Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

ಆಗಸ್ಟ್​ 24,​ 2024ರ​​ ನಿಮ್ಮ ರಾಶಿಭವಿಷ್ಯ: ನಿಮ್ಮ ಆಲೋಚನೆಗಳನ್ನು ಮನೆಯವರ ಮೇಲೆ‌ಹೇರಲು ಹೋದರೆ ಕಲಹವೇ ಆದೀತು. ನೈತಿಕ ಬೆಂಬಲ ಸಿಗುವುದು ಕಷ್ಟ. ಹಣಕಾಸಿನ‌ ಕೊರತೆ ಇದ್ದರೂ ನೆಮ್ಮದಿಯ ಜೀವನ ಇರಲಿದೆ. ನಿಮ್ಮವರು ನಿಮಗೆ ಕೊಡುವ ಸಲಹೆಗಳು ನಿಮಗೆ ನಕಾರಾತ್ಮಕವಾಗಿ ತೋರುವುದು. ಹಾಗಾದರೆ ಆಗಸ್ಟ್​ 24ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 24, 2024 | 12:10 AM

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಆಗಸ್ಟ್​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:48 ಗಂಟೆ, ರಾಹು ಕಾಲ ಬೆಳಿಗ್ಗೆ 09:28 ರಿಂದ 11:01, ಯಮಘಂಡ ಕಾಲ ಮಧ್ಯಾಹ್ನ 02:08 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:21 ರಿಂದ 07:55ರ ವರೆಗೆ.

ಮೇಷ ರಾಶಿ: ನೀವು ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯನ್ನು ಇಟ್ಟುಕೊಳ್ಳಬೇಕಾಗುವುದು. ಇಂದು ನೀವು ಯಾವದೇ ವಿಚಾರವನ್ನು ಸಂಪೂರ್ಣವಾಗಿ ತಿಳಿದು ಮಾತನಾಡುವುದು ಒಳ್ಳೆಯದು.‌ ನಿಮ್ಮ ಮಾತು ಇತರರಿಗೆ ನೋವನ್ನು ಕೊಡಬಹುದು. ಆದಾಯದ ವಿಚಾರದಲ್ಲಿ ನಿಮಗೆ ಹತ್ತಾರು ಯೋಚನೆಗಳು ಬಂದರೂ ಅದನ್ನು ಕ್ರಮಬದ್ಧಗೊಳಿಸಲು ಪ್ರಯತ್ನಿಸಿ. ನಿಮ್ಮ ತಾಳ್ಮೆಯು ನಿಮಗೆ ಸಹಕಾರ ನೀಡುವುದು. ಇಂದು ನಿಮ್ಮ ಉತ್ಸಾಹಭಂಗವನ್ನು ಮಿತ್ರರು ಮಾಡಿಯಾರು. ಆನಾರೋಗ್ಯವಿದ್ದರೂ ತಿನ್ನಬೇಕು ಎನ್ನುವ ಚಪಲಕ್ಕೆ ಆಹಾರವನ್ನು ತಿಂದು ಆನಾರೋಗ್ಯವನ್ನು ಹೆಚ್ಚುಮಾಡಿಕೊಳ್ಳುವಿರಿ. ಕುತೂಹಲದ‌ ನೆಪದಲ್ಲಿ ಏನಾದರೂ ಮಾಡಿಕೊಳ್ಳಬೇಡಿ. ನಿಮಗೆ ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವಿರಲಿ. ಏರುಧ್ವನಿಯಲ್ಲಿ ಮಾತನಾಡುವುದಕ್ಕಿಂತ ವಿವೇಚನೆಯಿಂದ ಮಾತನಾಡಿ. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ. ಸಿಟ್ಟಗೊಂಡು ಮಾತನಾಡಬೇಕಾದ ಅವಶ್ಯಕತೆ ಇಲ್ಲ. ಸಮಾಧಾನಚಿತ್ತರಾಗಿ ಮಾತನಾಡಿ.

ವೃಷಭ ರಾಶಿ: ಇಂದು ಚರಾಸ್ತಿಯ ವಿಚಾರಕ್ಕೆ ಸಹೋದರರ ನಡುವೆ ವಾಗ್ವಾದ ನಡೆಯಬಹುದು. ನಿಮಗೆ ಸಾಲ ಕೊಡಲು ಯಾರಾದರೂ ಮುಂದೆಬರಬಹುದು. ನಿಮ್ಮ ವಿವೇಕವು ಸರಿಯಾಗಿ ಇರಲಿ. ನಿಮ್ಮವರನ್ನೇ ನೀವು ನಂಬದ ಸ್ಥಿತಿಯಲ್ಲಿ ಇರಬಹುದು. ನಿಮ್ಮ ಸಿಟ್ಟು ಇಂದು ಕಾಣಿಸಿಕೊಳ್ಳದೇ ಇದ್ದೀತು. ನಿಮ್ಮದೇ ಬದ್ಧತೆಯನ್ನು ನೀವು ಬಿಟ್ಟುಕೊಡಲಾರಿರಿ. ತಾಳ್ಮೆಯಿಂದ ನಿಮ್ಮ ವ್ಯವಹಾರ ಇರಲಿ. ಅಸಾಧ್ಯವನ್ನು ಸಾಧಿಸುವ ಹಠದ ಸ್ವಭಾವ ಒಳ್ಳೆಯದೇ. ಎಲ್ಲವೂ ಕೈಗೂಡುವುದು ಎಂಬ ಅತಿಯಾದ ಆತ್ಮವಿಶ್ವಾಸಬೇಡ. ನಿರ್ಭಾವುಕತೆಯು ನಿಮಗೆ ಶೋಭೆಯನ್ನು ತಂದುಕೊಡದು. ಅನ್ನಿಸಿದ್ದನ್ನು ನೀವು ಇನ್ನೊಬ್ಬರಿಗೆ ಹೇಳುವಾಗ ತಡೆಯುವಿರಿ. ನಿಮ್ಮ ಕೈಲಾದ ಸಹಾಯವನ್ನು ಮಾಡಬೇಕಾದೀತು. ಅಂದುಕೊಂಡಿದ್ದನ್ನು ಸಾಧಿಸಲಾಗದು ಎಂಬ ಅಳುಕು ನಿಮ್ಮಲ್ಲಿ ಇರುವುದು. ಆದುದರ ಬಗ್ಗೆ ನಿಮಗೆ ಯಾವುದೇ ಬೇಸರವನ್ನು ಮಾಡಿಕೊಳ್ಳುವುದಿಲ್ಲ.

ಮಿಥುನ ರಾಶಿ: ಇಂದು ನಿರುಪಯೋಗಿ ವಸ್ತುಗಳನ್ನು ಅನ್ಯರಿಗೆ ಕೊಡುವಿರಿ. ಸಾಮಾಜಿಕ ಕಾರ್ಯದಲ್ಲಿ ತಾರತಮ್ಯವನ್ನು ತೋರಿಸುವುದು ಬೇಡ. ಎಲ್ಲವನ್ನೂ ಮಾತಿನಿಂದಲೇ ಬಗೆಹರಿಸಲಾಗದು. ನೀವು ನಿಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳುವಿರಿ. ನಿಮಗೆ ಅದು ಬಹಳ ಆಪ್ತವಾಗಲಿದೆ. ಯಾರ ಶ್ರೇಯಸ್ಸನ್ನಾದರೂ ಬಯಸಿದರೆ, ವೈಯಕ್ತಿಕವಾಗಿ ಅದನ್ನು ಮಾಡಿ. ಸಂಗಾತಿಯ ಜೊತೆ ಮುಕ್ತವಾಗಿ ಮಾತನಾಡಿ. ದೇವರ ದರ್ಶನವನ್ನು ನೀವು ಮಾಡುವಿರಿ.‌ ಸಮಯಕ್ಕೆ ನೀವು ನಿಮ್ಮ ವ್ಯಕ್ತಿತ್ವಗಳನ್ನು ಬಳಸಿಕೊಳ್ಳುವಿರಿ. ಸ್ತ್ರೀಯರಿಗೆ ಸಂಬಂಧಿಸಿದ ಅಪವಾದವನ್ನು ಹೊರಬೇಕಾದೀತು. ಏನೂ ಗೊತ್ತಿಲ್ಲದೇ ಯಾರ ಪರ ವಹಿಸುವ ಅಗತ್ಯವಿರದು. ಯಾರ‌ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ನಡೆಯುವಿರಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು.

ಕರ್ಕಾಟಕ ರಾಶಿ; ಅವಿವಾಹಿತರಿಗೆ ಇಂದು ವಿವಾಹಕ್ಕೆ ಯೋಗ್ಯವಾದ ಮಾತುಗಳು ಕೇಳಿಸಬಹುದು. ನಿಮ್ಮ ಸಂತೋಷದ ಸುದ್ದಿಯನ್ನು ಇತರರಿಗೂ ಹಂಚುವಿರಿ. ನಿಮ್ಮ ಆಲೋಚನೆಗಳನ್ನು ಮನೆಯವರ ಮೇಲೆ‌ಹೇರಲು ಹೋದರೆ ಕಲಹವೇ ಆದೀತು. ನೈತಿಕ ಬೆಂಬಲ ಸಿಗುವುದು ಕಷ್ಟ. ಹಣಕಾಸಿನ‌ ಕೊರತೆ ಇದ್ದರೂ ನೆಮ್ಮದಿಯ ಜೀವನ ಇರಲಿದೆ. ನಿಮ್ಮವರು ನಿಮಗೆ ಕೊಡುವ ಸಲಹೆಗಳು ನಿಮಗೆ ನಕಾರಾತ್ಮಕವಾಗಿ ತೋರುವುದು. ಇಂದು ನಿಮ್ಮ‌ ಪ್ರೀತಿಪಾತ್ರರನ್ನು ಭೇಟಿ ಮಾಡುವಿರಿ. ನಿಮಗೆ ಏನೇ ಆಗುವುದಿದ್ದರೂ ದಾಖಲೆ ಸಹಿತವಾಗಿ ಇರಲಿ. ನಿಮ್ಮಲ್ಲಿ ಹೊಸ ಬಗೆಯ ಉತ್ಸಾಹವು ಇರಲಿದೆ. ರಾಜಕೀಯದವರ ಬೆಂಬಲ ಸಿಗಲಿದೆ. ಅದನ್ನು ಸದುಪಯೋಗ ಮಾಡಿಕೊಳ್ಳುವುದು ಉತ್ತಮ. ನಿಮಗೆ ಆಯ್ಕೆಗಳನ್ನು ಮಾಡಲು ಗೊಂದಲವಿರಬಹುದು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಆತುರದಲ್ಲಿ ನಿಮ್ಮ ಎಲ್ಲ ಕಾರ್ಯವೂ ಮೊಟಕುಮಾಡುವಿರಿ. ಅಮೂಲ್ಯ ಸಮಯವನ್ನು ಆಲಸ್ಯದಿಂದ ಕಳೆಯುವಿರಿ.

ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?