
ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ ಎಂದಾದಲ್ಲಿ ಆ ಬಗ್ಗೆ ಮಾಹಿತಿ ದೊರೆಯಲಿದೆ. ನೀರು ಮಾರಾಟದ ಮೂಲಕ ಆದಾಯವನ್ನು ಪಡೆಯುತ್ತಾ ಇರುವವರಿಗೆ ದೀರ್ಘಾವಧಿಗೆ- ದೊಡ್ಡ ಪ್ರಮಾಣದ ಆರ್ಡರ್ ದೊರೆಯುವಂಥ ಸಾಧ್ಯತೆ ಇದೆ. ಕನಿಷ್ಠ ಪ್ರಮಾಣದ ಹೂಡಿಕೆ ಜತೆಗೆ ಆರಂಭಿಸಿದ ವ್ಯವಹಾರವೊಂದು ಹೆಚ್ಚಿನ ಪ್ರಮಾಣದ ಲಾಭ ತಂದುಕೊಡಲಿದೆ. ನಿಮ್ಮ ಬಗ್ಗೆ ಹರಿದಾಡುವಂಥ ಗಾಸಿಪ್ ಗಳ ಕುರಿತು ತಲೆ ಕೆಡಿಸಿಕೊಳ್ಳಬೇಡಿ.
ನಿಂತ ನಿಲವಿನಲ್ಲೇ ನಿಮ್ಮ ಅಭಿಪ್ರಾಯ ತಿಳಿಸಿಬಿಡಬೇಕು ಎಂದು ಪಟ್ಟು ಹಿಡಿಯುವಂಥವರ ಜತೆಗಿನ ವ್ಯವಹಾರ ಮುಂದುವರಿಸಲಿಕ್ಕೆ ಹೋಗಬೇಡಿ. ಬ್ಯಾಂಕ್ ಗೆ ಕಟ್ಟಲೇಬೇಕಾದ ಹಣವನ್ನು ಹೊಂದಿಸಲು ಹೆಚ್ಚು ಶ್ರಮ ಹಾಕಲಿದ್ದೀರಿ. ಇನ್ನು ನಿಮ್ಮಲ್ಲಿ ಕೆಲವರು ಉಳಿತಾಯ ಅಥವಾ ಹೂಡಿಕೆ ಹಣವನ್ನು ಹಿಂತೆಗೆದುಕೊಂಡು, ಸಾಲವನ್ನು ಚುಕ್ತಾ ಮಾಡುವುದಕ್ಕೆ ತೀರ್ಮಾನ ಮಾಡುತ್ತೀರಿ. ಭರತನಾಟ್ಯ ಕಲಾವಿದರಿಗೆ ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನ ನೀಡುವುದಕ್ಕೆ ಅವಕಾಶ ದೊರೆಯಲಿದೆ. ಇಷ್ಟು ಕಾಲ ಯಾವುದು ನಿಮಗೆ ಹವ್ಯಾಸ ಆಗಿತ್ತೋ ಅದನ್ನೇ ಆದಾಯ ಮೂಲ ಆಗುವಂಥ ವೃತ್ತಿಯಾಗಿ ಮಾಡಿಕೊಳ್ಳುವ ಬಗ್ಗೆ ಆಲೋಚನೆ ಬರಲಿದೆ. ಪಶು ಸಾಕಣೆ ಮಾಡುತ್ತಾ ಇರುವವರಿಗೆ ವ್ಯವಹಾರ ವಿಸ್ತಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ. ನಿಮ್ಮ ಸ್ನೇಹಿತರು ತಾವಾಗಿಯೇ ಬಂದು, ಇದಕ್ಕೆ ಅಗತ್ಯ ಇರುವ ಹಣಕಾಸಿನ ಹೂಡಿಕೆಯನ್ನು ತಾವು ಮಾಡುವುದಾಗಿ ಹೇಳಲಿದ್ದಾರೆ.
ಪರಿಚಿತರ ಅಗತ್ಯಗಳಿಗೆ ನೆರವು ನೀಡಲಿದ್ದೀರಿ. ಸೈಟು- ಮನೆ ಖರೀದಿ ಮಾಡಬೇಕು ಎಂದಿರುವವರು ತಮ್ಮ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೌಕಾಶಿ ಮಾಡಿ, ಈ ದಿನ ಕೆಲವು ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಬರೀ ಮಾತಿನಿಂದ ಆಗುವುದಿಲ್ಲ ಎಂಬಂಥ ಕಡೆಗಳಲ್ಲಿ ಕೆಲಸ- ಕಾರ್ಯಗಳನ್ನು ಪೂರ್ಣ ಮಾಡುವುದಕ್ಕೆ ಪ್ರಭಾವ ಬಳಕೆ ಮಾಡಲಿದ್ದೀರಿ. ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆ ಹೆಚ್ಚಾಗಲಿದೆ. ನಿಮ್ಮಲ್ಲಿ ಕೆಲವರು ಮಕ್ಕಳನ್ನು ಹಾಸ್ಟೆಲ್ ನಲ್ಲಿ ಬಿಟ್ಟು ಓದಿಸುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ನಿಮ್ಮ ಹಳೇ ಚಿನ್ನದ ಆಭರಣಗಳ ವಿನಿಮಯಕ್ಕೆ ನಿರ್ಧಾರ ಕೈಗೊಳ್ಳುವ ಯೋಗ ಇದೆ. ಸ್ವಲ್ಪ ಪ್ರಮಾಣದಲ್ಲಿಯಾದರೂ ಸಾಲ ಮಾಡುವ ಸಾಧ್ಯತೆ ಇದೆ. ಅಥವಾ ಕೆಲವರು ಪಿಎಫ್, ಎಫ್.ಡಿ., ಇಂಥವುಗಳಿಂದ ಹಣ ತೆಗೆದುಕೊಳ್ಳಲು ಪ್ರಯತ್ನ ಮಾಡಲಿದ್ದೀರಿ. ಸ್ವಾದಿಷ್ಟವಾದ ಊಟ- ತಿಂಡಿ ಸವಿಯುವ ಯೋಗ ಇದೆ.
ಮೀನುಗಾರಿಕೆ- ಮೀನು ಸಾಕಣೆ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ದ್ವಿಚಕ್ರ ವಾಹನ ಖರೀದಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೀರಿ. ನೀವೇನಾದರೂ ವ್ಯಾಪಾರ- ವ್ಯವಹಾರ ಮಾಡುವಂಥವರಾದರೆ ಅದಕ್ಕೆ ಅಗತ್ಯ ಇರುವಂಥ ಟ್ರಕ್, ಲಾರಿ, ಲಗೇಜ್ ಆಟೋ ಇಂಥವುಗಳನ್ನು ಖರೀದಿಸುವ ಸಾಧ್ಯತೆ ಇದೆ. ಚರ್ಮ- ಕೂದಲಿನ ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯ ನೀಡಬೇಕು. ತಲೆಹೊಟ್ಟಿನ ಸಮಸ್ಯೆ ಈಗಾಗಲೇ ಇದ್ದಲ್ಲಿ ಅದು ಉಲ್ಬಣ ಆಗಬಹುದು. ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳುವುದಕ್ಕೆ ಪ್ರಾಮುಖ್ಯ ನೀಡಿ. ಪಿತ್ರಾರ್ಜಿತ ಆಸ್ತಿ ಹಂಚಿಕೆ ಬಗ್ಗೆ ಈ ಹಿಂದೆ ಯಾವಾಗಲೋ ನಿಮಗೆ ಇಂಥದ್ದನ್ನು ನೀಡುತ್ತೇನೆ ಎಂದು ಹೇಳಿದ್ದಿದ್ದು, ಈಗ ತೀರ್ಮಾನ ಬದಲಾವಣೆ ಮಾಡಿಕೊಂಡಿರುವುದಾಗಿ ಹೇಳಲಿದ್ದಾರೆ. ಅಡ್ವರ್ಟೈಸ್ ಮೆಂಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಒತ್ತಡ ಇರಲಿದೆ.
ಕುಟುಂಬಕ್ಕೆ ಅಗತ್ಯ ಇರುವ ವಸ್ತುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಸಮಯವನ್ನು ಇಡಲಿದ್ದೀರಿ. ನಿಮ್ಮಲ್ಲಿ ಕೆಲವರು ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳಲಿದ್ದು, ಹೋಟೆಲ್ ಬುಕ್ಕಿಂಗ್, ಕಾರು ಬುಕ್ಕಿಂಗ್ ಇಂಥವು ಮಾಡಿಕೊಳ್ಳುವುದಕ್ಕೆ ಸ್ನೇಹಿತರ ಸಹಾಯವನ್ನು ಕೇಳಲಿದ್ದೀರಿ. ಆದಾಯ ತೆರಿಗೆಗೆ ಸಂಬಂಧಿಸಿದ ವಿಷಯದ ಬಗ್ಗೆ ಚರ್ಚೆ ಮಾಡುವುದಕ್ಕೆ ಆ ಕ್ಷೇತ್ರದಲ್ಲಿ ಪರಿಣತ ಆದಂಥ ವ್ಯಕ್ತಿಗಳ ಜತೆಗೆ ಮಾತುಕತೆ ನಡೆಸಲಿದ್ದೀರಿ. ಮಾತು ಪ್ರಧಾನವಾದ ವೃತ್ತಿ- ಉದ್ಯೋಗದಲ್ಲಿ ಇರುವವರಿಗೆ ವಿಪರೀತ ಕೆಲಸಗಳು ಬರುತ್ತವೆ. ಪ್ರಮುಖ ಜವಾಬ್ದಾರಿಯೊಂದನ್ನು ಹೆಚ್ಚುವರಿಯಾಗಿ ವಹಿಸಿಕೊಳ್ಳಲು ಸೂಚನೆ ಕೂಡ ಬರಲಿದೆ. ಫ್ರೀಲ್ಯಾನ್ಸರ್ ಆಗಿ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದ್ದು, ಸ್ನೇಹಿತರ ಮೂಲಕ ಉದ್ಯೋಗದ ರೆಫರೆನ್ಸ್ ಸಹ ಬರಬಹುದು. ಅವಕಾಶಗಳನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂಬ ಕಡೆಗೆ ಲಕ್ಷ್ಯ ನೀಡಿ.
ಸಂಗೀತ ಸಾಧನಗಳ ಕಲಿಕೆಯನ್ನು ಆರಂಭಿಸುವುದಕ್ಕೆ ಮನಸ್ಸು ಮಾಡಲಿದ್ದೀರಿ. ಫ್ಯಾಷನ್ ಡಿಸೈನಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ದೊರೆಯಲಿವೆ. ದೊಡ್ಡ ವೇದಿಕೆಯಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶನ ಮಾಡುವುದಕ್ಕೆ ಆಹ್ವಾನ ಬರಲಿದೆ. ಎಂಎಸ್ಎಂಇ ಕೈಗಾರಿಕೆ ಆರಂಭಿಸುವುದಕ್ಕೆ ಸಿದ್ಧತೆ- ಬಜೆಟ್ ಮಾಡಿಕೊಳ್ಳಲಿದ್ದೀರಿ. ಸಬ್ಸಿಡಿ ಸಹಿತವಾಗಿ ಸಾಲವನ್ನು ಪಡೆಯುವುದಕ್ಕೆ ಬ್ಯಾಂಕ್ ಗೆ ಪ್ರಾಜೆಕ್ಟ್ ರಿಪೋರ್ಟ್ ಸಲ್ಲಿಸುವ ಸಾಧ್ಯತೆ ಇದೆ. ಹೊಸ ಹೂಡಿಕೆ ಅವಕಾಶಗಳಿಗೆ ತಕ್ಷಣವೇ ಸ್ಪಂದಿಸಿದ್ದರಿಂದ ಆರಂಭದಲ್ಲಿಯೇ ಲಾಭದಲ್ಲಿ ಇರುವಂತೆ ಆಗಲಿದೆ. ಮಕ್ಕಳ ಶಿಕ್ಷಣಕ್ಕೆ ಸಹಾಯ ಆಗಲಿ ಎಂಬ ದೃಷ್ಟಿಕೋನದಿಂದ ಕೊಂಡಿದ್ದ ಷೇರುಗಳು, ಹೂಡಿಕೆ ಮಾಡಿಕೊಂಡು ಬಂದಿದ್ದ ಮ್ಯೂಚುವಲ್ ಫಂಡ್ ನಿಂದ ಹಣವನ್ನು ತೆಗೆದುಕೊಳ್ಳುವ ತೀರ್ಮಾನವನ್ನು ಮಾಡಲಿದ್ದೀರಿ. ಸ್ನೇಹಿತರ ವರ್ತನೆಯಿಂದ ಬೇಸರ ಆಗಲಿದೆ.
ನಿಮಗೆ ಎಷ್ಟೇ ಆಪ್ತರೇ ಆದರೂ ಇತರರ ಹಣಕಾಸು ವ್ಯವಹಾರಗಳಿಗೆ ಮಧ್ಯಸ್ಥಿಕೆ ಮಾಡುವುದಕ್ಕೆ ನೀವು ಹೋಗಬೇಡಿ. ನೀವಾಗಿಯೇ ವಹಿಸಿಕೊಂಡ ಕೆಲವು ಜವಾಬ್ದಾರಿಗಳನ್ನು ಗಡುವಿನೊಳಗಾಗಿ ಮಾಡಿ ಮುಗಿಸುವುದಕ್ಕೆ ಹರಸಾಹಸ ಮಾಡಬೇಕಾಗುತ್ತದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ರಜಾ ಕೇಳಿಕೊಂಡು ಬಂದಲ್ಲಿ ಅವರ ಅಗತ್ಯಕ್ಕೆ ಸ್ಪಂದಿಸುವ ಕಡೆಗೆ ಗಮನವನ್ನು ನೀಡಿ. ವಿವಾಹ ವಯಸ್ಕರಾಗಿದ್ದು ಮದುವೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ಸೂಕ್ತ ಸಂಬಂಧ ದೊರೆಯುವ ಸಾಧ್ಯತೆ ಹೆಚ್ಚಿದೆ. ಮುಖ್ಯವಾಗಿ ಸಂಬಂಧಿಗಳ ಮೂಲಕ ಬರುವಂಥ ರೆಫರೆನ್ಸ್ ಗಂಭೀರವಾಗಿ ಪರಿಗಣಿಸಿ. ದೇವತಾ ಕಾರ್ಯಗಳ ಆಯೋಜನೆಗಾಗಿ ಓಡಾಟ ನಡೆಸಲಿದ್ದೀರಿ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಲಿವೆ. ಆದಾಯದಲ್ಲಿ ಹೆಚ್ಚಳ ಆಗುವುದರಿಂದ ನಿಮ್ಮ ಆತ್ಮವಿಶ್ವಾಸವು ಹೆಚ್ಚಲಿದೆ. ಪ್ರಶ್ನಿಸದೆ ಯಾವುದೇ ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಡಿ.
ಯಾರ ಬಳಿಯೂ ಸಹಾಯ ಕೇಳಬಾರದು ಎಂದುಕೊಳ್ಳುತ್ತಾ ಇರುವವರಿಗೆ ಇತರರ ನೆರವು ಅನಿವಾರ್ಯ ಆಗಲಿದೆ. ಕೂಡಿಟ್ಟುಕೊಂಡಿದ್ದ ಉಳಿತಾಯದ ಹಣವನ್ನು ಹಿಂತೆಗೆದುಕೊಂಡು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡುವ ಆಲೋಚನೆ ಮೂಡಲಿದೆ. ಇನ್ನು ನಿಮ್ಮಲ್ಲಿ ಯಾರು ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ, ಅಂಥವರಿಗೆ ಬಡ್ತಿ, ವೇತನ ಹೆಚ್ಚಳ ಆಗುವ ಯೋಗ ಇದೆ. ನಿವೃತ್ತ ಸರ್ಕಾರಿ ನೌಕರರಿಗೆ ಕನ್ಸಲ್ಟಂಟ್ ಆಗಿ ಕಾರ್ಯ ನಿರ್ವಹಿಸುವಂತೆ ಆಹ್ವಾನ ದೊರೆಯಲಿದೆ. ವಾಹನ ಚಾಲನೆ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜಾಗ್ರತೆ ವಹಿಸಿ. ಅದರ ಜೊತೆಗೆ ಒನ್ ವೇ, ನೋ ಪಾರ್ಕಿಂಗ್ ಇಂಥವುಗಳನ್ನು ಗಮನಿಸಿಕೊಳ್ಳಿ. ಇಲ್ಲದಿದ್ದಲ್ಲಿ ಅಂಥವುಗಳಿಗೆ ದೊಡ್ಡ ಮೊತ್ತದ ದಂಡ ಪಾವತಿಸುವಂತೆ ಆಗಲಿದೆ. ಬಹಳ ವರ್ಷಗಳಿಂದ ಭೇಟಿ ಸಾಧ್ಯವೇ ಆಗಿರಲಿಲ್ಲ ಎಂಬಂಧ ಸ್ನೇಹಿತರ ಜೊತೆಗೆ ಉತ್ತಮವಾದ ಸಮಯವನ್ನು ಕಳೆಯಲಿದ್ದೀರಿ.
ಬರಹಗಾರರಿಗೆ ಒತ್ತಡದ ಸನ್ನಿವೇಶ ಎದುರಾಗಲಿದೆ. ಗಡುವಿನ ಒಳಗಾಗಿ ಪೂರ್ಣಗೊಳಿಸಲು ಸಾಧ್ಯವಾಗದೆ ಕೆಲವು ಕೆಲಸದ ವಿಚಾರದಲ್ಲಿ ಮನಸ್ಸು ಕಹಿ ಆಗುವಂಥ ಬೆಳವಣಿಗೆ ಆಗಲಿದೆ. ಆಸಕ್ತಿಯಿಂದ ಕಟ್ಟಿದ್ದ ಸಂಸ್ಥೆ, ಪತ್ರಿಕೆ ಅಥವಾ ಯೂ ಟ್ಯೂಬ್ ಚಾನೆಲ್ ಅನ್ನು ಬೇರೆಯವರಿಗೆ ವಹಿಸಿಕೊಡಬೇಕು ಎಂಬ ಸನ್ನಿವೇಶ ಸೃಷ್ಟಿ ಆಗುತ್ತದೆ. ಸಿಹಿ ಪದಾರ್ಥಗಳ ಸೇವನೆಯನ್ನು ಈ ದಿನ ಕಡಿಮೆ ಮಾಡುವುದು ಒಳ್ಳೆಯದು. ಅದರಲ್ಲೂ ದೇಹದ ತೂಕ ಹೆಚ್ಚಾಗಿ, ಮಧುಮೇಹದಂಥ ಸಮಸ್ಯೆಯಿಂದ ಬಳಲುತ್ತಾ ಇರುವವರು ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ. ಮನೆಗೆ ಟೀವಿ ಅಥವಾ ಹೋಮ್ ಥಿಯೇಟರ್ ಅಳವಡಿಕೆ ಅಥವಾ ಪ್ರೊಜೆಕ್ಟರ್ ಖರೀದಿ ಮಾಡುವುದಕ್ಕೆ ಸದಸ್ಯರ ಜತೆಗೆ ಮಾತುಕತೆ ನಡೆಸಲಿದ್ದೀರಿ. ಸ್ನೇಹಿತರಿಂದ ಸಾಲವನ್ನು ಪಡೆದುಕೊಂಡಿದ್ದಲ್ಲಿ ಅದನ್ನು ಮರುಪಾವತಿ ಮಾಡುವುದಕ್ಕೆ ಆದ್ಯತೆ ನೀಡಲಿದ್ದೀರಿ.
ಲೇಖನ- ಎನ್.ಕೆ.ಸ್ವಾತಿ