Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 5ರ ದಿನಭವಿಷ್ಯ

ಕೆಲವು ನಂಬರ್ ಗಳು ಅದಷ್ಟವೋ ದುರದೃಷ್ಟವೋ ಎಂಬುದು ಗೊತ್ತಾಗುವುದಿಲ್ಲ. ಇಲ್ಲಿ ಸಂಖ್ಯಾಶಾಸ್ತ್ರ ಪ್ರಕಾರ ಜುಲೈ 5 ನಿಮಗೆ ಹೇಗಿರಲಿದೆ ಎಂದು ಹೇಳಲಾಗಿದೆ. ನೀವು ಯಾವ ದಿನಾಂಕದಂದು ಜನಿಸಿದ್ದೀರಿ ಎಂಬುವುದರ ಮೇಲೆ ನಿಮ್ಮ ಜನ್ಮ ಸಂಖ್ಯೆ ತಿಳಿಯಬಹುದು.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 5ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 04, 2024 | 10:58 PM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 5ರ ಶುಕ್ರವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಮಾತು ಪರಿಣಾಮಕಾರಿಯಾಗಿ ಇರಲಿದೆ. ಆದ್ದರಿಂದ ನಿಮ್ಮ ಬಗ್ಗೆ ಕುಟುಂಬದಲ್ಲಿ ಒಂದು ಗೌರವ ದೊರೆಯಲಿದೆ. ಎಲ್ಲರೂ ಒಪ್ಪುವಂಥ ಹಾಗೂ ಆಕರ್ಷಣೀಯ ರೀತಿಯಲ್ಲಿ ಮಾತುಗಳನ್ನು ಆಡುತ್ತೀರಿ. ಸೈಟು ಖರೀದಿಗೋ ಮನೆ ಕಟ್ಟುವುದಕ್ಕೋ ಸಾಲಕ್ಕಾಗಿ ಪ್ರಯತ್ನ ಪಡುತ್ತಿದ್ದೀರಿ ಎಂದಾದಲ್ಲಿ ಈ ದಿನ ಬಹಳ ಒಳ್ಳೆಯ ಬೆಳವಣಿಗೆಗಳು ಆಗಲಿವೆ. ಮುಖ್ಯವಾಗಿ ಹಣಕಾಸಿನ ಅಡ್ಡಿ, ಆತಂಕಗಳು ದೂರ ಆಗಲಿವೆ. ಇಷ್ಟು ಸಮಯ ನಿಮ್ಮಲ್ಲಿ ಇದ್ದ ಆತ್ಮವಿಶ್ವಾಸದ ಕೊರತೆ ದೂರ ಆಗಲಿದೆ. ಸ್ವಂತ ವ್ಯಾಪಾರ, ವ್ಯವಹಾರ ಆರಂಭ ಮಾಡಬೇಕು ಅಂದುಕೊಳ್ಳುತ್ತಾ ಇರುವವರಿಗೆ ಸ್ನೇಹಿತರಿಂದ, ಸಂಬಂಧಿಗಳಿಂದ ದೊಡ್ಡ ಮಟ್ಟದಲ್ಲಿ ನೆರವು ಒದಗಿ ಬರಲಿದೆ. ನಿಮ್ಮನ್ನು ಹೇಗಾದರೂ ಮಾಡಿ ದಿಕ್ಕು ತಪ್ಪಿಸಬೇಕು ಎಂದು ಪ್ರಯತ್ನ ಮಾಡುತ್ತಿರುವವರು ತಾವೇ ಸಂಕಷ್ಟದಲ್ಲಿ ಸಿಲುಕಿಕೊಳ್ಳಲಿದ್ದಾರೆ. ನಿಮ್ಮ ಸ್ನೇಹಿತರ ವಲಯದಲ್ಲಿ ಯಾರಿಗೆ ಬಹಳ ಎಚ್ಚರಿಕೆಯಿಂದ ಇರಿ ಎಂದು ನೀವು ಹೇಳಿರುತ್ತೀರೋ ಅವರಿಗೆ ನಿಮ್ಮ ಮಾತಿನಂತೆ ಬೆಳವಣಿಗೆಗಳಾಗಿ, ನಿಮ್ಮ ಕಡೆಗೆ ಬೆರಗಿನಿಂದ ನೋಡಲಿದ್ದಾರೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಇಷ್ಟು ದಿನ ಸರಿಯಿತ್ತು. ಆದರೆ ಈಗ ಎಲ್ಲವೂ ಅಂದುಕೊಂಡಂತೆ ಒಂದು ಹಂತದ ತನಕ ಮುಂದುವರಿದು, ಆ ನಂತರ ಅಡೆತಡೆಗಳು ಎದುರಾಗುತ್ತಿದೆಯಲ್ಲಾ ಎಂಬುದು ನಿಮ್ಮ ಚಿಂತೆಗೆ ಕಾರಣ ಆಗಲಿದೆ. ಇಂಥ ಸನ್ನಿವೇಶದಲ್ಲಿ ನಿಮ್ಮ ಒಳಿತನ್ನು ಬಯಸುವವರು ಯಾರು ಅಥವಾ ಕೆಡುಕನ್ನು ಬಯಸುವವರು ಯಾರು ಎಂದು ತಿಳಿಯಲಾರದಂತಹ ಗೊಂದಲದ ಸನ್ನಿವೇಶದಲ್ಲಿ ಈ ದಿನ ನೀವು ಇರಲಿದ್ದೀರಿ. ನಿಮ್ಮ ಒಳಗೆ ಕಾಡುತ್ತಿರುವ ಗೊಂದಲದ ಒತ್ತಡದಲ್ಲಿ ಸಿಲುಕಿ ಸುಖಾ ಸುಮ್ಮನೆ ಯಾರೊಂದಿಗೂ ವಾದ- ವಾಗ್ವಾದಕ್ಕೆ ಇಳಿಯಬೇಡಿ. ನಮ್ಮಿಬ್ಬರಲ್ಲಿ ಯಾರದು ಸರಿ ಎಂಬುದನ್ನು ಸಾಬೀತು ಮಾಡಲೇಬೇಕು ಎಂಬ ರೀತಿಯ ಹಟ ಯಾವುದೇ ಕಾರಣಕ್ಕೂ ಬೇಡ. ಮುಖ್ಯ ವಿಷಯಗಳನ್ನು ಸಾಧ್ಯವಾದಷ್ಟೂ ಮೌಖಿಕವಾಗಿ ಹೇಳುವುದಕ್ಕಿಂತ ಲಿಖಿತವಾಗಿ ಹೇಳುವುದು ಉತ್ತಮ. ಮೇಲಧಿಕಾರಿಗಳು ಅಥವಾ ಸರ್ಕಾರದ ಆಯಕಟ್ಟಿನ ಹುದ್ದೆಯಲ್ಲಿ ಇರುವವರ ಜೊತೆಗೆ ವ್ಯವಹರಿಸುತ್ತಿದ್ದೀರಿ ಎಂದಾದಲ್ಲಿ ದಾಖಲೆಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನೀವು ಅಷ್ಟೇನೂ ಮುಖ್ಯತ್ವ ನೀಡದ ವಿಚಾರದಲ್ಲಿ ನಿಮಗೆ ಅನುಕೂಲವಾಗುವಂಥ ಬೆಳವಣಿಗೆಗಳು ಆಗಲಿವೆ. ಇಲ್ಲ, ಇಂದಲ್ಲ ನಾಳೆ ಇದು ದೊಡ್ಡ ಸಮಸ್ಯೆ ಆಗಬಹುದು ಎಂದುಕೊಂಡಿದ್ದ ವಿಚಾರ ಅಥವಾ ವಿಷಯ ಒಂದು ನಿಮಗೆ ಸಾಧಕವಾಗಿ ಪರಿಣಮಿಸಬಹುದಾದ ಸನ್ನಿವೇಶ ಸೃಷ್ಟಿಯಾಗಲಿದೆ. ನೀವು ಮಾಡುತ್ತಿರುವುದು ಸರಿ ಎಂದು ಖಾತ್ರಿಯಾದ ಮೇಲೆ ಯಾವುದಕ್ಕೂ ಹೆದರಬೇಡಿ. ಆದರೆ ನೀವು ಇದನ್ನು ಹೀಗೆ ಮಾಡಬೇಕು ಎಂದುಕೊಂಡಿದ್ದು ಯಾಕೆ ಎಂಬುದನ್ನು ಸ್ಪಷ್ಟ ಧ್ವನಿಯಲ್ಲಿ ಹೇಳುವುದು ತುಂಬಾ ಮುಖ್ಯವಾಗುತ್ತದೆ. ನಿಮಗಿಂತ ವಯಸ್ಸಿನಲ್ಲಿ ಹಿರಿಯರು, ಅನುಭವಸ್ಥರು ಆಗಿರುವವರಿಗೆ ಕೂಡ ಹೊಳೆಯದಂತಹ ಅನೇಕ ವಿಚಾರಗಳು ಈ ದಿನ ನಿಮಗೆ ಸ್ಫುಟವಾಗಿ ಗೋಚರಿಸಲಿದೆ. ಮುಖ್ಯ ಕೆಲಸಗಳಿಗಾಗಿ ತೆರಳುವ ಮುನ್ನ ಈ ದಿನ ಭೂವರಾಹ ಸ್ವಾಮಿ ದೇವರನ್ನು ಮನಸ್ಸಿನಲ್ಲಿ ಸ್ಮರಣೆ ಮಾಡಿ ಅಥವಾ ಪೂಜಿಸಿ ಆ ನಂತರ ಹೊರಟರೆ ಉತ್ತಮ ಫಲಗಳನ್ನು ಕಾಣುತ್ತೀರಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಸಾಧ್ಯವಾದಷ್ಟೂ ಈ ದಿನ ಮೌನವಾಗಿ ಇರುವುದು ಉತ್ತಮ. ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳು ಇವೆ. ಈಚೆಗಷ್ಟೇ ಮನೆ ಕಟ್ಟಿದ್ದೀರಿ ಅಥವಾ ರಿನೊವೇಷನ್ ಮಾಡಿಸಿದ್ದೀರಿ, ಆ ಕಾರಣದಿಂದಾಗಿಯೇ ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾದಲ್ಲಿ ಅದರಿಂದ ಹೊರಬರುವಂತಹ ಮಾರ್ಗ, ಉಪಾಯಗಳು ಗೋಚರ ಆಗಲಿವೆ. ಸ್ವಂತ ವ್ಯಾಪಾರ, ಉದ್ಯಮ ಮಾಡಿಕೊಂಡು ಇರುವವರಿಗೆ ವಿಸ್ತರಣೆಯ ಅವಕಾಶಗಳು ದೊರೆಯಲಿವೆ. ಇದಕ್ಕಾಗಿ ನಿಮ್ಮಲ್ಲಿ ಕೆಲವರು ಬ್ಯಾಂಕ್ ಗಳಲ್ಲಿ ಸಾಲಕ್ಕೆ ಪ್ರಯತ್ನ ಪಡಲಿದ್ದೀರಿ. ಇನ್ನು ನಿಮ್ಮ ಸಂಬಂಧಿಕರು ಅಥವಾ ಸ್ನೇಹಿತರು ಹಣಕಾಸಿನ ನೆರವನ್ನು ನೀಡುವ ಸಾಧ್ಯತೆಗಳು ಸಹ ಇವೆ. ನೀವು ಮರೆತೇ ಹೋದಂತಹ ಅವಕಾಶವೊಂದು ಹುಡುಕಿಕೊಂಡು ಬರುವ ಸಾಧ್ಯತೆಗಳಿವೆ. ಅದನ್ನು ಒಪ್ಪಿಕೊಳ್ಳಬೇಕೋ ಅಥವಾ ಬೇಡವೋ ಎಂಬ ಗೊಂದಲಗಳು ಏನಾದರೂ ಇದ್ದಲ್ಲಿ ಹಿರಿಯರು ಅಥವಾ ಅನುಭವಗಳ ಸಲಹೆಯನ್ನು ಪಡೆದುಕೊಳ್ಳಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಯಾರ ಜತೆಗೆ ಎಷ್ಟು ಮಾತು ಹಾಗೂ ಎಷ್ಟು ಸಲುಗೆ ಎಂಬ ಬಗ್ಗೆ ಸ್ಪಷ್ಟತೆ ಇರುವುದು ಬಹಳ ಮುಖ್ಯ. ವಿಪರೀತ ಹಚ್ಚಿಕೊಂಡು ಹೋದಲ್ಲಿ ಅದಕ್ಕೆ ಭಾರೀ ಬೆಲೆ ನೀಡಬೇಕಾದಂಥ ಸನ್ನಿವೇಶ ಎದುರಾಗುತ್ತದೆ. ಯಾರೋ ಮಾಡಿದ ತಪ್ಪಿಗೆ ನೀವು ತಲೆ ಕೊಡಬೇಕಾದಂಥ ಸನ್ನಿವೇಶ ಎದುರಾಗಲಿದೆ. ಈ ದಿನ ನೀವು ಯಾರ ಜೊತೆಗೆ ಗುರುತಿಸಿಕೊಳ್ಳುತ್ತೀರಿ ಎಂಬುದರ ಮೇಲೆ ನಿಮ್ಮ ನೆಮ್ಮದಿ ನಿರ್ಧಾರವಾಗಲಿದೆ. ಮೇಲುನೋಟಕ್ಕೆ ಒಬ್ಬ ವ್ಯಕ್ತಿ ಹೇಗೆ ಕಾಣುತ್ತಾರೆ ಎಂಬುದನ್ನೇ ಆಧಾರವಾಗಿಟ್ಟುಕೊಂಡು ನಂಬಿದರೆ ಆ ನಂತರ ಪರಿತಪಿಸುವಂತಾಗುತ್ತದೆ. ನಿಮ್ಮಲ್ಲಿ ಕೆಲವರಿಗೆ ಈ ದಿನ ರಕ್ತದೊತ್ತಡದಲ್ಲಿ ಏರುಪೇರು ಆಗಬಹುದು. ಇದರಿಂದಾಗಿ ಕಣ್ಣು ಕತ್ತಲೆ ಬರುವುದು ತಲೆಸುತ್ತಿದಂತಾಗುವುದು ಇಂಥ ಅನುಭವಗಳು ಆಗಲಿವೆ. ಎತ್ತರದ ಸ್ಥಳಗಳಲ್ಲಿ ನಿಂತು ಕೆಲಸ ಮಾಡುವಂಥವರು ಬಹಳ ಜಾಗ್ರತೆಯಿಂದ ಇರಬೇಕು. ದಿಢೀರ್ ಪ್ರಯಾಣಗಳು ಬಂದಲ್ಲಿ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಈ ದಿನ ಒಂದು ಬಗೆಯ ಸಂತೋಷ- ಸಮಾಧಾನದ ಜತೆಗೆ, ಈ ನಿರ್ಧಾರ ಹೇಗೆ ಮಾಡಬೇಕು ಎಂಬ ಗೊಂದಲ ಇರುವಂಥ ಸವಾಲು ನಿಮ್ಮ ಎದುರು ನಿಲ್ಲಲಿದೆ. ಈ ಸಮಯದಲ್ಲಿ ನಿಮಗೆ ದೊರೆಯುವಂತಹ ಅವಕಾಶವೋ ಜವಾಬ್ದಾರಿಯೋ ಒಳ್ಳೆಯದಕ್ಕೋ ಅಥವಾ ಕೆಟ್ಟದ್ದಕ್ಕೋ ಎಂಬುದನ್ನು ನಿರ್ಧರಿಸುವುದಕ್ಕೆ ಬಹಳ ಸಮಯ ಬೇಕಾಗುತ್ತದೆ. ಇತರರು ಹೇಳಿದ್ದಾರೆ, ಹಣ ನೀಡುತ್ತಾರೆ ಅಂತಲೋ ಅಥವಾ ಯಾವುದೋ ನಿರ್ದಿಷ್ಟ ಕೆಲಸದಲ್ಲಿ ಸಹಾಯ ಮಾಡಿಯೇ ಮಾಡುತ್ತಾರೆ ಅಂತ ನೆಚ್ಚಿಕೊಂಡು ಗಂಭೀರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಹೋಗಬೇಡಿ. ಸಹೋದ್ಯೋಗಿಗಳು ಅಥವಾ ಮೇಲಧಿಕಾರಿಗಳು ಉದ್ಯೋಗ ಸ್ಥಳದಲ್ಲಿ ಯಾವ ಕೆಲಸವನ್ನು ಒಪ್ಪಿಸಿರುತ್ತಾರೆ ಅದನ್ನು ಶ್ರದ್ಧಾ- ಭಕ್ತಿಯಿಂದ ಮಾಡಿದ್ದಲ್ಲಿ ಅದರ ಒಳ್ಳೆಯ ಫಲಿತ ದೊರೆಯುವ ಸೂಚನೆಯನ್ನು ಈ ದಿನ ಕಾಣಲಿದ್ದೀರಿ. ಹೂಡಿಕೆಗೆ ಸಂಬಂಧಪಟ್ಟಂತಹ ನಿರ್ಧಾರಗಳು ಇದ್ದಲ್ಲಿ ಈ ದಿನ ಮುಂದಕ್ಕೆ ಹಾಕುವುದು ಉತ್ತಮ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಬದಲಾವಣೆಗಳನ್ನು, ಬೆಳವಣಿಗೆಗಳನ್ನು ಅದು ಹೇಗೆ ಬರುತ್ತದೋ ಹಾಗೆಯೇ ಸ್ವೀಕರಿಸುವುದಕ್ಕೆ ಮಾನಸಿಕವಾಗಿ ಸಿದ್ಧರಾಗುವುದು ಮುಖ್ಯ. ಏಕೆಂದರೆ ನೀವು ಅಂದುಕೊಂಡ ಮೊತ್ತಕ್ಕೆ, ನಿರೀಕ್ಷೆ ಮಾಡಿದ್ದ ರೀತಿಯಲ್ಲಿ ಸಮಯಕ್ಕೆ ವ್ಯವಹಾರ ಇತ್ಯರ್ಥ ಮಾಡುವುದಕ್ಕೆ ಸಾಧ್ಯವಾಗದೇ ಹೋಗಬಹುದು. ಆದರೆ ಇದರಿಂದ ಮಾನಸಿಕವಾಗಿ ಕುಗ್ಗುವ ಅಗತ್ಯ ಖಂಡಿತಾ ಇಲ್ಲ. ಆದರೆ ನಿಮಗೆ ಗಮನದಲ್ಲಿ ಇರಬೇಕಾದದ್ದು ಏನೆಂದರೆ, ಹೊಸದಾಗಿ ಪರಿಚಯ ಆದವರ ಮೇಲೆ ವಿಪರೀತವಾದ ಅವಲಂಬನೆ ಬೇಡ. ನಿಮಗೆ ಗೊತ್ತಿಲ್ಲದ ವಿಚಾರಗಳು ಏನಾದರೂ ಇದ್ದಲ್ಲಿ ಅನುಭವಿಗಳು, ಹಿರಿಯರ ಮಾರ್ಗದರ್ಶನವನ್ನು ಪಡೆದುಕೊಳ್ಳುವುದು ಉತ್ತಮ. ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ಬಗ್ಗೆ ಮಾತು ನೀಡಿದ್ದವರು ಕೊನೆ ಕ್ಷಣದಲ್ಲಿ ತಮ್ಮಿಂದ ಸಾಧ್ಯವಿಲ್ಲ ಎಂದುಬಿಡಬಹುದು. ಭಾರವಾದ ವಸ್ತುಗಳನ್ನು ಎತ್ತುವಾಗ ಸ್ವಲ್ಪ ಎಚ್ಚರಿಕೆಯನ್ನು ವಹಿಸಿ. ನಿರ್ಲಕ್ಷ್ಯ ಮಾಡಿದಲ್ಲಿ ಕಾಲು, ಬೆನ್ನಿನ ಹುರಿಗೆ ತೊಂದರೆ ಆಗಬಹುದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕ್ರೆಡಿಟ್ ಕಾರ್ಡ್ ಹೆಚ್ಚು ಬಳಸುತ್ತಿರಿ ಅಂತಾದಲ್ಲಿ ಅದರ ಬಳಕೆ ಬಗ್ಗೆ ಸರಿಯಾದ ತೀರ್ಮಾನವನ್ನು ಮಾಡುವುದು ಮುಖ್ಯ. ಸ್ನೇಹಿತರು ಅಥವಾ ಸಂಬಂಧಿಕರು ತಮಗೆ ಕ್ರೆಡಿಟ್ ಕಾರ್ಡ್ ನಲ್ಲಿ ಸಾಲ ಕೊಡಿಸುವಂತೆ ಕೇಳಲಿದ್ದಾರೆ. ಇನ್ನು ಈ ದಿನ ಬೆಳ್ಳಿ ವಸ್ತುಗಳು ಅಥವಾ ಒಡವೆಗಳನ್ನು ಖರೀದಿಸುವಂಥ ಯೋಗ ನಿಮ್ಮ ಪಾಲಿಗಿದೆ. ಇನ್ನು ನಿಮ್ಮಲ್ಲಿ ಕೆಲವರು ದಾನ- ಧರ್ಮ ಕಾರ್ಯಗಳನ್ನು ಮಾಡಲಿದ್ದೀರಿ. ತೆರಿಗೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಈಗಾಗಲೇ ಎದುರಿಸುತ್ತಿದ್ದಲ್ಲಿ ಅದಕ್ಕೆ ಪರಿಹಾರ ದೊರೆಯಲಿದೆ. ಸಂತಾನ ಅಪೇಕ್ಷಿತರಿಗೆ ಶುಭ ಸುದ್ದಿ ಕೇಳುವಂತಹ ಅನುಗ್ರಹ ಆಗಲಿದೆ. ಹಿರಿಯರ ಆಶೀರ್ವಾದ ಬಲ ನಿಮ್ಮ ಮೇಲೆ ಇರಲಿದ್ದು, ಸಂಘ- ಸಂಸ್ಥೆಗಳಲ್ಲಿ ಪ್ರಮುಖವಾದ ಹುದ್ದೆಯೊಂದು ದೊರೆಯಬಹುದು. ಕನಿಷ್ಠ ಪಕ್ಷ ಪ್ರಭಾರಿಯಾಗಿಯಾದರೂ ಹುದ್ದೆಯನ್ನು ವಹಿಸಿಕೊಳ್ಳ ಬೇಕಾಗಬಹುದು. ಸ್ವಂತ ಉದ್ಯಮ ನಡೆಸುತ್ತಿರುವವರು ಹೊಸ ವ್ಯವಹಾರವನ್ನು ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಅಂತಿಮಗೊಳಿಸಲಿದ್ದೀರಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಹಾಗೂ ಪ್ರೀತಿ- ಪ್ರೇಮ ಹಾಗೂ ಮದುವೆಗೆ ಸಂಬಂಧಪಟ್ಟ ಸಂಗತಿಗಳನ್ನು ಮೂರನೇ ವ್ಯಕ್ತಿಗಳು ವಿಪರೀತ ಪ್ರಭಾವ ಬೀರುವುದಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದೆ. ಇದೇ ವೇಳೆ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ನಿಟ್ಟಿನಲ್ಲಿ ನಾನಾ ರೀತಿಯಲ್ಲಿ ಯೋಜನೆ, ಆಲೋಚನೆ ಶುರು ಆಗಲಿದೆ. ಆಸ್ತಿ ಮಾರಾಟಕ್ಕೆ ಇಟ್ಟಿದ್ದಲ್ಲಿ ಅದಕ್ಕೆ ಬೇಡಿಕೆ ಹೆಚ್ಚಾಗುವಂಥ ಸಾಧ್ಯತೆಗಳಿವೆ. ಇನ್ನು ನಿಮ್ಮಲ್ಲಿ ಕೆಲವರು ಬಾಡಿಗೆ ಆದಾಯವನ್ನು ಹೆಚ್ಚು ಮಾಡಿಕೊಳ್ಳುವುದಕ್ಕಾಗಿ ಮನೆಯನ್ನೋ ಮಳಿಗೆಯನ್ನೋ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದುರ್ಗಾದೇವಿ ಆರಾಧನೆ ಮಾಡುವುದರಿಂದ ಹಾಗೂ ವಿಷ್ಣು ಸಹಸ್ರನಾಮ ಶ್ರವಣ ಅಥವಾ ಪಠಣ ಮಾಡುವುದರಿಂದ ಆಲೋಚನೆಯಲ್ಲಿ ಸ್ಪಷ್ಟತೆ ಇರಲಿದೆ. ಅದೇ ವೇಳೆ ಆತ್ಮವಿಶ್ವಾಸ ಕೂಡ ಹೆಚ್ಚಾಗಲಿದೆ. ಫೋಟೋಗ್ರಫಿಯನ್ನೇ ವೃತ್ತಿ ಮಾಡಿಕೊಂಡಿರುವವರಿಗೆ ಹೊಸ ಹೊಸ ಅವಕಾಶಗಳು ದೊರೆಯುವ ಸಾಧ್ಯತೆಗಳಿವೆ.

ಲೇಖನ- ಎನ್‌.ಕೆ.ಸ್ವಾತಿ

ತಾಜಾ ಸುದ್ದಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!