Rashi Bhavishya: ರಾಶಿಭವಿಷ್ಯ, ಈ ರಾಶಿಯವರು ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ, ಎಚ್ಚರ..
ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಜನವರಿ 14 ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಲಾಭ ಕಾದಿದೆಯಾ? ನಷ್ಟು ಉಂಟಾಗಬಹುದಾ? ಶುಭ, ಅಶುಭ ಇದೆಯಾ? ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ, ಏನು ಮಾಡಿದರೆ ಉತ್ತಮ ಎಂಬುದನ್ನು ಇಲ್ಲಿ ತಿಳಿಯಿರಿ. ನಿಮ್ಮ ಇಂದಿನ (ಜನವರಿ 14) ದಿನ ಭವಿಷ್ಯ (Horoscope) ಹೀಗಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಧನುರ್ಮಾಸ, ಮಹಾನಕ್ಷತ್ರ: ಪೂರ್ವಾಷಾಢ, ಮಾಸ: ಪೌಷ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಸಿದ್ಧಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 07 ಗಂಟೆ 02 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಸಂಜೆ 04:56 ರಿಂದ 06:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:42 ರಿಂದ 02:06ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:31 ರಿಂದ ಸಂಜೆ 4:56ರ ವರೆಗೆ.
ಧನು ರಾಶಿ: ವ್ಯವಹಾರದಲ್ಲಿ ಯಾವುದೇ ಅಳುಕನ್ನು ಇಟ್ಟುಕೊಳ್ಳದೇ ಎಲ್ಲವನ್ನೂ ಸರಿಯಾಗಿ ಅರಿತುಕೊಳ್ಳಿ. ನಿಮ್ಮ ಸಿಕ್ಕ ಅಧಿಕಾರಕ್ಕೆ ನಿಮಗೆ ಗೌರವ ಪ್ರಾಪ್ತಿಯಾಗುವುದು. ಭೂವ್ಯವಹಾರದಲ್ಲಿ ಸಣ್ಣ ಪ್ರಗತಿಯು ಇರಲಿದೆ. ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ನೀವು ಗಮನಿಸಿ ಅದಕ್ಕೆ ಬೇಕಾದ ಮಾರ್ಗದರ್ಶನ ಮಾಡುವಿರಿ. ಉದ್ಧಟತನದ ಮಾತುಗಳಿಂದ ನಿಮ್ಮ ಸ್ವಭಾವವು ಸ್ಪಷ್ಟವಾಗುವುದು. ಪುಣ್ಯಸ್ಥಳಗಳನ್ನು ಕುಟುಂಬ ಜೊತೆ ಹೋಗಿ ದರ್ಶನ ಮಾಡುವಿರಿ. ಅತಿಯಾದ ದೇಹದಂಡನೆಯಿಂದ ನಿಮಗೆ ಆಯಾಸವಾಗಲಿದೆ. ಕೊಟ್ಟ ಹಣವನ್ನು ನೀವು ಪುನಃ ಕೇಳುವಿರಿ. ನಿಮ್ಮಿಂದ ಸಹಾಯವನ್ನು ಪಡೆದ ಹಿರಿಯರು ಆಶೀರ್ವದಿಸುವರು. ಇದರಿಂದ ಸಂತೋಷವಾಗಲಿದೆ. ಸ್ನೇಹಿತರ ಸಹವಾಸದಿಂದ ದುರಭ್ಯಾಸವನ್ನುಕಲಿಯವಿರಿ. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಸುಲಭ ದಾರಿಯನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ.
ಮಕರ ರಾಶಿ: ಸಣ್ಣ ವ್ಯಾಪಾರಿಗಳು ಆರ್ಥಿಕತೆಯಲ್ಲಿ ಚೇತರಿಕೆಯನ್ನು ಕಾಣಬಹುದು. ಉದ್ಯೋಗದಲ್ಲಿ ಬೆಳವಣಿಗೆಯ ನಿರೀಕ್ಷೆಯಲ್ಲಿ ಇರುವಿರಿ. ಇಂದು ನಿಮ್ಮ ಯೋಜನೆಗೆ ಕುಟುಂಬದ ಸಹಮತವು ಇರುವುದು. ಶತ್ರುಗಳಿಂದ ತಪ್ಪಿಸಿಕೊಳ್ಳುವುದು ಕಷ್ಟವಾದೀತು. ನಿರೀಕ್ಷಿತ ಗೌರವವು ನಿಮಗೆ ಸಿಗಲಿದೆ. ಇಂದಿನ ಕೆಲವು ಮಾತುಗಳನ್ನು ನೀವು ನಿರ್ಲಕ್ಷಿಸುವಿರಿ. ಹೆಣ್ಣು ಮಕ್ಕಳಿಂದ ನಿಮಗೆ ಯಶಸ್ಸು ಪ್ರಾಪ್ತಿ. ಕಛೇರಿಯ ವ್ಯವಹಾರದಲ್ಲಿ ನಿಮಗೆ ಒತ್ತಡವು ಬರಬಹುದು. ಹಳೆಯ ಸ್ನೇಹಿತೆಯ ಸಖ್ಯವಾಗಬಹುದು. ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವ್ಯವಹರಿಸುವುದು ಉತ್ತಮ. ನಿಮ್ಮ ಮೇಲಿನ ಪ್ರೀತಿಯು ಅಧಿಕವಾಗುವುದು. ಹೊಸ ಉದ್ಯೋಗದ ಅಭಿವೃದ್ಧಿಗೆ ದೇವರಲ್ಲಿ ಶರಣಾಗುವಿದರಿ. ಪ್ರಯತ್ನಗಳು ಆರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ.
ಕುಂಭ ರಾಶಿ: ಶುಭ ಕಾರ್ಯದಿಂದ ಬಯಸಿದ್ದನ್ನು ಪಡೆಯಲು ಇಚ್ಛಿಸುವಿರಿ. ಸಹೋದರರ ಜೊತೆ ಪಾಲುದಾರಿಕೆಯಿಂದ ಉತ್ತಮಲಾಭವಿದೆ. ದಾಯಾದಿಗಳ ಜೊತೆ ಕಿರಿಕಿರಿ ಇದ್ದರೂ ಅದನ್ನು ಬೆಳೆಸಿಕೊಳ್ಳುವುದು ಬೇಡ. ಆಸ್ತಿಗೆ ಸಂಬಂಧಿಸಿದ ಪತ್ರ ವ್ಯವಹಾರವನ್ನು ಜೋಪಾನ ಮಾಡಿಕೊಳ್ಳಿ. ಅಪರೂಪದ ಬಂಧುಗಳ ಸಮಾಗಮವಾಗಲಿದ್ದು, ಸಂತೋಷವಾಗಲಿದೆ. ದೇವಾಲಯಕ್ಕೆ ಹೋಗಿ ನೆಮ್ಮದಿಯನ್ನು ಪಡೆದುಕೊಳ್ಳುವಿರಿ. ನೀವು ಎಣಿಸಿದಂತೆ ಆಗಿದ್ದು, ನಿಮಗೂ ಅಚ್ಚರಿಯಾದೀತು. ಸಂಗಾತಿಯ ಅನಪೇಕ್ಷಿತ ಆಸೆಗಳನ್ನು ದೂರ ಮಾಡುವಿರಿ. ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಗಾಯವಾಗುವ ಸಾಧ್ಯತೆ ಇದೆ. ನಿಮಗೆ ಬೇಕಾದ ವಾತಾವರಣದಲ್ಲಿ ಇರುವುದು ಇಷ್ಟವಾಗುವುದು. ನಿಮ್ಮ ಕನಸನ್ನು ಸಕಾರ ಮಾಡಿಕೊಳ್ಳಲು ಪ್ರಗತಿಯಲ್ಲಿ ಇರುವಿರಿ.
ಮೀನ ರಾಶಿ: ಇಂದು ನಿಮಗೆ ಸ್ಥಿರಾಸ್ತಿ ಹಾಗೂ ವಾಹನದಿಂದ ಲಾಭವಾಗುವ ಸಂಭವವು ಹೆಚ್ಚು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗುವುದನ್ನು ಕಡಿಮೆ ಮಾಡಬೇಕು. ವ್ಯಾಪಾರದಲ್ಲಿ ಪ್ರಾಮಾಣಿಕತೆಯನ್ನು ಉಳಿಸಿಕೊಳ್ಳಿ. ಸಂತೋಷಕ್ಕೆ ಅಡ್ಡಿಯಾಗುವ ಕಾರ್ಯವನ್ನು ಮಾಡಿಕೊಂಡು ಪಶ್ಚಾತ್ತಾಪ ಪಡುವಿರಿ. ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು. ಕಳೆದ ವಿಚಾರವನ್ನು ಮತ್ತೆ ಮತ್ತೆ ನೆನಪಿಸಿಕೊಂಡು ದುಃಖಿಸುವಿರಿ. ದೈವಭಕ್ತಿಯಲ್ಲಿ ಅಪರಿಚಿತ ಕರೆಗಳು ನಿಮ್ಮನ್ನು ಪೀಡಿಸಬಹುದು. ಇನ್ನೊಬ್ಬರ ಜವಾಬ್ದಾರಿಯನ್ನು ನೀವು ಕಸಿದುಕೊಳ್ಳುವ ಆಲೋಚನೆ ಮಾಡುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ.
ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




