Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 9ರ ದಿನಭವಿಷ್ಯ

ಮನುಷ್ಯನ ಭವಿಷ್ಯವನ್ನು ತಿಳಿಸುವ ಮೂರು ಶಾಸ್ತ್ರಗಳೆಂದರೆ ಜ್ಯೋತಿಷ್ಯ, ಹಸ್ತರೇಖೆ ಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ. ಜ್ಯೋತಿಷ್ಯ ಮತ್ತು ರೇಖಾಶಾಸ್ತ್ರ ಭವಿಷ್ಯವನ್ನು ಮಾತ್ರವೇ ತಿಳಿಸುತ್ತವೆ. ಆದರೆ ಸಂಖ್ಯಾಶಾಸ್ತ್ರವು ಭವಿಷ್ಯವನ್ನು ಸ್ವಾಗತಿಸಲು ಮತ್ತು ಸ್ವಲ್ಪಮಟ್ಟಿಗೆ ಹೆಚ್ಚುಕಡಿಮೆ ಮಾಡಿಕೊಳ್ಳಲು ಬೇಕಾದ ಸಲಹೆಯನ್ನೂ ಕೊಡುತ್ತದೆ. ಇಲ್ಲಿ ಸಂಖ್ಯಾಶಾಸ್ತ್ರ ಪ್ರಕಾರ ಜುಲೈ 9 ನಿಮಗೆ ಹೇಗಿರಲಿದೆ ಎಂದು ಹೇಳಲಾಗಿದೆ. ನೀವು ಯಾವ ದಿನಾಂಕದಂದು ಜನಿಸಿದ್ದೀರಿ ಎಂಬುವುದರ ಮೇಲೆ ನಿಮ್ಮ ಜನ್ಮ ಸಂಖ್ಯೆ ತಿಳಿಯಬಹುದು.

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಜುಲೈ 9ರ ದಿನಭವಿಷ್ಯ
ಸಂಖ್ಯಾಶಾಸ್ತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Jul 08, 2024 | 6:30 PM

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಜುಲೈ 9ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಅನಿರೀಕ್ಷಿತ ಬೆಳವಣಿಗೆಗಳು ಆಗಲಿವೆ. ತುಂಬ ಆಪ್ತರು ಹಾಗೂ ಬಂಧುಗಳು ನೀಡುವ ಕೆಲವು ಸಲಹೆ- ಸೂಚನೆಗಳಿಂದಾಗಿ ಬಹಳ ಬದಲಾವಣೆಗಳನ್ನು ನೀವು ಮಾಡಿಕೊಳ್ಳಲಿದ್ದೀರಿ. ನೀವು ಈಗಾಗಲೇ ತೆಗೆದುಕೊಂಡಿದ್ದ ತೀರ್ಮಾನಗಳನ್ನು ತಕ್ಷಣಕ್ಕೆ ತಿಳಿಸದೆ ಮುಂದಕ್ಕೆ ಹಾಕುವ ಸಾಧ್ಯತೆಗಳಿವೆ. ಇನ್ನೇನು ಇಂಥ ದಿನ ಹಣವನ್ನು ನೀಡುತ್ತೇನೆ ಎಂಬ ಮಾತು ನೀಡಿದ್ದವರು ಸಹ ಈ ತೀರ್ಮಾನದ ಬಗ್ಗೆ ಇನ್ನಷ್ಟು ಆಲೋಚನೆ ಮಾಡಬೇಕಿದೆ ಎಂದು ಹಣ ನೀಡುವುದನ್ನೇ ಮುಂದಕ್ಕೆ ಹಾಕಲಿದ್ದೀರಿ. ಸಂಗಾತಿಯ ಜತೆಗೆ ಉತ್ತಮವಾದ ಸಮಯವನ್ನು ಕಳೆಯುವಂಥ ಯೋಗ ಇದೆ. ಅವರು ನಿಮಗೆ ಅಚ್ಚರಿ ಮೂಡಿಸುವಂತೆ ಕೆಲವು ಉಡುಗೊರೆಗಳನ್ನು ನೀಡಬಹುದು ಅಥವಾ ಪ್ರವಾಸಕ್ಕೆ ಕರೆದೊಯ್ಯುವುದಕ್ಕೆ ಪ್ಲಾನ್ ಮಾಡಬಹುದು. ಕನಿಷ್ಠ ನೀವು ಬಹಳ ಇಷ್ಟ ಪಡುವಂಥ ರೆಸ್ಟೋರೆಂಟ್ ನಲ್ಲಿ ಊಟ- ತಿಂಡಿ ವ್ಯವಸ್ಥೆಯನ್ನಾದರೂ ಮಾಡುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಬ್ರಾಂಡೆಡ್ ವಸ್ತುಗಳಿಗಾಗಿ ವಿಪರೀತ ಖರ್ಚು ಮಾಡುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಇದಕ್ಕಾಗಿ ನೀವೇನಾದರೂ ಕ್ರೆಡಿಟ್ ಕಾರ್ಡ್ ಬಳಸುತ್ತೀರಿ ಎಂದಾದರೆ ಅಳತೆಗೆ ಮೀರಿ ಖರ್ಚು ಬರಲಿದೆ. ನೀವೇನಾದರೂ ಕಮಿಷನ್ ಆಧಾರದಲ್ಲಿ ಕೆಲಸ ಮಾಡುವಂಥವರಾದರೆ ಅತಿ ಮುಖ್ಯವಾದ ಕೆಲಸವೊಂದು ನಿಮಗೆ ಬರಲಿದ್ದು, ಅದಕ್ಕೆ ದೊಡ್ಡ ಮೊತ್ತದ ಕಮಿಷನ್ ಆಫರ್ ಸಹ ಮಾಡಬಹುದು. ಸಿನಿಮಾ ಕ್ಷೇತ್ರದಲ್ಲಿ ಇರುವಂಥವರಿಗೆ ಪ್ರಶಸ್ತಿಗಳು ಬರುವ ಅಥವಾ ದೊಡ್ಡ ವ್ಯಕ್ತಿಗಳಿಂದ ಉಡುಗೊರೆ ಪಡೆಯುವಂತಹ ಸಾಧ್ಯತೆ ಇದೆ. ಮನೆ ಮಾರಾಟ ಮಾಡಿಬಿಡಬೇಕು ಎಂದುಕೊಳ್ಳುತ್ತಿರುವವರಿಗೆ ಒಳ್ಳೆ ಗ್ರಾಹಕರು ದೊರೆಯಬಹುದು. ಅಥವಾ ಈಗಾಗಲೇ ನೋಡಿಕೊಂಡು ಹೋಗಿ, ಬಹಳ ಸಮಯ ಆದಂಥವರೇ ಮತ್ತೆ ನಿಮ್ಮ ಆಸ್ತಿ ಖರೀದಿ ಮಾಡುವುದಕ್ಕೆ ಬರುವ ಸಾಧ್ಯತೆಗಳು ಇವೆ. ಆದರೆ ಹಣಕಾಸು ವಿಚಾರಕ್ಕೆ ನಿಮಗೇ ಸ್ವಲ್ಪ ಮಟ್ಟಿಗೆ ಗೊಂದಲ ಕಾಡಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಕುಟುಂಬದಲ್ಲೋ ಅಥವಾ ಸ್ನೇಹಿತರು ಸೇರಿ ಆಯೋಜಿಸಬೇಕು ಎಂದುಕೊಂಡಿದ್ದ ಕಾರ್ಯಕ್ರಮಗಳ ಕೆಲಸ- ಕಾರ್ಯಗಳು ವೇಗ ಪಡೆದುಕೊಳ್ಳುತ್ತವೆ. ಸ್ನೇಹಿತರು ನಿಮ್ಮ ಬಳಿ ಮುಖ್ಯವಾದ ಸಲಹೆ- ಸೂಚನೆಗಳನ್ನು ಕೇಳಿಕೊಂಡು ಬರುವ ಸಾಧ್ಯತೆ ಇದೆ. ಇನ್ನು ನಿಖರವಾಗಿ ಹೇಳಬೇಕು ಅಂದರೆ, ನೀವು ನೀಡುವ ಸಲಹೆ- ಸೂಚನೆಗಳು ಅವರಿಗೆ ಮುಖ್ಯವಾಗುತ್ತದೆ. ಮನೆಗೆ ಬೆಳ್ಳಿ ವಸ್ತುಗಳನ್ನು ಖರೀದಿಸುವಂಥ ಯೋಗ ಈ ದಿನ ನಿಮ್ಮ ಪಾಲಿಗೆ ಇದೆ. ಅದರಲ್ಲೂ ದೇವರ ಪಾತ್ರೆಗಳು, ವಸ್ತುಗಳನ್ನು ತರುವಂಥ ಸಾಧ್ಯತೆ ಇದೆ. ನಿಮ್ಮಲ್ಲಿ ಕೆಲವರಿಗೆ ತಂದೆ- ತಾಯಿಯಿಂದ ದಾನಪತ್ರದ ಮೂಲಕವಾಗಿ ಆಸ್ತಿಗಳು ಬರುವಂಥ ಸುಳಿವು ದೊರೆಯಲಿದೆ. ಇನ್ನು ಬರಲಾರದು ಎಂದು ಭಾವಿಸಿದ್ದ ಕೆಲವು ಸಣ್ಣ ಮೊತ್ತದ ಹಣ ಕೂಡ ಈ ದಿನ ಪ್ರಯತ್ನ ಪಟ್ಟಲ್ಲಿ ಬರುವ ಅವಕಾಶಗಳು ಹೆಚ್ಚಿಗೆ ಇವೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಪ್ರಾಮುಖ್ಯ ಹೆಚ್ಚಾಗಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಈ ದಿನ ಸಣ್ಣ- ಪುಟ್ಟ ಅಪಘಾತಗಳಾಗುವ ಸಾಧ್ಯತೆಗಳಿವೆ. ಮಣ್ಣಿನ ರಸ್ತೆಯಲ್ಲಿ ಅಥವಾ ಹಳ್ಳ- ಗುಂಡಿಗಳು ಇರುವ ಕಡೆ ದ್ವಿಚಕ್ರ ವಾಹನದಲ್ಲಿ ತೆರಳುವಂಥವರು ಬಿದ್ದು ಗಾಯಗೊಳ್ಳುವ ಸಾಧ್ಯತೆ ಹೆಚ್ಚಿದೆ. ಕೆಲವರು ನಿಮ್ಮನ್ನು ಮುಂದೆ ಬಿಟ್ಟು, ತಮ್ಮ ಕೆಲಸವನ್ನು ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಲಿದ್ದಾರೆ. ಅದನ್ನು ಕೇಳಿದ್ದಕ್ಕಾಗಿ ನೀವು ಪ್ರಭಾವಿಗಳ ದೃಷ್ಟಿಗೆ ಬಿದ್ದು, ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಇತರರು ಪುಸಲಾಯಿಸಿದರು ಎಂಬ ಕಾರಣಕ್ಕಾಗಿ ಪ್ರಭಾವಿಗಳನ್ನು ಎದುರು ಹಾಕಿಕೊಳ್ಳಬೇಡಿ. ಇನ್ನು ಈ ಹಿಂದೆ ಯಾವಾಗಲೋ ನೀವು ಹಾಕಿದ್ದ ಸೋಷಿಯಲ್ ಮೀಡಿಯಾ ಪೋಸ್ಟ್ ನಿಂದ ಈ ದಿನ ವಿವಾದ ಬುಗಿಲೇಳುವ ಸಾಧ್ಯತೆಗಳಿವೆ. “ಇಲ್ಲ, ಅದನ್ನು ಹಾಕಿದ್ದು ಆ ಉದ್ದೇಶದಿಂದಲ್ಲ, ಈ ಕಾರಣದಿಂದ” ಎಂಬ ಸಮಜಾಯಿಷಿ ನೀಡುತ್ತಾ, ಒತ್ತಡಕ್ಕೆ ಗುರಿ ಆಗುವಂಥ ಸನ್ನಿವೇಶ ಸೃಷ್ಟಿ ಆಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ನಿಮ್ಮಲ್ಲಿ ಕೆಲವರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿ ಮಾಡುವಂಥ ಯೋಗ ಇದೆ. ಈ ಹಿಂದೆ ಯಾವಾಗಲೋ ಹೂಡಿಕೆ ಮಾಡಿದ್ದ ಷೇರು, ಮ್ಯೂಚುವಲ್ ಫಂಡ್ ಗಳಿಗೆ ಉತ್ತಮ ರಿಟರ್ನ್ಸ್ ದೊರೆಯಲಿದೆ. ನೀವು ಅಂದುಕೊಂಡ ಕೆಲವು ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಬೇಕಾದ ಸಂಪನ್ಮೂಲ ಒಟ್ಟುಗೂಡಿಸುವ ಪ್ರಯತ್ನದಲ್ಲಿ ದೊಡ್ಡ ಮಟ್ಟದ ಸಾಫಲ್ಯ ಕಾಣಲಿದ್ದೀರಿ. ನಿಮ್ಮಲ್ಲಿ ಕೆಲವರು ನಿಮ್ಮ ಜಮೀನಿಗೋ ಅಥವಾ ಮನೆಗೋ ಸೋಲಾರ್ ಸಾಧನಗಳನ್ನು ಅಳವಡಿಸುವುದಕ್ಕೆ ತೀರ್ಮಾನವನ್ನು ಕೈಗೊಳ್ಳಲಿದ್ದೀರಿ. ಸಂತಾನ ಅಪೇಕ್ಷಿತರು ಶುಭ ಸುದ್ದಿ ಕೇಳುವ ಯೋಗ ಇದೆ. ಇನ್ನು ಐವಿಎಫ್ ನಂಥ ಪದ್ಧತಿ ಮೂಲಕವಾಗಿ ಸಂತಾನಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಹ ಈ ದಿನ ಉತ್ತಮ ಬೆಳವಣಿಗೆಗಳು ಆಗಲಿವೆ. ಈ ದಿನ ಯಾವುದೇ ಮುಖ್ಯ ಕೆಲಸಕ್ಕಾಗಿ ಮನೆಯಿಂದ ಹೊರಡುವ ಮೊದಲಿಗೆ ದುರ್ಗಾದೇವಿಯನ್ನು ಮನಸ್ಸಿನಲ್ಲಿ ಸ್ಮರಿಸಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಏಕಾಏಕಿ ಬದಲಾವಣೆಗಳನ್ನು ನೋಡುವುದಕ್ಕೆ ಆರಂಭಿಸುತ್ತೀರಿ. ಸಕಾರಾತ್ಮಕವಾದ ಬದಲಾವಣೆಯನ್ನು ನಿರೀಕ್ಷೆ ಸಹ ಮಾಡಬಹುದಾಗಿದೆ. ರಾಜಕಾರಣದಲ್ಲಿ ಇರುವಂಥವರಿಗೆ ನಿಮ್ಮ ಕೈಯಲ್ಲಿನ ಅವಕಾಶ ನಿಮ್ಮ ಬಳಿಯೇ ಇರುವುದು ಎಷ್ಟರ ಮಟ್ಟಿಗೆ ಸಾಧ್ಯ ಎಂಬುದನ್ನು ಹಲವು ಸಲ ಅಳೆದು ತೂಗಿ ನೋಡುವ ಪರಿಸ್ಥಿತಿ ಉದ್ಭವಿಸಲಿದೆ. ಅಡುಗೆ ಕಾಂಟ್ರಾಕ್ಟ್ ತೆಗೆದುಕೊಳ್ಳುವಂಥವರಿಗೆ ಒಂದಿಷ್ಟು ಆತಂಕ ತರುವಂಥ ಆರ್ಡರ್ ಗಳು ಬರಬಹುದು. ಅಂದರೆ ತುಂಬ ದೊಡ್ಡ ಮಟ್ಟದ ಆರ್ಡರ್ ಬಂದು, ಅದಕ್ಕೆ ಕೇಳಿದ ಮಟ್ಟಿಗಿನ ಅಡ್ವಾನ್ಸ್ ನೀಡುವುದಕ್ಕೆ ಗ್ರಾಹಕರು ಸಿದ್ಧರಿರುವುದಿಲ್ಲ. ಇದರಿಂದ ಚಿಂತೆಗೆ ಕಾರಣ ಆಗುತ್ತದೆ. ನಿಮಗೆ ಹಣ ತಂದುಕೊಡದಿದ್ದರೂ ಹೆಸರು ತರುವಂಥ ಕೆಲವು ಕೆಲಸಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಮಕ್ಕಳ ಉನ್ನತ ಶಿಕ್ಷಣದ ವಿಷಯವು ಆದ್ಯತೆಯಾಗಿ ಪರಿಣಮಿಸಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಹೇಗಿದ್ದರೂ ಒಂದು ಸಲ ಹೇಳಿಯಾಗಿದೆ, ಒಪ್ಪಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸುತ್ತಾರೆ ಎಂದು ನಂಬಿಕೊಂಡು ಯಾವ ವಿಚಾರದಲ್ಲೂ ಸುಮ್ಮನೆ ಇರಬೇಡಿ. ಅದರಲ್ಲೂ ಈ ದಿನ ಫಾಲೋ ಅಪ್ ಮಾಡುವುದು ಬಹಳ ಮುಖ್ಯ ಆಗುತ್ತದೆ. ಭಾವನಾತ್ಮಕ ಕ್ಷಣಗಳಲ್ಲಿ ಯಾರಿಗೂ ಮಾತು ನೀಡುವುದಕ್ಕೆ ಹೋಗಬೇಡಿ. ಒಂದು ವೇಳೆ ಹಾಗನಿಸಿದರೂ ಮಾತನಾಡದೆ ಸುಮ್ಮನಿರುವುದಕ್ಕೆ ಪ್ರಯತ್ನಿಸಿ. ಆ ನಂತರ ನಿಜಕ್ಕೂ ನಿಮ್ಮಿಂದ ನೆರವು ನೀಡಲು ಸಾಧ್ಯವಾದರೆ ಹೇಳದೆ ಸಹಾಯವನ್ನು ಮಾಡಿ. ಮನೆಯಲ್ಲಿ ನೀರಿನ ಸಮಸ್ಯೆ ಉದ್ಭವಿಸಬಹುದು. ಅದಕ್ಕಾಗಿ ಹೆಚ್ಚಿನ ಖರ್ಚು ಸಹ ಆಗಬಹುದು. ನೀವು ಹಾಕಿಕೊಂಡ ಬಜೆಟ್ ಗಿಂತ ಹೆಚ್ಚಿನ ಮೊತ್ತವನ್ನು ಇದಕ್ಕಾಗಿ ವ್ಯಯಿಸಬೇಕಾಗುತ್ತದೆ. ಸೇಲ್ ಬಿಲ್ಡಿಂಗ್ ನಿರ್ಮಾಣ ಮಾಡುವಂಥವರಿಗೆ ಒಂದೇ ಸಲಕ್ಕೆ ಎರಡು- ಮೂರು ಕಡೆ ಕೆಲಸ ಆರಂಭಿಸುವ ಅವಕಾಶಗಳು ತೆರೆದುಕೊಳ್ಳಲಿವೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಮನಸ್ಸಿಟ್ಟು, ಶ್ರಮಪಟ್ಟು ಮಾಡಿದ ಕೆಲಸ ಎಲ್ಲದರಲ್ಲೂ ಯಶಸ್ಸು ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ಮುಖ್ಯವಾಗಿ ನಿಮಗಿರುವ ಆಸಕ್ತಿ ಹಾಗೂ ಅಗತ್ಯವೇ ಎಲ್ಲರಿಗೂ ಇರುತ್ತದೆ ಎಂದು ಭಾವಿಸುವುದಕ್ಕೆ ಹೋಗಬೇಡಿ. ಮೇಲುನೋಟಕ್ಕೆ ಕಾಣುವಂತೆಯೇ ನೀವು ಈ ಕೆಲಸ ಮಾಡಿದ್ದು ಸಾಕು ಎಂಬಂತೆ ಕೆಲವರು ನಡೆದುಕೊಳ್ಳುವುದಕ್ಕೆ ಆರಂಭಿಸಲಿದ್ದಾರೆ. ಇದನ್ನು ಗುರುತಿಸುವುದರಲ್ಲಿ ಈ ದಿನ ನೀವೇನಾದರೂ ವಿಫಲವಾದಲ್ಲಿ ಇನ್ನಷ್ಟು ಸಮಯ ವ್ಯರ್ಥವಾಗಬಹುದು. ಈ ಹಿಂದೆ ಯಾವಾಗಲೋ ನಿಮ್ಮಿಂದ ಆಗಿದ್ದ ನಷ್ಟವೊಂದಕ್ಕೆ ಪರಿಹಾರ ಕಟ್ಟಿಕೊಡುವಂತೆ ಕೆಲವರು ಬೆನ್ನು ಬೀಳಲಿದ್ದಾರೆ. ಈ ರೀತಿ ನೀವು ಮಾತು ನೀಡಿದ್ದಿರಿ, ಅದಕ್ಕೆ ನಾವೇ ಸಾಕ್ಷಿ ಎಂದು ಹೇಳಿಕೊಂಡು ಕೆಲವು ಜನ ಅವರ ಬೆಂಬಲಕ್ಕೂ ನಿಲ್ಲಲಿದ್ದಾರೆ. ಇಂತಹ ಸನ್ನಿವೇಶದಲ್ಲಿ ಏನು ಹೇಳಬೇಕು ಎಂದು ತಿಳಿಯದೆ ನೀವು ಗೊಂದಲಕ್ಕೆ ಈಡಾಗುವ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಧಾರ್ಮಿಕ ಕಾರ್ಯಕ್ರಮಗಳು, ಸಭೆ- ಸಮಾರಂಭಗಳನ್ನು ಆಯೋಜಿಸುವಂಥ ಜವಾಬ್ದಾರಿಗಳು ನಿಮಗೆ ವಹಿಸುವಂಥ ಸಾಧ್ಯತೆಗಳಿವೆ. ಅಷ್ಟೇ ಅಲ್ಲ, ಹಣಕಾಸು ಹೊಂದಿಸಬೇಕಾದ ಹೆಚ್ಚುವರಿ ಹೊಣೆ ಕೂಡ ನಿಮ್ಮ ಮೇಲೆ ಬೀಳಬಹುದು. ಇದೇ ವಿಚಾರಕ್ಕೆ ನಿಮ್ಮ ಸ್ನೇಹಿತರು- ಆಪ್ತರ ಅಭಿಪ್ರಾಯಗಳು ವಿಭಜನೆ ಆಗಲಿವೆ. ಕೆಲವರು ಇದನ್ನು ವಹಿಸಿಕೊಳ್ಳುವಂತೆಯೂ ಹಾಗೂ ಮತ್ತೆ ಕೆಲವರು ಈ ಉಸಾಬರಿ ನಿಮಗೆ ಬೇಡ ಅಂತಲೂ ಹೇಳಬಹುದು. ಪ್ರೀತಿ- ಪ್ರೇಮದ ವಿಚಾರದಲ್ಲಿ ಗಟ್ಟಿ ತೀರ್ಮಾನವನ್ನು ಕೈಗೊಳ್ಳಲೇ ಬೇಕಾದ ಸ್ಥಿತಿ ಉದ್ಭವ ಆಗಲಿದೆ. ಇನ್ನು ಪ್ರಮುಖವಾದ ವ್ಯಕ್ತಿಯೊಬ್ಬರನ್ನು ಈ ದಿನ ಭೇಟಿ ಆಗುವ ಯೋಗ ನಿಮಗೆ ಇದೆ. ಅವರ ಜತೆಗಿನ ಒಡನಾಟದಿಂದ ನಿಮ್ಮ ಆಲೋಚನಾ ಕ್ರಮದಲ್ಲಿ ಬದಲಾವಣೆ ಆಗಲಿದೆ. ಅಷ್ಟೇ ಅಲ್ಲ, ದೀರ್ಘಾವಧಿಯಲ್ಲಿ ಆದಾಯ ತರುವಂಥ ಸಾಧ್ಯತೆಗಳು ಸಹ ಇವೆ.

ಲೇಖನ- ಎನ್‌.ಕೆ.ಸ್ವಾತಿ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ