AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 6ರ ದಿನಭವಿಷ್ಯ

Daily Numerology February 06: ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 6ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ, ಯಾವ ಸವಾಲುಗಳನ್ನು ಎದುರಿಸಬೇಕಾಗಬಹುದು ಮತ್ತು ಅದಕ್ಕೆ ಪರಿಹಾರಗಳೇನು ಎಂದು ವಿವರವಾಗಿ ವಿವರಿಸಲಾಗಿದೆ.

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 6ರ ದಿನಭವಿಷ್ಯ
ದಿನಭವಿಷ್ಯ
ಸ್ವಾತಿ ಎನ್​ಕೆ
| Edited By: |

Updated on: Feb 06, 2026 | 12:20 AM

Share

ಈ ದಿನ ಪಾರಿವಾಳಗಳಿಗೆ ಕಾಳು- ಕಡಿ ಹಾಕಿದಲ್ಲಿ ಯತ್ನ ಕಾರ್ಯಗಳಲ್ಲಿ ಅನುಕೂಲಗಳು ಆಗಲಿವೆ. ಇನ್ನು ಏನಾದರೊಂದು ಕಾರಣವನ್ನು ಹೇಳಿ, ನಿಮ್ಮ ಕೆಲಸವನ್ನು ಮುಂದಕ್ಕೆ ಹಾಕುತ್ತಾ ಬಂದಿದ್ದಲ್ಲಿ ಅದಕ್ಕೆ ಕೂಡ ಪರಿಹಾರ ದೊರೆಯಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಅಜೀರ್ಣ, ವಿಪರೀತ ಜ್ವರ ಈ ರೀತಿ ತೊಂದರೆಗಳು ಮಕ್ಕಳಿಗೆ ಕಾಣಿಸಿಕೊಂಡಲ್ಲಿ ಕೂಡಲೇ ಸೂಕ್ತ ವೈದ್ಯೋಪಚಾರ ಕೊಡಿಸುವ ಕಡೆಗೆ ಗಮನವನ್ನು ನೀಡಿ. ಸಾವಕಾಶವಾಗಿ ಮಾತನಾಡಿ, ಬಗೆಹರಿಸಿದರಾಯಿತು ಎಂದುಕೊಂಡ ಸಮಸ್ಯೆಯೊಂದು ವಿಕೋಪಕ್ಕೆ ಹೋಗುವುದರಿಂದ ಬಹಳ ಹಿಂಸೆ ಆಗಲಿದೆ. ಯಾವ ವ್ಯಕ್ತಿ ನಿಮ್ಮ ಮಾತನ್ನು ಮೀರುವುದಿಲ್ಲ ಎಂದು ಅಂದುಕೊಂಡಿರುತ್ತೀರೋ ಅಂಥವರೇ ಧ್ವನಿ ಏರಿಸಿ, ನಿಮ್ಮ ಅಭಿಪ್ರಾಯಗಳಿಗೆ- ಸಲಹೆಗಳಿಗೆ ವಿರುದ್ಧವಾಗಿ ಮಾತನಾಡಲಿದ್ದಾರೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ನಿಮಗೆ ಮಾತು ನೀಡಿದವರು ಇನ್ಯಾರಿಗೋ ಅನುಕೂಲ ಮಾಡಿಕೊಡುವ ಸಲುವಾಗಿ ನೀಡಿದ್ದ ಭರವಸೆ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಹೇಳಲಿದ್ದಾರೆ. ಈಗಾಗಲೇ ಸಾಕಷ್ಟು ಹಣ ಖರ್ಚು ಮಾಡಿ, ಮಾಡಿಕೊಂಡ ಸಿದ್ಧತೆ ವ್ಯರ್ಥ ಆಗುತ್ತದೆ ಎಂಬುದು ನಿಮ್ಮನ್ನು ಚಿಂತೆಗೆ ಗುರಿ ಮಾಡಲಿದೆ. ಎರಡು ವರ್ಷದೊಳಗಿನ ಮಕ್ಕಳು ಮನೆಯಲ್ಲಿ ಇದ್ದಲ್ಲಿ ಅವರ ಆರೋಗ್ಯ ಸಮಸ್ಯೆಗಳಿಗೆ ಹೆಚ್ಚಿನ ವೆಚ್ಚ ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಕಡಿಮೆ ಬೆಲೆಗೆ ಸಿಗುತ್ತಿದೆ ಎಂಬ ಕಾರಣಕ್ಕೆ ನಿಮಗೆ ಅಗತ್ಯವೇ ಇಲ್ಲದಿದ್ದರೂ ಕೆಲವು ವಸ್ತುಗಳನ್ನು ಈ ದಿನ ಖರೀದಿ ಮಾಡುವಂತೆ ಆಗಲಿದೆ. ಇನ್ನು ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಅಂತಾದರೆ ಇನ್ನೂ ಹೆಚ್ಚು ಮುಂಜಾಗ್ರತೆ ತೆಗೆದುಕೊಳ್ಳಬೇಕು. ನೀವಾಗಿಯೇ ದುಂಬಾಲು ಬಿದ್ದು ವಹಿಸಿಕೊಂಡಂಥ ಕೆಲಸಗಳನ್ನು ಗಡುವಿನೊಳಗೆ ಮುಗಿಸಿಕೊಡುವುದಕ್ಕೆ ಪ್ರಯತ್ನಿಸಿ.

ಲೇಖನ- ಸ್ವಾತಿ ಎನ್.ಕೆ.

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ