿಕೊಳ್ಳಲು ಹೋಗಿ ನಿಮ್ಮ ಆರ್ಥಿಕತೆಯು ಹಿಂದಡಿ ಇಡಬಹುದು. ಸಮಾರಂಭದಲ್ಲಿ ಹಳೆಯ ಸ್ನೇಹಿತರ ಭೇಟಿಯಾಗುವುದು. ಆಕಸ್ಮಿಕ ಧನಪ್ರಾಪ್ತಿಯಿಂದ ಹರ್ಷಗೊಳ್ಳುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ವಿದ್ಯಾರ್ಥಿಗಳು ಯಾರ ಬೆಂಬಲಕ್ಕೂ ಕಾಯದೇ ನಿಮ್ಮ ಪ್ರತಿಭೆಯ ಪ್ರದರ್ಶನಕ್ಕೆ ಮುನ್ನುಗ್ಗುವುದು ಸೂಕ್ತ.

ಮಕರ ರಾಶಿ : ಇಂದು ನೀವು ಮೌಲ್ಯಯುತವಾದ ವಸ್ತುಗಳನ್ನು ಆಸೆಪಟ್ಟು ಖರೀದಿಸುವಿರಿ. ಹಣದ ಪ್ರಾಮುಖ್ಯವನ್ನು ತಿಳಿದುಕೊಳ್ಳುವ ಸಮಯವಿಂದು. ನಿಮ್ಮ ವಿದ್ಯುದುಪಕರಣದಿಂದ ನಿಮಗೆ ನಷ್ಟವಾಗಲಿದೆ. ಅಗತ್ಯವಿದ್ದಷ್ಟು ಮಾತ್ರ ಮಾತನಾಡಿ. ನಿಮ್ಮ ಅಸೂಯಾಗುಣದಿಂದ ನಿಮಗೇ ತೊಂದರೆಯಾದೀತು. ಹಿರಿಯರ ಅನಾರೋಗ್ಯದಲ್ಲಾಗುವ ವ್ಯತ್ಯಾಸದಿಂದ ಆತಂಕವು ಸೃಷ್ಟಿಯಾದೀತು. ಕೆಲವು ಸನ್ನಿವೇಶಗಳಲ್ಲಿ ನಿಯಂತ್ರಣ ಅವಶ್ಯಕ. ಇಂದು ನೀವು ಇತರರಿಗೆ ಹೇಳುವ ಉತ್ಸಾಹವನ್ನು ಮಾಡುವುದಿಲ್ಲ. ನಿಮ್ಮ ಜೀವನಸಂಗಾತಿ ಇಂದು ನಿಮಗೆ ಪೂರ್ಣ ಬಲ ಮತ್ತು ಪ್ರೀತಿಯನ್ನು ನೀಡುವರು. ಎಲ್ಲರ ಜೊತೆಗಿದ್ದರೂ ಒಂಟಿಯಂತೆ ಅನ್ನಿಸುವುದು.‌ ಇಂದು ಸ್ತ್ರೀಯರಿಗೆ ಮಾನಿಸಿಕವಾದ ಕಿರಿಕಿರಿ ಇರಲಿದ್ದು ತೊಂದರೆಯಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು.

ಕುಂಭ ರಾಶಿ : ಪುಣ್ಯಸ್ಥಳಗಳ ಭೇಟಿಗೆ ಆಸಕ್ತಿಯನ್ನು ಹೊಂದುವಿರಿ. ಆಪ್ತರ ಜೊತೆ ಸಮಾಲೋಚನೆ ನಡೆಸುವಿರಿ. ಕಣ್ಣಿನ ತುರಿಕೆ, ಕಣ್ಣಿನಲ್ಲಿ ನೀರೂರುವ ಅಥವಾ ಕೆಂಗಣ್ಣಿನ ರೋಗವು ನಿಮ್ಮನ್ನು ಕಾಡಬಹುದು. ವೈದ್ಯರನ್ನು ಸಂಪರ್ಕಿಸಿ. ಹಿರಿಯ ಆಶೀರ್ವಾದವೇ ನಿಮ್ಮ ಕಾರ್ಯಗಳಿಗೆ ಬೆಂಬಲವಾಗಲಿದೆ. ಹಣದ ವ್ಯಯವು ನಿಮ್ಮನ್ನು ಆತಂಕಕ್ಕೆ ತಳ್ಳಬಹುದು. ವಿವೇಚನೆ ಇರಲಿ. ದಂಪತಿಗಳ ನಡುವೆ ನಡೆದ ಮಾತುಕತೆಗಳು ಮುಂದಿನ ಹಂತಕ್ಕೂ ಹೋಗಬಹುದು. ನೀವು ಸಾಲ ಪಡೆಯಲು ಯೋಜನೆ ಮಾಡಿದ್ದರೆ ದೀರ್ಘಕಾಲ‌ ಅದನ್ನು ಇಟ್ಟುಕೊಳ್ಳುವುದು ಬೇಡ. ನಿಮ್ಮ ಪ್ರೀತಿಯು ನಿಜವಾಗಿಯೂ ಅದ್ಭುತ ಎನಿಸಬಹುದು. ನಿಮ್ಮ ಅಂದಾಜು ಮೀರಬಹುದು. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು. ನಿಮ್ಮನ್ನು ನೀವು ಬದಲಿಸಿಕೊಳ್ಳಬೇಕಾಗುವುದು.

ಮೀನ ರಾಶಿ : ಇಂದು ಒತ್ತಡದ ನಡುವೆಯೂ ನಿಮ್ಮ ಕಾರ್ಯನಿರ್ವಹಣೆಗೆ ಪ್ರಂಶಸೆಗಳು ಸಿಗಲಿವೆ. ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ಅನೇಕ ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ. ವೈದ್ಯವೃತ್ತಿಯನ್ನು ಆರಿಸಿಕೊಂಡ ನಿಮಗೆ ಗೌರವಾದರಗಳು ಸಿಗಲಿವೆ. ತಂದೆ, ತಾಯಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಕೃಷಿ ಉತ್ಪನ್ನಗಳ ಉದ್ಯಮದವರಿಗೆ ಹೆಚ್ಚು ಲಾಭವಾಗಲಿದೆ‌. ಉನ್ನತ ಉದ್ದೇಶಗಳು ಸಾಕಾರಗೊಳ್ಳುವ ದಿನವಾಗಿದೆ. ಹಬ್ಬದ ವಾತಾವರಣವು ಚೆನ್ನಾಗಿರಲಿದೆ‌. ವೈವಾಹಿಕ ಜೀವನವನ್ನು ನಡೆಸುವ ಬಗ್ಗೆ ನಿಮಗೆ ಸಲಹೆಗಳು ಸಿಗುವುದು. ಭೂಮಿಗೆ ಸಂಬಂಧಿಸಿದ ವಿಚಾರಗಳನ್ನು ಇತ್ಯರ್ಥ ಮಾಡಿಕೊಳ್ಳುವುದು ಉಚಿತ. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ. ನಿಮ್ಮ ಕೆಲಸವು ಬದಲಾವಣೆಯಾಗಬಹುದು.

-ಲೋಹಿತ ಹೆಬ್ಬಾರ್ – 8762924271 (what’s app only)