
ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಕನಿಷ್ಠ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಹೇಳಿಕೊಳ್ಳಿ. ಅದು ಸಾಧ್ಯವಾಗದಿದ್ದಲ್ಲಿ ಯೂಟ್ಯೂಬ್ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಕೇಳಿಸಿಕೊಳ್ಳಿ.
ಈ ದಿನ ನಿಧಾನವಾಗಿ ಶುರುವಾಯಿತು ಎಂದೆನಿಸಿದರೂ ಮಧ್ಯಾಹ್ನದಿಂದ ನಿಮ್ಮ ಚಟುವಟಿಕೆ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಕಡಿಮೆಯಾಗಲಿದ್ದು, ಹೊಸ ಕೆಲಸ- ಕಾರ್ಯಗಳ ಕಡೆಗೆ ಗಮನ ನೀಡಲು ಅವಕಾಶ ದೊರೆಯಲಿದೆ. ಈಗಾಗಲೇ ಕೆಲಸ ಮಾಡಿಕೊಟ್ಟಿದ್ದೀರಿ, ಹಿಂದಿನ ಬಾಕಿ ಬಿಲ್ಗಳು ಉಳಿದುಹೋಗಿವೆ ಎಂದಾದಲ್ಲಿ ಅದರ ವಸೂಲಾತಿಗೆ ಏನು ಮಾಡಬೇಕು ಎಂಬ ಬಗ್ಗೆಯೇ ನಿಮ್ಮ ಗಮನ ನೀಡಲಿದ್ದೀರಿ.
ಇನ್ನು ನೀವು ಬೇರೆಯವರಿಗೆ ಕೊಡಬೇಕಾದ ಹಣ ಉಳಿದು ಹೋಗಿದ್ದಲ್ಲಿ ಸಮಯಕ್ಕೆ ಪಾವತಿಸುವುದು ಒಳ್ಳೆಯದು. ಕುಟುಂಬದಲ್ಲಿ ಮಕ್ಕಳ ವಿಚಾರವಾಗಿ ಸಂತಸದ ಸುದ್ದಿ ಬರುತ್ತದೆ. ಸಂಗಾತಿಗೆ ಜತೆಗೆ ಚಿಕ್ಕ- ಪುಟ್ಟ ವಿಷಯಗಳಿಗೆ ಭಿನ್ನಾಭಿಪ್ರಾಯ ಉಂಟಾದರೂ ಸಂಜೆ ವೇಳೆಗೆ ಸರಿಯಾಗಲಿದೆ. ನಿಮ್ಮ ಹಳೆಯ ಸ್ನೇಹಿತರು ಮತ್ತೆ ಸಂಪರ್ಕಕ್ಕೆ ಬರಲಿದ್ದಾರೆ. ಗ್ಯಾಜೆಟ್ಗಳ ಖರೀದಿಸಬೇಕಿದ್ದಲ್ಲಿ ಆತುರ ಬೇಡ.
ಒಂದಲ್ಲಾ ಒಂದು ಕಾರಣಕ್ಕಾಗಿ ನೀವು ಮಾಡಬೇಕು ಎಂದುಕೊಂಡ ಕೆಲವು ಕೆಲಸಗಳು ವಿಳಂಬ ಆಗುವ ಸಾಧ್ಯತೆ ಇದೆ. ಹಾಗಂತ ಆತುರ ಮಾಡುವ ಅಗತ್ಯವಿಲ್ಲ. ಹಣಕಾಸು ವಿಷಯದಲ್ಲಿ ಎಲ್ಲರೂ ನೀಡುವ ಸಲಹೆಯನ್ನು ಪಾಲಿಸಬೇಕು ಎಂದೇನೂ ಇಲ್ಲ. ಒಂದು ವೇಳೆ ಅವು ಪ್ರಯೋಜನಕ್ಕೆ ಬಾರದು ಎಂದೆನಿಸಿದಲ್ಲಿ ಕೇಳಿಸಿಕೊಳ್ಳುವ ಅಗತ್ಯವೂ ಇಲ್ಲ.
ಲೇಖನ- ಸ್ವಾತಿ ಎನ್.ಕೆ.