Astrology: ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು-ಎಚ್ಚರ

ರಾಶಿ ಭವಿಷ್ಯ ಗುರುವಾರ(ಆ. 29): ಇಂದು ನಿಮ್ಮವರ ಅವಶ್ಯಕತೆ ತಿಳಿಯುವುದು. ಸಂಗಾತಿಯನ್ನು ಬಿಟ್ಟು ಇರುವುದು ನಿಮಗೆ ಕಷ್ಟಕರವಾದೀತು. ನಿಮ್ಮನ್ನು ಮಾತುಗಳಿಂದ ಪೀಡಿಸಬಹುದು. ಆದರೆ ಇಂದು ಮೌನವೇ ಹೆಚ್ಚು ಪ್ರಿಯವಾದೀತು. ಹಾಗಾದರೆ ಆಗಸ್ಟ್​ 29ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Astrology: ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು-ಎಚ್ಚರ
ರಾಶಿ ಭವಿಷ್ಯ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 29, 2024 | 12:30 AM

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪುರ್ವಸು, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:45 ಗಂಟೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:39, ಯಮಘಂಡ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:27 ರಿಂದ 11:00ರ ವರೆಗೆ.

ಧನು ರಾಶಿ : ಇಂದು ನಿಮ್ಮ ನಡತೆಯು ಸಾಮಾನ್ಯರಂತೆ ಕಂಡರೂ ಪ್ರಭಾವವು ಅಧಿಕವಾಗಿರುತ್ತದೆ‌. ಮುಖ್ಯ ಸ್ಥಾನದಿಂದ ಕೆಲಗೆ ಇಳಿಯುವ ಸಂದರ್ಭವು ಬರಬಹುದು. ಬಹಳ ದಿನಗಳ ಅನಂತರ ನಿಮಗೆ ಒಳ್ಳೆಯ ಪ್ರೀತಿ ದೊರೆಯಲಿದೆ. ಇದು ನಿಮ್ಮ ಸಂತೋಷವನ್ನು ಹೆಚ್ಚು ಮಾಡುವುದು. ಕುಟುಂಬ ಹಲವಾರು ಕೆಲಸಗಳಿದ್ದರೂ ಅತ್ತ ಗಮನ ಹೋಗುವುದು ಕಷ್ಟವಸದೀತು. ನಕಾರಾತ್ಮಕ ಆಲೋಚನೆಗಳು ನಿಮಗೆ ಸಹಜವಾಗಿ ಇರಲಿದೆ. ನಿಮ್ಮ ಸಾಮರ್ಥ್ಯವನ್ನು ತೋರಿಸಲು ಸಕಾಲವಲ್ಲ. ನಿಮಗೆ ಗೊತ್ತಿಲ್ಲದ ನಿಮ್ಮದೇ ಸಂಗತಿಗಳು ನಿಮಗೆ ಅಚ್ಚರಿಯನ್ನು ತಂದುಕೊಟ್ಟೀತು. ದುರದೃಷ್ಟಕ್ಕೆ ಕಾರಣವನ್ನು ಹುಡುಕಿ ಪ್ರಯೋಜನವಿಲ್ಲ. ಅಧಿಕಾರಯುತವಾದ ಮಾತುಗಳನ್ನು ಕಡಿಮೆ‌ ಮಾಡಿ, ಸಹಜವಾಗಿ ಮಾತನಾಡಿ ಕೆಲಸವನ್ನು ಮಾಡಿಸಿಕೊಳ್ಳಿ. ಒತ್ತಡಗಳು ಎಂದಿಗಿಂತ ಕಡಿಮೆ ಇರಲಿವೆ. ಇಲ್ಲವಾದರೆ ಅಜೀರ್ಣವಾದೀತು. ಆಕಸ್ಮಿಕವಾಗಿ ಧನಲಾಭವು ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಬೇಕಾದುದನ್ನು ಬೇಕಾದಷ್ಟೇ ಬಳಸಿ.

ಮಕರ ರಾಶಿ : ನಿಮ್ಮ ಕಾರ್ಯದ ದಕ್ಷತೆಯಿಂದ ಉನ್ನತ ಸ್ಥಾನವು ಸಿಗುವುದು. ನಿಮ್ಮ ಸಣ್ಣ ಕಾರ್ಯವನ್ನೂ ದೊಡ್ಡದಾಗಿ ಬಿಂಬಿಸುವಿರಿ. ಭಾವಪರಶವಾರಾಗಿ ಇಂದು ನಿಮ್ಮ ಸುಖ, ದುಃಖಗಳನ್ನು ಹೇಳಿಕೊಳ್ಳುವಿರಿ. ದಿನವನ್ನು ಉತ್ತಮವಾಗಿಸಿಕೊಳ್ಳಲು ನೀವು ಬಯಸುವಿರಿ. ಎಲ್ಲರ ಜೊತೆ ಪ್ರೀತಿಯಿಂದ ಮಾತನಾಡಲು ಇಷ್ಟಪಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡುವವರನ್ನು ಹೆಚ್ಚು ಇಷ್ಟಪಡುವಿರಿ. ಸ್ವಾರ್ಥವನ್ನು ಬಿಟ್ಟು ಕೆಲಸ ಮಾಡಿದರೆ ಹೆಚ್ಚು ಒಳ್ಳೆಯದು.‌ ಇದರಿಂದ ನಿಮ್ಮನ್ನು ಇಷ್ಟಪಡುವವರ ಸಂಖ್ಯೆ ಹೆಚ್ಚಾಗಬಹುದು. ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ಭಯವಾಗಬಹುದು. ಸಂಪತ್ತನ್ನು ಸದುಪಯೋಗ ಮಾಡಿಕೊಳ್ಳಲು ಮಾರ್ಗವನ್ನು ಹುಡುಕಿಕೊಳ್ಳಿ. ಮಕ್ಕಳ ಸಾಧನೆಯು ಖುಷಿ ಕೊಡುವುದು. ಕೆಲಸವು ಅಪೂರ್ಣವಾಗಿ ನೀವು ಆದಷ್ಟು ಬೇಗ ಮುಗಿಸುವ ತವಕದಲ್ಲಿ ಇರುವಿರಿ. ದಾಂಪತ್ಯದ ವಿರಸವು ಬಗೆ ಹರಿಯಬಹುದು. ಕೌಟುಂಬಿಕ ಹಿನ್ನೆಲೆ ನಿಮಗೆ ಸಹಕಾರಿಯಾಗಲಿದೆ.

ಕುಂಭ ರಾಶಿ : ಇಂದು ನಿಮ್ಮವರ ಅವಶ್ಯಕತೆ ತಿಳಿಯುವುದು. ಸಂಗಾತಿಯನ್ನು ಬಿಟ್ಟು ಇರುವುದು ನಿಮಗೆ ಕಷ್ಟಕರವಾದೀತು. ನಿಮ್ಮನ್ನು ಮಾತುಗಳಿಂದ ಪೀಡಿಸಬಹುದು. ಆದರೆ ಇಂದು ಮೌನವೇ ಹೆಚ್ಚು ಪ್ರಿಯವಾದೀತು. ನಿಮ್ಮ ಎರಡು ಬಗೆಯ ಮನಃಸ್ಥಿತಿಯು ಕೆಲವರಿಗೆ ಇಷ್ಟವಾಗದೇ ಹೋದೀತು. ಗುಂಪುಗಾರಿಕೆಯಿಂದ ನಿಮ್ಮಲ್ಲಿ‌ ಕಲಹವಾಗುವುದು. ಕುಟುಂಬದ ಹತ್ತಿರದವರನ್ನು ಕಳೆದುಕೊಳ್ಳಬಹುದು. ಕುಟುಂಬದ ಆಪ್ತರಲ್ಲಿ ನಿಮ್ಮ ಮನಸ್ಸನ್ನು ಹಂಚಿಕೊಳ್ಳುವಿರಿ. ದಾಂಪತ್ಯದಲ್ಲಿ ಮಕ್ಕಳ ಕಾರಣದಿಂದ ಸಂತೋಷವನ್ನು ಕಾಣುವಿರಿ. ಕಾನೂನಿಗೆ ಸಂಬಂಧಿಸಿದ ವಿಚಾರಕ್ಕೆ ನಿಮಗೆ ಕೆಲವು ಸಂದೇಶಗಳನ್ನು ನಿವಾರಿಸಿಕೊಳ್ಳುವಿರಿ. ನಿಮ್ಮ ಸಮಸ್ಯೆಗೆ ಪರಿಹಾರ ಸಿಗದಿದ್ದರೂ ಸಮಾಧಾನವಂತೂ ಸಿಗಲಿದೆ. ಅವರಿಗೆ ಬೇಸರವಾಗುವಂತೆ ನೋಡಿಕೊಳ್ಳಬೇಡಿ. ಅಪರಿಚಿತರ ಜೊತೆ ಜಗಳವಾಡಿ ಸಮಯವನ್ನು ವ್ಯರ್ಥ ಮಾಡುವಿರಿ.‌ ಕಾರ್ಯದಿಂದ ಪರಿಣತಿಯನ್ನು ಪಡೆಯುವಿರಿ. ಪ್ರೀತಿಗೆ ಯೋಗ್ಯರನ್ನು ಹುಡುಕುವಿರಿ.

ಮೀನ ರಾಶಿ : ಇಂದು ನೀವು ಭೂಮಿಯ ವಿಚಾರವಾಗಿ ಕಲಹವನ್ನು ಮಾಡುವಿರಿ. ಕಡಿಮೆ ಸ್ನೇಹಿತರನ್ನು ಹೊಂದಿದ್ದರೂ ಅವರನ್ನು ಬಹಳ ಚೆನ್ನಾಗಿ ಇಟ್ಟುಕೊಳ್ಳುವಿರಿ. ವಿದ್ಯೆಯೇ ನಿಮಗೆ ನೆರವಾಗುವುದು. ಅನಗತ್ಯ ಕಾರ್ಯಗಳತ್ತ ಮನಸ್ಸು ಹೋದರೂ ಮತ್ತೆ ಕಾರ್ಯದಲ್ಲಿ ಮಗ್ನರಾಗಿರಿ. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ಮತ್ತೆ ನೆನಪಿಸಿ ಮುಜುಗರವನ್ನು ಉಂಟುಮಾಡುವಳು. ಕೆಲಸದ ಸ್ಥಳದಲ್ಲಿ ಕೆಲವು ಕೆಲಸಗಳನ್ನು ಹೆಚ್ಚುವರಿಯಾಗಿ ಮಾಡಬೇಕಾದೀತು. ನಿರುದ್ಯೋಗದ ಬಿಸಿಯು ನಿಮಗೆ ತಟ್ಟಬಹುದು. ಪ್ರಣಯದ ವಿಚಾರವನ್ನು ನೀವು ನಿರ್ಲಜ್ಜೆಯಿಂದ ಹೇಳಿಕೊಳ್ಳುವಿರಿ. ನಿರೀಕ್ಷಿಸಿದಂತೆ ಎಲ್ಲವೂ ನಡೆಯುವುದು ಕಷ್ಟವಾದೀತು. ಅಧಿಕ ನಿರೀಕ್ಷೆಯನ್ನು ಬಿಟ್ಟುಬಿಡುವುದು ಒಳ್ಳೆಯದು. ದಾಂಪತ್ಯದಲ್ಲಿ ನೆಮ್ಮದಿ ಇಲ್ಲದೇ ಪರಸ್ಪರ ಕಲಹವಾಗಬಹುದು. ಹಿರಿಯರಿಂದ ಯೋಗ್ಯ ಸಲಹೆಯನ್ನು ಪಡೆದು ಮುಂದುವರಿಯಿರಿ. ನಿಮ್ಮಿಂದ ಸಹಾಯ ಪಡೆಯಲು ನಿಮ್ಮನ್ನು ಹೊಗಳುವರು. ಮನೆಯ ಸಮಸ್ಯೆಗೆ ಪರಿಹಾರ ಕಾಣುವಲ್ಲಿ ಜೀವನ ಸಂಗಾತಿಯು ಸಂಪೂರ್ಣ ಬೆಂಬಲವು ಇರುವದು.

-ಲೋಹಿತ ಹೆಬ್ಬಾರ್ – 8762924271 (what’s app only)

ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!