Daily Horoscope: ವಿರೋಧಿಸುವವರ ಮುಂದೆ ಸಮಾನವಾಗಿ ನಿಲ್ಲಬೇಕು ಎಂಬ ಹಠ ನಿಮ್ಮದು

ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಸೆಪ್ಟೆಂಬರ್​ 21: ನ್ಯಾಯಾಲಯದಲ್ಲಿ ನಿಮಗೆ ಜಯವು ಸಿಗಲಿದೆ. ಉದ್ಯೋಗಕ್ಕೆ ಸೇರಲು ಮಾನಸಿಕವಾಗಿ ನೀವು ಸಿದ್ಧರಾಗುವಿರಿ. ನಿಮ್ಮನ್ನು ವಿರೋಧಿಸುವವರ ಮುಂದೆ ಸಮಾನವಾಗಿ ನಿಲ್ಲಬೇಕು ಎಂಬ ಹಠ ಬರಬಹುದು. ಗೃಹನಿರ್ಮಾಣಕ್ಕೆ ತಕ್ಕಂತೆ ನಿಮ್ಮ ನಿರ್ಧಾರಗಳು ಬದಲಾಗಲಿದೆ. ಹಾಗಾದರೆ ಸೆಪ್ಟೆಂಬರ್​ 21ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Daily Horoscope: ವಿರೋಧಿಸುವವರ ಮುಂದೆ ಸಮಾನವಾಗಿ ನಿಲ್ಲಬೇಕು ಎಂಬ ಹಠ ನಿಮ್ಮದು
ವಿರೋಧಿಸುವವರ ಮುಂದೆ ಸಮಾನವಾಗಿ ನಿಲ್ಲಬೇಕು ಎಂಬ ಹಠ ನಿಮ್ಮದು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 21, 2024 | 12:10 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಚತುರ್ಥೀ, ನಿತ್ಯ ನಕ್ಷತ್ರ: ಭರಣೀ, ಯೋಗ: ವ್ಯಾಘಾತ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 28 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ09:24 ರಿಂದ 10:55, ಯಮಘಂಡ ಕಾಲ ಮಧ್ಯಾಹ್ನ 01:56 ರಿಂದ 03:27ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:23 ರಿಂದ  07:53ರ ವರೆಗೆ.

ಸಿಂಹ ರಾಶಿ: ತಂದೆಯ ಕಾರಣದಿಂದ ನಿಮಗೆ ಗೌರವವು ಸಿಗುವುದು. ಇಂದು ನೀವು ಮಾನಸಿಕ ಮತ್ತು ದೈಹಿಕವಾಗಿ ಸಬಲರು. ಉದ್ಯೋಗದ ಕಾರಣಕ್ಕೆ ನಿಮಗೆ ಅನಾರೋಗ್ಯವು ಕಾಣಿಸಿಕೊಳ್ಳಬಹುದು. ಬರಬೇಕಾದ ಹಣವನ್ನು ನೀವು ಪಡೆಯಲಿದ್ದೀರಿ. ನ್ಯಾಯಾಲಯದಲ್ಲಿ ನಿಮಗೆ ಜಯವು ಸಿಗಲಿದೆ. ಉದ್ಯೋಗಕ್ಕೆ ಸೇರಲು ಮಾನಸಿಕವಾಗಿ ನೀವು ಸಿದ್ಧರಾಗುವಿರಿ. ನಿಮ್ಮನ್ನು ವಿರೋಧಿಸುವವರ ಮುಂದೆ ಸಮಾನವಾಗಿ ನಿಲ್ಲಬೇಕು ಎಂಬ ಹಠ ಬರಬಹುದು. ಗೃಹನಿರ್ಮಾಣಕ್ಕೆ ತಕ್ಕಂತೆ ನಿಮ್ಮ ನಿರ್ಧಾರಗಳು ಬದಲಾಗಲಿದೆ. ಕಣ್ಣಿನ‌ ತೊಂದರೆಯಿಂದ ಕಷ್ಟಪಡುವಿರಿ. ಸಮಯೋಚಿತ ಸ್ಫುರಣೆಯ ನಿಮಗೆ ಯಶಸ್ಸನ್ನು ತರಲಿದೆ. ಇಂದಿನ ಅಧಿಕ ಲಾಭವನ್ನು ಹೂಡಿಕೆ ಮಾಡಬಹುದು. ಉದ್ಯೋಗಕ್ಕೆ ಬೇರೆ ಪ್ರದೇಶಕ್ಕೆ ಹೋಗುವಿರಿ. ದೌರ್ಬಲ್ಯವನ್ನು ಮೆಟ್ಟಿ ಸಾಧಿಸಬೇಕಾದುದು ಇದೆ. ನಿಮ್ಮ ಆರ್ಥಿಕ ದೌರ್ಬಲ್ಯವನ್ನು ಆಡುಕೊಳ್ಳಬಹುದು. ಯಾರದ್ದಾದರೂ ಪ್ರಭಾವವನ್ನು ಬಳಸಿಕೊಂಡು ಅಧಿಕಾರವನ್ನು ಪಡೆಯುವಿರಿ.

ಕನ್ಯಾ ರಾಶಿ: ಇಂದು ಇನ್ನೊಬ್ಬರಿಗೆ ಬರುವ ಧನಕ್ಕೆ ಸಹಾಯ ಮಾಡುವಿರಿ. ನಿಮ್ಮ ಅಪರೂಪದ ವಸ್ತುವನ್ನು ಕಳೆದುಕೊಳ್ಳುವಿರಿ. ಹೊಸ ಸ್ಥಳಗಳನ್ನು ನೀವು ನೋಡಲು ನಿಮಗೆ ಇಷ್ಟವಾಗಲಿದೆ. ಸಮಯಪಾಲನೆಗೆ ನೀವು ಹೆಚ್ಚು ಒತ್ತನ್ನು ಕೊಡುವಿರಿ. ನೀರಿನಿಂದ ಇಂದು ಭಯವಾಗುವ ಸಾಧ್ಯತೆ ಇದೆ. ನೀವು ಸುಳ್ಳು ಹೇಳುತ್ತಿರುವುದನ್ನು ನಿಮ್ಮ ಮುಖ ಹೇಳುವುದು. ವಾಹನ ಚಾಲಕರು ಎಚ್ಚರಿಕೆಯಿಂದ ಚಲಾವಣೆ ಮಾಡಬೇಕಾಗುವುದು. ವೃತ್ತಿಯನ್ನು ಆನಂದಿಸುವ ಸ್ವಭಾವವನ್ನು ಬೆಳೆಸಿಕೊಳ್ಳುವಿರಿ. ಸಂಗಾತಿಯ ವಿಷಯದಲ್ಲಿ ನಿಮಗೆ ಇಷ್ಟ ಕಡಿಮೆಯಾಗಲಿದೆ. ಕಾಲು ನೋವಿನಿಂದ ಬಳಲುವಿರಿ. ಇಂದಿನ ದಿನ‌ ಒತ್ತಡದಿಂದ ಇರಲಿದೆ. ವಿದ್ಯಾರ್ಥಿಗಳು ಖುಷಿಯಿಂದ ಇರಲಿದ್ದು, ಇದಕ್ಕೆ ಸಾಧನೆಯು ಕಾರಣವಾಗಲಿದೆ. ಧಾರ್ಮಿಕ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಬಹುದು. ರಹಸ್ಯವನ್ನು ಬಿಟ್ಟುಕೊಡಲು ಇಚ್ಛಿಸುವಿರಿ. ಉದ್ಯೋಗಕ್ಕೆ ನಿಮ್ಮ ಮನಸ್ಸು ಸ್ಥಿರವಾಗಿ ಇರದು. ಒಂದೇ ರೀತಿಯಲ್ಲಿ ಜೀವನವನ್ನು ಸಾಗಿಸಲು ಕಷ್ಟವಾದೀತು.

ತುಲಾ ರಾಶಿ: ಯಾರದೋ ಮಾತಿಗೆ ಅನದಯರನ್ನು ದೂಷಿಸುವ ಕೆಲಸದಲ್ಲಿ ತೊಡಗುವಿರಿ. ನೀವು ಅನ್ಯರ ಯಶಸ್ಸಿಗೆ ನೀವು ಅಸೂಯೆ ಪಡುವ ಅವಶ್ಯಕತೆ ಇಲ್ಲ. ಮಾನಸಿಕವಾಗಿ ಬಳಲಲಿದ್ದೀರಿ. ದೈಹಿಕ ಸಾಮರ್ಥ್ಯದಿಂದ ಕುಗ್ಗಿರುವಿರಿ. ಜೀವನದಲ್ಲಿ ಬದಲಾವಣೆಯನ್ನು ಬಯಸುವಿರಿ. ಆಯ ತಪ್ಪದಂತೆ ನಡೆಯುವುದು ಅವಶ್ಯಕ. ನಿಮ್ಮ ಹೆಜ್ಜೆಯನ್ನೂ ಗಮನಿಸುವವರು ಇರುವರು. ಭೂಮಿಯ ವ್ಯವಹಾರದಲ್ಲಿ ಗೊಂದಲವಿರಲಿದೆ. ಸಂಬಂಧಗಳಲ್ಲಿ ನಿಮಗೆ ಅಪನಂಬಿಕೆ ಉಂಟಾಗಬಹುದು. ನಿಮ್ಮ ಮೇಲೆ ಅಪವಾದಗಳು ಬರುವ ಸಾಧ್ಯತೆ ಇದೆ. ರಾಜಕೀಯದಲ್ಲಿ ನೀವು ಸಿಕ್ಕಿಕೊಳ್ಳುವಿರಿ. ನೀರಿನ ಕಾರಣದಿಂದ ನಿಮ್ಮ ಆರೋಗ್ಯ ಕೆಡುವುದು. ವಿದೇಶದಲ್ಲಿ ಇದ್ದವರಿಗೆ ಸಂಕಡವಾಗಲಿದೆ. ನೂತನ ವಾಹನವನ್ನು ಖರೀದಿಸುವಿರಿ. ವಾತಾವರಣದಿಂದ ನಿಮಗೆ ಮನಸ್ಸು ಹಾಳಾಗಬಹುದು. ಯಾರನ್ನೋ ಹೆದರಿಸಿ ಕೆಲಸ ಮಾಡಿಸಿಕೊಳ್ಳುವ ವಿಚಾರಕ್ಕೆ ಹೋಗುವುದು ಬೇಡ.

ವೃಶ್ಚಿಕ ರಾಶಿ: ಯಾವ ವೈಯಕ್ತಿಕ ಜೀವನವನ್ನು ಸುಮ್ಮನೆ ಪ್ರವೇಶಿಸವುದು ಬೇಡ. ಇಂದು ನಿಮ್ಮ ಖಾಲಿ ಮನಸ್ಸಿಗೆ ಸಲ್ಲದ ಆಲೋಚ‌ನೆಗಳು ಬರಬಹುದು. ಚರಾಸ್ತಿಯನ್ನು ಕಳೆದುಕೊಳ್ಳುವಿರಿ. ನಿಮ್ಮ ನಿಗದಿತ ಸಮಯವು ವ್ಯತ್ಯಾಸವಾಗಿ ಕಾರ್ಯಕ್ರಮವೂ ಬದಲಾಗಲಿದೆ. ಉದ್ವಿಗ್ನತೆಗೆ ಎಡಮಾಡಿಕೊಡದೇ ಸಮಾಧಾನಚಿತ್ತದಿಂದ ಇರುವುದನ್ನು ಕಲಿಯಬೇಕಾದೀತು. ನೌಕರರ ವಿಷಯದಲ್ಲಿ ಸಿಟ್ಟಾಗುವ ಸಾಧ್ಯತೆ ಇದೆ. ನಿಮ್ಮ ಕೈಲಾಗದು ಎಂದು ಕೈಕಟ್ಟಿ ಕುಳಿತುಕೊಳ್ಳುವುದು ಬೇಡ.‌ ಪ್ರಯತ್ನವನ್ನು ಮಾಡಿ, ಫಲವನ್ನು ಪಡೆಯುವಿರಿ. ಕರೆದಲ್ಲಿಗೆ ಹೋಗುವುದು ಇಷ್ಟವಾದರೂ ಇಂದು ಅದು ಸಾಧ್ಯವಾಗದು. ಸಮಯೋಚಿತ ಉತ್ತರಗಳು ನಿಮಗೆ ಧನಾತ್ಮಕ ಅಂಕಗಳನ್ನು ತಂದುಕೊಡುವುದು. ನಿಮ್ಮ ವರ್ತನೆಗಳು ಇತರರಿಗೆ ಮಾದರಿಯಾಗಬಹುದು. ನಿಮ್ಮ ಭೂಮಿಯು ನಿಮಗೆ ಸಿಗಲಿದೆ. ನಿಮಗೆ ಸಪ್ಪೆ ಎನಿಸಿದ ವಿಷಯವನ್ನು ಮುಂದುವರಿಸುವುದಿಲ್ಲ. ಗೃಹನಿರ್ಮಾಣದಲ್ಲಿ ಗೊಂದಲವು ಬರಬಹುದು. ದಿನದ ಕೊನೆಯಲ್ಲಿ ಅಶುಭ ಸಮಾಚಾರ ಬರಬಹುದು.

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ