Astrology: ಈ ರಾಶಿಯವರು ತಪ್ಪು ಮಾಡಿದ್ದರೆ ಒಪ್ಪಿಕೊಂಡು ಮುನ್ನಡೆಯುವರು, ಮಕ್ಕಳ ವಿಚಾರದಲ್ಲಿ ಬೇಸರ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 30 ಜೂನ್​​ 2024ರ​​ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ ರಾಶಿಭವಿಷ್ಯದಿಂದ ತಿಳಿದುಕೊಳ್ಳಿ.

Astrology: ಈ ರಾಶಿಯವರು ತಪ್ಪು ಮಾಡಿದ್ದರೆ ಒಪ್ಪಿಕೊಂಡು ಮುನ್ನಡೆಯುವರು, ಮಕ್ಕಳ ವಿಚಾರದಲ್ಲಿ ಬೇಸರ
ಈ ರಾಶಿಯವರು ತಪ್ಪು ಮಾಡಿದ್ದರೆ ಒಪ್ಪಿಕೊಂಡು ಮುನ್ನಡೆಯುವರು, ಮಕ್ಕಳ ವಿಚಾರದಲ್ಲಿ ಬೇಸರ
Follow us
|

Updated on: Jun 30, 2024 | 12:02 AM

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಭಾನುವಾರ (ಜೂನ್. 30) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಶೋಭನ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಸಂಜೆ 05:28 ರಿಂದ 07:05ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:36 ರಿಂದ 02:13ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:51 ರಿಂದ ಸಂಜೆ 05:28ರ ವರೆಗೆ.

ಮೇಷ ರಾಶಿ: ಕೆಲವು ಸಂಗತಿಗಳ ವಿಚಾರದಲ್ಲಿ ನೀವು ಗೊತ್ತಿಲ್ಲದಂತೆ ಇರುವುದು ಒಳ್ಳೆಯದು. ಇಂದು ನಿಮ್ಮ ಪರೀಕ್ಷೆಯ ಕಾಲ. ಅದಕ್ಕೆ ಯೋಗ್ಯವಾದ ಉತ್ತರವನ್ನು ಕೊಡುವ ಭರದಲ್ಲಿ ಅವಘಡಗಳು ಆಗಬಹುದು. ಇಂದು ನೀವು ಧೈರ್ಯದಿಂದ, ಹೆದರದೇ ಕೆಲಸ ಮಾಡುವಿರಿ. ನಿಮ್ಮ ವಿರುದ್ಧ ಮಾತನಾಡುವವರಿಗೆ ಯೋಗ್ಯವಾದ ಉತ್ತರವನ್ನು ಕೊಡುವಿರಿ. ಉದ್ಯೋಗದಲ್ಲಿ ವಿಶ್ವಾಸಾರ್ಹವಾಗಿ ಕೆಲಸವನ್ನು ನಿರ್ವಹಿಸಿ. ಪರರ ಹಣದ ವಿಚಾರದಲ್ಲಿ ಪಾದರ್ಶಕತೆ ಇರಲಿ. ಶಾಂತಚಿತ್ತರಾಗಿ ಯೋಚಿಸಿ. ಅನುಕರಣೆಗಿಂತ ಅನುಸರಣೆ ಬಹಳ ಮುಖ್ಯವಾದ ಸಂಗತಿ. ಕಲಾವಿದರಿಗೆ ಉತ್ತಮ‌ ಅವಕಾಶಗಳು ಸಿಗಲಿವೆ. ದ್ವೇಷವನ್ನು ಬೆಳೆಸಿಕೊಳ್ಳಬೇಡಿ. ಜ್ವರದಂಥ ಆರೋಗ್ಯ ಸಮಸ್ಯೆಗಳು ಬರಬಹುದು. ಯಾರ ಬಗ್ಗೆಯೂ ಪೂರ್ವಾಗ್ರಹಬುದ್ಧಿಯನ್ನು ಬಿಡುವುದು ಒಳ್ಳೆಯದು. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಅಸೂಯೆಯಿಂದ ನಿಮ್ಮ ನೆಮ್ಮದಿ ಹಾಳಾಗಬಹುದು.

ವೃಷಭ ರಾಶಿ: ನಿಮಲ್ಲಿ ಎಲ್ಲವೂ ಇದ್ದರೂ ಕೊರತೆ ಎಂಬಂತೆ ಇರುವಿರಿ. ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳು ಮಾಡುವಿರಿ. ಮಕ್ಕಳ ವಿಚಾರವಾಗಿ ಬ್ಯಾಂಕ್ ನಲ್ಲಿ ಸಾಲ ಮಾಡಬೇಕಾಗಿಬರಬಹುದು. ಮಾಡಬೇಕಾಗಬಹುದು. ಮಾತಿಗೆ ಬೆಲೆಯು ಕಡಿಮೆಯಾದೀತು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ತಪ್ಪುಗಳಿದ್ದರೆ ಅದನ್ನು ಒಪ್ಪಿಕೊಂಡು ಮುನ್ನಡೆಯಿರಿ. ಆರ್ಥಿಕವಾಗಿ ಸಬಲರಾಗಲು ಸಂಗಾತಿ ಜತೆ ಚರ್ಚೆ ನಡೆಸಲಿದ್ದೀರಿ. ಇಂದು ಹೆಚ್ಚಿನ ಕೆಲಸವನ್ನು ಭಯದಲ್ಲಿಯೇ ಮಾಡುವಿರಿ. ದಾಂಪತ್ಯದಲ್ಲಿ ಅನ್ಯೋನ್ಯತೆ ಇರಲಿದೆ. ಸರಳತೆಯನ್ನು ರೂಢಿಸಿಕೊಳ್ಳುವಿರಿ. ಎಲ್ಲವನ್ನೂ ಅನುಮಾನ ಕನ್ನಡಕವನ್ನು ಹಾಕೊಕೊಂಡು ನೋಡಬೇಡಿ. ಬರಲಿರುವ ಜವಾಬ್ದಾರಿಯನ್ನು ಜಾಣತನದಿಂದ ತಪ್ಪಿಸಿಕೊಳ್ಳುವಿರಿ. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ. ಅನ್ಯರ ಜೊತೆ ಸಮಾನಸ್ಥಾನವನ್ನು ಗಳಿಸುವುದು ಕಷ್ಟವಾಗುವುದು.

ಮಿಥುನ ರಾಶಿ: ಇಂದು ನಿಮ್ಮ ಮಕ್ಕಳ ವಿಚಾರದಲ್ಲಿ ನಿಮಗೆ ಬೇಸರವಾಗಲಿದೆ. ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಇಂದು ನಿಮ್ಮ ಸಂಸಾರದ ಬಗ್ಗೆ ಯಾರ ಬಳಿಯಾದರೂ ಹಂಚಿಕೊಳ್ಳಬಯಸುವಿರಿ. ಬದಲಾವಣೆಯನ್ನು ಇಷ್ಟಪಡಲಿದ್ದೀರಿ ನೀವಿಂದು. ಮನೆಯಲ್ಲಿ ಅಗತ್ಯ ಇರುವ ಕೆಲಸಗಳನ್ನು ಮಾಡಿ ಮುಗಿಸುವಿರಿ. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ಧಾರ್ಮಿಕ ಕಾರ್ಯಗಳಲ್ಲಿ ಇಂದು ನೀವು ಭಾಗವಹಿಸುವಿರಿ. ಪುಣ್ಯಸ್ಥಳಗಳಿಗೆ ಹೋದರೆ ಮನಸ್ಸಿಗೆ ಸಂತೋಷವಾಗಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯದ ಸೂಚನೆ ಸಿಗಬಹುದು. ನಿಮ್ಮ ಸಮಯೋಚಿತ ಪೂರ್ವಾಲೋಚನೆಯಿಂದ ನೀವಿಂದು ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಸತ್ಯವನ್ನು ಮುಚ್ಚಿಡಲು ಹೋಗಬೇಡಿ. ಸಹಾಯಕ್ಕೆ ಕೃತಜ್ಞತೆ ಇರಲಿ. ನೀವು ಪ್ರೇಮಿಗಳಿಗೆ ದೂರವಾಗುವ ಸಾಧ್ಯತೆ ಇದೆ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ. ಏಕಕಾಲಕ್ಕೆ ಎಲ್ಲವೂ ನಿಮ್ಮದಾಗದು.

ಕಟಕ ರಾಶಿ: ನಿಮಗೆ ಅವಶ್ಯಕ ವಸ್ತುಗಳ ಬಗ್ಗೆ ಅತಿಯಾದ ಇಚ್ಛೆ ಇರಲಿದೆ. ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳುವಿರಿ. ನೇರವಾದ ಮಾತುಗಳಿಂದ ಬೇರೆಯವರಿಗೆ ನೋವುಂಟಾಗಬಹುದು. ಹೇಳಬೇಕಾದುದನ್ನು ಹೇಳುವರೀತಿಯಲ್ಲಿಯೇ ಹೇಳಿ ಮೇಲಿನಿಂದ ಬಿದ್ದು ಪೆಟ್ಟು‌‌ಮಾಡಿಕೊಳ್ಳಬಹುದು. ಓರ್ವ ಅಪರಿಚಿತನನ್ನು ನೀವಿಂದು ಪ್ರೀತಿಸಲು ಆರಂಭಿಸುವಿರಿ. ಅನಗತ್ಯ ಚರ್ಚೆಗಳಿಗೆ ಅವಕಾಶವನ್ನು ನೀಡಿ ವೈಮನಸ್ಯವನ್ನು ತಂದುಕೊಳ್ಳಬೇಡಿ. ನಿಮ್ಮ ವ್ಯಕ್ತಿತ್ವವನ್ನು ಕಂಡು ಕೆಲವರು ಅನವಶ್ಯಕ ಸಲಹೆಗಳನ್ನು ಕೊಡಲು ಬರಬಹುದು. ಪ್ರತ್ಯುತ್ತರಗಳನ್ನು ನೀಡುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದುವ ಮನಸ್ಸು ಮಾಡುವರು. ನಿಮ್ಮ ಸ್ವಭಾವದಲ್ಲಿ ಆದ ಬದಲಾವಣೆಯುಂದ ಅಚ್ಚರಿಯಾದೀತು. ಎಲ್ಲ ಸಮಯಕ್ಕೂ ನಿಮಗೆ ಸಹಕಾರ ಸಿಗುತ್ತದೆ ಎಂಬ ಯೋಚನೆ ಬೇಡ. ನಿಮ್ಮದಲ್ಲದ್ದನ್ನು ನಿಮ್ಮದೆಂದು ವಾದಿಸಲು ಹೋಗಬೇಡಿ. ಮನೆಯ ಕೆಲಸವು ಇಂದು ಬಹಳ ಆಯಾಸವನ್ನು ಕೊಡಬಹುದು.

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ