Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 17ರ ದಿನಭವಿಷ್ಯ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 17ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 17ರ ಭಾನುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ಆತ್ಮವಿಶ್ವಾಸದಲ್ಲಿ ಕೊರತೆ ಇದ್ದಲ್ಲಿ ಅದನ್ನು ಪಡೆದುಕೊಳ್ಳುವುದಕ್ಕೆ ಗಟ್ಟಿಯಾಗಿ ಪ್ರಯತ್ನಿಸಿ. ಒಂದು ವೇಳೆ ನೀವು ಕೈಗೊಳ್ಳುವ ಕೆಲಸದ ಬಗ್ಗೆ ಅನುಮಾನಗಳಿದ್ದಲ್ಲಿ ಅಥವಾ ಮಾಡಬೇಕೋ ಬೇಡವೋ ಎಂಬ ಗೊಂದಲಗಳಿದ್ದಲ್ಲಿ ಆ ಕೆಲಸವನ್ನು ಮಾಡದಿರುವುದು ಉತ್ತಮ. ಉದ್ಯೋಗ ಬದಲಾವಣೆಗಾಗಿ ಪ್ರಯತ್ನವನ್ನು ಮಾಡುತ್ತಿದ್ದಲ್ಲಿ ನೀವು ನಿರೀಕ್ಷೆ ಮಾಡಿದ್ದಕ್ಕಿಂತ ಉತ್ತಮ ಸಂಸ್ಥೆಯಲ್ಲಿ, ಉತ್ತಮ ಹುದ್ದೆಯೇ ದೊರೆಯುವಂಥ ಸಾಧ್ಯತೆ ಇದೆ ಎಂಬ ಬಗ್ಗೆ ಇತರರು ತಿಳಿಸಲಿದ್ದಾರೆ. ಸ್ನೇಹಿತರ ಜತೆಗೂಡಿ ಉತ್ತಮವಾದ ಸಮಯ ಕಳೆಯುವುದಕ್ಕೆ ವೇದಿಕೆಯೊಂದು ದೊರೆಯಲಿದೆ.
ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಹಿಂದಿನ ಅನಾರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಈ ದಿನ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವನ್ನು ವಹಿಸಬೇಕಾಗುತ್ತದೆ. ಈಗಾಗಲೇ ಮುಂಗಡವನ್ನು ಕೊಟ್ಟಿದ್ದೇನೆ ಬಹಳ ದಿನದಿಂದ ಕೆಲಸ ಆಗದೆ ಹಾಗೇ ಉಳಿದಿದೆ ಎಂಬಂಥದ್ದಕ್ಕೆ ಚಾಲನೆ ದೊರೆಯಲಿದೆ.ಇಷ್ಟು ಸಮಯ ನಿಮ್ಮ ಸಾಮರ್ಥ್ಯ, ನಿರ್ಧಾರ ತೆಗೆದುಕೊಳ್ಳುವ ಶಕ್ತಿ ಬಗ್ಗೆ ಅನುಮಾನ ಇರುವಂಥವರೇ ನೆರವು ಕೇಳಿಕೊಂಡು ಬರಲಿದ್ದಾರೆ. ಸಂಗಾತಿಯ ಭಾವನಾತ್ಮಕ ಅಗತ್ಯಗಳನ್ನು ತಿಳಿದುಕೊಂಡು, ಅದಕ್ಕೆ ಸ್ಪಂದಿಸುವ ಬಗ್ಗೆ ಗಮನ ಹರಿಸಿ.
ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ವ್ಯಾಪಾರದ ಸ್ಥಳದಲ್ಲಿ ವಿಪರೀತ ಕೆಲಸದ ಒತ್ತಡ ಅನುಭವಕ್ಕೆ ಬರಲಿದೆ. ನಿಮ್ಮಲ್ಲಿ ಕೆಲವರು ಈಗಿರುವ ಕೆಲಸವನ್ನೇ ಬಿಟ್ಟು, ಆ ನಂತರ ಬೇರೆಯದನ್ನು ಹುಡುಕಿಕೊಳ್ಳೋಣ ಎಂದು ಆಲೋಚಿಸುವ ಸಾಧ್ಯತೆಗಳಿವೆ. ನಿಮ್ಮ ಕೈಯಲ್ಲಿ ಎಷ್ಟು ಹಣ ಇದೆಯೋ ಅಷ್ಟಕ್ಕೆ ಮಾತ್ರ ಯಾವುದಾದರೂ ಪ್ಲಾನಿಂಗ್ ಮಾಡಿಕೊಳ್ಳುವುದು ಉತ್ತಮ. ಅವರಿವರು ದುಡ್ಡು ಕೊಡುತ್ತಾರೆ ಎಂದು ನೆಚ್ಚಿಕೊಂಡು ದೊಡ್ಡದಕ್ಕೆ ಕೈ ಹಾಕಿದಲ್ಲಿ ಭ್ರಮನಿರಸನ ಆಗುತ್ತದೆ. ಜತೆಗೆ ಅವಮಾನದ ಪಾಲಾಗುತ್ತೀರಿ.
ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)
ಇಂದಿನ ನಿಮ್ಮ ಯಶಸ್ಸು ಧೈರ್ಯದ ಮೇಲೆ ನಿರ್ಧಾರವಾಗುತ್ತದೆ. ಸ್ವಲ್ಪ ಮಟ್ಟಿಗೆ ರಿಸ್ಕ್ ಇದೆ ಎಂದಾದರೂ ಹೆದರದೆ ಮುಂದುವರಿದಲ್ಲಿ ಗೆಲುವು ನಿಮ್ಮದಾಗಲಿದೆ. ರಾಜಕಾರಣದಲ್ಲಿ ಇರುವವರಿಗೆ ಪ್ರಾತಿನಿಧ್ಯ ದೊರೆಯಲಿದೆ. ಸೂಕ್ತ ಸ್ಥಾನ- ಮಾನಗಳು ಸಹ ನಿರೀಕ್ಷೆ ಮಾಡಬಹುದು. ಹಿಮ್ಮಡಿಯ ನೋವು ಅಥವಾ ಹಿಡಿದುಕೊಂಡಂತಾಗುವುದು ಈ ರೀತಿಯ ಸಮಸ್ಯೆಗಳನ್ನು ಅನುಭವಿಸಲಿದ್ದೀರಿ. ದೇಹದ ತೂಕದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಬೇಕು ಎಂದೆನಿಸಿದಲ್ಲಿ ತಕ್ಷಣವೇ ಮುಂಜಾಗ್ರತೆಯನ್ನು ತೆಗೆದುಕೊಳ್ಳಿ.
ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)
ಇಂದಿನ ನಿಮ್ಮ ಯಶಸ್ಸು ಧೈರ್ಯದ ಮೇಲೆ ನಿರ್ಧಾರವಾಗುತ್ತದೆ. ಸ್ವಲ್ಪ ಮಟ್ಟಿಗೆ ರಿಸ್ಕ್ ಇದೆ ಎಂದಾದರೂ ಹೆದರದೆ ಮುಂದುವರಿದಲ್ಲಿ ಗೆಲುವು ನಿಮ್ಮದಾಗಲಿದೆ. ರಾಜಕಾರಣದಲ್ಲಿ ಇರುವವರಿಗೆ ಪ್ರಾತಿನಿಧ್ಯ ದೊರೆಯಲಿದೆ. ಸೂಕ್ತ ಸ್ಥಾನ- ಮಾನಗಳು ಸಹ ನಿರೀಕ್ಷೆ ಮಾಡಬಹುದು. ಹಿಮ್ಮಡಿಯ ನೋವು ಅಥವಾ ಹಿಡಿದುಕೊಂಡಂತಾಗುವುದು ಈ ರೀತಿಯ ಸಮಸ್ಯೆಗಳನ್ನು ಅನುಭವಿಸಲಿದ್ದೀರಿ. ದೇಹದ ತೂಕದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳಬೇಕು ಎಂದೆನಿಸಿದಲ್ಲಿ ತಕ್ಷಣವೇ ಮುಂಜಾಗ್ರತೆಯನ್ನು ತೆಗೆದುಕೊಳ್ಳಿ.
ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)
ಏನೂ ಉಪಯೋಗ ಆಗಲಾರದು, ಹಣವನ್ನು ಸಹ ನಿರೀಕ್ಷೆ ಮಾಡುವಂತಿಲ್ಲ ಎಂದು ಆಸೆಯನ್ನೇ ಕೈ ಬಿಟ್ಟಿದ್ದ ಪ್ರಾಜೆಕ್ಟ್ ವೊಂದರಿಂದ ಅನಿರೀಕ್ಷಿತವಾಗಿ ಧನಾಗಮ ಆಗಲಿದೆ. ನೀವು ದಿಢೀರ್ ಪ್ರಯಾಣ ಮಾಡಬೇಕಾಗಬಹುದು. ಹೋದರೆ ಕೆಲಸ ಆದೀತೋ ಇಲ್ಲವೋ ಎಂದು ಹಿಂಜರಿಕೆ ಮಾಡಬೇಡಿ. ಕೆಲಸ ಮಾಡಿಕೊಂಡೇ ಬರುತ್ತೀನಿ ಎಂಬ ಸಂಕಲ್ಪವನ್ನು ಮಾಡಿ, ಪ್ರಯತ್ನಿಸಿ ಆಗ ಯಶಸ್ಸು ನಿಮ್ಮ ಪಾಲಿಗೆ ಹುಡುಕಿಕೊಂಡು ಬರಲಿದೆ.
ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)
ದೇವತಾರಾಧನೆಗಾಗಿ ನಿಮ್ಮ ಹಣ, ಸಮಯ, ವಸ್ತುಗಳು, ಸ್ಥಳ ಸದ್ವಿನಿಯೋಗ ಆಗುವಂಥ ಯೋಗ ಇದೆ. ನೀವಾಯಿತು ನಿಮ್ಮ ಕೆಲಸ ಆಯಿತು ಎಂಬಂತೆಯೇ ಇದ್ದರೂ ಹೆಸರು ಗಳಿಸುವಂಥ ಯೋಗ ಇದೆ. ಸ್ವಭಾವತಃ ತುಂಬ ಸಾಧುವಾಗಿರುವವರು ಸಹ ಈ ದಿನ ಸ್ವಲ್ಪ ಮಟ್ಟಿಗಾದರೂ ಧ್ವನಿ ಎತ್ತರಿಸಿ ಮಾತನಾಡಬೇಕಾದೀತು. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಸನ್ಮಾನ- ಕೀರ್ತಿ ಪಡೆಯುವಂಥ ಯೋಗ ಇದೆ.
ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)
ನಿಮ್ಮ ಪ್ರೀತಿಪಾತ್ರರ ಜತೆಗೆ ಉತ್ತಮವಾದ ಸಮಯ ಕಳೆಯುವಂಥ ಯೋಗ ಇದೆ. ಬಹಳ ದಿನದಿಂದ ಬಾಕಿ ಉಳಿದಿದ್ ಕೆಲಸಗಳು ಆಗಬೇಕಿದ್ದಲ್ಲಿ ಅದು ಪೂರ್ಣಗೊಳಿಸುವಂಥ ಸಾಧ್ಯತೆಗಳಿವೆ. ಹಳೇ ಪ್ರೇಮ ಪ್ರಕರಣಗಳು ಮತ್ತೆ ಜೀವ ಪಡೆದುಕೊಳ್ಳಬಹುದು. ವಿವಾಹಿತ ಸ್ತ್ರೀಯರಿಗೆ ತವರು ಮನೆಗೆ ಭೇಟಿ ನೀಡುವಂಥ ಯೋಗ ಇದ್ದು, ಅಣ್ಣನಿಂದ ಉಡುಗೊರೆಗಳನ್ನು ಪಡೆಯುವಂಥ ಸಾಧ್ಯತೆ ಇದೆ. ನಿಮ್ಮ ಮನಸ್ಸಿನಲ್ಲಿ ಬಹಳ ಸಮಯದಿಂದ ಕಾಡುತ್ತಿದ್ದ ಸಂದೇಹ ಅನುಮಾನಗಳು ಬಗೆಹರಿಯಲಿವೆ.
ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)
ನೀವು ಈ ದಿನ ಇತರರ ಬಗ್ಗೆ ತೋರುವ ಕರುಣೆ, ಅನುಕಂಪ, ಸಹಾನುಭೂತಿಯೇ ಸಮಸ್ಯೆಯಾಗಿ ಪರಿಣಮಿಸಲಿದೆ. ಆದ್ದರಿಂದ ಎದುರಿಗಿರುವ ವ್ಯಕ್ತಿಗೆ ಇರುವ ಅಗತ್ಯವನ್ನು ಅಳೆಯುವುದಕ್ಕೆ ಪ್ರಯತ್ನಿಸಿ. ಸುಖಾಸುಮ್ಮನೆ ಮೈ ಮೇಲೆ ಬಿದ್ದು, ಸಹಾಯ ಮಾಡುವುದಕ್ಕೆ ಹೋಗದಿರಿ. ಕನಿಷ್ಠ ಒಂದು ಗಂಟೆಯಾದರೂ ಓಂ ನಮೋ ನಾರಾಯಣಾಯ ನಮಃ ಎಂಬುದನ್ನು ಮನಸ್ಸಿನಲ್ಲಿ ಹೇಳಿಕೊಳ್ಳಿ ಹಾಗೂ ವಿಷ್ಣು ಸಹಸ್ರನಾಮವನ್ನು ಕೇಳಿಸಿಕೊಳ್ಳಿ.
ಲೇಖನ- ಎನ್.ಕೆ.ಸ್ವಾತಿ
Published On - 6:38 am, Sun, 17 March 24




