Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಫಲಾಫಲ ಹೀಗಿದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 10: ನಿಮ್ಮ ಒತ್ತಡವನ್ನು ಕಡಿಮೆ‌ಮಾಡಿಕೊಳ್ಳಲು ಕೆಲಸವನ್ನು ಹಂಚುವಿರಿ. ನೀವು ಇಂದು ಹೋರಾಟದ ಮನೋಭಾವವನ್ನು ಇಟ್ಟಕೊಳ್ಳುವಿರಿ. ಸೌಂದರ್ಯ ವರ್ಧನೆಯನ್ನು ಹೆಚ್ಚು ಮಾಡಿಕೊಳ್ಳುವಿರಿ. ಇನ್ನೊಬ್ಬರ‌ ಮೇಲೆ ಆಕರ್ಷಣೆ ಉಂಟಾಗಬಹುದು. ಹಾಗಾದರೆ ಸೆಪ್ಟೆಂಬರ್​ 10ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಫಲಾಫಲ ಹೀಗಿದೆ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಫಲಾಫಲ ಹೀಗಿದೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 10, 2024 | 12:10 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಸೆಪ್ಟೆಂಬರ್​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಪೂರ್ವಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ವಿಷ್ಕಂಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:36 ಗಂಟೆ, ರಾಹು ಕಾಲ ಮಧ್ಯಾಹ್ನ 03:33 ರಿಂದ ಸಂಜೆ 05:05, ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:58ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:01ರ ವರೆಗೆ.

ಸಿಂಹ ರಾಶಿ: ಪಾಲುದಾರಿಕೆಯ ಭಿನ್ನಾಭಿಪ್ರಾಯವನ್ನು ನೀವೇ ಮೊದಲು ಮಾತನಾಡಿ ಸರಿ ಮಾಡಿಕೊಂಡರೆ ಮುಂದುವರಿಯುವುದು. ನಿಮ್ಮ ಉಪಯೋಗವನ್ನು ಪಡೆದುಕೊಳ್ಳಲು ಇಚ್ಛಿಸಬಹುದು. ಸ್ನೇಹಿತರ ಮಾತುಗಳು ನಿಮಗೆ ಉಪಯೋಗಬಹುದು. ಉದ್ಯಮವನ್ನು ನೀವು ಹೆಚ್ಚಿಸುವ ಯೋಚನೆ ಇರಲಿದೆ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಅಳುಕು ಇರುವುದು. ನಿಮ್ಮ ಒತ್ತಡವನ್ನು ಕಡಿಮೆ‌ಮಾಡಿಕೊಳ್ಳಲು ಕೆಲಸವನ್ನು ಹಂಚುವಿರಿ. ನೀವು ಇಂದು ಹೋರಾಟದ ಮನೋಭಾವವನ್ನು ಇಟ್ಟಕೊಳ್ಳುವಿರಿ. ಸೌಂದರ್ಯ ವರ್ಧನೆಯನ್ನು ಹೆಚ್ಚು ಮಾಡಿಕೊಳ್ಳುವಿರಿ. ಇನ್ನೊಬ್ಬರ‌ ಮೇಲೆ ಆಕರ್ಷಣೆ ಉಂಟಾಗಬಹುದು. ಸಮಾಜಸೇವಕರ ಭೇಟಿಯಾಗಿ ನಿಮ್ಮ ಸಮಸ್ಯೆಗೆ ಸಮಾಧಾನ ತಂದುಕೊಳ್ಳುವಿರಿ. ಧಾರ್ಮಿಕ ಆಚರಣೆಗಳನ್ನು ಮಾಡಲೂ ಚಿಂತಿಸುವಿರಿ. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಮಾಡಿ ಕೊಡಬಹುದು. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ಯಾವ ಸತ್ಯವನ್ನೂ ನೀವು ನಂಬುವ ಸ್ಥಿತಿಯಲ್ಲಿ ಇರುವುದಿಲ್ಲ.

ಕನ್ಯಾ ರಾಶಿ: ನಿಮ್ಮ ದೌರ್ಬಲ್ಯವು ಗೌರವವನ್ನು ಹರಣಮಾಡಬಹುದು. ದಾಂಪತ್ಯದಲ್ಲಿ ಸುಖವನ್ನು ಕಾಣುವಿರಿ. ಮನಸ್ಸು ಉದ್ವಿಗ್ನದಿಂದ ಹೊರಬರಲು ಮಾರ್ಗವನ್ನು ಹುಡುಕುವಿರಿ. ಕಿರಿಕಿರಿಯಿಂದ ದೂರವಿರಲು ಪ್ರಯತ್ನಿಸುವಿರಿ. ಬಹಳ ದಿನಗಳಿಂದ ನಡೆಯುತ್ತಿದ್ದ ಕೆಲಸವನ್ನೂ ಇಂದು ಮುಗಿಸಬೇಕೆಂಬ ನಿರ್ಧಾರವನ್ನು ಮಾಡುವಿರಿ. ಯಾವುದೇ ದೊಡ್ಡ ಮೊತ್ತದ ಖರೀದಿಯನ್ನು ಮಾಡುವಾಗ ಅವಶ್ಯಕತೆ ಅನಿವಾರ್ಯತೆಗಳ ಬಗ್ಗೆ ಗಮನವಿರಲಿ. ನಿಮ್ಮ ಅನಿರೀಕ್ಷಿತ ಲಾಭದಿಂದ ಸಂತೋಷವಾದರೂ ನಿಮಗೆ ಸಂದೇಹಗಳು ಇರಬಹುದು. ತಂದೆಯ ಬಳಿ ವಿವಾಹದ ಪ್ರಸ್ತಾಪವನ್ನು ಮಾಡುವಿರಿ. ನಿಮ್ಮ ವರ್ತನೆಯು ತೋರಿಕೆಯಂತೆ ಕಾಣಬಹುದು. ತಾಯಿಯ ಜೊತೆ ಕಲಹ ಮಾಡಿ ನಿಮಗೆ ಬೇಸರವಾಗಬಹುದು. ಉದ್ಯಮಿಗಳ ಭೇಟಿಯಾಗುವ ಸಾಧ್ಯತೆ ಇದೆ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ವೃತ್ತಿಯಲ್ಲಿ ನಿಮ್ಮ ಬಗ್ಗೆ ಬಣ್ಣದ ಮಾತುಗಳು ಬರಬಹುದು. ಇದಕ್ಕಾಗಿಯೇ ಉದ್ಯೋಗವು ಬೇಸರ ತರಿಸಬಹುದು.

ತುಲಾ ರಾಶಿ: ಇಂದು ಸಂಗಾತಿಯ ಜೊತೆಗಿನ ಬಾಂಧವ್ಯವನ್ನು ಗಟ್ಟಿ ಮಾಡಿಕೊಳ್ಳುವಿರಿ. ಪುಣ್ಯಸ್ಥಳಕ್ಕೆ ಅನಿರೀಕ್ಷಿತ ಭೇಟಿ ಹಾಗೂ ಸಮಾಧಾನ ಸಿಗಲಿದೆ. ಸಾಲವನ್ನು ಮರುಪಾವತಿ‌ ಮಾಡಿ ನಿರಾಳವಾಗುವಿರಿ. ನಿಮ್ಮವರಿಗೆ ಆದ ಅಪಮಾನವನ್ನು ಸಹಿಸದೇ ಕೋಪಗೊಳ್ಳುವಿರಿ. ಯಾರದೋ ಸಿಟ್ಟನ್ನು ನಿಮ್ಮವರ ಮೇಲೆ ತೋರಿಸುವಿರಿ. ಅದೃಷ್ಟವನ್ನು ನಂಬಿ ಕೆಲಸವನ್ನು ಆರಂಭಿಸುವುದಕ್ಕಿಂತ ಸಾಮರ್ಥ್ಯವನ್ನು ಕಂಡುಕೊಂಡು ಮಾಡುವುದು ಒಳ್ಳೆಯದು. ರಾಜಕೀಯದಲ್ಲಿ ಪರಿವರ್ತನೆ ಆಗಲಿದ್ದು, ನಿಮಗೆ ಗೊಂದಲ ಹೆಚ್ಚಾಗುವುದು. ನಿಮ್ಮ‌ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು. ಇದು ನಿಮ್ಮನ್ನು ಉದ್ವೇಗಕ್ಕೆ ಒಳಗಾಗಿಸುವುದು. ಬಂದ ಹಣವನ್ನು ಜೋಪಾನವಾಗಿ ಇಟ್ಟುಕೊಳ್ಳುವ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಉತ್ತಮ. ಯಾವ ಸಂದರ್ಬದಲ್ಲಿಯೂ ಇಂದು ನಿಮ್ಮವರನ್ನು ಬಿಟ್ಟುಕೊಡಲಾರಿರಿ. ತಾಳ್ಮೆಯಿಂದ ವರ್ತಿಸಲು ನಿಮ್ಮವರಿಂದ ಸಲಹೆ ಸಿಗುವುದು. ವ್ಯಾಪಾರದಲ್ಲಿ ಪೈಪೋಟಿ ಇರಲಿದ್ದು, ಅದಕ್ಕೆ ಪ್ರತಿತಂತ್ರ ಹೂಡುವಿರಿ.

ವೃಶ್ಚಿಕ ರಾಶಿ: ಇಂದು ನಿಮಗೆ ಸಿಗುವ ಪ್ರೀತಿ ಹಂಚಿಕೆಯಾಗಿ ನಿಮಗೆ ಕಷ್ಟವಾಗುವುದು. ನಿಮ್ಮ ವಸ್ತುವನ್ನು ಕಳೆದುಕೊಂಡು ಚಿಂತಾಮಗ್ನರಾಗುವಿರಿ. ಸ್ವಾವಲಂವನೆಯನ್ನು ನೀವು ಇಷ್ಟಪಡುವಿರಿ. ನಿಮಗೆ ವಹಸಿದ ಕೆಲಸವನ್ನು ನಿಷ್ಠೆಯಿಂದ ಮಾಡುವಿರಿ. ಅಶುಭವಾರ್ತೆಯು ನಿಮ್ಮನ್ನು ಕುಗ್ಗಿಸಬಹುದು. ನಿಮಗೆ ಅನ್ನಿಸಿದ್ದನ್ನು ಕೂಡಲೇ ಹೇಳಿದರೂ ಅನ್ಯ ಪರಿಣಾಮ ಬೀರದು. ನಿಮ್ಮ ನಡತೆಯ ಪರೀಕ್ಷೆಯೂ ನಡೆಯಲಿದೆ. ವೃಥಾ ಕಾಲಹರಣವನ್ನು‌ ಮಾಡಿ ಸಂಪತ್ತನ್ನೂ ಕಳೆದುಕೊಳ್ಳುವಿರಿ. ಮನೆಗೆ ಬೇಕಾದ ವಸ್ತುಗಳನ್ನು ನೀವು ಪಡೆಯುವಿರಿ. ಅಹಂಕಾರವನ್ನು ಎಲ್ಲರದುರು ಪ್ರದರ್ಶನ ಮಾಡಲು ಹೋಗುವುದು ಬೇಡ. ಅಗತ್ಯವಿದ್ದಷ್ಟು ಮಾತ್ರ ಮಾತನಾಡಿ. ನಿಮ್ಮ ನಿಲುವನ್ನು ಸಂಗಾತಿಯು ಪ್ರೋತ್ಸಾಹಿಸಬಹುದು. ಅತಿಯಾದ ಆತ್ಮವಿಶ್ವಾಸವನ್ನು ಇಟ್ಟುಕೊಳ್ಳುವುದರ ಜೊತೆ ಆಲೋಚನಾ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದೂ ಉತ್ತಮ. ಇಂದು ಕಲಹವಾಗುವಾಗ ಅಪರಿಚಿತರ ಸಹಾಯವು ಸಿಗಲಿದೆ. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಹುಂಬುತನದಲ್ಲಿ ಪ್ರಯತ್ನಿಸುವಿರಿ.

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ