Astrology: ಈ ರಾಶಿಯರವರು ಇಂದು ಆದಾಯಕ್ಕೆ ನಾನಾ ಮೂಲ ಹುಡುಕುವಿರಿ

ರಾಶಿ ಭವಿಷ್ಯ ಶುಕ್ರವಾರ (ಆ. 24): ನಿಮ್ಮ ರಾಶಿ ಧನು, ಮಕರ, ಕುಂಭ, ಮೀನ. ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ನಿಮ್ಮನ್ನು ಇಂದು ಕೆಲವರು ಭೇಟಿಯಾಗಲಿದ್ದಾರೆ. ನಿಮ್ಮ ವ್ಯಕ್ತಿತ್ವವನ್ನು ನೀವು ಪರಿಚಯಿಸುವಿರಿ. ನಿಮ್ಮ ಶ್ರಮಕ್ಕೆ ಎಂತಹ ಫಲವೆಂದು ಇಂದು ಗೊತ್ತಾಗುವುದು. ಹಾಗಾದರೆ ಆಗಸ್ಟ್​ 24ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ಈ ರಾಶಿಯರವರು ಇಂದು ಆದಾಯಕ್ಕೆ ನಾನಾ ಮೂಲ ಹುಡುಕುವಿರಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 24, 2024 | 12:20 AM

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2024 ಆಗಸ್ಟ್​ 24) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ಶೂಲ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:48 ಗಂಟೆ, ರಾಹು ಕಾಲ ಬೆಳಿಗ್ಗೆ 09:28 ರಿಂದ 11:01, ಯಮಘಂಡ ಕಾಲ ಮಧ್ಯಾಹ್ನ 02:08 ರಿಂದ 03:42ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 06:21 ರಿಂದ 07:55ರ ವರೆಗೆ.

ಧನು ರಾಶಿ: ಇಂದು ನಿಮ್ಮ ದಾಂಪತ್ಯದ ಬಿರುಕು ನ್ಯಾಯಾಲಯದ ಮೆಟ್ಟಿಲೇರಿಸಲೂಬಹುದು. ನಿಮ್ಮ ವಸ್ತುವನ್ನು ಯಾರಿಗೂ ಕೊಡುವ ಮನಸ್ಸಾಗದು‌. ಆಸ್ತಿಯ ವಿಚಾರದಲ್ಲಿ ಕಲಹಗಳು ಉಂಟಾಗಬಹುದು. ನಿಮ್ಮ ಆಲೋಚನೆಗಳನ್ನು ಸಂಗಾತಿಯು ತಿದ್ದಲು ಪ್ರಯತ್ನಿಸಬಹುದು. ಏನೇ ಪಡೆದುಕೊಳ್ಳುವುದಿದ್ದರೂ ಸರಿಯಾದ ಮಾರ್ಗದಿಂದ ಪಡೆಯಲು ಪ್ರಯತ್ನಿಸಿ. ಯಾವುದಾದರೂ ಉತ್ತಮ ವಿಚಾರಗಳು ನಿಮ್ಮಿಂದ‌‌ ಹೊರಬರುವುದು ಕಷ್ಟಸಾಧವಾದೀತು. ನಿಮ್ಮನ್ನು ಗೌರವಿಸಿಲ್ಲ ಎಂಬ ವ್ಯಥೆಯು ಹೆಚ್ಚಾಗಬಹುದು. ‌ಏಕಾಂತದಲ್ಲಿ ಇರುವುದು ನಿಮಗೆ ಕಷ್ಟವಾದೀತು. ಬೇಕಾದುದನ್ನು ಪಡೆಯಲು ನೀವು ಬಹಳ ಪರಿಶ್ರಮಿಸಬಹುದು. ನಂಬಿಕೆಯ ಕೊರತೆಯು ಅತಿಯಾಗಿ ಕಾಡಬಹುದು. ಭೂಮಿಯ ಖರೀದಿಗೆ ಸಹೋದರನ ಸಹಕಾರ ಪಡೆಯುವಿರಿ.‌ ವಂಚಿಸುವ ಯೋಚನೆ ಮಾಡಿದ್ದರೆ ಅದನ್ನು ಮರೆತುಬಿಡಿ. ಎಲ್ಲದಕ್ಕೂ ಯಾರನ್ನಾದರೂ ಕಾರಣವಾಗಿಸುವಿರಿ. ಶ್ರೇಷ್ಠ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ.

ಮಕರ ರಾಶಿ: ನಿಮ್ಮ ಬೆನ್ನನ್ನೇ ನೀವು ತಟ್ಟಿಕೊಳ್ಳುವುದು ಔಚಿತ್ಯವಿಲ್ಲ. ವ್ಯವಹಾರದಲ್ಲಿ ಯಾರಾದರೂ ನಿಮ್ಮನ್ನು ಮಾತಿನಿಂದ ಮರುಳುಮಾಡಬಹುದು. ಹಣದ ಪ್ರಾಮುಖ್ಯವನ್ನು ತಿಳಿದುಕೊಳ್ಳುವ ಸಮಯವಿಂದು. ಹಣವನ್ನು ನೀವು ಹೂಡಿಕೆಯಲ್ಲಿ ಇಡುವ ಸಾಧ್ಯತೆ ಇದೆ. ಸಾಲದ ಹಣವನ್ನು ಪಾವತಿಸಿ ಸ್ವಲ್ಪ ಖುಷಿಪಡುವಿರಿ. ನೌಕರರಿಂದ ಕೆಲಸವನ್ನು ಮಾಡಿಸಿಕೊಳ್ಳುವ ಚಾಣಾಕ್ಷತನ ಬೇಕು. ಆರೋಗ್ಯದಲ್ಲಿ ಅನಿರೀಕ್ಷಿತ ಬದಲಾವಣೆಯು ನಿಮಗೆ ಆತಂಕ ಉಂಟಾಗಬಹುದು‌. ಕೊರತೆಯಿಂದ ನಿಮಗೆ ಉದ್ವೇಗವು ಉಂಟಾಗಬಹುದು. ನಿಮ್ಮ ಔದಾರ್ಯತೆಯು ನಿಮಗೇ ಬಹಳ ಕಷ್ಟವಾಗಬಹುದು. ಹಿರಿಯರಿಂದ ಶುಭಾಶೀರ್ವಾದವನ್ನು ಪಡೆದು ನಿಮಗೆ ಧೈರ್ಯ ಬರಬಹುದು. ಸತ್ಯವನ್ನು ಆಡಲು ನೀವು ಹಿಂಜರಿಯುವಿರಿ. ಸರಳವನ್ನು ನೀವು ಕ್ಲಿಷ್ಟಕರವಾಗಿಸಿಕೊಳ್ಳುವಿರಿ. ನಿಮ್ಮ ಖಾಸಗಿ ತನಕ್ಕೆ ತೊಂದರೆಯಾಗಲಿದೆ. ವಂಚನೆಯ ಸುಳಿವನ್ನು ಮೊದಲೇ ಪಡೆಯುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ. ನಿಮ್ಮ‌ ವಸ್ತುಗಳ ಮೇಲೆ ಅತಿಯಾದ ಮೋಹವು ಇರುವುದು.

ಕುಂಭ ರಾಶಿ; ಸಜ್ಜನರ ಭೇಟಿಯಾಗುವ ಸಾಧ್ಯತೆ ಇದೆ. ನಿಮಗೆ ನಿರೀಕ್ಷಿತ ಫಲ‌ಸಿಗದೇ ಮನೆಯವರಿಗೆ ಬೇಸರವಾಗಬಹುದು. ಆಪ್ತರ ಜೊತೆ ಉದ್ಯೋಗಕ್ಕೆ ಸಂಬಂಧಿಸಿದ ಸಮಾಲೋಚನೆಯನ್ನು ನಡೆಸುವಿರಿ. ಇಂದಿನ ಬೆಳಗ್ಗೆ ಹೆಚ್ಚಿನ ಉತ್ಸಾಹ ಇರಲಿದೆ. ಅನುಕೂಲಕರ ವಾತಾವರಣವನ್ನು ನೀವು ಸೃಷ್ಟಿಸಿಕೊಂಡು ಇರುವಿರಿ. ನಿಮಗೆ ಆರ್ಥಿಕವಾಗಿ ಬಲವಾಗಲು ಆಲೋಚಿಸುವಿರಿ. ನಿಮ್ಮ‌ ಮನಸ್ಸು ಕ್ಷಣವೂ ಬೇರೆ ಆಲೋಚನೆಯಲ್ಲಿ‌ ಮುಳುಗಿರುವುದು. ಸಹೋದ್ಯೋಗಳ ಸಹಕಾರ ಬೇಕಿದ್ದರೆ ಅವರನ್ನು ನಿಮ್ಮತ್ತ ಒಲಿಸಿಕೊಳ್ಳಬೇಕು. ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸಿಕೊಳ್ಳಲು ಇಷ್ಟಪಡುವಿರಿ. ಆಯಾಸವು‌ ಅಧಿಕವಾಗಿದ್ದರೂ ಆಲಸ್ಯದಿಂದ ಮೇಲೇರುವ ಯೋಚನೆ‌ಮಾಡುವಿರಿ. ಸರಳವಾದ ಕೆಲಸಗಳನ್ನು ಮಾಡುವಿರಿ. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಮಾರಾಟದ ವಿಷಯದಲ್ಲಿ ಹಿನ್ನಡೆಯಾಗಲಿದೆ. ಆಕಸ್ಮಿಕವಾಗಿ ಆರೋಗ್ಯವು ಹದ ತಪ್ಪಬಹುದು.

ಮೀನ ರಾಶಿ: ಒತ್ತಡದ ನಡುವೆಯೂ ಕಾರ್ಯನಿರ್ವಹಣೆ ಮಾಡಿದ ಕೌಶಲಕ್ಕೆ ಪ್ರಂಶಸೆಗಳು ಸಿಗಲಿವೆ. ಯಾರನ್ನೋ ಗೆಲ್ಲುವುದು ಸುಲಭದ ತುತ್ತಲ್ಲ. ಹಣದ ಸಮಸ್ಯೆಗಳಿಂದ ಮುಕ್ತರಾಗುವಿರಿಸಿ. ನಿಮ್ಮನ್ನು ಇಂದು ಕೆಲವರು ಭೇಟಿಯಾಗಲಿದ್ದಾರೆ. ನಿಮ್ಮ ವ್ಯಕ್ತಿತ್ವವನ್ನು ನೀವು ಪರಿಚಯಿಸುವಿರಿ. ನೀವು ನೆಮ್ಮದಿಯನ್ನು ಕಳೆದುಕೊಳ್ಳಲು ಕೆಲವು ಸಂಗತಿಗಳು ಆಗಬಹುದು. ನಿಮ್ಮ ಶ್ರಮಕ್ಕೆ ಎಂತಹ ಫಲವೆಂದು ಇಂದು ಗೊತ್ತಾಗುವುದು. ಎಲ್ಲ ಕೆಲಸಗಳು ನಿಮ್ಮ ಸ್ಥಾನವನ್ನು ಏರಿಸಬಹುದು. ಬಾಕಿ ಕೆಲಸಗಳನ್ನು ನೀವು ಪೂರೈಸಿಕೊಳ್ಳುವುದು ಉತ್ತಮ. ನಿಮಗೆ ಉಂಟಾದ ನೋವನ್ನು ನೀವೇ ನುಂಗಿಕೊಳ್ಳಬೇಕಾದೀತು. ಹಣಕಾಸಿನ ತೊಂದರೆ ಸ್ವಲ್ಪಮಟ್ಟಿಗೆ ನಿವಾರಣೆ ಆಗಲಿದೆ. ಜೀವನದ ಹಾದಿಯಲ್ಲಿ ಹೆಚ್ಚು ಏರಿಳಿತಗಳು ಇರದೇ ಆರಾಮಾಗಿ ಹೋಗುವಿರಿ. ಜಾಣ್ಮೆಯಿಂದ ಸವಾಲನ್ನು ಎದುರಿಸಬೇಕಾಗಬಹುದು. ಉನ್ನತ ವಿದ್ಯಾಭ್ಯಾಸದ ಪ್ರಯುಕ್ತ ಹೊರಗಡೆ ಇರಲಿರುವಿರಿ. ನಿಮ್ಮ ಕಾರ್ಯವು ಆಗಬೇಕಾದರೆ ಓಡಾಟ ಅನಿವಾರ್ಯವಾಗಲಿದೆ.

ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?