
ಡಿಸೆಂಬರ್ ತಿಂಗಳ ಈ ವಾರ ಸೂರ್ಯ, ಶುಕ್ರ, ಕುಜರ ಯೋಗ ಧನುರಾಶಿಯಲ್ಲಿ ಆಗಲಿದ್ದು ಗುರುವಿನ ರಾಶಿಯಲ್ಲಿ ಇರುವ ಇವರು ಶುಭ ಫಲವನ್ನೇ ಕೊಡುವರು. ಉತ್ಸಾಹ ಹಾಗು ಸರ್ಕಾರದ ಕಾರ್ಯಗಳು ಬೇಗ ಆಗಲಿವೆ. ಶಸ್ತ್ರಕ್ಕೆ ಸಂಬಂಧಿಸಿದ ಉದ್ಯೋಗಳು ಫಲಿತವಾಗುವುದು. ಎಲ್ಲ ಗ್ರಹಗಳೂ ಏಕಾದಶ ಸ್ಥಾನದ ಫಲವನ್ನು ಕೊಡಲಿ.
ಈ ವಾರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ನಿಮಗೆ ಇಂದ್ರಜಾಲದಂತೆ ಮಾಯವಾಗಲಿದೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಬಹುದು. ಕಿವಿಗೆ ಹಾಕಿಕೊಳ್ಳಿ, ಚಿಂತಿಸುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡಬೇಕಾಗುವುದು. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ದ್ವಂದ್ವಹಳೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ಕಾರ್ತಿಕೇಯನ ಸ್ಮರಣೆ ಸದಾ ಮನದಲ್ಲಿ ನಡೆಯಲಿ.
ಡಿಸೆಂಬರ್ ನ ಈ ವಾರ ಉನ್ನತ ಅಧಿಕಾರಿಗಳು ನಿಮ್ಮಿಂದ ಅಧಿಕ ನಿರೀಕ್ಷೆಯನ್ನು ಮಾಡುವರು. ಉದ್ಯಮಿಗಳ ಕೆಲಸದಲ್ಲಿ ಅಡೆತಡೆಗಳು ಬಂದರೂ ಅದನ್ನು ಗಣನೆಗೆ ತೆಗೆದುಕೊಳ್ಳದೇ ಮುಂದುವರಿಯುವಿರಿ. ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಂಡಿದ್ದು ಅನಂತರ ಗೊತ್ತಾಗಲಿದೆ. ಒಮ್ಮೆಲೆ ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ವ್ಯವಹಾರದಲ್ಲಿ ಗೊಂದಲ ಇಟ್ಟುಕೊಳ್ಳುವುದು ಬೇಡ. ಅಲ್ಲೇ ಪರಿಹಾರ ಮಾಡಿಕೊಳ್ಳಿ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ಮಹಾಲಕ್ಷ್ಮೀ ಸ್ತೋತ್ರವನ್ನು ಪಠಿಸಿ.
ಮೂರನೇ ರಾಶಿಯವರು ಈ ವಾರ ವಿದೇಶದ ತಮ್ಮ ಬದುಕನ್ನು ಸ್ವಾವಲಂಬಿಯಾಗಿಸಿಕೊಳ್ಳಲು ಬಯಸುವರು. ಯಾವುದೋ ಅಸತ್ಯವಾದ ಉದ್ಯೋಗಕ್ಕೆ ಮನಸೋತು ಹಣವನ್ನು ಕಳೆದುಕೊಳ್ಳಬೇಕಾದೀತು. ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಈ ವಾರ ಮನೆಯ ಯಾವ ವಸ್ತುಗಳನ್ನೂ ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ವಾರ ಪೂರ್ತಿ ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಈ ವಾರ ನಟರಿಗೆ ಅವಕಾಶವು ಸಿಕ್ಕೂ ಸಿಗದಂತೆ ಆಗಬಹುದು. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಲಿದೆ. ಉಪವಾಸ ವ್ರತದಿಂದ ಮಹಾವಿಷ್ಣುವನ್ನು ಮೆಚ್ಚಿಸುವಿರಿ.
ಈ ವಾರ ವರ್ತನೆಯನ್ನು ನೀವು ನಿಯಂತ್ರಿಸಿಕೊಳ್ಳದಿದ್ದರೆ ತಮಾಷೆಯ ವಸ್ತುವಾಗಬೇಕಾಗುವುದು. ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ಈ ವಾರ ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರ. ನಿಮಗೆ ಈ ವಾರ ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ಮಾತಿನಿಂದ ಕುಲಕ್ಕೆ ಅವಮಾನವಾಗಬಹುದು. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ. ಚಂಚಲವಾದ ಮನಸ್ಸು ನಿಮ್ಮ ಸಂಗಾತಿಗೆ ಇಷ್ಟವಾಗದು. ಧ್ಯಾನ ಯೋಗಗಳ ರೂಢಿಯನ್ನು ಬೆಳೆಸಿಕೊಳ್ಳುವಿರಿ.
ಐದನೇ ರಾಶಿಯವರಿಗೆ ಈ ವಾರ ಕಛೇರಿಯಲ್ಲಿ ಎಲ್ಲರ ಜೊತೆ ಉತ್ತಮ ಸಮಯ ಕಳೆಯುವ ಅವಕಾಶವು ಸಿಗುವುದು. ತಪ್ಪನ್ನು ಮಾಡಿ ಅನಂತರ ಅದನ್ನು ಸರಿ ಮಾಡಿಕೊಳ್ಳಲು ವಿವಿಧ ಪ್ರಯತ್ನವನ್ನೂ ಮಾಡುವಿರಿ. ಈ ವಾರ ಪೂರ್ತಿ ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಕಛೇರಿಯ ಕಾರ್ಯವನ್ನು ಮನೆಯಲ್ಲಿ ಇದ್ದು ಮಾಡುವ ಮನವಿಯನ್ನು ಸಲ್ಲಿಸುವಿರಿ. ಯಾವುದೇ ಹೊಸ ಯೋಜನೆಯ ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗುವುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ಸಾಮಾಜಿಕ ತಾಣದಲ್ಲಿ ಹೆಚ್ಚು ಸಮಯ ಕಳೆದು ಮಾಡಬೇಕಾದ ಕಾರ್ಯಕ್ಕೆ ಪೂರ್ಣವಿರಾಮ ಕೊಡುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಮೃತ್ಯುಂಜಯನ ಸ್ಮರಣೆ ಅಗಾಗ ಬರಲಿ.
ಈ ವಾರ ಒತ್ತಡದ ನಡುವೆಯೂ ತಾಳ್ಮೆಯನ್ನು ನೀವು ಉಳಿಸಿಕೊಳ್ಳುವ ಪ್ರಯತ್ನ ಸಾಗಲಿದೆ. ಈ ವಾರ ಕಾರಣಾಂತರಗಳಿಂದ ನಿಲ್ಲಿಸಿದ್ದ ಕಾರ್ಯವನ್ನು ಅನ್ಯರ ಸಹಕಾರದಿಂದ ಪುನಃ ಪ್ರಾರಂಭಿಸುವಿರಿ. ಹಳೆಯ ವಾಹನವನ್ನು ಪಡೆದುಕೊಳ್ಳುವಿರಿ. ಹಿರಿಯರಿಗೆ ಎದುರು ಮಾತನಾಡಿ ಅನಂತರ ಪಶ್ಚಾತ್ತಾಪಪಡಬೇಕಾದೀತು. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳುವುದು ಸೂಕ್ತ. ಕೆಲವು ಶುಭ ಸೂಚನೆಗಳು ನಿಮಗೆ ಗೊತ್ತಾಗಲಿದ್ದು ನಿರೀಕ್ಷೆಯೂ ಎಂದಿಗಿಂತ ಹೆಚ್ಚಿರಲಿದೆ. ಮಾತುಗಾರರು ತಾನಾಗಿಯೇ ವಾಚಾಳಿತನವನ್ನು ಕಡಿಮೆಮಾಡುವರು. ಈ ವಾರ ನಿಮಗೆ ಸಿಕ್ಕ ಅವಕಾಶದಲ್ಲಿ ತೃಪ್ತಿ ಪಡೆಯುವುದು ಮುಖ್ಯವಾಗಿರಲಿ. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನೂ ನೀವು ಈ ವಾರ ಮಾಡಬೇಕಾದೀತು. ಎಲ್ಲದಕ್ಕೂ ವಿಧಿಯನ್ನು ಹೀಗಳೆಯುವುದಕ್ಕಿಂತ ನಿಮ್ಮ ಪ್ರಯತ್ನವನ್ನು ಮುಂದುವರೆಸಿರಿ. ತಪೋರಾಮನನ್ನು ಮನಸ್ಸಿನಲ್ಲಿ ಚಿಂತಿಸಿ.
ಏಳನೇ ರಾಶಿಯವರಿಗೆ ಈ ವಾರ ಉನ್ನತ ಅಧಿಕಾರಿಗಳ ಜೊತೆ ಹೆಚ್ಚು ವ್ಯವಹಾರವನ್ನು ಮಾಡಬೇಕಾಗಿರುವ ಕಾರಣ ಅವರ ಜೊತೆ ಓಡಾಡುವಿರಿ. ಹಣಕಾಸಿನ ವೆಚ್ಚಗಳ ಬಗ್ಗೆ ವಿಶೇಷವಾಗಿ ಕಾಳಜಿ ಬೇಕು. ಈ ವಾರ ಜಾಹೀರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ವಾಗ್ಮಿಗಳೂ ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳುವರು. ಸಂಪ್ರದಾಯದ ವಿಚಾರದಲ್ಲಿ ನಿಮಗೆ ಆಸಕ್ತಿಯು ಹೆಚ್ಚಾಗಬಹುದು. ಈ ವಾರ ನೀವು ಮಾಡುವ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿರಿಯರಿಂದ ಒತ್ತಾಯ ಬರಲಿದೆ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ. ಪ್ರಯತ್ನಪೂರ್ವಕ ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.
ಡಸೆಂಬರ್ ನ ಈ ವಾರ ನೀವು ಏಕಾಗ್ರತೆಯಿಂದ ಕೆಲಸ ಮಾಡಿದರೆ ಅನಾಯಾಸವಾಗಿ ಗುರಿಯನ್ನು ತಲುಪಬಹುದು. ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಮಕ್ಕಳ ಜೊತೆ ಚಿಂತೆಯನ್ನೆಲ್ಲ ಬಿಟ್ಟು ಸಂತೋಷದಿಂದ ಕಾಲವನ್ನು ಕಳೆಯುವಿರಿ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಪ್ರಯಾಣದಿಂದ ವಾಡವಿಡೀ ಹಿಂಸೆಯನ್ನು ಅನುಭವಿಸಬೇಕಾದೀತು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ಈ ವಾರ ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ. ಈ ವಾರದ ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ. ಮಹಾಕಾಳಿಯನ್ನು ಉಪಾಸನೆ ಮಾಡಿ.
ಗುರುವಿನ ಆಧಿಪತ್ಯದ ಈ ರಾಶಿಗೆ ಗುರು ದೃಷ್ಟಿಯೂ ಇದ್ದು ಈ ವಾರ ಉದ್ಯೋಗವನ್ನು ಅರಸುತ್ತಿರುವ ನೀವು ದುಡುಕಿ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಉತ್ತಮ ಕೆಲಸವನ್ನು ನಷ್ಟ ಮಾಡಿಕೊಂಡೆ ಎಂಬ ಭಾವ ಬರಬಹುದು. ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ಈ ವಾರ ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಸುಳ್ಳನ್ನಾಡಿ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದನೆ ಸಿಗಬಹುದು. ಈ ವಾರ ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದು ಕಾರ್ಯಕ್ಕೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳಿ. ನಿಮ್ಮ ಬಗ್ಗೆ ಯಾರಿಗೂ ಗೊತ್ತಿಲ್ಲ ಮಾಹಿತಿಯು ಗೊತ್ತಾಗುವುದು. ಗುರುಚರಿತ್ರೆಯ ಪಠಣ ಮಾಡಿ.
ಹತ್ತನೇ ರಾಶಿಯವರು ಈ ವಾರ ಹಠಮಾರಿತನದಿಂದ ಮನೆಯವರ ಹೃದಯವನ್ನೂ ನೋಯಿಸುವಿರಿ. ಮೇಲಧಿಕಾರಿಗಳಿಗೆ ನೇರ ನುಡಿಯ ಪ್ರತಿಕ್ರಿಯೆಯನ್ನು ನೀಡುವುದು ಬೇಡ. ಈ ವಾರ ದೈನಂದಿನ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ವಿವಾದದಲ್ಲಿರುವ ಆಸ್ತಿಯಿಂದ ಮಾರಾಟವು ನಿಧಾನವಾಗುವುದು. ಸರ್ಕಾರದ ಕಾರ್ಯವು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಈ ವಾರ ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬರಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ನಿಮ್ಮ ವಾಹನಕ್ಕಾಗಿ ಬಹಳ ಖರ್ಚನ್ನು ಮಾಡುವಿರಿ. ಈ ವಾರ ಸಿಕ್ಕ ಅವಕಾಶದಲ್ಲಿ ಪ್ರೀತಿಯಿರಲಿ. ಪ್ರೀತಿಯ ವಿಷಯದಲ್ಲಿ ದುಃಖ ಬರಲಿದೆ. ದೋಷ ನಿವಾರಣೆಯ ಸಂಕಲ್ಪ ಮಾಡಿ ಗೋವಿಗೆ ದೀಪ ಬೆಳಗಿ.
ಡಿಸೆಂಬರ್ ತಿಂಗಳ ನಾಲ್ಕನೇ ವಾರ ನಿಮ್ಮ ಕಾರ್ಯದ ಅನುಭವವು ಪ್ರಯೋಜನಕ್ಕೆ ಬರಲಿದ್ದು, ಎಲ್ಲರೂ ನಿಮ್ಮ ಸಲಹೆಯನ್ನು ಪಡೆಯುವರು. ಕಲಾವಿದರು ಅವಕಾಶದಿಂದ ವಂಚಿತರಾಗಬೇಕಾಗುವುದು. ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಲಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಈ ವಾರ ಮಕ್ಕಳ ವಿದ್ಯಾಭ್ಯಾಸಕ್ಕೆ ನೀವೇ ವಿಶೇಷ ಕಾಳಜಿಯನ್ನು ತೋರಿ ಅವರನ್ನು ಓದಿಗೆ ಪ್ರೇರಣೆ ಕೊಡಬೇಕಾಗುವುದು. ಮನೆಯ ಕೆಲಸಗಳೇ ಬಹಳ ಆಗಲಿದ್ದು ಇನ್ನೊಂದು ಕಾರ್ಯಕ್ಕೆ ತಾಳ್ಮೆ ಇರಲಾರದು. ನಿಮ್ಮ ಉತ್ಸಾಹವನ್ನು ಕಸಿಯಲು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು. ಶನೈಶ್ಚರನಿಗೆ ನಿಮ್ಮಿಂದ ಸೇವೆ ಸಲ್ಲಲಿ.
ರಾಶಿ ಚಕ್ರದ ಕೊನೆಯ ರಾಶಿಯವರಿಗೆ ಈ ವಾರ ಉದ್ಯೋಗದಲ್ಲಿ ಸಂಪೂರ್ಣ ಜಾಗರೂಕರಾದಾಗ ಮಾತ್ರ ಅವಕಾಶಗಳು ಸಿಗುತ್ತವೆ. ಕಛೇರಿ ಕೆಲಸವು ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯನ್ನು ಕೊಡಬಹುದು. ಈ ವಾರದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನವನ್ನು ನೀಡುವರು. ಈ ವಾರ ಒಂದಿಷ್ಟು ಆಯಾಸ ಬಿಟ್ಟರೆ, ಮತ್ತೇನೂ ಆಗದು. ಸಜ್ಜನರ ಜೊತೆ ಸಮಯ ಕಳೆಯುವ ಅವಕಾಶ ಸಿಗುವುದು. ವಾರಾಂತ್ಯದಲ್ಲಿ ಸಂಗಾತಿಯ ಜೊತೆ ಭಿನ್ನಮತವನ್ನು ತಂದುಕೊಳ್ಳುವಿರಿ. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ವೃದ್ಧರ ಸೇವೆಯಲ್ಲಿ ತೊಡಗಿಕೊಳ್ಳುವಿರಿ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು. ಗುರುದರ್ಶನವನ್ನು ಮಾಡಿ ತೃಪ್ತಿಯ ಭಾವ ಬರಲಿದೆ.
-ಲೋಹಿತ ಹೆಬ್ಬಾರ್ – 8762924271 (what’s app only)