Astrology: ದಿನ ಭವಿಷ್ಯ: ಈ ರಾಶಿಯವರಿಗೆ ಸಾಲಬಾಧೆಯ ಭಯವು ಕಾಡುವುದು
ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಜುಲೈ. 05 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
![Astrology: ದಿನ ಭವಿಷ್ಯ: ಈ ರಾಶಿಯವರಿಗೆ ಸಾಲಬಾಧೆಯ ಭಯವು ಕಾಡುವುದು](https://images.tv9kannada.com/wp-content/uploads/2024/07/astrology-1.jpg?w=1280)
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಶುಕ್ರವಾರ (ಜುಲೈ 05) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 09 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 11:00 ರಿಂದ 12:37ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 15:51 ರಿಂದ ಬೆಳಿಗ್ಗೆ17:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:47 ರಿಂದ 09:24ರ ವರೆಗೆ.
ಧನು ರಾಶಿ : ಇಂದು ನಿಮ್ಮ ನಿರ್ಲಕ್ಷ್ಯದಿಂದ ವ್ಯಾಪಾರದಲ್ಲಿ ವಂಚನೆ ಸಾಧ್ಯವಾದೀತು. ತೊಂದರೆಗಳಿಂದ ಮನಸ್ಸು ಕುಗ್ಗಬಹುದು. ಗೌಪ್ಯತೆಯನ್ನು ನೀವು ಕಾಪಾಡಿಕೊಳ್ಳಲಿದ್ದೀರಿ. ನೆರೆಹೊರೆಯವರು ನಿಮ್ಮ ಮನೆಗೆ ಬರಬಹುದು. ಸರ್ಕಾರಿ ಕೆಲಸ ಕೊನೆಯ ಹಂತದಲ್ಲಿ ನಿಂತಿದ್ದು ಮುಂದುವರಿಸುವ ಪ್ರಯತ್ನ ಮಾಡುವಿರಿ. ಕೋಪದಿಂದಲೇ ಎಲ್ಲದಕ್ಕೂ ಪರಿಹಾರ ಸಿಗದು. ಕೇವಲ ಮಾತಿನ ಆಧಾರದ ಮೇಲೆ ಯಾರನ್ನೂ ಅಳೆಯಬೇಡಿ. ಜೀವನ ನಿರ್ವಹಣೆಗೆ ಮತ್ತೊಂದು ವೃತ್ತಿಯನ್ನು ಆಶ್ರಯಿಸಬಹುದು. ಯಾರಿಂದಲಾದರೂ ಏನನ್ನಾದರೂ ಪಡೆಯುವಾಗ ವಿನಯವು ಇರಲಿ. ಅತಿಯಾದ ಆಲಸ್ಯದಿಂದ ಮನೆಯ ಕೆಲಸಗಳು ಹಾಗೆಯೇ ಉಳಿದುಕೊಳ್ಳಬಹುದು. ದೂರದ ಪ್ರಯಾಣವನ್ನು ಅಪೇಕ್ಷಿಸುವಿರಿ. ಧಾರ್ಮಿಕವಾದ ಚಿಂತನೆಯನ್ನು ನಡೆಸಬಹುದು. ಅಧಿಕಾರಿಗಳ ಜೊತೆ ಮಾತಿನ ಚಕಮಕಿ ನಡೆಯಬಹುದು. ಬಂಧುಗಳ ಎದುರು ಸ್ವಾಭಿಮಾನವನ್ನು ಇಟ್ಟುಕೊಳ್ಳುವಿರಿ.
ಮಕರ ರಾಶಿ : ಯಾವ ಸೋಲಿಗೂ ಹತಾಶರಾಗುವುದು ಬೇಡ. ಮರೆಯಲು ಬೇಕಾದ ಚಟುವಟಿಕೆಗಳನ್ನು ಮಾಡಿ. ಮನೆಯಿಂದ ದೂರ ಉದ್ಯೋಗದ ನಿಮಿತ್ತ ಇರಬೇಕಾಗಿ ಬರಬಹುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಪ್ರಯತ್ನಿಸುವರು. ತಂದೆಯಿಂದ ಸಂಪತ್ತು ಸಿಗುವ ಸಾಧ್ಯತೆ ಇದೆ. ನಿರೀಕ್ಷೆಗೆ ತಕ್ಕ ಸಂಪತ್ತನ್ನು ಗಳಿಸುವಿರಿ. ಮೇಲಧಿಕಾರಿಗಳ ವಿಶ್ವಾಸವನ್ನು ಗಳಿಸುವ ಪ್ರಯತ್ನ ಮಾಡುವಿರಿ. ಸಾಲಬಾಧೆಯ ಭಯವು ಕಾಡುವುದು. ಎಲ್ಲರ ಪ್ರೀತಿಯನ್ನು ಗಳಿಸಲು ಸಾಧ್ಯವಾಗದು. ಪ್ರತಿಕೂಲ ಸಂದರ್ಭವನ್ನು ಸರಿಯಾಗಿ ನಿಭಾಯಿಸುವಿರಿ. ತೊಂದರೆಗಳು ಬರುವುದು ನಿಲ್ಲುವುದು. ಇರುವುದನ್ನು ಸರಿ ಮಾಡಿಕೊಳ್ಳುವ ಜವಾಬ್ದಾರಿಯು ನಿಮ್ಮ ಮೇಲಿದೆ. ಸಂಗಾತಿಯನ್ನು ಜೊತೆ ಹೊಸ ಉದ್ಯಮವನ್ನು ಆರಂಭಿಸುವ ಹುನ್ನಾರ ನಡೆಯಲಿದೆ. ನಿಮ್ಮ ಸುತ್ತಮುತ್ತಲಿನವರಿಂದ ಸಾಕಷ್ಟು ಪ್ರಶಂಸೆ ಪಡೆಯಲಿದ್ದೀರಿ. ಕಾರ್ಯವನ್ನು ಹಾಳುಮಾಡಲು ನಿಮ್ಮ ಗಮನವನ್ನು ಬೇರೆ ಕಡೆ ಸೆಳೆಯಬಹುದು.
ಕುಂಭ ರಾಶಿ : ಸುಮ್ಮನೇ ಇಂದು ಯಾರದೋ ಮೇಲೆ ದ್ವೇಷವನ್ನು ಸಾಧಿಸುತ್ತ ಇರುವುದು ಬೇಡ. ಮನಸ್ಸು ಕೆಡುವುದು ಬಿಟ್ಟರೆ ಮತ್ತೇನೂ ಆಗದು. ಯಾರ ಮಾತನ್ನೂ ಕೇಳದೇ ಹಣ ಹೂಡಿಕೆ ಮಾಡಿ ಕಳೆದುಕಳ್ಳುವಿರಿ. ಸಂಬಂಧಗಳು ಹದ ತಪ್ಪಬಹುದು. ಇನ್ಮೊಬ್ಬರಿಗೆ ಕೊಡುವ ಹಿಂಸೆಯಿಂದ ಸುಖಪಡುವಿರಿ. ಹಣಕಾಸಿನ ವಿಚಾರದಲ್ಲಿ ಬಹಳ ತೊಂದರೆಗೆ ಸಿಕ್ಕಿಕೊಳ್ಳಬಹುದು. ಮಾನಸಿಕವಾಗಿ ಹಿಂಜರಿಕೆ ಇರಲಿದೆ. ಆಪ್ತರ ಮಾತು ನಿಮ್ಮನ್ನು ಚೇತರಿಸಿಕೊಳ್ಳಲು ಸಹಾಯ ಮಾಡಬಹುದು. ಚಟಗಳಿಂದ ಒಂದಿಷ್ಟು ಸಮಯ ಹಾಗೂ ಹಣವನ್ನು ವ್ಯರ್ಥ ಮಾಡಿಕೊಳ್ಳಲಿದ್ದೀರಿ. ಭವಿಷ್ಯದ ಕುರಿತು ಆಲೋಚಿಸುವುದು ಉತ್ತಮ. ಉತ್ತಮವಾದುದನ್ನು ಪಡೆಯಲು ಪ್ರಯತ್ನಿಸಿ. ಕುಟುಂಬದ ಸದಸ್ಯರ ಸಲಹೆಯಿಂದ ನೀವು ಪ್ರಯೋಜನ ಪಡೆಯಬಹುದು. ನಿಮ್ಮ ಬಗೆಗಿನ ಊಹಾಪೋಹಗಳಿಗೆ ಬೆಲೆಯನ್ನು ಕೊಡುವ ಅಗತ್ಯವಿಲ್ಲ. ನೀವು ಬಂಧುಗಳ ಜೊತೆ ವ್ಯಾಪಾರ ಮಾಡಲು ತೀರ್ಮಾನಿಸುವಿರಿ.
ಮೀನ ರಾಶಿ : ನೀವು ಬೇಕಾಗಿರುವುದನ್ನು ಮಾಡುವುದಕ್ಕಿಂತ ಬೇರೆಯದನ್ನೇ ಮಾಡುವಿರಿ. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಸರಿಯಾದ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ಸ್ವಲ್ಪ ಕಾಲ ಕಳೆಯಿರಿ. ಆತ್ಮವಿಶ್ವಾಸವನ್ನು ಬೆಳಸಿಕೊಂಡ ನಿಮಗೆ ಸದಾ ಸಂತೋಷವು ಇರಲಿದೆ. ಮನೋರಂಜನೆಯಲ್ಲಿ ಪಾಲ್ಗೊಳ್ಳುವಿರಿ. ಮಕ್ಕಳ ಮೇಲೆ ಸಿಟ್ಟಾದಂತೆ ನಟಿಸಿ ಅವರನ್ನು ನಿಯಂತ್ರಿಸುವಿರಿ. ನಿಮ್ಮ ಇಷ್ಟ ಮಿತ್ರರ ಜೊತೆ ಮಾತಕತೆ ನಡೆಸುವಿರಿ. ಸ್ನೇಹಿತರ ಸಮಸ್ಯೆಗಳಿಗೆ ಪರಿಹಾರವನ್ನು ಕೊಡಲು ಬಯಸುವಿರಿ. ಎಲ್ಲದರ ಬಗ್ಗೆಯೂ ಋಣಾತ್ಮಕ ಭಾವವನ್ನು ಇಟ್ಟುಕೊಂಡು ಕೊರಗುವುದು ನಿರ್ಥಕ. ವ್ಯವಹಾರದಲ್ಲಿ ಅಷ್ಟಾಗಿ ತೊಡಗಿಕೊಳ್ಳುವ ಮನಸ್ಸಿರದು. ಬಂಧುಗಳ ಭೇಟಿಯು ಖುಷಿ ಕೊಡಬಹುದು. ನಿಮ್ಮನ್ನು ಬಹು ದಿನಗಳಿಂದ ಬಾಧಿಸುತ್ತಿದ್ದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಅತಿಯಾದ ಓಡಾಟವನ್ನು ನಿಲ್ಲಿಸಿ. ನೀವು ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಪ್ರತಿ ಗುರಿಯನ್ನು ಸಾಧಿಸುವಿರಿ. ಎಲ್ಲವನ್ನೂ ಏಕಕಾಲಕ್ಕೆ ಸರಿ ಮಾಡಲು ಆಗದು.
-ಲೋಹಿತ ಹೆಬ್ಬಾರ್-8762924271 (what’s app only)