Daily Horoscope: ಈ ರಾಶಿಯವರ ಸಹೋದರರ ನಡುವೆ ಕಲಹವಾಗುವ ಸಾಧ್ಯತೆ ಇದೆ

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಆಗಸ್ಟ್​ 28: ಇಂದು ನಿಮ್ಮ ಬಾಕಿ ಉಳಿದ ಸಾಲಗಳನ್ನು ಪೂರ್ಣ ಮಾಡಿ. ಸಂಗಾತಿಯ ಪ್ರೀತಿಯಿಂದ ನೀವು ವಂಚಿತರಾಗಬೇಕಾದೀತು. ನಿಮ್ಮ ಅಂದಾಜನ್ನು‌ ಮೀರಿ ಹಣವು ಖರ್ಚಾಗಬಹುದು. ಹಾಗಾದರೆ ಆಗಸ್ಟ್​ 28ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಈ ರಾಶಿಯವರ ಸಹೋದರರ ನಡುವೆ ಕಲಹವಾಗುವ ಸಾಧ್ಯತೆ ಇದೆ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 28, 2024 | 12:20 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದಶಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:45 ಗಂಟೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 14:07, ಯಮಘಂಡ ಕಾಲ ಬೆಳಗ್ಗೆ 07:55 ರಿಂದ 09:28ರ ವರೆಗೆ, ಗುಳಿಕ ಕಾಲ 11:01 ರಿಂದ12:34ರ ವರೆಗೆ.

ಸಿಂಹ ರಾಶಿ : ಇಂದು ನಿಮಗೆ ಯಾವುದೋ ನಿಶ್ಚಿತ ಮೂಲದಿಂದ ಹಣ ಬರುವ ಖಾತ್ರಿ ಸಿಕ್ಕು, ಹೆಚ್ಚಿನ ಖರ್ಚು ಮಾಡಲು ಮುಂದಾಗುವಿರಿ. ದುರಭ್ಯಾಸವು ಎಲ್ಲರಿಂದ ನಿಮ್ಮನ್ನು ದೂರವಿಡುವುದು. ರಾಜಕೀಯ ವ್ಯಕ್ತಿಗಳು ಒತ್ತಡದ ಮೇಲೆ ಅಭಿವೃದ್ಧಿಗೆ ಗಮನ ಕೊಡುವರು. ನಿಮ್ಮ ಸ್ನೇಹಿತನ ಜೊತೆ ದೂರ ಪ್ರಯಾಣ ಮಾಡುವಿರಿ. ನಿರ್ಮಾಣದ ಕಾರ್ಯವನ್ನು ನೀವು ವಹಿಸಿಕೊಳ್ಳುವಿರಿ. ಅನಗತ್ಯ ವಿಷಯವನ್ನು ಚರ್ಚಿಸಿ ಕಾಲಹರಣ ಮಾಡುವಿರಿ. ನಿಮ್ಮ ಸಾಮರ್ಥ್ಯವನ್ನು ತೋರಿಸಲು ಹೋಗಬೇಡಿ. ಎಲ್ಲದರಲ್ಲಿಯೂ ಇಂದು ನೀವು ನಕಾರಾತ್ಮಕ ವಿಷಯವನ್ನು ಹುಡುಕುವಿರಿ. ಪರಾವಲಂಬಿಯಾಗುವುದನ್ನು ಕಡಿಮೆ ಮಾಡಿಕೊಳ್ಳಬೇಕು. ಸಿಗಬೇಕಾದವರು ಇಂದು ಸಿಗದೇ ಹೋಗುವರು. ನಿಮ್ಮ ಮಾತಿಗೆ ಸಮಜಾಯಿಷಿ ಕೊಡಲು ಹೋಗುವ ಅವಶ್ಯಕತೆ ಇಲ್ಲ. ಒಂಟಿತನದ ಆಲೋಚನೆಯು ಪೂರ್ಣವಾಗದು. ಅನಾರೋಗ್ಯದ ಕಾರಣದಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಆಗುವುದು.

ಕನ್ಯಾ ರಾಶಿ : ಅಧಿಕಾರಿಗಳಿಗೆ ಬೇಕಾದುದನ್ನು ನೀಡಿ ಅವರನ್ನು ಸಂತೋಷಪಡಿಸುವಿರಿ. ಸಾಧ್ಯವಾದಷ್ಟು ನಿಮ್ಮ‌ ಕೆಲಸವನ್ನು ಸದ್ದಿಲ್ಲದೇ ಮಾಡಿ ಮುಗಿಸಿ. ಇಂದು ನೀವು ಮನೆಯಲ್ಲಿಯೇ ವಾಸ ಮಾಡಿ. ನಿಮ್ಮ ಸಂಬಂಧಿಸಿದ ವಸ್ತುಗಳು ಕಾಣೆಯಾಗಬಹುದು. ಅಧಿಕೃತ ಮಾಹಿತಿಯನ್ನು ಪಡೆದು ಮುಂದುವರಿಯುವುದು ಒಳ್ಳೆಯದು. ಇಂದು ನಿಮಗೆ ತುಂಬ ಕೆಲಸಗಳಿದ್ದರೂ ಮಾಡಲು ನಿಮಗೆ ಆದ್ಯತೆ ಎಂದು ಕೊಡಲು ಕಷ್ಟವಾದೀತು. ದಾಂಪತ್ಯದಲ್ಲಿ ನೀವು ಸುಖವನ್ನು ಅನುಭವಿಸುವಿರಿ. ನಿಮ್ಮ ಕೋಪವನ್ನು ನೀವು ನಿಯಂತ್ರಿಸುವುದು ಕಷ್ಟವಾದೀತು. ಸಣ್ಣ ಪರಿಶ್ರಮಕ್ಕೂ ನಿಮಗೆ ಉತ್ತಮ ಫಲವಿರಲಿದೆ. ಸಂಗಾತಿಗೆ ಸಂತೋಷವನ್ನು ಕೊಡುವಿರಿ. ಯಾರದೋ ಮಾತಿಗೆ ನೀವು ಚಿಂತಿತರಾಗದೇ ನಿಮ್ಮ ಕೆಲಸದಲ್ಲಿ ಮಗ್ನರಾಗುವಿರಿ. ಮನಸ್ತಾಪಗಳು ದೂರವಾಗಿ ಕುಟುಂಬದಲ್ಲಿ ಅನ್ಯೋನ್ಯತೆ ಎದ್ದು ತೋರುವುದು. ಮಕ್ಕಳ‌ ವಿಚಾರದಲ್ಲಿ ದುಂದು ವೆಚ್ಚ ಮಾಡಬೇಕಾದೀತು. ಹೂಡಿಕೆಯಲ್ಲಿ ಅತಿಯಾದ ನಿರೀಕ್ಷೆ ಬೇಡ.

ತುಲಾ ರಾಶಿ : ನಿಮ್ಮ ಪಟ್ಟ ಶ್ರಮಕ್ಕೆ ಈಗ ಗೌರವವನ್ನು ಪಡೆದುಕೊಳ್ಳುವಿರಿ. ಭಾವನೆ ವಿಶಾಲವಾದಷ್ಟು ನಿಮ್ಮ ವ್ಯಕ್ತಿತ್ವವೂ ವಿಶಾಲವಾಗುವುದು. ಅನವಶ್ಯಕ ವಸ್ತುಗಳನ್ನು ಖರೀದಿ ಮಾಡಿದ್ದಕ್ಕೆ ಮನೆಯಲ್ಲಿ ಸಂಗಾತಿಯ ಜೊತೆ ಕಲಹವಾಗಲಿದೆ. ಸಹೋದರರ ನಡುವೆ ಕಲಹವಾಗುವ ಸಾಧ್ಯತೆ ಇದೆ. ಕುಟುಂಬ ಶಾಂತಿಯಿಂದ ಇರಲು ಒಬ್ಬರನ್ನು ಒಬ್ಬರು ಅನುಸರಿಸಬೇಕಾದೀತು. ನೀವಿಬ್ಬರೂ ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ಸಾಲಕ್ಕೆ ಅರ್ಜಿ ಸಲ್ಲಿಸಿದ್ದು ಬರುವ ತನಕ ತಾಳ್ಮೆಯಿಂದ ಕಾಯಬೇಕಾದೀತು. ನೀವು ಪ್ರಾಮಾಣಿಕತೆಯನ್ನು ತೋರಿಸಬೇಕಾದೀತು. ಸಮಯವನ್ನು ನೋಡಿ ಹೇಳಬೇಕಾದ ವಿಚಾರವನ್ನು ಹೇಳಿ. ಇಲ್ಲವಾದರೆ ನಿಮ್ಮ‌ ಮಾತು ಬೇರೆ ಪರಿಣಾಮವನ್ನು ಕೊಟ್ಟೀತು. ನಿಮಗೆ ಸೂಕ್ತವೆನಿಸಿದ ವ್ಯಕ್ತಿಗಳಲ್ಲಿ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಿರಿ. ಸ್ನೇಹಿತರ ಬಳಗ ನಿಮ್ಮನ್ನು ಕೆಟ್ಟ ಕೆಲಸಕ್ಕೆ ಪ್ರೇರಿಸಬಹುದು. ಬೀಳುವ ನಿಮ್ಮನ್ನು ಯಾರಾದರೂ ರಕ್ಷಿಸಿಯಾರು. ನ್ಯಾಯ ನೀತಿಯ ವಿರುದ್ಧ ನಡೆಯುವುದು ಬೇಡ.

ವೃಶ್ಚಿಕ ರಾಶಿ : ಇಂದು ನಿಮ್ಮ ಬಾಕಿ ಉಳಿದ ಸಾಲಗಳನ್ನು ಪೂರ್ಣ ಮಾಡಿ. ಸಂಗಾತಿಯ ಪ್ರೀತಿಯಿಂದ ನೀವು ವಂಚಿತರಾಗಬೇಕಾದೀತು. ನಿಮ್ಮ ಅಂದಾಜನ್ನು‌ ಮೀರಿ ಹಣವು ಖರ್ಚಾಗಬಹುದು. ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ವಿಷಯದಲ್ಲಿ ಗಮನಕೊಟ್ಟು ನೀವು ಯಾವುದನ್ನೂ ಸರಿಯಾಗಿ ನಿರ್ವಹಿಸಲಾಗದೇ ಒದ್ದಾಡುವಿರಿ. ಎಲ್ಲರ ಜೊತೆಗಿದ್ದರೂ ನಿಮಗೆ ಒಂಟಿತನವು ಕಾಡಬಹುದು. ಸತ್ಯನ್ನೇ ಹೇಳುತ್ತೇನೆಂದು ಇನ್ನೊಬ್ಬರಿಗೆ ನೋವು ಕೊಡುವುದು ಉಚಿತವಾಗಲಾರದು. ವಿದ್ಯಾರ್ಥಿಗಳಿಂದ‌ ನಿಮಗೆ ಆಶ್ಚರ್ಯ ಇರಲಿದೆ. ನಿಮ್ಮ ಬಗೆಗಿನ‌ ವಿಚಾರವನ್ನು ನೀವು ನಿರ್ಲಕ್ಷ್ಯ ಮಾಡುವಿರಿ. ಅಸಾಧ್ಯವಾದುದನ್ನು ಸಾಧಿಸುವ ಹುಂಬುತನ‌ ಬೇಡ. ನಿಮ್ಮ ದಾರಿಯು ಸರಿ ಇದೆಯೇ ಎಂಬ ಯೋಚನೆಗೆ ಬಂದು‌ ಅನಂತರ ಮುಂದುವರಿಯಿರಿ. ಒಳ್ಳೆಯ ಕಡೆಯಿಂದ ಒಳ್ಳೆಯದನ್ನೇ ನಿರೀಕ್ಷಿಸಿ. ಉತ್ಸಾಹಕ್ಕೆ ನಿಮ್ಮದೇ ಆದ ಕಾರಣವನ್ನು ಕಂಡುಕೊಳ್ಳಬೇಕು. ನಿಮ್ಮ ದಿನಚರಿ ನಿಧಾನವಾಗಿರುತ್ತದೆ. ಪ್ರತಿಯೊಂದು ಕ್ರಿಯೆಯನ್ನು ನಿಧಾನಗತಿಯಲ್ಲಿ ಸಾಗುವುದು. ನೀವು ಕೊಟ್ಟಿದ್ದೇ ನಿಮಗೆ ಸಿಗುವುದು ಸೃಷ್ಟಿಯ ನಿಯಮ.

ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!