Daily Horoscope: ಮಕ್ಕಳ ಉದ್ಯಮಕ್ಕೆ ಸಹಾಯ ಮಾಡುವಿರಿ, ಆಸ್ತಿ ಮಾರಾಟ ಮಾಡಬೇಕಾದೀತು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 17, 2024 | 12:10 AM

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 17: ಹಠದ ಸ್ವಭಾವವನ್ನು ಬಿಟ್ಟರೆ ಸಂತೋಷದ ಸಂಗತಿಗಳನ್ನು ನೀವು ಪಡೆಯುವಿರಿ. ನಿಮ್ಮ ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ಪುಣ್ಯಕ್ಷೇತ್ರಕ್ಕೆ ಕುಟುಂಬ ಜೊತೆ ಹೋಗಲಿದ್ದೀರಿ. ನಡೆದಾಡುವಾಗ ಜಾಗರೂಕತೆ ಇರಲಿ. ಹಾಗಾದರೆ ಸೆಪ್ಟೆಂಬರ್​ 17ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ಮಕ್ಕಳ ಉದ್ಯಮಕ್ಕೆ ಸಹಾಯ ಮಾಡುವಿರಿ, ಆಸ್ತಿ ಮಾರಾಟ ಮಾಡಬೇಕಾದೀತು
ಮಕ್ಕಳ ಉದ್ಯಮಕ್ಕೆ ಸಹಾಯ ಮಾಡುವಿರಿ, ಆಸ್ತಿ ಮಾರಾಟ ಮಾಡಬೇಕಾದೀತು
Follow us on

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಧೃತಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:31 ಗಂಟೆ, ರಾಹು ಕಾಲ ಮಧ್ಯಾಹ್ನ 03:29 ರಿಂದ 05:00, ಯಮಘಂಡ ಕಾಲ ಬೆಳಿಗ್ಗೆ 09:25 ರಿಂದ 10:56ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:27 ರಿಂದ ಮಧ್ಯಾಹ್ನ 01:58ರ ವರೆಗೆ.

ಸಿಂಹ ರಾಶಿ: ಇಂದು ಯಾರ ಪ್ರಶಂಸೆಯನ್ನೂ ಪೂರ್ಣವಾಗಿ ಒಪ್ಪಿಕೊಳ್ಳಲಾರಿರಿ. ಇಂದು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳ ಶ್ರಮ ಸಫಲವಾಗದು. ನೀವು ಇಂದು ಕಾರ್ಯದಲ್ಲಿ ಅನಿರೀಕ್ಷಿತ ಜಯವನ್ನು ಗಳಿಸುವಿರಿ. ಭೂಮಿಯ ದಾಖಲೆಗಳನ್ನು ಸರಿಯಾಗಿ‌ ಪಡೆದುಕೊಂಡು ವ್ಯವಹಾರವನ್ನು ಮುಂದುವಿರಿಸಿ. ಸುಳ್ಳಿನ ಮಾತಿನಿಂದ ನಿಮಗೆ ಅತಿಯಾದ ಕೋಪಬರುವುದು. ನಿಮ್ಮ ನಡವಳಿಕೆಯು ಕೆಲವರಿಗೆ ಇಷ್ಟವಾಗದೇ ಇರುವುದು. ಮಕ್ಕಳು ನಿಮ್ಮ‌ ಮಾತನ್ನೇ ನಿಮಗೆ ಹೇಳುವರು. ನಿಂತಲ್ಲೇ ನಿಲ್ಲುವುದಕ್ಕಿಂತ ನಿಧಾನವಾಗಿಯಾದರೂ ಚಲಿಸುವುದು ಮುಖ್ಯ. ನಿಮ್ಮವರ ಕೆಲವು ಸ್ವಭಾವವು ನಿಮಗೆ ಮೆಚ್ಚುಗೆಯಾಗದು. ನಿಮಗೆ ಸಿಕ್ಕ ಅನಾದರದಿಂದ ಬೇಸರವಾಗಬಹುದು. ಮಕ್ಕಳ ಉದ್ಯಮಕ್ಕೆ ನೀವು ಸಹಾಯ ಮಾಡುವಿರಿ. ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವೂ ಆಗಬಹುದು. ಹಳೆಯದನ್ನೇ ಹೊಸತನ್ನಾಗಿಸಿಕೊಂಡು ಬಳಸುವಿರಿ.

ಕನ್ಯಾ ರಾಶಿ: ಯಾರ ವಿಶ್ವಾಸವನ್ನೂ ವಿಶೇಷವಾಗಿ ಗಳಿಸಲು ಇಷ್ಟವಾಗದು. ಇಂದು ಅಪರಿಚಿತರು ಮಾರಾಟದ ವಿಚಾರದಲ್ಲಿ ಮೋಸ ಮಾಡುವರು. ಬಂಧುಗಳು ನಿಮ್ಮ ಸಹಾಯವನ್ನು ಬಯಸುವರು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡಲಿದ್ದೀರಿ. ಕಲಾವಿದರು ತಮ್ಮ‌‌ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ. ನಿಮ್ಮ ಮಾತುಗಳು ತಪ್ಪಾಗಿ ಪ್ರಸಾರವಾಗಬಹುದು. ವಿವಾದವಾಗುವ ಹೇಳಿಕೆಯನ್ನು ನೀಡಬೇಡಿ. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭವಾದೀತು. ಸಂಗಾತಿಯ ಬಯಕೆಯನ್ನು ಈಡೇರಿಸಿ ಸಂತೋಷಪಡಿಸುವಿರಿ. ನಿಮ್ಮ ಬೆಳವಣಿಗೆಯನ್ನು ಬಂಧುಗಳು ಕಂಡು ಇಷ್ಟಪಡುವರು. ಎಲ್ಲದಕ್ಕೂ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತ ಯಾವ ಕಾರ್ಯವನ್ನೂ ಸಫಲ ಮಾಡಲಾಗದು. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ಕೆಲವು ಕಾರ್ಯಗಳು ಬೇಡವೆಂದರೂ ನಿಮ್ಮನ್ನು ಸುತ್ತಿಕೊಳ್ಳುವುವು.

ತುಲಾ ರಾಶಿ: ಸರ್ಕಾರಿ ಉದ್ಯೋಗಿಗಳು ಸವಲತ್ತುಗಳನ್ನು ಕೇಳಿ ಪಡೆಯುವರು. ಸಾಂಸಾರಿಕ ಬದುಕಿನಲ್ಲಿ ಇಂದು ಸಣ್ಣಪುಟ್ಟ ಕಲಹಗಳಿದ್ದರೂ ತೂಗಿಸಿಕೊಂಡು ಹೋಗುವ ಸಾಮರ್ಥ್ಯ ಇರುವುದು. ದಾಯಾದಿ ಕಲಹವು ತಾರಕಕ್ಕೆ ಹೋಗಲಿದೆ. ನಿಮಗೆ ಬೆಂಬಲವು ಕಡಿಮೆ ಆಗಲಿದೆ. ಕಛೇರಿಯಲ್ಲಿ ನಿಮ್ಮ ಕೆಲಸವು ಮಂದಗತಿಯಲ್ಲಿ ಸಾಗಲಿದ್ದು ಸಹೋದ್ಯೋಗಿಗಳಿಂದ ದೂರು ಸಿಗಬಹುದು. ಯಾವ ವಿಚಾರದಲ್ಲಿಯೂ ನಿರೀಕ್ಷಿತ ಗುರಿ ತಲುಪಲಾಹದು. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿ ಇರಲಿದೆ. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗಿವ ಸಂಭವಿದೆ. ಹಠದ ಸ್ವಭಾವವನ್ನು ಬಿಟ್ಟರೆ ಸಂತೋಷದ ಸಂಗತಿಗಳನ್ನು ನೀವು ಪಡೆಯುವಿರಿ. ನಿಮ್ಮ ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ಪುಣ್ಯಕ್ಷೇತ್ರಕ್ಕೆ ಕುಟುಂಬ ಜೊತೆ ಹೋಗಲಿದ್ದೀರಿ. ನಡೆದಾಡುವಾಗ ಜಾಗರೂಕತೆ ಇರಲಿ. ನಿಮ್ಮ ಶ್ರದ್ಧೆಗೆ ಭಂಗಬರುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ: ಆದಾಯ ಮತ್ತು ಖರ್ಚನ್ನು ಸಮವಾಗಿ ತೂಗಿಸಿಕೊಂಡರೆ ಸ್ವಲ್ಪಮಟ್ಟಿನ ಚಿಂತೆ ದೂರಾಗುವುದು. ಎಂತಹ ಆಪ್ತರಾದರೂ ಸಹಕಾರವನ್ನು ಕೇಳುವಾಗ ಹಿಂದೇಟು ಹಾಕುವಿರಿ. ನಿಮ್ಮ ಆಸೆಯನ್ನು ಪ್ರಕಟಪಡಿಸಲು ಹಿಂಜರಿಯಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ವರ್ತಿಸುವಿರಿ. ವಿದ್ಯೆಯನ್ನು ಇನ್ನಷ್ಟು ಪಡೆಯುವ ಆಸೆ ಇರುವುದು. ದ್ವೇಷವು ನಿಮ್ಮ‌ ಜೀವನವನ್ನು ಮಾರ್ಗಭ್ರಷ್ಟ ಮಾಡಬಹುದು. ಧನಾತ್ಮಕ ಚಿಂತನೆಯಿಂದ ಉತ್ಸಾಹವೂ ಇರಲಿದೆ. ಧೈರ್ಯದ ಕೊರತೆಯು ಕಾಣಿಸುವುದು. ಮುಖಂಡರ ಜೊತೆ ನೀವು ಸಾಮಾಜಿಕ‌ ಕಾರ್ಯಗಳ‌ ಬಗ್ಗೆ ಚರ್ಚಿಸುವಿರಿ. ಭೂಮಿಗೆ ಸಂಬಂಧಿಸಿದಂತೆ ಕೆಲವು ಮಾರ್ಪಾಡಿನಿಂದ ಅನುಕೂಲವಾಗಲಿದೆ. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ಒತ್ತಡವಿಲ್ಲದೇ ಇಂದಿನ‌ ವಹಿವಾಟನ್ನು ಮಾಡಿಮುಗಿಸುವಿರಿ.