Daily Horoscope: ಸರ್ಕಾರದಿಂದ ನಿಮಗೆ ಆಗಬೇಕಾದ ಕೆಲಸಗಳು ಬೇಗ ಆಗುವುದು, ಸಹಾಯ ಮಾಡಿದವರನ್ನು ನೆನಪಿಸಿಕೊಳ್ಳುವಿರಿ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಅಕ್ಟೋಬರ್​ 14: ನೀವು ಉಢಾಫೆ ಮಾಡುವ ಸಂಗತಿಗಳೇ ನಿಮಗೆ ಅಂಟಿಕೊಳ್ಳುವುದು. ನಿಮ್ಮ ಯೋಜನೆಯ ಕೆಲಸಗಳಿಗೆ ವಿಘ್ನಗಳು ಬರುವುದು. ಸರಿಯಾದ ಮಾಹಿತಿಯ ಕೊರತೆ ಕಾಣುವುದು. ಯಾರೂ ನಿಮಗೆ ಸರಿಯಾಗಿ ಸ್ಪಂದಿಸದೇ ಇರುವವರು. ನೇರವಾದ ಮಾತು ನಿಮಗೆ ಖುಷಿಕೊಡಬಹುದು. ಹಾಗಾದರೆ ಅಕ್ಟೋಬರ್​ 14ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಸರ್ಕಾರದಿಂದ ನಿಮಗೆ ಆಗಬೇಕಾದ ಕೆಲಸಗಳು ಬೇಗ ಆಗುವುದು, ಸಹಾಯ ಮಾಡಿದವರನ್ನು ನೆನಪಿಸಿಕೊಳ್ಳುವಿರಿ
ಸರ್ಕಾರದಿಂದ ನಿಮಗೆ ಆಗಬೇಕಾದ ಕೆಲಸಗಳು ಬೇಗ ಆಗುವುದು, ಸಹಾಯ ಮಾಡಿದವರನ್ನು ನೆನಪಿಸಿಕೊಳ್ಳುವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 14, 2024 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಆಶ್ವಯುಜ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಗಂಡ​, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 24 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 12 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:53 ರಿಂದ 09:22, ಯಮಘಂಡ ಕಾಲ ಬೆಳಿಗ್ಗೆ 10:50ರಿಂದ 12:18ರವರೆಗೆ, ಗುಳಿಕ ಕಾಲ ಮಧ್ಯಾಹ್ನ 01:47 ರಿಂದ 03:15 ರವರೆಗೆ.

ಸಿಂಹ ರಾಶಿ: ಧಾರ್ಮಿಕ ಮುಖಂಡರ ಅಧಿಕಾರದ ವಿಚಾರದಲ್ಲಿ ಗೊಂದಲ ಉಂಟಾಗುವುದು.‌ ನಿಮ್ಮ ಪ್ರತಿಷ್ಠೆಗಳಿಂದ ಯಾರಿಗೂ ತೊಂದರೆಯಾಗದು. ನೀವು ಉಢಾಫೆ ಮಾಡುವ ಸಂಗತಿಗಳೇ ನಿಮಗೆ ಅಂಟಿಕೊಳ್ಳುವುದು. ನಿಮ್ಮ ಯೋಜನೆಯ ಕೆಲಸಗಳಿಗೆ ವಿಘ್ನಗಳು ಬರುವುದು. ಸರಿಯಾದ ಮಾಹಿತಿಯ ಕೊರತೆ ಕಾಣುವುದು. ಯಾರೂ ನಿಮಗೆ ಸರಿಯಾಗಿ ಸ್ಪಂದಿಸದೇ ಇರುವವರು. ನೇರವಾದ ಮಾತು ನಿಮಗೆ ಖುಷಿಕೊಡಬಹುದು. ಎಲ್ಲ ಕಡೆಗಳಲ್ಲಿ ವಿಳಂಬವಾದಂತೆ ತೋರುವುದು. ಇದೆಲ್ಲವೂ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡಬಹುದು. ಪ್ರಭಾವೀ ವ್ಯಕ್ತಿಗಳ ಸಹಾಯವನ್ನು ಪಡೆದುಕೊಳ್ಳುವ ಸಂದರ್ಭವು ನಿಮಗೆ ಬರಬಹುದು. ಕೆಲವನ್ನು ಹೊಂದಿಸಿಕೊಂಡು ಹೋಗುವುದು ಅನಿವಾರ್ಯ. ವಾಹನವನ್ನು ಬದಲಾಯಿಸಿ ಹೊಸ ವಾಹನವನ್ನು ಖರೀದಿಸುವಿರಿ. ನಿಮ್ಮದಲ್ಲದ ವಸ್ತುವನ್ನು ಪಡೆದುಕೊಂಡು ಕಷ್ಟಪಡುವಿರಿ. ತಲ್ಲಣಿಸುವ ಮನಸ್ಸನ್ನು ಉಪಾಯದಿಂದ ತಣಿಸಿ.

ಕನ್ಯಾ ರಾಶಿ: ಬೇಕಾದಷ್ಟು ವಿಶ್ರಾಂತಿ ಪಡೆದು ಕಾರ್ಯದಲ್ಲಿ ಪ್ರವೃತ್ತರಾಗಿ. ಮಹಿಳೆಯರ ಜೊತೆ ಕೆಲಸ ಮಾಡುವುದು ಕಷ್ಟವಾಗುವುದು. ಮಕ್ಕಳ ವಿವಾಹಕ್ಕೆ ನೀವು ತಿರುಗಾಟ ಮಾಡಬೇಕಾಗಬಹುದು. ನಿಮ್ಮ ಶಿಸ್ತಿನ ಕೆಲಸಕ್ಕೆ ಹೆಚ್ಚಿನ ಜವಾಬ್ದಾರಿಗಳು ಬರಬಹುದು. ನಿಮ್ಮ ವರ್ತನೆಯಿಂದ ಬಂಧುಗಳು ಅಸಮಾಧಾನಗೊಳ್ಳುವರು. ಸರ್ಕಾರದಿಂದ ಆಗಬೇಕಾದ ಕೆಲಸಗಳು ಬೇಗ ಆಗುವುವು. ನಿಮ್ಮ ಹಣವನ್ನು ಯೋಗ್ಯವಾದ ಸ್ಥಳದಲ್ಲಿ ಹೂಡಿಕೆ ಮಾಡುವಿರಿ. ಸಾಹಸವನ್ನು ಮಾಡಲು ಹೋಗುವುದು ಬೇಡ. ಕಷ್ಟಕಾಲದಲ್ಲಿ ಸಹಾಯ ಮಾಡಿದವರನ್ನು ನೀವು ನೆನಪಿಸಿಕೊಂಡು ಅವರ ಜೊತೆ ಮಾತನಾಡುವಿರಿ‌. ಕೆಲವರಿಂದ ನಿಮ್ಮ ದಿಕ್ಕನ್ನು ತಪ್ಪಿಸುವ ಪ್ರಯತ್ನ ನಡೆಯುವುದು. ಅಪರಿಚಿತರ ಜೊತೆ ಮಾತುಕತೆಗಳು ಮಿತಿಯಲ್ಲಿ ಇರಲಿ. ಈ ಕಾರಣಕ್ಕೆ ನಿಮಗೆ ಕೆಲಸದ ಪ್ರದೇಶದಲ್ಲಿ ಅಸ್ಥಿರತೆ ಇರುತ್ತದೆ. ಕಷ್ಟದ ಫಲವು ನಿಮಗೆ ಇಂದು ಗೊತ್ತಾಗಲಿದೆ.

ತುಲಾ ರಾಶಿ: ನಿಮ್ಮ ಮರೆವಿನಿಂದ ಕೆಲವು ಮುಖ್ಯವಾದ ವಸ್ತುವನ್ನೇ ಕಳೆದುಕೊಳ್ಳಬಹುದು. ನಿಮ್ಮ ಇಂದಿನ ಕಾರ್ಯವು ತಾರ್ಕಿಕ ಅಂತ್ಯವನ್ನು ಕಾಣದೇ ಹೋಗಬಹುದು. ರಾಜಕೀಯವನ್ನೇ ತಮ್ಮ ಕಾರ್ಯಕ್ಷೇತ್ರವನ್ನು ಮಾಡಿಕೊಂಡವರಿಗೆ ಸ್ವಲ್ಪ ಹಿನ್ನಡೆಯಾಗಬಹುದು. ಎಲ್ಲವನ್ನೂ ನಿಮ್ಮ ಪರವಾಗಿ ಮಾಡಿಕೊಳ್ಳಲು ಪ್ರಯತ್ನಿಸದರೂ ಅಲ್ಪ ಲಾಭವಾಗುವುದು. ಪ್ರೀತಿಯನ್ನು ನೀವು ಆಟದಂತೆ ಆಡುವಿರಿ. ವಿದ್ಯಾರ್ಥಿಗಳು ವ್ಯರ್ಥ ತಿರುಗಾಟವನ್ನು ಮಾಡಬೇಕಾಗುವುದು. ಖರೀದಿಸಲು ಇಚ್ಛಿಸುವವರು ಉತ್ತಮ ಭೂಮಿಯನ್ನು ಪಡೆಯುವ ಸಾಧ್ಯತೆ ಇದೆ. ಇದಕ್ಕೆ ಬಂಧುವರ್ಗದಿಂದ ಬೇಕಾದ ಸಹಾಯವೂ ಸಿಗುವುದು. ನಿಮ್ಮ ಪರಿಶ್ರಮದ ಕೆಲಸಗಳು ನಿರರ್ಥಕವಾಗುವುದು. ಪ್ರಶಂಸೆಯೂ ಸಿಗದೇ ಇರುವುದು ನಿಮಗೆ ಬೇಸರವನ್ನು ತಂದೀತು. ವಿನಾಕಾರಣದ ನಿಮ್ಮವರನ್ನು ನೋಯಿಸಿ ಪಶ್ಚಾತ್ತಪಪಡುವಿರಿ. ನೀವು ಬಿಟ್ಟ ಬಾಣವು ಗುರಿಯ ಕಡಗೆ ಇದೆಯೇ ಎಂದು ತಿಳಿಯಿರಿ.

ವೃಶ್ಚಿಕ ರಾಶಿ: ಏಕಾಗ್ರತೆಯನ್ನು ನೀವು ಅಸ್ತ್ರವಾಗಿ ಬಳಸಿಕೊಳ್ಳಬಹುದು. ಜವಾಬ್ದಾರಿಗಳು ನಿಮಗೆ ಭಾರವೆನಿಸಿ ಅದನ್ನು ಹಂಚಿಕೆ ಮಾಡುವ ಸಾಧ್ಯತೆ ಇದೆ. ನಿಮಗೆ ಸಿಕ್ಕ ಜವಾಬ್ದಾರಿಗಳು ಅಸಮಾಧಾನವನ್ನು ಉಂಟುಮಾಡುವುದು. ಯಾರ ಜೊತೆಯೂ ಬೆರೆಯುವ ಮನಸ್ಸಾಗದು. ಸಂಗಾತಿಯನ್ನು ಅರ್ಥಮಾಡಿಕೊಳ್ಳಲು ನಿಮಗೆ ಸಮಯ ಬೇಕಾಗುವುದು. ಎಲ್ಲ ವಿಚಾರಗಳಿಗೂ ನಿಮ್ಮನ್ನು ಬೆರಳು ಮಾಡಿ ತೋರಿಸುವರು. ನಿಮ್ಮಮಾಧ್ಯಮದ ಉದ್ಯೋಗಿಗಳು ಹೆಚ್ಚಿನ ಆದಾಯವನ್ನು ಪಡೆಯುವರು. ಮೇಲಧಿಕಾರಿಗಳ ವಿಶ್ವಾಸವನ್ನು ಗಳಿಸುವಿರಿ. ನೀವು ಇಂದು ಬಹಳ‌ ಬೇಡಿಕೆ ಉಳ್ಳವರಾಗಿರುವಿರಿ. ಯಾರದೋ ಮಾತಿಗೆ ಉದ್ವೇಗಕ್ಕೆ ಒಳಗಾಗುವಿರಿ. ನಿಮ್ಮ ಕುಶಲಕಾರ್ಯಗಳು ಎಲ್ಲರಿಗೂ ಇಷ್ಟವಾದೀತು. ತಂದೆಯ ಮಾತನ್ನು ಗೌರವಿಸುವಿರಿ. ನಿಜ ಸಂಗತಿಗಳನ್ನು ಯಾರಿಗೂ ಹೇಳದೇ ಮುಚ್ಚಿಡುವಿರಿ. ಭೂ ವ್ಯವಹಾರದಲ್ಲಿ ಯಶಸ್ಸು ಸಿಗುವುದು. ನಿಮ್ಮ‌ ಸಂಶೋಧನೆಗೆ ಅಡ್ಡಿಗಳ ಬರುವುದು.

ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಮನೆ ಅಂಗಳಕ್ಕೆ ಎಂಟ್ರಿ ಕೊಟ್ಟ ಕರಿ ಚಿರತೆ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಸಿದ್ರಾಮಯ್ಯ ಕಾರು ಬರ್ತಿದ್ದಂತೆ ನುಗ್ಗಿಬಂದ ವ್ಯಕ್ತಿ; ವಶಕ್ಕೆ ಪಡೆದ ಪೊಲೀಸ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಹಂಸಾ, ಜಗದೀಶ್ ಬಗ್ಗೆ ನೇರವಾಗಿ ಮಾತಾಡಿದ ಧನರಾಜ್; ಕಿಚ್ಚ ಸುದೀಪ್​ಗೂ ಶಾಕ್
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಎಡಿಜಿಪಿ ಚಂದ್ರಶೇಖರ್ ದಾಖಲಿಸಿದ ದೂರಿನ ಬಗ್ಗೆ ಕುಮಾರಸ್ವಾಮಿ ಖಡಕ್ ಮಾತು
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಐಶ್ವರ್ಯಾ, ಧರ್ಮ, ಅನುಷಾ ಲವ್ ಸ್ಟೋರಿ ಚರ್ಚೆ; ಹಳೇ ವಿಷಯ ತೆಗೆದ ಸುರೇಶ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ